ETV Bharat / state

ಅಮವಾಸ್ಯೆಯಂದು ನಾಡದೇವತೆಯ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ - CM Chamundeshwari Temple Visit

author img

By ETV Bharat Karnataka Team

Published : Sep 1, 2024, 1:50 PM IST

ಬೆಂಗಳೂರಿನಿಂದ ವಿಮಾನದಲ್ಲಿ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದು ನಂತರ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಲಿದ್ದಾರೆ.

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ (ETV Bharat)

ಮೈಸೂರು: ಅಮಾವಾಸ್ಯೆ ಹಿನ್ನೆಲೆಯಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ಚಾಮುಂಡಿ ಬೆಟ್ಟಕ್ಕೆ ಆಗಮಿಸಲಿದ್ದಾರೆ.

ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಆಗಮಿಸುವ ಸಿಎಂ, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ದಾಸೋಹ ಭವನದಲ್ಲಿ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸುವರು. ನಂತರ ಮೈಸೂರು ಮನೆಯಲ್ಲಿ ಸಂಜೆಯವರೆಗೆ ವಿಶ್ರಾಂತಿ ಪಡೆದು, ವಿಶೇಷ ವಿಮಾನದಲ್ಲಿ ವಾಪಸ್‌ ಆಗುವರು ಎಂದು ಅವರ ಅಧಿಕೃತ ಕಾರ್ಯಕ್ರಮ ಪಟ್ಟಿಯಲ್ಲಿ ತಿಳಿಸಲಾಗಿದೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ವಿಚಾರದಲ್ಲಿ ಕೋರ್ಟ್​ನಲ್ಲಿ ನಡೆಯುತ್ತಿರುವ ವಾದ-ಪ್ರತಿವಾದಗಳು ಮುಕ್ತಾಯವಾಗಿದ್ದು, ಸೋಮವಾರ ಮಧ್ಯಾಹ್ನ ತೀರ್ಪು ಬರುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್: ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Prosecution against Siddaramaiah

ಮೈಸೂರು: ಅಮಾವಾಸ್ಯೆ ಹಿನ್ನೆಲೆಯಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ಚಾಮುಂಡಿ ಬೆಟ್ಟಕ್ಕೆ ಆಗಮಿಸಲಿದ್ದಾರೆ.

ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಆಗಮಿಸುವ ಸಿಎಂ, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ದಾಸೋಹ ಭವನದಲ್ಲಿ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸುವರು. ನಂತರ ಮೈಸೂರು ಮನೆಯಲ್ಲಿ ಸಂಜೆಯವರೆಗೆ ವಿಶ್ರಾಂತಿ ಪಡೆದು, ವಿಶೇಷ ವಿಮಾನದಲ್ಲಿ ವಾಪಸ್‌ ಆಗುವರು ಎಂದು ಅವರ ಅಧಿಕೃತ ಕಾರ್ಯಕ್ರಮ ಪಟ್ಟಿಯಲ್ಲಿ ತಿಳಿಸಲಾಗಿದೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ವಿಚಾರದಲ್ಲಿ ಕೋರ್ಟ್​ನಲ್ಲಿ ನಡೆಯುತ್ತಿರುವ ವಾದ-ಪ್ರತಿವಾದಗಳು ಮುಕ್ತಾಯವಾಗಿದ್ದು, ಸೋಮವಾರ ಮಧ್ಯಾಹ್ನ ತೀರ್ಪು ಬರುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್: ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Prosecution against Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.