ETV Bharat / state

ದರ್ಶನ್​ಗೆ ರಾಜಾತಿಥ್ಯ ಆರೋಪ: ರೌಡಿ ವಿಲ್ಸನ್ ಗಾರ್ಡನ್ ನಾಗ ಸೇರಿ ಇಬ್ಬರು 3 ದಿನ ಪೊಲೀಸ್ ಕಸ್ಟಡಿಗೆ - Wilson Garden Naga

author img

By ETV Bharat Karnataka Team

Published : 7 hours ago

ನಟ ದರ್ಶನ್​ಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಪ್ರಕರಣದಲ್ಲಿ ಜೈಲಿನಲ್ಲಿದ್ದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸೇರಿ ಇಬ್ಬರನ್ನು ನ್ಯಾಯಾಲಯವು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

rowdy sheeter
ರೌಡಿಶೀಟರ್ ಕರೆದೊಯ್ಯುತ್ತಿರುವ ಪೊಲೀಸರು (ETV Bharat)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಾಗ ನಟ ದರ್ಶನ್ ಹಾಗೂ ಇನ್ನಿತರ ಆರೋಪಿಗಳಿಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಸಂಬಂಧ ವಿಚಾರಣಾಧೀನ ಕೈದಿಗಳಾಗಿರುವ ವಿಲ್ಸನ್ ಗಾರ್ಡನ್ ನಾಗ ಹಾಗೂ ವೇಲು ಎಂಬವರನ್ನು ಕೋರ್ಟ್​ ಮೂರು ದಿನಗಳ ಕಾಲ ಪರಪ್ಪನ ಅಗ್ರಹಾರ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದೆ.

ಪ್ರಕರಣದ ತನಿಖೆ‌‌ ನಡೆಸುತ್ತಿರುವ ಪೊಲೀಸರು, ಇಂದು 9ನೇ ಎಸಿಎಂಎಂ‌ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಕೋರ್ಟ್​, ಮೂರು‌ ದಿನಗಳ‌ ಕಾಲ‌ ಅಂದರೆ ಸೆಪ್ಟೆಂಬರ್​​ 21ರ ಸಂಜೆ 4.30ರವರೆಗೆ ಪೊಲೀಸ್ ವಶಕ್ಕೆ ಪಡೆದುಕೊಳ್ಳಲು ಅನುಮತಿ ನೀಡಿತು.

ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ವಿಲ್ಸನ್ ಗಾರ್ಡನ್ ನಾಗ, ದರ್ಶನ್, ಕುಳ್ಳ ಸೀನಾ ಹಾಗೂ ದರ್ಶನ್ ಸಹಚರ ನಾಗರಾಜು ಇರುವ ಫೋಟೋವನ್ನು ನಾಗನ ಸಹಚರ ವೇಲು ಮೊಬೈಲ್​ನಲ್ಲಿ ಸೆರೆಹಿಡಿದಿದ್ದ. ದರ್ಶನ್ ಒಂದು ಕೈನಲ್ಲಿ ಕಾಫಿ ಮಗ್, ಇನ್ನೊಂದು ಕೈಯಲ್ಲಿ ಸಿಗರೇಟು ಸೇವನೆ ಮಾಡುತ್ತಿರುವ ಫೋಟೋ ವೈರಲ್ ಆಗಿ, ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಜೈಲಿನ‌ ಅಧೀಕ್ಷಕರು ಸೇರಿ 9ಕ್ಕಿಂತ ಹೆಚ್ಚು ಸಿಬ್ಬಂದಿ ಅಮಾನತಾಗಿದ್ದರು. ಬಳಿಕ ಕೋರ್ಟ್​ ಆದೇಶದ ಮೇರೆಗೆ, ದರ್ಶನ್ ಹಾಗೂ ಇತರ ಆರೋಪಿಗಳನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲಾಗಿತ್ತು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರ ಆರೋಪ: ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಪ್ರಕರಣ - Case Against Munirathna

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಾಗ ನಟ ದರ್ಶನ್ ಹಾಗೂ ಇನ್ನಿತರ ಆರೋಪಿಗಳಿಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಸಂಬಂಧ ವಿಚಾರಣಾಧೀನ ಕೈದಿಗಳಾಗಿರುವ ವಿಲ್ಸನ್ ಗಾರ್ಡನ್ ನಾಗ ಹಾಗೂ ವೇಲು ಎಂಬವರನ್ನು ಕೋರ್ಟ್​ ಮೂರು ದಿನಗಳ ಕಾಲ ಪರಪ್ಪನ ಅಗ್ರಹಾರ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದೆ.

ಪ್ರಕರಣದ ತನಿಖೆ‌‌ ನಡೆಸುತ್ತಿರುವ ಪೊಲೀಸರು, ಇಂದು 9ನೇ ಎಸಿಎಂಎಂ‌ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಕೋರ್ಟ್​, ಮೂರು‌ ದಿನಗಳ‌ ಕಾಲ‌ ಅಂದರೆ ಸೆಪ್ಟೆಂಬರ್​​ 21ರ ಸಂಜೆ 4.30ರವರೆಗೆ ಪೊಲೀಸ್ ವಶಕ್ಕೆ ಪಡೆದುಕೊಳ್ಳಲು ಅನುಮತಿ ನೀಡಿತು.

ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ವಿಲ್ಸನ್ ಗಾರ್ಡನ್ ನಾಗ, ದರ್ಶನ್, ಕುಳ್ಳ ಸೀನಾ ಹಾಗೂ ದರ್ಶನ್ ಸಹಚರ ನಾಗರಾಜು ಇರುವ ಫೋಟೋವನ್ನು ನಾಗನ ಸಹಚರ ವೇಲು ಮೊಬೈಲ್​ನಲ್ಲಿ ಸೆರೆಹಿಡಿದಿದ್ದ. ದರ್ಶನ್ ಒಂದು ಕೈನಲ್ಲಿ ಕಾಫಿ ಮಗ್, ಇನ್ನೊಂದು ಕೈಯಲ್ಲಿ ಸಿಗರೇಟು ಸೇವನೆ ಮಾಡುತ್ತಿರುವ ಫೋಟೋ ವೈರಲ್ ಆಗಿ, ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಜೈಲಿನ‌ ಅಧೀಕ್ಷಕರು ಸೇರಿ 9ಕ್ಕಿಂತ ಹೆಚ್ಚು ಸಿಬ್ಬಂದಿ ಅಮಾನತಾಗಿದ್ದರು. ಬಳಿಕ ಕೋರ್ಟ್​ ಆದೇಶದ ಮೇರೆಗೆ, ದರ್ಶನ್ ಹಾಗೂ ಇತರ ಆರೋಪಿಗಳನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲಾಗಿತ್ತು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರ ಆರೋಪ: ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಪ್ರಕರಣ - Case Against Munirathna

ETV Bharat Logo

Copyright © 2024 Ushodaya Enterprises Pvt. Ltd., All Rights Reserved.