ETV Bharat / state

ರೈತರ ಸಾಲ ಮನ್ನಾ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ಕೆ.ಎನ್.ರಾಜಣ್ಣ - Farmers Loan Waiver

ವಿಧಾನ ಪರಿಷತ್​ ಪ್ರಶ್ನೋತ್ತರ ಅವಧಿಯಲ್ಲಿ ರೈತರ ಸಾಲ ಮನ್ನಾ ವಿಚಾರ ಪ್ರಸ್ತಾಪವಾಯಿತು.

author img

By ETV Bharat Karnataka Team

Published : Jul 23, 2024, 12:27 PM IST

ವಿಧಾನ ಪರಿಷತ್‌
ವಿಧಾನ ಪರಿಷತ್‌ (ETV Bharat)

ಬೆಂಗಳೂರು: ರೈತರ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಸಾಲದ ಬೇಡಿಕೆ ಸಲ್ಲಿಸುವ ಎಲ್ಲ ರೈತರಿಗೂ ಸಹಕಾರಿ ಸಂಘಗಳ ಹಣಕಾಸು ಲಭ್ಯತೆಯನುಸಾರ ಸಾಲ ನೀಡುವ ಪ್ರಯತ್ನ ನಡೆಸಲಾಗುತ್ತದೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸಿ.ಟಿ.ರವಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಹಕಾರಿ ಸಂಘಗಳಲ್ಲಿ ಕೃಷಿ ಸಾಲ ಕೊಡುವ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ 63 ಲಕ್ಷ ರೈತರಿದ್ದಾರೆ. ಅವರಲ್ಲಿ 29 ಲಕ್ಷ ರೈತರಿಗೆ ಸಾಲ ಕೊಡಲಾಗಿದೆ. ಹೊಸದಾಗಿ, 12,600 ಜನರಿಗೆ ಮಾತ್ರ ಸಾಲ ಕೊಡಲಾಗಿದೆ. ಆದರೆ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದರು.

ಪ್ರಣಾಳಿಕೆಯಲ್ಲಿ ಸಾಲಮನ್ನಾ ಉಲ್ಲೇಖ ಪ್ರಸ್ತಾಪಿಸಿ ಸಾಲಮನ್ನಾ ಬೇಡಿಕೆಗೆ ಆಕ್ಷೇಪಿಸಿದ ರಾಜಣ್ಣ, ರಾಷ್ಟ್ರೀಕೃತ ಬ್ಯಾಂಕ್​ನಲ್ಲಿ ಕೇಂದ್ರದಿಂದ ಸಾಲಮನ್ನಾ ಮಾಡಿಸಿ. ನಾವೂ ಮಾಡುತ್ತೇವೆ. ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಿತ್ತು. ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್​ನ ಸಮ್ಮಿಶ್ರ ಸರ್ಕಾರದಲ್ಲಿಯೂ ಸಾಲ ಮನ್ನಾ ಮಾಡಿದ್ದೆವು, ಆದರೆ ಇವರು ಯಾವಾಗ ಮಾಡಿದ್ದರು ಎಂದು ಪ್ರಶ್ನಿಸಿದರು.

ಸಧ್ಯ ರೈತರ ಸಾಲ ಮನ್ನಾ ಮಾಡುವ ಯಾವುದೇ ಪರಿಶೀಲನೆ ನಮ್ಮ ಮುಂದಿಲ್ಲ. ಸಾಲು ಕೇಳುವ ಎಲ್ಲರಿಗೂ ಸಾಲ ಕೊಡುವ ಪ್ರಯತ್ನ ಮಾಡಲಿದ್ದೇವೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 1200 ಅರ್ಜಿ ಬಾಕಿ ಇದೆ ಎಂದಿದ್ದಾರೆ. ಇದು ಸರ್ಕಾರದಿಂದ ಕೊಡುವ ಹಣವಲ್ಲ, ಸಹಕಾರಿ ಸಂಘದಲ್ಲಿನ ಹಣ, ಹಣಕಾಸು ಲಭ್ಯತೆ ಸ್ಥಿತಿ ನೋಡಿಕೊಂಡು ಸಾಲ ಕೊಡುವ ಕೆಲಸ ಮಾಡಲಾಗುತ್ತದೆ. ರೈತರ ಸಂಕಷ್ಟಕ್ಕೆ ಹೋಗುವುದು ಎಲ್ಲ ಸಹಕಾರಿಗಳ ಕರ್ತವ್ಯ ಹಣಕಾಸು ಲಭ್ಯತೆ ಮೇಲೆ ಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಗ್ರೇಟರ್ ಬೆಂಗಳೂರಿನಲ್ಲಿ ಪೂರೈಕೆಯಾಗುತ್ತಿರುವ ನೀರಿನ ಮಾದರಿ ಪ್ರದರ್ಶನ: ರಾಜ್ಯದ ಎಲ್ಲ ಜನರಿಗೂ ಒಳ್ಳೆಯ ಕುಡಿಯುವ ನೀರು ಪೂರೈಕೆ ನಮ್ಮ ಜವಾಬ್ದಾರಿಯಾಗಿದ್ದು ಆ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಕೆಲಸ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಕಲುಷಿತ ನೀರು ಕುಡಿದು ಹಲವರು ಸಾವನ್ನಪ್ಪಿದ ಘಟನೆ ಪ್ರಸ್ತಾಪಿಸಿದರು.

ರಾಜ್ಯದಲ್ಲಿ ಕುಡಿಯುವ ನೀರು ಶುದ್ಧವಾಗಿಲ್ಲ ಎಂದು ಬಾಟಲಿಯಲ್ಲಿ ಬೆಂಗಳೂರಿನ ನೀರನ್ನೇ ತಂದು ಸದನದಲ್ಲಿ ಪ್ರದರ್ಶಿಸಿದರು. ಗ್ರೇಟರ್ ಬೆಂಗಳೂರು ಎಂದು ಕರೆಯಲು ಹೊರಟಿರುವ ಬೆಂಗಳೂರಿನಲ್ಲೇ ಈ ರೀತಿ ನೀರು ಪೂರೈಕೆ ಮಾಡಲಾಗುತ್ತಿದೆ ಇನ್ನು ರಾಜ್ಯದ ಇತರ ನಗರದಲ್ಲಿ ಪರಿಸ್ಥಿತಿ‌ ಹೇಗಿರಬಹುದು ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಬೈರತಿ ಸುರೇಶ್, ನಾಲ್ಕು ಜಿಲ್ಕೆಯಲ್ಕಿ ಕಲುಷಿತ ನೀರು ಕುಡಿದ ಸಾವನ್ನಪ್ಪಿದ ಘಟನೆ ನಡೆದಿದೆ, ಈಗ ಲ್ಯಾಬ್​ನಲ್ಲಿ ಪರಿಶೀಲಿಸಿಯೇ ನೀರು ಪೂರೈಕೆ ಮಾಡಲಾಗುತ್ತಿದೆ, ಕಲುಷಿತ ನೀರು ಸಮಸ್ಯೆ ಇಂದು ನಿನ್ನೆಯದ್ದಲ್ಲ, ಸರಿಪಡಿಸಿಕೊಂಡು ಬರಲಾಗುತ್ತಿದೆ, ರಾಜ್ಯಕ್ಕೆ ಒಳ್ಳೆಯ ಕುಡಿಯುವ ನೀರು ಕೊಡವುದು ನಮ್ಮ ಜವಾಬ್ದಾರಿ, ಆ ಕೆಲಸ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ; ನೀಟ್, ಒಂದು ದೇಶ ಒಂದು ಚುನಾವಣೆ ವಿರೋಧಿಸಿ ನಿರ್ಣಯಕ್ಕೆ ಸರ್ಕಾರ ನಿರ್ಧಾರ - Greater Bengaluru Governance Bill

ಬೆಂಗಳೂರು: ರೈತರ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಸಾಲದ ಬೇಡಿಕೆ ಸಲ್ಲಿಸುವ ಎಲ್ಲ ರೈತರಿಗೂ ಸಹಕಾರಿ ಸಂಘಗಳ ಹಣಕಾಸು ಲಭ್ಯತೆಯನುಸಾರ ಸಾಲ ನೀಡುವ ಪ್ರಯತ್ನ ನಡೆಸಲಾಗುತ್ತದೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸಿ.ಟಿ.ರವಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಹಕಾರಿ ಸಂಘಗಳಲ್ಲಿ ಕೃಷಿ ಸಾಲ ಕೊಡುವ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ 63 ಲಕ್ಷ ರೈತರಿದ್ದಾರೆ. ಅವರಲ್ಲಿ 29 ಲಕ್ಷ ರೈತರಿಗೆ ಸಾಲ ಕೊಡಲಾಗಿದೆ. ಹೊಸದಾಗಿ, 12,600 ಜನರಿಗೆ ಮಾತ್ರ ಸಾಲ ಕೊಡಲಾಗಿದೆ. ಆದರೆ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದರು.

ಪ್ರಣಾಳಿಕೆಯಲ್ಲಿ ಸಾಲಮನ್ನಾ ಉಲ್ಲೇಖ ಪ್ರಸ್ತಾಪಿಸಿ ಸಾಲಮನ್ನಾ ಬೇಡಿಕೆಗೆ ಆಕ್ಷೇಪಿಸಿದ ರಾಜಣ್ಣ, ರಾಷ್ಟ್ರೀಕೃತ ಬ್ಯಾಂಕ್​ನಲ್ಲಿ ಕೇಂದ್ರದಿಂದ ಸಾಲಮನ್ನಾ ಮಾಡಿಸಿ. ನಾವೂ ಮಾಡುತ್ತೇವೆ. ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಿತ್ತು. ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್​ನ ಸಮ್ಮಿಶ್ರ ಸರ್ಕಾರದಲ್ಲಿಯೂ ಸಾಲ ಮನ್ನಾ ಮಾಡಿದ್ದೆವು, ಆದರೆ ಇವರು ಯಾವಾಗ ಮಾಡಿದ್ದರು ಎಂದು ಪ್ರಶ್ನಿಸಿದರು.

ಸಧ್ಯ ರೈತರ ಸಾಲ ಮನ್ನಾ ಮಾಡುವ ಯಾವುದೇ ಪರಿಶೀಲನೆ ನಮ್ಮ ಮುಂದಿಲ್ಲ. ಸಾಲು ಕೇಳುವ ಎಲ್ಲರಿಗೂ ಸಾಲ ಕೊಡುವ ಪ್ರಯತ್ನ ಮಾಡಲಿದ್ದೇವೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 1200 ಅರ್ಜಿ ಬಾಕಿ ಇದೆ ಎಂದಿದ್ದಾರೆ. ಇದು ಸರ್ಕಾರದಿಂದ ಕೊಡುವ ಹಣವಲ್ಲ, ಸಹಕಾರಿ ಸಂಘದಲ್ಲಿನ ಹಣ, ಹಣಕಾಸು ಲಭ್ಯತೆ ಸ್ಥಿತಿ ನೋಡಿಕೊಂಡು ಸಾಲ ಕೊಡುವ ಕೆಲಸ ಮಾಡಲಾಗುತ್ತದೆ. ರೈತರ ಸಂಕಷ್ಟಕ್ಕೆ ಹೋಗುವುದು ಎಲ್ಲ ಸಹಕಾರಿಗಳ ಕರ್ತವ್ಯ ಹಣಕಾಸು ಲಭ್ಯತೆ ಮೇಲೆ ಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಗ್ರೇಟರ್ ಬೆಂಗಳೂರಿನಲ್ಲಿ ಪೂರೈಕೆಯಾಗುತ್ತಿರುವ ನೀರಿನ ಮಾದರಿ ಪ್ರದರ್ಶನ: ರಾಜ್ಯದ ಎಲ್ಲ ಜನರಿಗೂ ಒಳ್ಳೆಯ ಕುಡಿಯುವ ನೀರು ಪೂರೈಕೆ ನಮ್ಮ ಜವಾಬ್ದಾರಿಯಾಗಿದ್ದು ಆ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಕೆಲಸ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಕಲುಷಿತ ನೀರು ಕುಡಿದು ಹಲವರು ಸಾವನ್ನಪ್ಪಿದ ಘಟನೆ ಪ್ರಸ್ತಾಪಿಸಿದರು.

ರಾಜ್ಯದಲ್ಲಿ ಕುಡಿಯುವ ನೀರು ಶುದ್ಧವಾಗಿಲ್ಲ ಎಂದು ಬಾಟಲಿಯಲ್ಲಿ ಬೆಂಗಳೂರಿನ ನೀರನ್ನೇ ತಂದು ಸದನದಲ್ಲಿ ಪ್ರದರ್ಶಿಸಿದರು. ಗ್ರೇಟರ್ ಬೆಂಗಳೂರು ಎಂದು ಕರೆಯಲು ಹೊರಟಿರುವ ಬೆಂಗಳೂರಿನಲ್ಲೇ ಈ ರೀತಿ ನೀರು ಪೂರೈಕೆ ಮಾಡಲಾಗುತ್ತಿದೆ ಇನ್ನು ರಾಜ್ಯದ ಇತರ ನಗರದಲ್ಲಿ ಪರಿಸ್ಥಿತಿ‌ ಹೇಗಿರಬಹುದು ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಬೈರತಿ ಸುರೇಶ್, ನಾಲ್ಕು ಜಿಲ್ಕೆಯಲ್ಕಿ ಕಲುಷಿತ ನೀರು ಕುಡಿದ ಸಾವನ್ನಪ್ಪಿದ ಘಟನೆ ನಡೆದಿದೆ, ಈಗ ಲ್ಯಾಬ್​ನಲ್ಲಿ ಪರಿಶೀಲಿಸಿಯೇ ನೀರು ಪೂರೈಕೆ ಮಾಡಲಾಗುತ್ತಿದೆ, ಕಲುಷಿತ ನೀರು ಸಮಸ್ಯೆ ಇಂದು ನಿನ್ನೆಯದ್ದಲ್ಲ, ಸರಿಪಡಿಸಿಕೊಂಡು ಬರಲಾಗುತ್ತಿದೆ, ರಾಜ್ಯಕ್ಕೆ ಒಳ್ಳೆಯ ಕುಡಿಯುವ ನೀರು ಕೊಡವುದು ನಮ್ಮ ಜವಾಬ್ದಾರಿ, ಆ ಕೆಲಸ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ; ನೀಟ್, ಒಂದು ದೇಶ ಒಂದು ಚುನಾವಣೆ ವಿರೋಧಿಸಿ ನಿರ್ಣಯಕ್ಕೆ ಸರ್ಕಾರ ನಿರ್ಧಾರ - Greater Bengaluru Governance Bill

ETV Bharat Logo

Copyright © 2024 Ushodaya Enterprises Pvt. Ltd., All Rights Reserved.