ETV Bharat / state

ಶಿರೂರು ಗುಡ್ಡ ಕುಸಿತ ಪ್ರಕರಣ: ಯಾರೇ ತಪ್ಪು ಮಾಡಿದ್ದರೂ ಕ್ರಮ - ಸಿಎಂ ಸಿದ್ದರಾಮಯ್ಯ - SHIRURU HILL COLLAPSE TRAGEDY

author img

By ETV Bharat Karnataka Team

Published : Jul 21, 2024, 6:15 PM IST

Updated : Jul 21, 2024, 7:04 PM IST

ಅಂಕೋಲಾ ಶಿರೂರು ಗುಡ್ಡ ಕುಸಿತದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ನಾವು ಯಾವುದೇ ರಾಜಕಾರಣ ಮಾಡಲ್ಲ. ಬಿಜೆಪಿ ಮೇಲೆ ಆರೋಪ ಮಾಡೋ, ಕೆಸರೆರಚಾಟ ಮಾಡಲ್ಲ ಎಂದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)
ಸಿಎಂ ಸಿದ್ದರಾಮಯ್ಯ (ETV Bharat)

ಕಾರವಾರ (ಉತ್ತರ ಕನ್ನಡ) : ಅಂಕೋಲಾ ಶಿರೂರು ಗುಡ್ಡ ಕುಸಿತದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ. ರಸ್ತೆ ಪೂರ್ಣ ಮಾಡದಿದ್ರೂ ಟೋಲ್ ಕಲೆಕ್ಷನ್ ಮಾಡಲಾಗ್ತಿದೆ. ರೆಸ್ಕ್ಯೂ ಆಪರೇಷನ್ ನಡೆದ ಬಳಿಕ ತಪ್ಪು ಮಾಡಿದವರ ಮೇಲೆ ಕ್ರಮ ಜರುಗಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತದಲ್ಲಿ 10 ಜನರು ಕಾಣೆಯಾಗಿದ್ದಾರೆ. 7 ಜನರ ಮೃತದೇಹ ದೊರಕಿದ್ದು, ಇನ್ನೂ 3 ಮೃತದೇಹ ದೊರಕಬೇಕಿದೆ. ಎಸ್​ಡಿಆರ್​ಎಫ್​ 44, ಎನ್​ಡಿಆರ್​ಎಫ್​ 24, ಸೇನೆಯಿಂದ 44 ಜನರು ಬಂದಿದ್ದಾರೆ‌. ವಾಹನಗಳು ಕೂಡಾ ಸ್ಥಳದಲ್ಲಿ ಕಾಣೆಯಾಗಿವೆ‌. ಟೀ ಅಂಗಡಿಯಿಟ್ಟು ವಾಸವಾಗಿದ್ದವರು ಸಾವನ್ನಪ್ಪಿದ್ದಾರೆ ಎಂದು ಸಿಎಂ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಹಾಗೂ ಶಾಸಕರಿಗೆ ರೆಸ್ಕ್ಯೂ ಆಪರೇಷನ್​ ತ್ವರಿತವಾಗಿ ಮಾಡಲು ಹೇಳಿದ್ದೇನೆ. ಅಸೆಂಬ್ಲಿಯ ಕಾರಣ ಬೇಗ ಬರಲಾಗಲಿಲ್ಲ. ಆದ್ರೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ತ್ವರಿತಗತಿ ಆಪರೇಷನ್​ಗೆ ಸೂಚಿಸಿದ್ದೆ‌. ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ನೀಡಲಾಗಿದೆ. ಯಾವುದೇ ಕುಟುಂಬದ ಸದಸ್ಯರ ಮೃತದೇಹ ದೊರಕಿದ್ರೆ ಅವರಿಗೂ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದರು.

ಆರ್ಮಿಯವರಿಗೆ, ನೇವಿಯವರಿಗೆ, ಎಸ್​ಡಿಆರ್​ಎಫ್​ಗೆ ಗುಡ್ಡ ಕುಸಿತವಾದ ನದಿ ಬದಿಯಲ್ಲೂ ಸ್ಕ್ಯಾನ್ ಮಾಡಲು ತಿಳಿಸಿದ್ದೇನೆ. ರೆಸ್ಕ್ಯೂ ಕಾರ್ಯಾಚರಣೆ ಯಾವುದೇ‌ ರೀತಿಯಲ್ಲಿ ತಡವಾಗ್ತಿಲ್ಲ. ಬಹಳ ವರ್ಷಗಳಿಂದ ಲ್ಯಾಂಡ್ ಸ್ಲೈಡ್ ಆಗಿಲ್ಲ, ಈಗ ಆಗಿದೆ. ಘಟನೆಗೆ ಸಂಬಂಧಿಸಿದಂತೆ ನಾವು ಯಾವುದೇ ರಾಜಕಾರಣ ಮಾಡಲ್ಲ. ಬಿಜೆಪಿ ಮೇಲೆ ಆರೋಪ ಮಾಡೋ, ಕೆಸರೆರಚಾಟ ಮಾಡಲ್ಲ. ನಾವು ಕೊಡೋ ಪರಿಹಾರದಿಂದ ಜೀವ ವಾಪಸ್ ಬರಲ್ಲ, ಇದು ಪ್ರಾಕೃತಿಕ ವಿಕೋಪದಿಂದಾದ ಘಟನೆ. ಅವರ ಮೃತದೇಹ ಹುಡುಕುವ ಕೆಲಸ ಮಾಡಲಾಗ್ತಿದೆ ಎಂದು ತಿಳಿಸಿದರು.

ಈ ವೇಳೆ ಸಚಿವರಾದ ಕೃಷ್ಣಬೈರೇಗೌಡ, ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ ಇತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಸಿಎಂ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಕಾರ್ಯಾಚರಣೆ ಬಗ್ಗೆ SDRF-NDRF ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು.
ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ - SHIRURU HILL COLLAPSE TRAGEDY

ಸಿಎಂ ಸಿದ್ದರಾಮಯ್ಯ (ETV Bharat)

ಕಾರವಾರ (ಉತ್ತರ ಕನ್ನಡ) : ಅಂಕೋಲಾ ಶಿರೂರು ಗುಡ್ಡ ಕುಸಿತದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ. ರಸ್ತೆ ಪೂರ್ಣ ಮಾಡದಿದ್ರೂ ಟೋಲ್ ಕಲೆಕ್ಷನ್ ಮಾಡಲಾಗ್ತಿದೆ. ರೆಸ್ಕ್ಯೂ ಆಪರೇಷನ್ ನಡೆದ ಬಳಿಕ ತಪ್ಪು ಮಾಡಿದವರ ಮೇಲೆ ಕ್ರಮ ಜರುಗಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತದಲ್ಲಿ 10 ಜನರು ಕಾಣೆಯಾಗಿದ್ದಾರೆ. 7 ಜನರ ಮೃತದೇಹ ದೊರಕಿದ್ದು, ಇನ್ನೂ 3 ಮೃತದೇಹ ದೊರಕಬೇಕಿದೆ. ಎಸ್​ಡಿಆರ್​ಎಫ್​ 44, ಎನ್​ಡಿಆರ್​ಎಫ್​ 24, ಸೇನೆಯಿಂದ 44 ಜನರು ಬಂದಿದ್ದಾರೆ‌. ವಾಹನಗಳು ಕೂಡಾ ಸ್ಥಳದಲ್ಲಿ ಕಾಣೆಯಾಗಿವೆ‌. ಟೀ ಅಂಗಡಿಯಿಟ್ಟು ವಾಸವಾಗಿದ್ದವರು ಸಾವನ್ನಪ್ಪಿದ್ದಾರೆ ಎಂದು ಸಿಎಂ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಹಾಗೂ ಶಾಸಕರಿಗೆ ರೆಸ್ಕ್ಯೂ ಆಪರೇಷನ್​ ತ್ವರಿತವಾಗಿ ಮಾಡಲು ಹೇಳಿದ್ದೇನೆ. ಅಸೆಂಬ್ಲಿಯ ಕಾರಣ ಬೇಗ ಬರಲಾಗಲಿಲ್ಲ. ಆದ್ರೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ತ್ವರಿತಗತಿ ಆಪರೇಷನ್​ಗೆ ಸೂಚಿಸಿದ್ದೆ‌. ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ನೀಡಲಾಗಿದೆ. ಯಾವುದೇ ಕುಟುಂಬದ ಸದಸ್ಯರ ಮೃತದೇಹ ದೊರಕಿದ್ರೆ ಅವರಿಗೂ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದರು.

ಆರ್ಮಿಯವರಿಗೆ, ನೇವಿಯವರಿಗೆ, ಎಸ್​ಡಿಆರ್​ಎಫ್​ಗೆ ಗುಡ್ಡ ಕುಸಿತವಾದ ನದಿ ಬದಿಯಲ್ಲೂ ಸ್ಕ್ಯಾನ್ ಮಾಡಲು ತಿಳಿಸಿದ್ದೇನೆ. ರೆಸ್ಕ್ಯೂ ಕಾರ್ಯಾಚರಣೆ ಯಾವುದೇ‌ ರೀತಿಯಲ್ಲಿ ತಡವಾಗ್ತಿಲ್ಲ. ಬಹಳ ವರ್ಷಗಳಿಂದ ಲ್ಯಾಂಡ್ ಸ್ಲೈಡ್ ಆಗಿಲ್ಲ, ಈಗ ಆಗಿದೆ. ಘಟನೆಗೆ ಸಂಬಂಧಿಸಿದಂತೆ ನಾವು ಯಾವುದೇ ರಾಜಕಾರಣ ಮಾಡಲ್ಲ. ಬಿಜೆಪಿ ಮೇಲೆ ಆರೋಪ ಮಾಡೋ, ಕೆಸರೆರಚಾಟ ಮಾಡಲ್ಲ. ನಾವು ಕೊಡೋ ಪರಿಹಾರದಿಂದ ಜೀವ ವಾಪಸ್ ಬರಲ್ಲ, ಇದು ಪ್ರಾಕೃತಿಕ ವಿಕೋಪದಿಂದಾದ ಘಟನೆ. ಅವರ ಮೃತದೇಹ ಹುಡುಕುವ ಕೆಲಸ ಮಾಡಲಾಗ್ತಿದೆ ಎಂದು ತಿಳಿಸಿದರು.

ಈ ವೇಳೆ ಸಚಿವರಾದ ಕೃಷ್ಣಬೈರೇಗೌಡ, ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ ಇತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಸಿಎಂ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಕಾರ್ಯಾಚರಣೆ ಬಗ್ಗೆ SDRF-NDRF ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು.
ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ - SHIRURU HILL COLLAPSE TRAGEDY

Last Updated : Jul 21, 2024, 7:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.