ETV Bharat / state

ದಕ್ಷಿಣ ಕನ್ನಡ ವಿಧಾನಪರಿಷತ್ ಉಪಚುನಾವಣೆ: ಅಭ್ಯರ್ಥಿಗಳ ಗೆಲುವಿಗೆ ಸಾಕು ಕೇವಲ 3,017 ಮತ!

ದಕ್ಷಿಣ ಕನ್ನಡ, ಉಡುಪಿಯಲ್ಲಿನ ವಿಧಾನಪರಿಷತ್​ ಕ್ಷೇತ್ರದ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ. ಎರಡೂ ಜಿಲ್ಲೆಗಳ 392 ಮತಗಟ್ಟೆಗಳಲ್ಲಿ 6,032 ಮಂದಿ ಮತ ಚಲಾಯಿಸಲಿದ್ದಾರೆ.

author img

By ETV Bharat Karnataka Team

Published : 2 hours ago

council by-election
ವಿಧಾನಪರಿಷತ್ ಉಪಚುನಾವಣೆ ಅಭ್ಯರ್ಥಿಗಳು (ETV Bharat)

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯುವ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ. ಈ ಉಪಚುನಾವಣೆಯಲ್ಲಿ ಶೇ.100ರಷ್ಟು ಮತದಾನವಾದರೆ, ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಲು ಕೇವಲ 3,017 ಮತಗಳನ್ನು ಪಡೆದರೆ ಸಾಕು.

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯುವ ಉಪಚುನಾವಣೆಯಲ್ಲಿ ಒಟ್ಟು 6,032 ಮಂದಿ ಮತದಾರರಿದ್ದಾರೆ. ಇದರ ಪ್ರಕಾರ, ಒಂದು‌ ವೇಳೆ‌ ಶೇ.100ರಷ್ಟು ಮತದಾನ ನಡೆದರೂ ಅಭ್ಯರ್ಥಿ ಗೆಲ್ಲಲು 3,017 ಮತಗಳ ಅಗತ್ಯವಿದೆ.

council by-election
ಕಾಂಗ್ರೆಸ್​​ ಅಭ್ಯರ್ಥಿ ರಾಜು ಪೂಜಾರಿ (ETV Bharat)

ಕಣದಲ್ಲಿ ನಾಲ್ವರು ಅಭ್ಯರ್ಥಿಗಳು: ವಿಧಾನಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಇದೀಗ ಉಡುಪಿ - ಚಿಕ್ಕಮಗಳೂರು‌ ಕ್ಷೇತ್ರದ ಸಂಸದರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತೆರವಾಗಿರುವ ಸ್ಥಾನಕ್ಕೆ ಈ ಚುನಾವಣೆ ನಡೆಯುತ್ತಿದೆ. ನಾಲ್ವರು ಅಭ್ಯರ್ಥಿಗಳು‌ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಕಿಶೋರ್ ಬಿ.ಆರ್., ಕಾಂಗ್ರೆಸ್​​ನಿಂದ ರಾಜು ಪೂಜಾರಿ, ಎಸ್​​ಡಿಪಿಐನಿಂದ ಅನ್ವರ್ ಸಾದತ್ ಎಸ್. ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಕಣದಲ್ಲಿದ್ದಾರೆ.

council by-election
ಬಿಜೆಪಿ ಅಭ್ಯರ್ಥಿ ಕಿಶೋರ್ ಬಿ.ಆರ್. (ETV Bharat)

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿ ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು, 6,032 ಮಂದಿ ಮತದಾರರಿದ್ದಾರೆ. ಉಭಯ ಜಿಲ್ಲೆಗಳ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಶಾಸಕರು ಹಾಗೂ ಸಂಸದರು ಮತದಾನ ಮಾಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 ಗ್ರಾಮ ಪಂಚಾಯತ್‍ಗಳ 3,263 ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ 65, ಎರಡು ನಗರಸಭೆಗಳಲ್ಲಿ 64, 3 ಪುರಸಭೆಗಳಲ್ಲಿ 74 ಹಾಗೂ 5 ನಗರ ಪಂಚಾಯಿತಿಗಳಲ್ಲಿ 86 ಮಂದಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 153 ಗ್ರಾಮ ಪಂಚಾಯಿತಿಗಳಲ್ಲಿ 2,355 ಸದಸ್ಯರು, ಉಡುಪಿ ನಗರಸಭೆಯಲ್ಲಿ 36, 3, ಪುರಸಭೆಯಲ್ಲಿ 72 ಹಾಗೂ ಒಂದು ನಗರ ಪಂಚಾಯಿತಿಯಲ್ಲಿ 17 ಮಂದಿ ಮತದಾನದ ಹಕ್ಕನ್ನು ಹೊಂದಿದ್ದಾರೆ.

ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 234 ಮತಗಟ್ಟೆಯಲ್ಲಿ 3,552 ಮತದಾರರು (ಪುರುಷರು-1,710, ಮಹಿಳೆಯರು-1,842) ಹಾಗೂ ಉಡುಪಿ ಜಿಲ್ಲೆಯ 158 ಮತಗಟ್ಟೆಯಲ್ಲಿ 2,480 (ಪುರುಷರು- 1,195, ಮಹಿಳೆಯರು-1,285) ಮತದಾರರಿದ್ದಾರೆ. ಒಟ್ಟಾರೆ, ಎರಡೂ ಜಿಲ್ಲೆಗಳ 392 ಮತಗಟ್ಟೆಗಳಲ್ಲಿ 6,032 ಮಂದಿ ಮತ ಚಲಾಯಿಸಲಿದ್ದಾರೆ.

ಇದನ್ನೂ ಓದಿ: ಎನ್​ಡಿಎಯಿಂದ ಕಾರ್ಯಕರ್ತನಿಗೆ ಅವಕಾಶ ಕೊಟ್ಟರೆ ಕ್ಷೇತ್ರದ ಜನತೆಗಾಗಿ ನಮ್ಮ ಸಹಕಾರ: ನಿಖಿಲ್​ ಕುಮಾರಸ್ವಾಮಿ

ತಾಲೂಕುವಾರು ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಧಿಕ 49 ಮತಗಟ್ಟೆಗಳಿವೆ. ಬಂಟ್ವಾಳ ತಾಲೂಕಿನಲ್ಲಿ ಅತ್ಯಧಿಕ 793 ಮತದಾರರಿದ್ದಾರೆ. ಹೆಬ್ರಿ ತಾಲೂಕಿನಲ್ಲಿ ಅತಿ ಕಡಿಮೆ 9 ಮತಗಟ್ಟೆಗಳು ಹಾಗೂ 122 ಮತದಾರರಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಡಪ್ಪಾಡಿ ಪಂಚಾಯತ್ ಹಾಗೂ ಕೊಣಾಜೆ ಪಂಚಾಯತ್ ಮತಗಟ್ಟೆಗಳಲ್ಲಿ (ತಲಾ 5 ಮತದಾರರು) ಅತಿ ಕಡಿಮೆ ಮತದಾರರಿದ್ದು, ಉಡುಪಿ ಜಿಲ್ಲೆಯ ಹಳ್ಳಿಹೊಳೆ ಮತ್ತು ಎಡಮೊಗೆ ಗ್ರಾಮ ಪಂಚಾಯತ್ ಮತಗಟ್ಟೆಗಳಲ್ಲಿ ತಲಾ 6 ಜನ ಮತದಾರರಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಮತಗಟ್ಟೆಯಲ್ಲಿ (65) ಹಾಗೂ ಉಡುಪಿ ಜಿಲ್ಲೆಯ ಶಿರೂರು ಗ್ರಾಮ ಪಂಚಾಯತ್ ನಲ್ಲಿ (44) ಅತ್ಯಧಿಕ ಮತದಾರರು ಇದ್ದಾರೆ. ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಮೈಕ್ರೋ ಆಬ್ಸರ್ವರ್​​ಗಳನ್ನು ನೇಮಿಸಲಾಗಿದೆ. ಮಂಗಳೂರಿನ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅ. 24ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಫಲಿಸದ ಜೆಡಿಎಸ್ ನಾಯಕರ ಮನವೊಲಿಕೆ?: 'ಜನರ ಭಾವನೆಗೆ ತಕ್ಕಂತೆ ಟಿಕೆಟ್​ ಕೇಳುತ್ತಿದ್ದೇನೆ' ಎಂದ ಯೋಗೇಶ್ವರ್‌

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯುವ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ. ಈ ಉಪಚುನಾವಣೆಯಲ್ಲಿ ಶೇ.100ರಷ್ಟು ಮತದಾನವಾದರೆ, ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಲು ಕೇವಲ 3,017 ಮತಗಳನ್ನು ಪಡೆದರೆ ಸಾಕು.

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯುವ ಉಪಚುನಾವಣೆಯಲ್ಲಿ ಒಟ್ಟು 6,032 ಮಂದಿ ಮತದಾರರಿದ್ದಾರೆ. ಇದರ ಪ್ರಕಾರ, ಒಂದು‌ ವೇಳೆ‌ ಶೇ.100ರಷ್ಟು ಮತದಾನ ನಡೆದರೂ ಅಭ್ಯರ್ಥಿ ಗೆಲ್ಲಲು 3,017 ಮತಗಳ ಅಗತ್ಯವಿದೆ.

council by-election
ಕಾಂಗ್ರೆಸ್​​ ಅಭ್ಯರ್ಥಿ ರಾಜು ಪೂಜಾರಿ (ETV Bharat)

ಕಣದಲ್ಲಿ ನಾಲ್ವರು ಅಭ್ಯರ್ಥಿಗಳು: ವಿಧಾನಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಇದೀಗ ಉಡುಪಿ - ಚಿಕ್ಕಮಗಳೂರು‌ ಕ್ಷೇತ್ರದ ಸಂಸದರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತೆರವಾಗಿರುವ ಸ್ಥಾನಕ್ಕೆ ಈ ಚುನಾವಣೆ ನಡೆಯುತ್ತಿದೆ. ನಾಲ್ವರು ಅಭ್ಯರ್ಥಿಗಳು‌ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಕಿಶೋರ್ ಬಿ.ಆರ್., ಕಾಂಗ್ರೆಸ್​​ನಿಂದ ರಾಜು ಪೂಜಾರಿ, ಎಸ್​​ಡಿಪಿಐನಿಂದ ಅನ್ವರ್ ಸಾದತ್ ಎಸ್. ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಕಣದಲ್ಲಿದ್ದಾರೆ.

council by-election
ಬಿಜೆಪಿ ಅಭ್ಯರ್ಥಿ ಕಿಶೋರ್ ಬಿ.ಆರ್. (ETV Bharat)

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿ ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು, 6,032 ಮಂದಿ ಮತದಾರರಿದ್ದಾರೆ. ಉಭಯ ಜಿಲ್ಲೆಗಳ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಶಾಸಕರು ಹಾಗೂ ಸಂಸದರು ಮತದಾನ ಮಾಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 ಗ್ರಾಮ ಪಂಚಾಯತ್‍ಗಳ 3,263 ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ 65, ಎರಡು ನಗರಸಭೆಗಳಲ್ಲಿ 64, 3 ಪುರಸಭೆಗಳಲ್ಲಿ 74 ಹಾಗೂ 5 ನಗರ ಪಂಚಾಯಿತಿಗಳಲ್ಲಿ 86 ಮಂದಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 153 ಗ್ರಾಮ ಪಂಚಾಯಿತಿಗಳಲ್ಲಿ 2,355 ಸದಸ್ಯರು, ಉಡುಪಿ ನಗರಸಭೆಯಲ್ಲಿ 36, 3, ಪುರಸಭೆಯಲ್ಲಿ 72 ಹಾಗೂ ಒಂದು ನಗರ ಪಂಚಾಯಿತಿಯಲ್ಲಿ 17 ಮಂದಿ ಮತದಾನದ ಹಕ್ಕನ್ನು ಹೊಂದಿದ್ದಾರೆ.

ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 234 ಮತಗಟ್ಟೆಯಲ್ಲಿ 3,552 ಮತದಾರರು (ಪುರುಷರು-1,710, ಮಹಿಳೆಯರು-1,842) ಹಾಗೂ ಉಡುಪಿ ಜಿಲ್ಲೆಯ 158 ಮತಗಟ್ಟೆಯಲ್ಲಿ 2,480 (ಪುರುಷರು- 1,195, ಮಹಿಳೆಯರು-1,285) ಮತದಾರರಿದ್ದಾರೆ. ಒಟ್ಟಾರೆ, ಎರಡೂ ಜಿಲ್ಲೆಗಳ 392 ಮತಗಟ್ಟೆಗಳಲ್ಲಿ 6,032 ಮಂದಿ ಮತ ಚಲಾಯಿಸಲಿದ್ದಾರೆ.

ಇದನ್ನೂ ಓದಿ: ಎನ್​ಡಿಎಯಿಂದ ಕಾರ್ಯಕರ್ತನಿಗೆ ಅವಕಾಶ ಕೊಟ್ಟರೆ ಕ್ಷೇತ್ರದ ಜನತೆಗಾಗಿ ನಮ್ಮ ಸಹಕಾರ: ನಿಖಿಲ್​ ಕುಮಾರಸ್ವಾಮಿ

ತಾಲೂಕುವಾರು ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಧಿಕ 49 ಮತಗಟ್ಟೆಗಳಿವೆ. ಬಂಟ್ವಾಳ ತಾಲೂಕಿನಲ್ಲಿ ಅತ್ಯಧಿಕ 793 ಮತದಾರರಿದ್ದಾರೆ. ಹೆಬ್ರಿ ತಾಲೂಕಿನಲ್ಲಿ ಅತಿ ಕಡಿಮೆ 9 ಮತಗಟ್ಟೆಗಳು ಹಾಗೂ 122 ಮತದಾರರಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಡಪ್ಪಾಡಿ ಪಂಚಾಯತ್ ಹಾಗೂ ಕೊಣಾಜೆ ಪಂಚಾಯತ್ ಮತಗಟ್ಟೆಗಳಲ್ಲಿ (ತಲಾ 5 ಮತದಾರರು) ಅತಿ ಕಡಿಮೆ ಮತದಾರರಿದ್ದು, ಉಡುಪಿ ಜಿಲ್ಲೆಯ ಹಳ್ಳಿಹೊಳೆ ಮತ್ತು ಎಡಮೊಗೆ ಗ್ರಾಮ ಪಂಚಾಯತ್ ಮತಗಟ್ಟೆಗಳಲ್ಲಿ ತಲಾ 6 ಜನ ಮತದಾರರಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಮತಗಟ್ಟೆಯಲ್ಲಿ (65) ಹಾಗೂ ಉಡುಪಿ ಜಿಲ್ಲೆಯ ಶಿರೂರು ಗ್ರಾಮ ಪಂಚಾಯತ್ ನಲ್ಲಿ (44) ಅತ್ಯಧಿಕ ಮತದಾರರು ಇದ್ದಾರೆ. ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಮೈಕ್ರೋ ಆಬ್ಸರ್ವರ್​​ಗಳನ್ನು ನೇಮಿಸಲಾಗಿದೆ. ಮಂಗಳೂರಿನ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅ. 24ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಫಲಿಸದ ಜೆಡಿಎಸ್ ನಾಯಕರ ಮನವೊಲಿಕೆ?: 'ಜನರ ಭಾವನೆಗೆ ತಕ್ಕಂತೆ ಟಿಕೆಟ್​ ಕೇಳುತ್ತಿದ್ದೇನೆ' ಎಂದ ಯೋಗೇಶ್ವರ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.