ETV Bharat / state

ಉಡುಪಿ ಜಿಲ್ಲೆಯಾದ್ಯಂತ ಸತತ ಮಳೆ: ಆಸ್ತಿ-ಪಾಸ್ತಿಗೆ ಹಾನಿ, ಬೀಚ್​ ಬಳಿ ಮೋಜು ಮಾಡುತ್ತಿದ್ದವರಿಗೆ ಎಸ್​ಐ ಬುದ್ಧಿಮಾತು - Udupi Rain

ಉಡುಪಿ ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿದೆ. ಮಳೆಯಿಂದ ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಇನ್ನು ಮರವಂತೆ ಬೀಚ್​ನಲ್ಲಿ ಮೋಜು ಮಾಡುತ್ತಿದ್ದ ಪ್ರವಾಸಿಗರಿಗೆ ಸಬ್​ ಇನ್ಸ್​ಪೆಕ್ಟರ್​ ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ.

author img

By ETV Bharat Karnataka Team

Published : Jul 7, 2024, 6:41 PM IST

ಉಡುಪಿ ಜಿಲ್ಲೆಯಾದ್ಯಂತ ಸತತ ಮಳೆ
ಉಡುಪಿ ಜಿಲ್ಲೆಯಾದ್ಯಂತ ಸತತ ಮಳೆ (ETV Bharat)
ಉಡುಪಿ ಜಿಲ್ಲೆಯಾದ್ಯಂತ ಸತತ ಮಳೆ (ETV Bharat)

ಉಡುಪಿ: ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದೆ. ಮಳೆಯೊಂದಿಗೆ ಗಾಳಿ ಇಲ್ಲದ ಕಾರಣ ನೆರೆ ಭೀತಿ ಇಲ್ಲವಾಗಿದೆ. ಹೀಗಾಗಿ ನದಿಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಿದೆ. ಆದರೆ ಮಳೆ ಬಿಟ್ಟು ಬಿಟ್ಟು ನಿರಂತರವಾಗಿ ಸುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 93.4 ಮಿ.ಮೀ. ಮಳೆಯಾಗಿದೆ. ಉಡುಪಿಯಲ್ಲಿ 117.7, ಹೆಬ್ರಿಯಲ್ಲಿ 107.7, ಬೈಂದೂರಿನಲ್ಲಿ 97.7, ಬ್ರಹ್ಮಾವರದಲ್ಲಿ 97.0, ಕಾರ್ಕಳದಲ್ಲಿ 87.7, ಕುಂದಾಪುರದಲ್ಲಿ 82.6 ಹಾಗೂ ಕಾಪುವಿನಲ್ಲಿ 77.4 ಮಿ.ಮೀ. ಮಳೆ ಸುರಿದಿದೆ.

ದಿನದಲ್ಲಿ ನಾಲ್ಕು ಮನೆ ಹಾನಿಯ ಪ್ರಕರಣ ವರದಿಯಾಗಿದ್ದು, ಒಟ್ಟು 1.10 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ಕುಂದಾಪುರದ ಹಳನಾಡಿನ ವನಜ ದೇವಾಡಿಗರ ಮನೆ ಮೇಲೆ ಮರ ಬಿದ್ದು ಹಾನಿಯಾದರೆ, ಬೆಳ್ಳಾಲದಲ್ಲಿ ಸರೋಜ ಶೆಡ್ತಿ ಅವರ ಮನೆ ಮಳೆಯಿಂದ ಭಾಗಶಃ ಹಾನಿಯಾಗಿದೆ. ಕಾರ್ಕಳದ ಬೋಳ ಗ್ರಾಮದಲ್ಲಿ ನಾರಾಯಣ ಹರಿಜನ ಹಾಗೂ ಕಣಜಾರಿನ ಕಲ್ಯಾಣಿ ಅವರ ಮನೆಗೆ ತಲಾ 30,000 ರೂ.ನಷ್ಟದ ಅಂದಾಜು ಮಾಡಲಾಗಿದೆ.

ಪ್ರವಾಸಿಗರಿಗೆ ಬುದ್ಧಿಮಾತು ಹೇಳಿದ ಎಸ್​ಐ: ನಿರಂತರ ಸುರಿಯುತ್ತಿರುವ ಮಳೆಯಿಂದ ಪ್ರಕ್ಷುಬ್ಧಗೊಂಡ ಮರವಂತೆ ಬೀಚ್​ನಲ್ಲಿ ಮೋಜು ಮಾಡುತ್ತಿದ್ದ ಪ್ರವಾಸಿಗರಿಗೆ ಗಂಗೊಳ್ಳಿ ಠಾಣೆ ಸಬ್​ ಇನ್ಸ್​ಪೆಕ್ಟರ್​ ಹರೀಶ್ ಆರ್. ಬುದ್ಧಿ ಮಾತಿನೊಂದಿಗೆ ಎಚ್ಚರಿಕೆ ನೀಡಿ ಕಳುಹಿಸಿರುವ ಘಟನೆ ನಡೆದಿದೆ. ಮಳೆಗಾಲದಲ್ಲಿ ಮರವಂತೆ ಸಮುದ್ರದ ನೀರಿಗೆ ಇಳಿಯದಂತೆ ಪೊಲೀಸರು ಹಲವು ಮುಂಜಾಗೃತಾ ಕ್ರಮ ಕೈಗೊಂಡಿದ್ದು, ಸೂಚನಾ ಫಲಕ ಅಳವಡಿಸಿದ್ದಾರೆ. ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ. ಆದರೆ ಪೊಲೀಸ್ ಸಿಬ್ಬಂದಿ, ಕರಾವಳಿ ಕಾವಲು ಪಡೆ, ಗಸ್ತಿನವರು, ಹೋಂ ಗಾರ್ಡ್ ಸಿಬ್ಬಂದಿ ಸಹಿತ ಸಾರ್ವಜನಿಕರು ಎಷ್ಟೇ ಮಾಹಿತಿ, ಎಚ್ಚರಿಕೆ ನೀಡಿದರೂ ಕೂಡ ಪ್ರವಾಸಿಗರು ಮಾತ್ರ ಸೆಲ್ಫಿ ಕ್ರೇಜ್ ಬಿಡುತ್ತಿಲ್ಲ.

ಪ್ರವಾಸಿಗರು ಮಿತಿ ಮೀರಿ ವರ್ತಿಸಿದಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ದಡದಲ್ಲಿಯೇ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ದೂರದಿಂದಲೇ ಬೀಚ್ ನೋಡಿಕೊಂಡು ಹೋಗಿ ಎಂದು ಮನದಟ್ಟು ಮಾಡುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್: ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಸುವರ್ಣ ಪಾಪನಾಶಿನಿ, ಸೀತಾನದಿ ತುಂಬಿ ಹರಿಯುತ್ತಿದ್ದು ಮಟ್ಟು, ಕಾಪು ಸಮುದ್ರ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹವಾಮಾನ ಇಲಾಖೆಯ ವರದಿಯಂತೆ ಮುಂದಿನ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ ಲಕ್ಷಣವಿದ್ದು ಸಮುದ್ರ, ನದಿ ತೀರದಲ್ಲಿ ಮೋಜು ಮಸ್ತಿಗೆ ಅವಕಾಶವಿಲ್ಲ.

ರಕ್ಕಸ ಗಾತ್ರದ ಅಲೆಯ ನಡುವೆ ಜನರ ಸೆಲ್ಫಿ: ಮಲ್ಪೆ ಸಮೀಪದ ಪಡುಕೆರೆಯಲ್ಲಿ ರಕ್ಕಸಗಾತ್ರದ ಅಲೆಗಳು ಬರುತ್ತಿದ್ದರೂ ಪ್ರವಾಸಿಗರು ಬೀಚ್​ಗೆ ಭೇಟಿ ನೀಡುತ್ತಿದ್ದಾರೆ. ಎಚ್ಚರಿಕೆ ಫಲಕವಿದ್ದರೂ ಕ್ಯಾರೆ ಅನ್ನದೇ ಪ್ರವಾಸಿಗರು ಸಮುದ್ರಕ್ಕೆ ಇಳಿಯವುದು, ಭಾರಿ ಗಾತ್ರದ ಅಲೆಗಳು ಬರುವಾಗ ಸೆಲ್ಫಿ ಕ್ಲಿಕ್ಲಿಸಿಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕುತ್ತಿದ್ದಾರೆ.

ನೆರೆಪೀಡಿತ ಪ್ರದೇಶಗಳಿಗೆ ಶಾಸಕರು, ಜಿಲ್ಲಾಧಿಕಾರಿಗಳು ಭೇಟಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಬೈಂದೂರು, ಕುಂದಾಪುರ, ಬ್ರಹಾವರ, ಕಾರ್ಕಳ, ಕಾಪು ಭಾಗದಲ್ಲಿನ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಶಾಸಕರು ಭೇಟಿ ನೀಡಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಿದರು.

ಇದನ್ನೂ ಓದಿ: Warning.. ನೈಋತ್ಯ ಮಾನ್ಸೂನ್ ಅಬ್ಬರ: ರಾಜ್ಯದ ಕರಾವಳಿಯಲ್ಲಿ ಮತ್ತೆ ಐದು ದಿನ ಹೈ ಅಲರ್ಟ್.. - Rain High Alert

ಉಡುಪಿ ಜಿಲ್ಲೆಯಾದ್ಯಂತ ಸತತ ಮಳೆ (ETV Bharat)

ಉಡುಪಿ: ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದೆ. ಮಳೆಯೊಂದಿಗೆ ಗಾಳಿ ಇಲ್ಲದ ಕಾರಣ ನೆರೆ ಭೀತಿ ಇಲ್ಲವಾಗಿದೆ. ಹೀಗಾಗಿ ನದಿಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಿದೆ. ಆದರೆ ಮಳೆ ಬಿಟ್ಟು ಬಿಟ್ಟು ನಿರಂತರವಾಗಿ ಸುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 93.4 ಮಿ.ಮೀ. ಮಳೆಯಾಗಿದೆ. ಉಡುಪಿಯಲ್ಲಿ 117.7, ಹೆಬ್ರಿಯಲ್ಲಿ 107.7, ಬೈಂದೂರಿನಲ್ಲಿ 97.7, ಬ್ರಹ್ಮಾವರದಲ್ಲಿ 97.0, ಕಾರ್ಕಳದಲ್ಲಿ 87.7, ಕುಂದಾಪುರದಲ್ಲಿ 82.6 ಹಾಗೂ ಕಾಪುವಿನಲ್ಲಿ 77.4 ಮಿ.ಮೀ. ಮಳೆ ಸುರಿದಿದೆ.

ದಿನದಲ್ಲಿ ನಾಲ್ಕು ಮನೆ ಹಾನಿಯ ಪ್ರಕರಣ ವರದಿಯಾಗಿದ್ದು, ಒಟ್ಟು 1.10 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ಕುಂದಾಪುರದ ಹಳನಾಡಿನ ವನಜ ದೇವಾಡಿಗರ ಮನೆ ಮೇಲೆ ಮರ ಬಿದ್ದು ಹಾನಿಯಾದರೆ, ಬೆಳ್ಳಾಲದಲ್ಲಿ ಸರೋಜ ಶೆಡ್ತಿ ಅವರ ಮನೆ ಮಳೆಯಿಂದ ಭಾಗಶಃ ಹಾನಿಯಾಗಿದೆ. ಕಾರ್ಕಳದ ಬೋಳ ಗ್ರಾಮದಲ್ಲಿ ನಾರಾಯಣ ಹರಿಜನ ಹಾಗೂ ಕಣಜಾರಿನ ಕಲ್ಯಾಣಿ ಅವರ ಮನೆಗೆ ತಲಾ 30,000 ರೂ.ನಷ್ಟದ ಅಂದಾಜು ಮಾಡಲಾಗಿದೆ.

ಪ್ರವಾಸಿಗರಿಗೆ ಬುದ್ಧಿಮಾತು ಹೇಳಿದ ಎಸ್​ಐ: ನಿರಂತರ ಸುರಿಯುತ್ತಿರುವ ಮಳೆಯಿಂದ ಪ್ರಕ್ಷುಬ್ಧಗೊಂಡ ಮರವಂತೆ ಬೀಚ್​ನಲ್ಲಿ ಮೋಜು ಮಾಡುತ್ತಿದ್ದ ಪ್ರವಾಸಿಗರಿಗೆ ಗಂಗೊಳ್ಳಿ ಠಾಣೆ ಸಬ್​ ಇನ್ಸ್​ಪೆಕ್ಟರ್​ ಹರೀಶ್ ಆರ್. ಬುದ್ಧಿ ಮಾತಿನೊಂದಿಗೆ ಎಚ್ಚರಿಕೆ ನೀಡಿ ಕಳುಹಿಸಿರುವ ಘಟನೆ ನಡೆದಿದೆ. ಮಳೆಗಾಲದಲ್ಲಿ ಮರವಂತೆ ಸಮುದ್ರದ ನೀರಿಗೆ ಇಳಿಯದಂತೆ ಪೊಲೀಸರು ಹಲವು ಮುಂಜಾಗೃತಾ ಕ್ರಮ ಕೈಗೊಂಡಿದ್ದು, ಸೂಚನಾ ಫಲಕ ಅಳವಡಿಸಿದ್ದಾರೆ. ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ. ಆದರೆ ಪೊಲೀಸ್ ಸಿಬ್ಬಂದಿ, ಕರಾವಳಿ ಕಾವಲು ಪಡೆ, ಗಸ್ತಿನವರು, ಹೋಂ ಗಾರ್ಡ್ ಸಿಬ್ಬಂದಿ ಸಹಿತ ಸಾರ್ವಜನಿಕರು ಎಷ್ಟೇ ಮಾಹಿತಿ, ಎಚ್ಚರಿಕೆ ನೀಡಿದರೂ ಕೂಡ ಪ್ರವಾಸಿಗರು ಮಾತ್ರ ಸೆಲ್ಫಿ ಕ್ರೇಜ್ ಬಿಡುತ್ತಿಲ್ಲ.

ಪ್ರವಾಸಿಗರು ಮಿತಿ ಮೀರಿ ವರ್ತಿಸಿದಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ದಡದಲ್ಲಿಯೇ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ದೂರದಿಂದಲೇ ಬೀಚ್ ನೋಡಿಕೊಂಡು ಹೋಗಿ ಎಂದು ಮನದಟ್ಟು ಮಾಡುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್: ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಸುವರ್ಣ ಪಾಪನಾಶಿನಿ, ಸೀತಾನದಿ ತುಂಬಿ ಹರಿಯುತ್ತಿದ್ದು ಮಟ್ಟು, ಕಾಪು ಸಮುದ್ರ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹವಾಮಾನ ಇಲಾಖೆಯ ವರದಿಯಂತೆ ಮುಂದಿನ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ ಲಕ್ಷಣವಿದ್ದು ಸಮುದ್ರ, ನದಿ ತೀರದಲ್ಲಿ ಮೋಜು ಮಸ್ತಿಗೆ ಅವಕಾಶವಿಲ್ಲ.

ರಕ್ಕಸ ಗಾತ್ರದ ಅಲೆಯ ನಡುವೆ ಜನರ ಸೆಲ್ಫಿ: ಮಲ್ಪೆ ಸಮೀಪದ ಪಡುಕೆರೆಯಲ್ಲಿ ರಕ್ಕಸಗಾತ್ರದ ಅಲೆಗಳು ಬರುತ್ತಿದ್ದರೂ ಪ್ರವಾಸಿಗರು ಬೀಚ್​ಗೆ ಭೇಟಿ ನೀಡುತ್ತಿದ್ದಾರೆ. ಎಚ್ಚರಿಕೆ ಫಲಕವಿದ್ದರೂ ಕ್ಯಾರೆ ಅನ್ನದೇ ಪ್ರವಾಸಿಗರು ಸಮುದ್ರಕ್ಕೆ ಇಳಿಯವುದು, ಭಾರಿ ಗಾತ್ರದ ಅಲೆಗಳು ಬರುವಾಗ ಸೆಲ್ಫಿ ಕ್ಲಿಕ್ಲಿಸಿಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕುತ್ತಿದ್ದಾರೆ.

ನೆರೆಪೀಡಿತ ಪ್ರದೇಶಗಳಿಗೆ ಶಾಸಕರು, ಜಿಲ್ಲಾಧಿಕಾರಿಗಳು ಭೇಟಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಬೈಂದೂರು, ಕುಂದಾಪುರ, ಬ್ರಹಾವರ, ಕಾರ್ಕಳ, ಕಾಪು ಭಾಗದಲ್ಲಿನ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಶಾಸಕರು ಭೇಟಿ ನೀಡಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಿದರು.

ಇದನ್ನೂ ಓದಿ: Warning.. ನೈಋತ್ಯ ಮಾನ್ಸೂನ್ ಅಬ್ಬರ: ರಾಜ್ಯದ ಕರಾವಳಿಯಲ್ಲಿ ಮತ್ತೆ ಐದು ದಿನ ಹೈ ಅಲರ್ಟ್.. - Rain High Alert

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.