ETV Bharat / state

ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಮೇಲ್ಛಾವಣಿ ಕುಸಿತ: ರೋಗಿಗಳಿಗೆ ಸಣ್ಣಪುಟ್ಟ ಗಾಯ

author img

By ETV Bharat Karnataka Team

Published : Mar 13, 2024, 4:20 PM IST

Updated : Mar 13, 2024, 6:51 PM IST

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮೇಲ್ಛಾವಣಿ ಕುಸಿದು ಬಿದ್ದಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಮೇಲ್ಛಾವಣಿ ಕುಸಿತ: ರೋಗಿಗಳಿಗೆ ಸಣ್ಣಪುಟ್ಟ ಗಾಯ
ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಮೇಲ್ಛಾವಣಿ ಕುಸಿತ: ರೋಗಿಗಳಿಗೆ ಸಣ್ಣಪುಟ್ಟ ಗಾಯ

ದಾವಣಗೆರೆ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾರ್ಡ್​ನಲ್ಲಿ‌ ವಿಶ್ರಾಂತಿ ಪಡೆಯುತ್ತಿದ್ದ ರೋಗಿಗಳ ಮೇಲೆ ಮೇಲ್ಛಾವಣಿ ಕುಸಿದು ಬಿದ್ದಿರುವ ಘಟನೆ ಮಂಗಳವಾರ ತಡರಾತ್ರಿ ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಇಲ್ಲಿಯ ವಾರ್ಡ್ ಸಂಖ್ಯೆ 71-72ರಲ್ಲಿ ಮಲಗಿದ್ದ ರೋಗಿಗಳ ಮೇಲೆ ಏಕಾಏಕಿ ಸಿಮೆಂಟ್ ಮಿಶ್ರಿತ ಮೇಲ್ಛಾವಣಿಯ ಚಕ್ಕೆಗಳು ಕುಸಿದು ಬಿದ್ದಿವೆ. ಘಟನೆಯಿಂದ ಕೆಲ ರೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೇಲ್ಛಾವಣಿ ಬೀಳುತ್ತಿದ್ದಂತೆ ಭಯಭೀತರಾದ ವಾರ್ಡ್​ನಲ್ಲಿದ್ದ ರೋಗಿಗಳು ಹೊರಗೆ ಓಡಿ ಬಂದಿದ್ದಾರೆ.‌ ಜಿಲ್ಲಾಸ್ಪತ್ರೆಯ ವ್ಯವಸ್ಥೆ ಬಗ್ಗೆ ರೋಗಿಗಳು ಹಾಗೂ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.

ಈ ಹಿಂದೆ ಕೂಡ ಈ ರೀತಿಯ ಘಟನೆ ನಡೆದಿತ್ತು. ನಂತರ ಕುಸಿದ ಗೋಡೆಗೆ ಪ್ಲಾಸ್ಟಿಂಗ್​​ ಮಾತ್ರ ಮಾಡಲಾಗಿತ್ತು. ಇದೀಗ ಮತ್ತೆ ಘಟನೆ ಮರುಕಳಿಸಿದೆ ಎಂದು ಅಧಿಕಾರಿಗಳ ವಿರುದ್ಧ ರೋಗಿಗಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಪ್ರತಿಕ್ರಿಯೆ ನೀಡಿದ್ದು, ಕಳೆದ ರಾತ್ರಿ ಈ ಘಟನೆ ನಡೆದಿದೆ. ರೋಗಿಗಳ ಮೇಲೆ ಮೇಲ್ಛಾವಣಿಯ ಕೆಲ ಸಿಮೆಂಟ್ ಮಿಶ್ರಿತ ಚಕ್ಕೆಗಳು ಬಿದ್ದಿವೆ. ಯಾವುದೇ ಪ್ರಾಣಾಪಾಯವಾಗಿಲ್ಲ, ರೋಗಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಚಿಕಿತ್ಸೆ ನೀಡಲಾಗಿದೆ. ಮೇಲ್ಛಾವಣಿ ಪ್ಲಾಸ್ಟರಿಂಗ್​ ಮಾಡಿಸಲು ಹೇಳಿದ್ದೇವೆ. ಅವ್ಯವಸ್ಥೆ ನಿವಾರಿಸಲು ಸರ್ಕಾರದಿಂದ ಅನುದಾನ ಬಂದಿದೆ. ಕಾಮಗಾರಿ ಆರಂಭಿಸುತ್ತೇವೆ. ರೋಗಿಗಳಿಗೆ ತೊಂದರೆ ಆಗದಂತೆ ಬಂದೋಬಸ್ತ್ ಮಾಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾಕು ನಾಯಿ ಬೊಗಳಿದ್ದಕ್ಕೆ ಕುಟುಂಬಸ್ಥರ ಮೇಲೆ ಹಲ್ಲೆ ಆರೋಪ: ಆರೋಪಿ ಬಂಧನ

ದಾವಣಗೆರೆ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾರ್ಡ್​ನಲ್ಲಿ‌ ವಿಶ್ರಾಂತಿ ಪಡೆಯುತ್ತಿದ್ದ ರೋಗಿಗಳ ಮೇಲೆ ಮೇಲ್ಛಾವಣಿ ಕುಸಿದು ಬಿದ್ದಿರುವ ಘಟನೆ ಮಂಗಳವಾರ ತಡರಾತ್ರಿ ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಇಲ್ಲಿಯ ವಾರ್ಡ್ ಸಂಖ್ಯೆ 71-72ರಲ್ಲಿ ಮಲಗಿದ್ದ ರೋಗಿಗಳ ಮೇಲೆ ಏಕಾಏಕಿ ಸಿಮೆಂಟ್ ಮಿಶ್ರಿತ ಮೇಲ್ಛಾವಣಿಯ ಚಕ್ಕೆಗಳು ಕುಸಿದು ಬಿದ್ದಿವೆ. ಘಟನೆಯಿಂದ ಕೆಲ ರೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೇಲ್ಛಾವಣಿ ಬೀಳುತ್ತಿದ್ದಂತೆ ಭಯಭೀತರಾದ ವಾರ್ಡ್​ನಲ್ಲಿದ್ದ ರೋಗಿಗಳು ಹೊರಗೆ ಓಡಿ ಬಂದಿದ್ದಾರೆ.‌ ಜಿಲ್ಲಾಸ್ಪತ್ರೆಯ ವ್ಯವಸ್ಥೆ ಬಗ್ಗೆ ರೋಗಿಗಳು ಹಾಗೂ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.

ಈ ಹಿಂದೆ ಕೂಡ ಈ ರೀತಿಯ ಘಟನೆ ನಡೆದಿತ್ತು. ನಂತರ ಕುಸಿದ ಗೋಡೆಗೆ ಪ್ಲಾಸ್ಟಿಂಗ್​​ ಮಾತ್ರ ಮಾಡಲಾಗಿತ್ತು. ಇದೀಗ ಮತ್ತೆ ಘಟನೆ ಮರುಕಳಿಸಿದೆ ಎಂದು ಅಧಿಕಾರಿಗಳ ವಿರುದ್ಧ ರೋಗಿಗಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಪ್ರತಿಕ್ರಿಯೆ ನೀಡಿದ್ದು, ಕಳೆದ ರಾತ್ರಿ ಈ ಘಟನೆ ನಡೆದಿದೆ. ರೋಗಿಗಳ ಮೇಲೆ ಮೇಲ್ಛಾವಣಿಯ ಕೆಲ ಸಿಮೆಂಟ್ ಮಿಶ್ರಿತ ಚಕ್ಕೆಗಳು ಬಿದ್ದಿವೆ. ಯಾವುದೇ ಪ್ರಾಣಾಪಾಯವಾಗಿಲ್ಲ, ರೋಗಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಚಿಕಿತ್ಸೆ ನೀಡಲಾಗಿದೆ. ಮೇಲ್ಛಾವಣಿ ಪ್ಲಾಸ್ಟರಿಂಗ್​ ಮಾಡಿಸಲು ಹೇಳಿದ್ದೇವೆ. ಅವ್ಯವಸ್ಥೆ ನಿವಾರಿಸಲು ಸರ್ಕಾರದಿಂದ ಅನುದಾನ ಬಂದಿದೆ. ಕಾಮಗಾರಿ ಆರಂಭಿಸುತ್ತೇವೆ. ರೋಗಿಗಳಿಗೆ ತೊಂದರೆ ಆಗದಂತೆ ಬಂದೋಬಸ್ತ್ ಮಾಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾಕು ನಾಯಿ ಬೊಗಳಿದ್ದಕ್ಕೆ ಕುಟುಂಬಸ್ಥರ ಮೇಲೆ ಹಲ್ಲೆ ಆರೋಪ: ಆರೋಪಿ ಬಂಧನ

Last Updated : Mar 13, 2024, 6:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.