ETV Bharat / state

ಯಶವಂತಪುರ ರೈಲು ನಿಲ್ದಾಣದಲ್ಲಿ ಏರ್ ಕಾಂಕೋರ್ಸ್ ಅಳವಡಿಕೆ ಕಾಮಗಾರಿ: 15 ದಿನ ರೈಲು ಸಂಚಾರ ಬಂದ್ - Yeshwantpur Railway Station - YESHWANTPUR RAILWAY STATION

ಯಶವಂತಪುರ ರೈಲು ನಿಲ್ದಾಣದ 2,3,4,5 ಪ್ಲಾಟ್ ಫಾರಂಗಳಲ್ಲಿ ನಿಲ್ಲುತ್ತಿದ್ದ ಕೆಲ ರೈಲುಗಳ ಸಂಚಾರವನ್ನು 15 ದಿನಗಳ ಕಾಲ ಬಂದ್ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ
ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : Aug 21, 2024, 7:46 PM IST

ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದಲ್ಲಿ ಏರ್ ಕಾಂಕೋರ್ಸ್ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ನಿಲ್ದಾಣದ 2,3,4,5 ಪ್ಲಾಟ್ ಫಾರಂಗಳಲ್ಲಿ ನಿಲ್ಲುತ್ತಿದ್ದ ಕೆಲ ರೈಲುಗಳ ಸಂಚಾರವನ್ನು 15 ದಿನಗಳ ಕಾಲ ಬಂದ್ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಇಂದಿನಿಂದ ಸೆಪ್ಟೆಂಬರ್ 4ರ ವರೆಗೆ 2 ಮತ್ತು 3ನೇ ಪ್ಲಾಟ್ ಫಾರಂ ಬಂದ್ ಆಗಲಿದ್ದು, ಸೆಪ್ಟೆಂಬರ್ 5 ರಿಂದ 19 ರ ವರೆಗೆ 4 ಮತ್ತು 5ನೇ ಪ್ಲಾಟ್ ಫಾರಂ ಕೂಡಾ ಬಂದ್ ಆಗಲಿದೆ. ಈ ಕಾರಣಕ್ಕೆ ಕೆಲ ರೈಲುಗಳನ್ನು ರದ್ದು ಮಾಡಲಾಗಿದೆ. ತುಮಕೂರು-ಕೆಎಸ್‌ಆರ್ ಬೆಂಗಳೂರು ಮತ್ತು 06575 ಕೆಎಸ್‌ಆರ್ ಬೆಂಗಳೂರು-ತುಮಕೂರು ರೈಲು ಸಂಚಾರವನ್ನು ಇಂದಿನಿಂದ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಿಂದ 19ರವರೆಗೆ ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಿದೆ.

ತುಮಕೂರು- ಯಶವಂತಪುರ ರೈಲು ಇಂದಿನಿಂದ ಆಗಸ್ಟ್ 31 ಮತ್ತು ಸಪ್ಟೆಂಬರ್ 1 ರಿಂದ 19 ರವರೆಗೆ ಚಿಕ್ಕಬಾಣಾವರ- ಯಶವಂತಪುರ ನಡುವೆ ಭಾಗಶಃ ರದ್ದಾಗಲಿದೆ. ಯಶವಂತಪುರ-ಹೊಸೂರು ಮಧ್ಯೆ ಸಂಚರಿಸುವ ರೈಲು ಇಂದಿನಿಂದ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಿಂದ 19ರವರೆಗೆ ಯಶವಂತಪುರ- ಹೆಬ್ಬಾಳ ನಡುವೆ ಭಾಗಶಃ ರದ್ದಾಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದ ಮಣ್ಣು ತೆರವು ಪೂರ್ಣ; ರೈಲು ಸಂಚಾರ ಪುನಾರಂಭ - Railway Line Work Complete

ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದಲ್ಲಿ ಏರ್ ಕಾಂಕೋರ್ಸ್ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ನಿಲ್ದಾಣದ 2,3,4,5 ಪ್ಲಾಟ್ ಫಾರಂಗಳಲ್ಲಿ ನಿಲ್ಲುತ್ತಿದ್ದ ಕೆಲ ರೈಲುಗಳ ಸಂಚಾರವನ್ನು 15 ದಿನಗಳ ಕಾಲ ಬಂದ್ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಇಂದಿನಿಂದ ಸೆಪ್ಟೆಂಬರ್ 4ರ ವರೆಗೆ 2 ಮತ್ತು 3ನೇ ಪ್ಲಾಟ್ ಫಾರಂ ಬಂದ್ ಆಗಲಿದ್ದು, ಸೆಪ್ಟೆಂಬರ್ 5 ರಿಂದ 19 ರ ವರೆಗೆ 4 ಮತ್ತು 5ನೇ ಪ್ಲಾಟ್ ಫಾರಂ ಕೂಡಾ ಬಂದ್ ಆಗಲಿದೆ. ಈ ಕಾರಣಕ್ಕೆ ಕೆಲ ರೈಲುಗಳನ್ನು ರದ್ದು ಮಾಡಲಾಗಿದೆ. ತುಮಕೂರು-ಕೆಎಸ್‌ಆರ್ ಬೆಂಗಳೂರು ಮತ್ತು 06575 ಕೆಎಸ್‌ಆರ್ ಬೆಂಗಳೂರು-ತುಮಕೂರು ರೈಲು ಸಂಚಾರವನ್ನು ಇಂದಿನಿಂದ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಿಂದ 19ರವರೆಗೆ ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಿದೆ.

ತುಮಕೂರು- ಯಶವಂತಪುರ ರೈಲು ಇಂದಿನಿಂದ ಆಗಸ್ಟ್ 31 ಮತ್ತು ಸಪ್ಟೆಂಬರ್ 1 ರಿಂದ 19 ರವರೆಗೆ ಚಿಕ್ಕಬಾಣಾವರ- ಯಶವಂತಪುರ ನಡುವೆ ಭಾಗಶಃ ರದ್ದಾಗಲಿದೆ. ಯಶವಂತಪುರ-ಹೊಸೂರು ಮಧ್ಯೆ ಸಂಚರಿಸುವ ರೈಲು ಇಂದಿನಿಂದ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಿಂದ 19ರವರೆಗೆ ಯಶವಂತಪುರ- ಹೆಬ್ಬಾಳ ನಡುವೆ ಭಾಗಶಃ ರದ್ದಾಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದ ಮಣ್ಣು ತೆರವು ಪೂರ್ಣ; ರೈಲು ಸಂಚಾರ ಪುನಾರಂಭ - Railway Line Work Complete

ETV Bharat Logo

Copyright © 2025 Ushodaya Enterprises Pvt. Ltd., All Rights Reserved.