ETV Bharat / state

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಭಾವಚಿತ್ರ ಅನಾವರಣ; ಫೆ.17ರಿಂದ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಅಳವಡಿಕೆ

author img

By ETV Bharat Karnataka Team

Published : Feb 13, 2024, 1:00 PM IST

Updated : Feb 13, 2024, 4:32 PM IST

ಸಾಂಸ್ಕೃತಿಕ ನಾಯಕ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ವಿಶ್ವಗುರು ಬಸವಣ್ಣ ಭಾವಚಿತ್ರ ಅನಾವರಣ
ವಿಶ್ವಗುರು ಬಸವಣ್ಣ ಭಾವಚಿತ್ರ ಅನಾವರಣ

ಬೆಂಗಳೂರು : ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ನಾಯಕ- ವಿಶ್ವಗುರು ಬಸವಣ್ಣನವರ ಭಾವಚಿತ್ರ ಹಾಗೂ ವಚನ‌ ವಿವೇಕ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.

ಈ ವೇಳೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ‌ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಫೆ.17 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಬಸವಣ್ಣರ ನೂತನ ಭಾವಚಿತ್ರ ಅನಾವರಣಗೊಳಿಸಲಾಗುತ್ತದೆ.‌ ಪ್ರತಿ ಭಾವಚಿತ್ರದ‌‌ ಕೆಳಗಡೆ ಸಾಂಸ್ಕೃತಿಕ ನಾಯಕ ಬಸವಣ್ಣ ಅಂತ ಬರೆಯುತ್ತೇವೆ. ಬುದ್ಧ, ಬಸವಣ್ಣ, ಗಾಂಧಿ ಹಾಗೂ ಅಂಬೇಡ್ಕರ್ ಬಗ್ಗೆ ಇಡೀ ವಿಶ್ವವೇ ಮಾತನಾಡುತ್ತದೆ. ಇವರು ನಮ್ಮ ಸಮಾಜದಲ್ಲಿ ಇರುವ ಅಂಕುಡೊಂಕು ತಿದ್ದಿ, ಆರೋಗ್ಯಕರ ಸಮಾಜ ನಿರ್ಮಾಣ ಮಾಡಿದ್ದಾರೆ ಎಂದರು.

ಮೌಢ್ಯಗಳನ್ನು ಸಮಾಜದಲ್ಲಿ ನೋಡಿದ್ದೇವೆ. ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು. ಪ್ರತಿಯೊಬ್ಬರೂ ಸ್ವಾಭಿಮಾನದಿಂದ ಬದುಕುವ ವ್ಯವಸ್ಥೆ ನಿರ್ಮಾಣ ಆಗಬೇಕು ಎಂದು ಬಸವಣ್ಣ ಕನಸು ಕಂಡಿದ್ದರು. ಅದರಂತೆಯೇ ಬಸವಣ್ಣ ನಡೆದುಕೊಂಡಿದ್ದರು. ಇದು ಜನಪರವಾದ ಸಮಾಜ. ಆಡು ಮಾತಿನಲ್ಲೇ ಬಸವಣ್ಣ ವಚನ ರೂಪಿಸಿದ್ದವರು. ಜನರಿಗೆ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ರಚನೆ‌ ಮಾಡಿದ್ದಾರೆ. ನನಗೆ ಸಂಸ್ಕೃತ ಭಾಷೆ ಗೊತ್ತಾಗಲ್ಲ. ಕನ್ನಡ ಬಾಷೆಯಲ್ಲಿ ವಚನಗಳನ್ನು ಜನರಿಗೆ ಅರ್ಥ ಆಗುವ ರೀತಿಯಲ್ಲಿ ಹೇಳುತ್ತಿದ್ದರು. ಕಾಗೆ ಒಂದು ಅಗುಳ ಕಂಡರೆ ಕರೆಯದೆ ತನ್ನ ಬಳಗವ, ಕೋಳಿ ಒಂದು ಕುಟುಕ ಕಂಡಡೆ ಕೂಗಿ ಕರೆಯದೆ ತನ್ನ ಕುಲವನೆಲ್ಲವ, ಶಿವಭಕ್ತನಾಗಿ ಭಕ್ತಿಪಕ್ಷವಿಲ್ಲದಿದ್ದಡೆ ಕಾಗೆ ಕೋಳಿಗಳಿಗಿಂತ ಕರಕಷ್ಟ ಕೂಡಲಸಂಗಮದೇವಾ ಎಂದು ಬಸವಣ್ಣರ ವಚನಗಳನ್ನು ಉಲ್ಲೇಖಿಸಿದರು.

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ನವರ ಹೊಸ ಭಾವಚಿತ್ರ
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ನವರ ಹೊಸ ಭಾವಚಿತ್ರ

ಅಧಿಕಾರ ಹಾಗೂ ಸಂಪತ್ತು ಬಲಾಢ್ಯರ ಕೈಯಲ್ಲಿ ಹೋಗಬಾರದು. ವಿದ್ಯಾವಂತರು ಸಹ ತಮ್ಮ ಹಣೆಬರಹ ಸರಿಯಿಲ್ಲ ಅಂತಾರೆ. ದೇವರು ಬಡವನಾಗಿರು ಅಂತ ಬರಿತಾರಾ?. ದೇವರು ಕರುಣಾಮಯಿ ಅಂತಾರಲ್ವಾ? ಇದೆಲ್ಲಾ ಸ್ವಾರ್ಥಿಗಳು ಹೇಳಿದ ಮಾತುಗಳು. ಸಂಸದೀಯ ವ್ಯವಸ್ಥೆ ನಮ್ಮ ಕಾಲದಲ್ಲೇ ಬಂದಿದೆ. ಬ್ರಿಟಿಷರ ಕಾಲದಲ್ಲಿ ಸಂಸದೀಯ ವ್ಯವಸ್ಥೆ ಬಂದಿದೆ ಅಂತಾರೆ. ಇದು ತಪ್ಪು, ಯಾಕೆಂದರೆ ಬಸವಣ್ಣರ ಕಾಲದಲ್ಲೇ ಸಂಸದೀಯ ವ್ಯವಸ್ಥೆ ಬಂದಿತ್ತು. ಬಸವಣ್ಣರು ಅನುಭವ ಮಂಟಪ ಸ್ಥಾಪನೆ ಮಾಡಿದ್ದರು ಎಂದು ಸಿಎಂ ತಿಳಿಸಿದರು.

ಅಲ್ಲಿ ಮೌಢ್ಯ, ಕಂದಾಚರ, ಸಮಸ್ಯೆಗಳು ಅನುಭವ ಮಂಟಪದಲ್ಲಿ ಚರ್ಚೆ ಆಗುತ್ತಿತ್ತು. ಮಹಿಳೆಯರಿಗೆ ಸ್ವಾತಂತ್ರ್ಯ ಇರಲಿಲ್ಲ. ಮಹಿಳೆಯರ ವಿಚಾರದಲ್ಲಿ ಬಹಳ ಕೆಟ್ಟ ಪದ್ಧತಿ ಇತ್ತು. ಆರ್ಥಿಕ ಚಲನೆ ಆದರೆ ಮಾತ್ರವೇ ಪ್ರತಿಯೊಂದು ಜಾತಿ ಗಟ್ಟಿಯಾಗಿ ನೆಲೆ ನಿಲ್ಲುತ್ತದೆ. ಮನುವಾದಿಗಳು ಕೆಟ್ಟ ಸಮಾಜ ನಿರ್ಮಾಣ ಮಾಡಿದ್ದರು. ಅದನ್ನು ಹೋಗಲಾಡಿಸುವ ಸಲುವಾಗಿ ಬಸವಣ್ಣ ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನ ದ್ವೇಷಿಸಿದರೆ ದುರ್ಗುಣ. ನಾನೇನು ಕುರುಬ ಜಾತಿಯಲ್ಲಿ ಹುಟ್ಟಬೇಕು ಅಂತ ಅರ್ಜಿ ಹಾಕಿದ್ನಾ?. ನಾನು ಹುಟ್ಟಿದ್ದೇನೆ. ಜಾತಿ ವ್ಯವಸ್ಥೆ ಇದೆ ಎಂದರು.

ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಸಭಾಪತಿ : ಇದೇ ವೇಳೆ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ, ಕರ್ನಾಟಕದಲ್ಲಿ ಅನೇಕ ಸರ್ಕಾರಗಳು ಬಂದು ಹೋಗಿವೆ. ಅನೇಕ ಮುಖ್ಯಮಂತ್ರಿಗಳು ಸಹ ಬಂದು ಹೋಗಿದ್ದಾರೆ. ಆದರೆ ಇಂದು ಸಿದ್ದರಾಮಯ್ಯ ಅವರು ಬಸವೇಶ್ವರರ ಫೋಟೋ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಇಡಬೇಕು ಎಂಬ ನಿರ್ಧಾರ ಮಾಡಿದ್ದಾರೆ. ಮೊಟ್ಟ ಮೊದಲು ಸಿದ್ದರಾಮಯ್ಯ ತೆಗೆದುಕೊಂಡ ನಿರ್ಧಾರ ಇಂದು ಇಡೀ ದೇಶಕ್ಕೆ ಮಾದರಿ ಆಗಿದೆ. ಬಸವಣ್ಣನವರ ತತ್ವಾದರ್ಶ ಅನುಸರಿಸಿಕೊಂಡು ಸಿದ್ದರಾಮಯ್ಯ ಮೊದಲಿನಿಂದಲೂ ಬಂದಿದ್ದಾರೆ. ಎಷ್ಟು ಸಾರಿ ಸಿಎಂ ಸಿದ್ದರಾಮಯ್ಯ ಹೊಗಳಿದರೂ ಕಡಿಮೇನೆ. ಇನ್ನಷ್ಟು ಹೆಚ್ಚು ಕೆಲಸ‌ ಸಿದ್ದರಾಮಯ್ಯ ಅವರಿಂದ ಆಗಲಿ. ಅನುಭವ ಮಂಟಪ ಮ‌ೂಲಕ ಪ್ರಜಾಪ್ರಭುತ್ವಕ್ಕೆ ಮಾದರಿ ಆಗಲಿ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ : ಸರ್ಕಾರಿ ಕಚೇರಿಗಳಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಮುದ್ರಿಸಲು ಸಿಎಂ ಸೂಚನೆ

ಬೆಂಗಳೂರು : ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ನಾಯಕ- ವಿಶ್ವಗುರು ಬಸವಣ್ಣನವರ ಭಾವಚಿತ್ರ ಹಾಗೂ ವಚನ‌ ವಿವೇಕ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.

ಈ ವೇಳೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ‌ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಫೆ.17 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಬಸವಣ್ಣರ ನೂತನ ಭಾವಚಿತ್ರ ಅನಾವರಣಗೊಳಿಸಲಾಗುತ್ತದೆ.‌ ಪ್ರತಿ ಭಾವಚಿತ್ರದ‌‌ ಕೆಳಗಡೆ ಸಾಂಸ್ಕೃತಿಕ ನಾಯಕ ಬಸವಣ್ಣ ಅಂತ ಬರೆಯುತ್ತೇವೆ. ಬುದ್ಧ, ಬಸವಣ್ಣ, ಗಾಂಧಿ ಹಾಗೂ ಅಂಬೇಡ್ಕರ್ ಬಗ್ಗೆ ಇಡೀ ವಿಶ್ವವೇ ಮಾತನಾಡುತ್ತದೆ. ಇವರು ನಮ್ಮ ಸಮಾಜದಲ್ಲಿ ಇರುವ ಅಂಕುಡೊಂಕು ತಿದ್ದಿ, ಆರೋಗ್ಯಕರ ಸಮಾಜ ನಿರ್ಮಾಣ ಮಾಡಿದ್ದಾರೆ ಎಂದರು.

ಮೌಢ್ಯಗಳನ್ನು ಸಮಾಜದಲ್ಲಿ ನೋಡಿದ್ದೇವೆ. ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು. ಪ್ರತಿಯೊಬ್ಬರೂ ಸ್ವಾಭಿಮಾನದಿಂದ ಬದುಕುವ ವ್ಯವಸ್ಥೆ ನಿರ್ಮಾಣ ಆಗಬೇಕು ಎಂದು ಬಸವಣ್ಣ ಕನಸು ಕಂಡಿದ್ದರು. ಅದರಂತೆಯೇ ಬಸವಣ್ಣ ನಡೆದುಕೊಂಡಿದ್ದರು. ಇದು ಜನಪರವಾದ ಸಮಾಜ. ಆಡು ಮಾತಿನಲ್ಲೇ ಬಸವಣ್ಣ ವಚನ ರೂಪಿಸಿದ್ದವರು. ಜನರಿಗೆ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ರಚನೆ‌ ಮಾಡಿದ್ದಾರೆ. ನನಗೆ ಸಂಸ್ಕೃತ ಭಾಷೆ ಗೊತ್ತಾಗಲ್ಲ. ಕನ್ನಡ ಬಾಷೆಯಲ್ಲಿ ವಚನಗಳನ್ನು ಜನರಿಗೆ ಅರ್ಥ ಆಗುವ ರೀತಿಯಲ್ಲಿ ಹೇಳುತ್ತಿದ್ದರು. ಕಾಗೆ ಒಂದು ಅಗುಳ ಕಂಡರೆ ಕರೆಯದೆ ತನ್ನ ಬಳಗವ, ಕೋಳಿ ಒಂದು ಕುಟುಕ ಕಂಡಡೆ ಕೂಗಿ ಕರೆಯದೆ ತನ್ನ ಕುಲವನೆಲ್ಲವ, ಶಿವಭಕ್ತನಾಗಿ ಭಕ್ತಿಪಕ್ಷವಿಲ್ಲದಿದ್ದಡೆ ಕಾಗೆ ಕೋಳಿಗಳಿಗಿಂತ ಕರಕಷ್ಟ ಕೂಡಲಸಂಗಮದೇವಾ ಎಂದು ಬಸವಣ್ಣರ ವಚನಗಳನ್ನು ಉಲ್ಲೇಖಿಸಿದರು.

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ನವರ ಹೊಸ ಭಾವಚಿತ್ರ
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ನವರ ಹೊಸ ಭಾವಚಿತ್ರ

ಅಧಿಕಾರ ಹಾಗೂ ಸಂಪತ್ತು ಬಲಾಢ್ಯರ ಕೈಯಲ್ಲಿ ಹೋಗಬಾರದು. ವಿದ್ಯಾವಂತರು ಸಹ ತಮ್ಮ ಹಣೆಬರಹ ಸರಿಯಿಲ್ಲ ಅಂತಾರೆ. ದೇವರು ಬಡವನಾಗಿರು ಅಂತ ಬರಿತಾರಾ?. ದೇವರು ಕರುಣಾಮಯಿ ಅಂತಾರಲ್ವಾ? ಇದೆಲ್ಲಾ ಸ್ವಾರ್ಥಿಗಳು ಹೇಳಿದ ಮಾತುಗಳು. ಸಂಸದೀಯ ವ್ಯವಸ್ಥೆ ನಮ್ಮ ಕಾಲದಲ್ಲೇ ಬಂದಿದೆ. ಬ್ರಿಟಿಷರ ಕಾಲದಲ್ಲಿ ಸಂಸದೀಯ ವ್ಯವಸ್ಥೆ ಬಂದಿದೆ ಅಂತಾರೆ. ಇದು ತಪ್ಪು, ಯಾಕೆಂದರೆ ಬಸವಣ್ಣರ ಕಾಲದಲ್ಲೇ ಸಂಸದೀಯ ವ್ಯವಸ್ಥೆ ಬಂದಿತ್ತು. ಬಸವಣ್ಣರು ಅನುಭವ ಮಂಟಪ ಸ್ಥಾಪನೆ ಮಾಡಿದ್ದರು ಎಂದು ಸಿಎಂ ತಿಳಿಸಿದರು.

ಅಲ್ಲಿ ಮೌಢ್ಯ, ಕಂದಾಚರ, ಸಮಸ್ಯೆಗಳು ಅನುಭವ ಮಂಟಪದಲ್ಲಿ ಚರ್ಚೆ ಆಗುತ್ತಿತ್ತು. ಮಹಿಳೆಯರಿಗೆ ಸ್ವಾತಂತ್ರ್ಯ ಇರಲಿಲ್ಲ. ಮಹಿಳೆಯರ ವಿಚಾರದಲ್ಲಿ ಬಹಳ ಕೆಟ್ಟ ಪದ್ಧತಿ ಇತ್ತು. ಆರ್ಥಿಕ ಚಲನೆ ಆದರೆ ಮಾತ್ರವೇ ಪ್ರತಿಯೊಂದು ಜಾತಿ ಗಟ್ಟಿಯಾಗಿ ನೆಲೆ ನಿಲ್ಲುತ್ತದೆ. ಮನುವಾದಿಗಳು ಕೆಟ್ಟ ಸಮಾಜ ನಿರ್ಮಾಣ ಮಾಡಿದ್ದರು. ಅದನ್ನು ಹೋಗಲಾಡಿಸುವ ಸಲುವಾಗಿ ಬಸವಣ್ಣ ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನ ದ್ವೇಷಿಸಿದರೆ ದುರ್ಗುಣ. ನಾನೇನು ಕುರುಬ ಜಾತಿಯಲ್ಲಿ ಹುಟ್ಟಬೇಕು ಅಂತ ಅರ್ಜಿ ಹಾಕಿದ್ನಾ?. ನಾನು ಹುಟ್ಟಿದ್ದೇನೆ. ಜಾತಿ ವ್ಯವಸ್ಥೆ ಇದೆ ಎಂದರು.

ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಸಭಾಪತಿ : ಇದೇ ವೇಳೆ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ, ಕರ್ನಾಟಕದಲ್ಲಿ ಅನೇಕ ಸರ್ಕಾರಗಳು ಬಂದು ಹೋಗಿವೆ. ಅನೇಕ ಮುಖ್ಯಮಂತ್ರಿಗಳು ಸಹ ಬಂದು ಹೋಗಿದ್ದಾರೆ. ಆದರೆ ಇಂದು ಸಿದ್ದರಾಮಯ್ಯ ಅವರು ಬಸವೇಶ್ವರರ ಫೋಟೋ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಇಡಬೇಕು ಎಂಬ ನಿರ್ಧಾರ ಮಾಡಿದ್ದಾರೆ. ಮೊಟ್ಟ ಮೊದಲು ಸಿದ್ದರಾಮಯ್ಯ ತೆಗೆದುಕೊಂಡ ನಿರ್ಧಾರ ಇಂದು ಇಡೀ ದೇಶಕ್ಕೆ ಮಾದರಿ ಆಗಿದೆ. ಬಸವಣ್ಣನವರ ತತ್ವಾದರ್ಶ ಅನುಸರಿಸಿಕೊಂಡು ಸಿದ್ದರಾಮಯ್ಯ ಮೊದಲಿನಿಂದಲೂ ಬಂದಿದ್ದಾರೆ. ಎಷ್ಟು ಸಾರಿ ಸಿಎಂ ಸಿದ್ದರಾಮಯ್ಯ ಹೊಗಳಿದರೂ ಕಡಿಮೇನೆ. ಇನ್ನಷ್ಟು ಹೆಚ್ಚು ಕೆಲಸ‌ ಸಿದ್ದರಾಮಯ್ಯ ಅವರಿಂದ ಆಗಲಿ. ಅನುಭವ ಮಂಟಪ ಮ‌ೂಲಕ ಪ್ರಜಾಪ್ರಭುತ್ವಕ್ಕೆ ಮಾದರಿ ಆಗಲಿ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ : ಸರ್ಕಾರಿ ಕಚೇರಿಗಳಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಮುದ್ರಿಸಲು ಸಿಎಂ ಸೂಚನೆ

Last Updated : Feb 13, 2024, 4:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.