ETV Bharat / state

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್​ ಪಡೆದ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರಕ್ಕೆ ದೂರು: ಛಲವಾದಿ ನಾರಾಯಣಸ್ವಾಮಿ

ಸರ್ಕಾರ ಒಂದು ಸಮುದಾಯವನ್ನು ಓಲೈಕೆ ಮಾಡಲು ಹುಬ್ಬಳ್ಳಿ ಗಲಭೆ ಕೇಸ್ ವಾಪಸ್​ ಪಡೆದಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

author img

By ETV Bharat Karnataka Team

Published : 2 hours ago

ಛಲವಾದಿ ನಾರಾಯಣಸ್ವಾಮಿ
ಛಲವಾದಿ ನಾರಾಯಣಸ್ವಾಮಿ (ETV Bharat)

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ವಾಪಸ್​ ಪಡೆದ ಸರ್ಕಾರದ ನಡೆ ವಿರುದ್ಧ ಕೇಂದ್ರಕ್ಕೆ ದೂರು ಕೊಡಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ಮಾಡಿದವರು ಹಾಗೂ ಕ್ರಿಮಿನಲ್​ಗಳ ವಿರುದ್ಧ ಸರ್ಕಾರ ಕೇಸ್ ದಾಖಲು ಮಾಡಿತ್ತು. ಈಗ ಒಂದು ಸಮುದಾಯವನ್ನು ಓಲೈಕೆ ಮಾಡಲು, ಎಲ್ಲಾ ಕೇಸ್ ವಾಪಸ್​ ಪಡೆದಿದ್ದಾರೆ. ಇದು ಸರ್ಕಾರ ಮಾಡಿರುವ ಅಕ್ಷಮ್ಯ ಅಪರಾಧ. ಆರ್ಗನೈಸ್ಡ್ ಕ್ರೈಮ್ ಮಾಡಿರೋ ಕೇಸ್ ವಾಪಸ್​ ಪಡೆದಿರೋದು ಕೂಡ ಸರ್ಕಾರದ ಆರ್ಗನೈಸ್ಡ್​ ಕ್ರೈಮ್. ಹೀಗಾಗಿ ಇದನ್ನು ನಾವು ಸುಮ್ಮನೆ ಬಿಡುವುದಿಲ್ಲ, ಇದರ‌ ಬಗ್ಗೆ ಜನರಿಗೆ ತಿಳಿಸಲು ಹೋರಾಟ ಮಾಡುತ್ತೇವೆ ಎಂದರು.

ಇದರ ಬಗ್ಗೆ ನಾವು ಕೋರ್ಟ್​ನಲ್ಲಿ ಆಕ್ಷೇಪಣೆ ಅರ್ಜಿ ಹಾಕುತ್ತೇವೆ. ಉಡುಪಿ, ಮಂಗಳೂರು, ಶಿವಮೊಗ್ಗದಲ್ಲಿನ ಹಿಂದೂ ಕಾರ್ಯಕರ್ತರ ಮೇಲೆ ಯಾಕೆ ಕೇಸ್ ವಾಪಸ್​ ತಗೊಂಡಿಲ್ಲ?. ಅವರು ಕ್ರಿಮಿನಲ್​ಗಳು, ಇವರು ಕ್ರಿಮಿನಲ್​ಗಳಲ್ವಾ?. ಜನರನ್ನು ಕೆರಳಿಸುವ ಕೆಲಸ ಮಾಡಿ, ಮುಡಾ, ವಾಲ್ಮೀಕಿ ಹಗರಣ ಡೈವರ್ಟ್ ಮಾಡ್ತಿದ್ದೀರಿ. ನಾನು ಇವತ್ತು ಕೇಂದ್ರದ ಕಾನೂನು ಸಚಿವರಿಗೂ ಈ ಸರ್ಕಾರದ ವಿರುದ್ಧ ಕ್ರಮ ಜರುಗಿಸಬೇಕು ಅಂತಾ ಪತ್ರ ಬರೆಯುತ್ತೇನೆ. ಕೇಂದ್ರ ಸರ್ಕಾರ ತಕ್ಷಣ ಗಂಭೀರವಾಗಿ ಪರಿಗಣಿಸಿ, ಕ್ರಮ ತಗೊಬೇಕು. ಪ್ರಧಾನಮಂತ್ರಿಗಳು, ಕೇಂದ್ರ ಗೃಹ ಸಚಿವರು ಹಾಗೂ ರಾಷ್ಟ್ರಪತಿಗಳಿಗೂ ಗಮನ ಸೆಳೆಯಲು ಪತ್ರ ಬರೆಯುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ದುಷ್ಟಶಕ್ತಿ ಅಂದರೆ ಸಿದ್ದರಾಮಯ್ಯ: ದುಷ್ಟ ಶಕ್ತಿ ಯಾರಾದರೂ ರಾಜ್ಯದಲ್ಲಿ ಇದ್ದಾರೆ ಅಂದರೆ ಅದು ಸಿದ್ದರಾಮಯ್ಯ. ಕೆಟ್ಟವರು ಸಂಹಾರ ಆಗಬೇಕು ನಿಜ. ಆದರೆ ಸರ್ಕಾರ ಚಾಮುಂಡೇಶ್ವರಿ ಬಳಕೆ ಮಾಡಿ ಜಾಹೀರಾತು ಕೊಟ್ಟಿದ್ದು ತಪ್ಪು. ಸಿದ್ದರಾಮಯ್ಯನವರಿಂದಲೇ ದುಷ್ಟ ಶಕ್ತಿಗಳು ಸಂಹಾರ ಶುರು ಆಗಲಿ ಎಂದು ತಿರುಗೇಟು ನೀಡಿದರು.

ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರವು ಹಿಂಪಡೆದ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಈ ಕುರಿತು ಕಾನೂನಾತ್ಮಕ ಹೋರಾಟ ಮಾಡಲಾಗುವುದು ಎಂದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಹಳೇ ಹುಬ್ಬಳ್ಳಿ ನಡೆದ ಗಲಭೆ ಯಾವುದೇ ಕೋಮು ಹಾಗೂ ಸಮಸ್ಯೆಗಳ ಕುರಿತು ನಡೆದ ಹೋರಾಟ ಪ್ರತಿಭಟನೆಯಲ್ಲ. ಅದು ಪೊಲೀಸರು ಮತ್ತು ಕೋಮುವಾದಿಗಳ ನಡುವೆ ನಡೆದ ಗಲಾಟೆ. ಇಂತಹ ಪ್ರಕರಣವನ್ನು ಖುಲಾಸೆಗೊಳಿಸುತ್ತಾರೆ ಎಂದ್ರೆ ಇದರ ಅರ್ಥವೇನು?. ಇದರಿಂದಾಗಿ ಪೊಲೀಸರ ನೈತಿಕತೆ ಮೇಲೆ ಪರಿಣಾಮ ಬೀರುತ್ತದೆ. ಒಂದು ವೇಳೆ ರಾಜ್ಯದಲ್ಲಿ ಅರಾಜಕತೆ ಉಂಟಾದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಎಡಿಜಿಪಿ ಚಂದ್ರಶೇಖರ್ ನನಗೆ ಹೆದರಬೇಕಿಲ್ಲ, ನಾನೂ ಅವರಿಗೆ ಹೆದರಬೇಕಿಲ್ಲ: ಕುಮಾರಸ್ವಾಮಿ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ವಾಪಸ್​ ಪಡೆದ ಸರ್ಕಾರದ ನಡೆ ವಿರುದ್ಧ ಕೇಂದ್ರಕ್ಕೆ ದೂರು ಕೊಡಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ಮಾಡಿದವರು ಹಾಗೂ ಕ್ರಿಮಿನಲ್​ಗಳ ವಿರುದ್ಧ ಸರ್ಕಾರ ಕೇಸ್ ದಾಖಲು ಮಾಡಿತ್ತು. ಈಗ ಒಂದು ಸಮುದಾಯವನ್ನು ಓಲೈಕೆ ಮಾಡಲು, ಎಲ್ಲಾ ಕೇಸ್ ವಾಪಸ್​ ಪಡೆದಿದ್ದಾರೆ. ಇದು ಸರ್ಕಾರ ಮಾಡಿರುವ ಅಕ್ಷಮ್ಯ ಅಪರಾಧ. ಆರ್ಗನೈಸ್ಡ್ ಕ್ರೈಮ್ ಮಾಡಿರೋ ಕೇಸ್ ವಾಪಸ್​ ಪಡೆದಿರೋದು ಕೂಡ ಸರ್ಕಾರದ ಆರ್ಗನೈಸ್ಡ್​ ಕ್ರೈಮ್. ಹೀಗಾಗಿ ಇದನ್ನು ನಾವು ಸುಮ್ಮನೆ ಬಿಡುವುದಿಲ್ಲ, ಇದರ‌ ಬಗ್ಗೆ ಜನರಿಗೆ ತಿಳಿಸಲು ಹೋರಾಟ ಮಾಡುತ್ತೇವೆ ಎಂದರು.

ಇದರ ಬಗ್ಗೆ ನಾವು ಕೋರ್ಟ್​ನಲ್ಲಿ ಆಕ್ಷೇಪಣೆ ಅರ್ಜಿ ಹಾಕುತ್ತೇವೆ. ಉಡುಪಿ, ಮಂಗಳೂರು, ಶಿವಮೊಗ್ಗದಲ್ಲಿನ ಹಿಂದೂ ಕಾರ್ಯಕರ್ತರ ಮೇಲೆ ಯಾಕೆ ಕೇಸ್ ವಾಪಸ್​ ತಗೊಂಡಿಲ್ಲ?. ಅವರು ಕ್ರಿಮಿನಲ್​ಗಳು, ಇವರು ಕ್ರಿಮಿನಲ್​ಗಳಲ್ವಾ?. ಜನರನ್ನು ಕೆರಳಿಸುವ ಕೆಲಸ ಮಾಡಿ, ಮುಡಾ, ವಾಲ್ಮೀಕಿ ಹಗರಣ ಡೈವರ್ಟ್ ಮಾಡ್ತಿದ್ದೀರಿ. ನಾನು ಇವತ್ತು ಕೇಂದ್ರದ ಕಾನೂನು ಸಚಿವರಿಗೂ ಈ ಸರ್ಕಾರದ ವಿರುದ್ಧ ಕ್ರಮ ಜರುಗಿಸಬೇಕು ಅಂತಾ ಪತ್ರ ಬರೆಯುತ್ತೇನೆ. ಕೇಂದ್ರ ಸರ್ಕಾರ ತಕ್ಷಣ ಗಂಭೀರವಾಗಿ ಪರಿಗಣಿಸಿ, ಕ್ರಮ ತಗೊಬೇಕು. ಪ್ರಧಾನಮಂತ್ರಿಗಳು, ಕೇಂದ್ರ ಗೃಹ ಸಚಿವರು ಹಾಗೂ ರಾಷ್ಟ್ರಪತಿಗಳಿಗೂ ಗಮನ ಸೆಳೆಯಲು ಪತ್ರ ಬರೆಯುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ದುಷ್ಟಶಕ್ತಿ ಅಂದರೆ ಸಿದ್ದರಾಮಯ್ಯ: ದುಷ್ಟ ಶಕ್ತಿ ಯಾರಾದರೂ ರಾಜ್ಯದಲ್ಲಿ ಇದ್ದಾರೆ ಅಂದರೆ ಅದು ಸಿದ್ದರಾಮಯ್ಯ. ಕೆಟ್ಟವರು ಸಂಹಾರ ಆಗಬೇಕು ನಿಜ. ಆದರೆ ಸರ್ಕಾರ ಚಾಮುಂಡೇಶ್ವರಿ ಬಳಕೆ ಮಾಡಿ ಜಾಹೀರಾತು ಕೊಟ್ಟಿದ್ದು ತಪ್ಪು. ಸಿದ್ದರಾಮಯ್ಯನವರಿಂದಲೇ ದುಷ್ಟ ಶಕ್ತಿಗಳು ಸಂಹಾರ ಶುರು ಆಗಲಿ ಎಂದು ತಿರುಗೇಟು ನೀಡಿದರು.

ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರವು ಹಿಂಪಡೆದ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಈ ಕುರಿತು ಕಾನೂನಾತ್ಮಕ ಹೋರಾಟ ಮಾಡಲಾಗುವುದು ಎಂದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಹಳೇ ಹುಬ್ಬಳ್ಳಿ ನಡೆದ ಗಲಭೆ ಯಾವುದೇ ಕೋಮು ಹಾಗೂ ಸಮಸ್ಯೆಗಳ ಕುರಿತು ನಡೆದ ಹೋರಾಟ ಪ್ರತಿಭಟನೆಯಲ್ಲ. ಅದು ಪೊಲೀಸರು ಮತ್ತು ಕೋಮುವಾದಿಗಳ ನಡುವೆ ನಡೆದ ಗಲಾಟೆ. ಇಂತಹ ಪ್ರಕರಣವನ್ನು ಖುಲಾಸೆಗೊಳಿಸುತ್ತಾರೆ ಎಂದ್ರೆ ಇದರ ಅರ್ಥವೇನು?. ಇದರಿಂದಾಗಿ ಪೊಲೀಸರ ನೈತಿಕತೆ ಮೇಲೆ ಪರಿಣಾಮ ಬೀರುತ್ತದೆ. ಒಂದು ವೇಳೆ ರಾಜ್ಯದಲ್ಲಿ ಅರಾಜಕತೆ ಉಂಟಾದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಎಡಿಜಿಪಿ ಚಂದ್ರಶೇಖರ್ ನನಗೆ ಹೆದರಬೇಕಿಲ್ಲ, ನಾನೂ ಅವರಿಗೆ ಹೆದರಬೇಕಿಲ್ಲ: ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.