ETV Bharat / state

ಸುರಪುರ ಉಪ ಚುನಾವಣೆ ಫಲಿತಾಂಶ: ಕಾಂಗ್ರೆಸ್​ಗೆ ಭರ್ಜರಿ ಗೆಲುವು, ರಾಜು ಗೌಡಗೆ ಮತ್ತೆ ಸೋಲು - Congress leading in shorapur

author img

By ETV Bharat Karnataka Team

Published : Jun 4, 2024, 11:57 AM IST

Updated : Jun 4, 2024, 4:21 PM IST

ಕಾಂಗ್ರೆಸ್​ ನಾಯಕ ರಾಜಾ ವೆಂಕಟಪ್ಪ ನಾಯಕ್ ಅವರ ಅಕಾಲಿಕ ನಿಧನದಿಂದ ತೆರವಾದ ಸುರಪುರ ಕ್ಷೇತ್ರದಲ್ಲಿ ಮಗ ರಾಜಾ ವೇಣುಗೋಪಾಲ ನಾಯಕ್​ ಗೆಲುವು ಸಾಧಿಸಿದ್ದಾರೆ.

CONGRESS LEADING IN SHORAPUR
ಕಾಂಗ್ರೆಸ್​ ಅಭ್ಯರ್ಥಿ (ETV Bharat)

ಬೆಂಗಳೂರು​: ಲೋಕಸಭಾ ಚುನಾವಣೆ ಜೊತೆಗೆ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್​ ನಾಯಕ ದಿವಂಗತ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ 18,320 ಮತಗಳಿಂದ ಜಯ ದಾಖಲಿಸಿದ್ದಾರೆ.

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸುರಪುರ ಕ್ಷೇತ್ರದಿಂದ ಕಾಂಗ್ರೆಸ್ ಹಿರಿಯ ನಾಯಕ​ ರಾಜಾ ವೆಂಕಟಪ್ಪ ನಾಯಕ್ ಗೆಲುವು ಸಾಧಿಸಿದ್ದರು. ಆದರೆ, ಫೆಬ್ರವರಿ 24ರಂದು ಅವರು ಅಕಾಲಿಕ ನಿಧನ ಹೊಂದಿದ್ದರು. ಇದರಿಂದಾಗಿ ತೆರವಾಗಿದ್ದ ಸುರಪುರ ಕ್ಷೇತ್ರಕ್ಕೆ ಚುನಾವಣಾ ಆಯೋಗವು ಉಪ ಚುನಾವಣೆ ಘೋಷಿಸಿತ್ತು.

ಕಾಂಗ್ರೆಸ್​ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್​ ಅವರನ್ನೇ ಕಣಕ್ಕೆ ಇಳಿಸಿತ್ತು. ಮತ್ತೊಂದೆಡೆ, ಬಿಜೆಪಿಯಿಂದ ಮಾಜಿ ಸಚಿವ ನರಸಿಂಹ ನಾಯಕ (ರಾಜು ಗೌಡ) ಸ್ಪರ್ಧಿಸಿದ್ದರು. ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದಂದು, ಮೇ 7ರಂದು ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು.

ಇಂದು ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್​ನ ರಾಜಾ ವೇಣುಗೋಪಾಲ 1,14,886 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ರಾಜು ಗೌಡ 96,566 ಮತ ಪಡೆದು 18,320 ಮತಗಳಿಂದ ಪರಾಭವಗೊಂಡಿದ್ದಾರೆ. ದೇಶಾದ್ಯಂತ 12 ರಾಜ್ಯಗಳ 25 ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆದಿದೆ.

ಇದನ್ನೂ ಓದಿ: ಬೀದರ್​ ಲೋಕಸಭಾ ಕ್ಷೇತ್ರ: ದೇಶದ ಅತಿ ಕಿರಿಯ ಅಭ್ಯರ್ಥಿ ಕಾಂಗ್ರೆಸ್​ನ ಸಾಗರ್​ ಖಂಡ್ರೆ ಮುನ್ನಡೆ

ಬೆಂಗಳೂರು​: ಲೋಕಸಭಾ ಚುನಾವಣೆ ಜೊತೆಗೆ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್​ ನಾಯಕ ದಿವಂಗತ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ 18,320 ಮತಗಳಿಂದ ಜಯ ದಾಖಲಿಸಿದ್ದಾರೆ.

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸುರಪುರ ಕ್ಷೇತ್ರದಿಂದ ಕಾಂಗ್ರೆಸ್ ಹಿರಿಯ ನಾಯಕ​ ರಾಜಾ ವೆಂಕಟಪ್ಪ ನಾಯಕ್ ಗೆಲುವು ಸಾಧಿಸಿದ್ದರು. ಆದರೆ, ಫೆಬ್ರವರಿ 24ರಂದು ಅವರು ಅಕಾಲಿಕ ನಿಧನ ಹೊಂದಿದ್ದರು. ಇದರಿಂದಾಗಿ ತೆರವಾಗಿದ್ದ ಸುರಪುರ ಕ್ಷೇತ್ರಕ್ಕೆ ಚುನಾವಣಾ ಆಯೋಗವು ಉಪ ಚುನಾವಣೆ ಘೋಷಿಸಿತ್ತು.

ಕಾಂಗ್ರೆಸ್​ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್​ ಅವರನ್ನೇ ಕಣಕ್ಕೆ ಇಳಿಸಿತ್ತು. ಮತ್ತೊಂದೆಡೆ, ಬಿಜೆಪಿಯಿಂದ ಮಾಜಿ ಸಚಿವ ನರಸಿಂಹ ನಾಯಕ (ರಾಜು ಗೌಡ) ಸ್ಪರ್ಧಿಸಿದ್ದರು. ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದಂದು, ಮೇ 7ರಂದು ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು.

ಇಂದು ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್​ನ ರಾಜಾ ವೇಣುಗೋಪಾಲ 1,14,886 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ರಾಜು ಗೌಡ 96,566 ಮತ ಪಡೆದು 18,320 ಮತಗಳಿಂದ ಪರಾಭವಗೊಂಡಿದ್ದಾರೆ. ದೇಶಾದ್ಯಂತ 12 ರಾಜ್ಯಗಳ 25 ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆದಿದೆ.

ಇದನ್ನೂ ಓದಿ: ಬೀದರ್​ ಲೋಕಸಭಾ ಕ್ಷೇತ್ರ: ದೇಶದ ಅತಿ ಕಿರಿಯ ಅಭ್ಯರ್ಥಿ ಕಾಂಗ್ರೆಸ್​ನ ಸಾಗರ್​ ಖಂಡ್ರೆ ಮುನ್ನಡೆ

Last Updated : Jun 4, 2024, 4:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.