ETV Bharat / state

ದೀಪಾವಳಿ, ಛತ್ ಪೂಜೆ: ನೈಋತ್ಯ ರೈಲ್ವೆಯಿಂದ ಈ ಮಾರ್ಗಗಳಲ್ಲಿ ವಿಶೇಷ ರೈಲುಗಳ ಸಂಚಾರ

ಹಬ್ಬದ ಸೀಸನ್​ ನಿಮಿತ್ತ ರೈಲ್ವೆ ಇಲಾಖೆಯು ಜನನಿಬಿಡ ವಿವಿಧ ಮಾರ್ಗಗಳಲ್ಲಿ ರೈಲುಗಳ ಓಡಾಟವನ್ನು ಹೆಚ್ಚಿಸಿದೆ. ಯಾವ ಮಾರ್ಗದಲ್ಲಿ ವಿಶೇಷ ರೈಲುಗಳು ಸಂಚರಿಸಲಿವೆ ಎಂಬ ಮಾಹಿತಿ ಇಲ್ಲಿದೆ.

ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ
ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ (ETV Bharat)
author img

By ETV Bharat Karnataka Team

Published : 3 hours ago

ಹುಬ್ಬಳ್ಳಿ: ದೀಪಾವಳಿ/ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಹುಬ್ಬಳ್ಳಿ-ಕೊಲ್ಲಂ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಸಂತ್ರಗಾಚಿ, ಯಶವಂತಪುರ-ಕೊಟ್ಟಾಯಂ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಲಬುರಗಿ ಮತ್ತು ಹುಬ್ಬಳ್ಳಿ-ಮುಜಾಫರ್‌ಪುರ ಮಾರ್ಗದ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.

ಹುಬ್ಬಳ್ಳಿ-ಕೊಲ್ಲಂ ಮಾರ್ಗ: ಹುಬ್ಬಳ್ಳಿ- ಕೊಲ್ಲಂ ಮಾರ್ಗದಲ್ಲಿ 07313 ಸಂಖ್ಯೆಯ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 26 ರಂದು ಹುಬ್ಬಳ್ಳಿಯ ಎಸ್‌ಎಸ್‌ಎಸ್ ರೈಲು ನಿಲ್ದಾಣದಿಂದ ಮಧ್ಯಾಹ್ನ 3:15ಕ್ಕೆ ಹೊರಟು ಮರುದಿನ ಸಂಜೆ 5:10 ಕ್ಕೆ ಕೊಲ್ಲಂ ನಿಲ್ದಾಣ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 07314 ಅಕ್ಟೋಬರ್ 27 ರಂದು ಕೊಲ್ಲಂನಿಂದ ರಾತ್ರಿ 8:30 ಕ್ಕೆ ಹೊರಟು, ಮರುದಿನ ರಾತ್ರಿ 8:45 ಕ್ಕೆ ಹುಬ್ಬಳ್ಳಿಗೆ ತಲುಪಲಿದೆ.

ಈ ರೈಲು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್‌ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಕರೂರ್, ದಿಂಡಿಗಲ್, ಮಧುರೈ, ವಿರುಡುನಗರ, ಶಿವಕಾಶಿ, ರಾಜಪಾಳ್ಯಮ್, ಶ್ರೀವಿಲ್ಲಿಪುತ್ತೂರು, ಕಡಯನಲ್ಲೂರು, ತೆಂಕಾಶಿ, ಸೆಂಗೋಟ್ಟೈ, ತೆನಮಲೈ, ಪುನಲೂರು, ಆವನೀಶ್ವರಂ, ಕೊಟ್ಟಾರಕರ ಮತ್ತು ಕುಂದರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಬೆಂಗಳೂರು-ಸಂತ್ರಗಾಚಿ ಮಾರ್ಗ: ಬೆಂಗಳೂರು-ಸಂತ್ರಗಾಚಿ ಮಾರ್ಗದಲ್ಲಿ 06211 ಸಂಖ್ಯೆಯ ವಿಶೇಷ ಎಕ್ಸ್​ಪ್ರೆಸ್ ರೈಲು ಅಕ್ಟೋಬರ್ 26 ರಂದು ಬೆಳಗ್ಗೆ 10:15 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಸಂಜೆ 7:45 ಗಂಟೆಗೆ ಸಂತ್ರಗಾಚಿ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 06212 ಅಕ್ಟೋಬರ್ 27 ರಂದು ಸಂತ್ರಗಾಚಿಯಿಂದ ರಾತ್ರಿ 11:30ಕ್ಕೆ ಹೊರಟು, ಮರುದಿನ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಮಧ್ಯಾಹ್ನ 12:30 ಗಂಟೆಗೆ ಆಗಮಿಸಲಿದೆ.

ಈ ರೈಲು ಕೃಷ್ಣರಾಜಪುರಂ, ಕಟ್ಪಾಡಿ, ರೇಣಿಗುಂಟಾ, ಗುಡೂರು, ನೆಲ್ಲೂರು, ಓಂಗೋಲ್, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಭದ್ರಕ್, ಬಾಲೇಶ್ವರ ಮತ್ತು ಖರಗ್​ಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಯಶವಂತಪುರ-ಕೊಟ್ಟಾಯಂ ಮಾರ್ಗ: ಯಶವಂತಪುರ-ಕೊಟ್ಟಾಯಂ ಮಾರ್ಗದಲ್ಲಿ 06215 ಸಂಖ್ಯೆಯ ವಿಶೇಷ ಎಕ್ಸ್​​ಪ್ರೆಸ್ ರೈಲು ಅಕ್ಟೋಬರ್ 29 ರಂದು ಸಂಜೆ 6:30ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 8:10 ಕ್ಕೆ ಕೊಟ್ಟಾಯಂ ನಿಲ್ದಾಣ ತಲುಪಲಿದೆ. ವಾಪಸ್​ ಪ್ರಯಾಣದಲ್ಲಿ, ರೈಲು ಸಂಖ್ಯೆ 06216 ಅಕ್ಟೋಬರ್ 30 ರಂದು ಬೆಳಗ್ಗೆ 11:10 ಕ್ಕೆ ಕೊಟ್ಟಾಯಂನಿಂದ ಹೊರಟು, ಮರುದಿನ ಅಂದರೆ ಅಕ್ಟೋಬರ್ 31 ರಂದು ಬೆಳಗ್ಗೆ 1:15 ಗಂಟೆಗೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಕೃಷ್ಣರಾಜಪುರಂ, ವೈಟ್‌ಫೀಲ್ಡ್, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ ಮತ್ತು ಎರ್ನಾಕುಲಂ ಟೌನ್ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಬೆಂಗಳೂರು-ಕಲಬುರಗಿ ಮಾರ್ಗ: ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ 06217 ಸಂಖ್ಯೆಯುಳ್ಳ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 31 ರಂದು ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ರಾತ್ರಿ 9:15 ಕ್ಕೆ ಹೊರಟು ಮರುದಿನ ಬೆಳಗ್ಗೆ 7:40 ಕ್ಕೆ ಕಲಬುರಗಿಗೆ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, 06218 ಸಂಖ್ಯೆಯ ರೈಲು ನವೆಂಬರ್ 1 ರಂದು ಕಲಬುರಗಿಯಿಂದ ಬೆಳಗ್ಗೆ 9:35ಕ್ಕೆ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಹುಬ್ಬಳ್ಳಿ-ಮುಜಾಫರ್‌ಪುರ ಮಾರ್ಗ: ಹುಬ್ಬಳ್ಳಿ-ಮುಜಾಫರ್‌ಪುರ ಮಾರ್ಗದಲ್ಲಿ 07315 ಸಂಖ್ಯೆಯ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 4 ರಂದು ಹುಬ್ಬಳ್ಳಿಯ ಎಸ್‌ಎಸ್‌ಎಸ್ ನಿಲ್ದಾಣದಿಂದ ಸಂಜೆ 5:20ಕ್ಕೆ ಹೊರಟು, ನವೆಂಬರ್ 6 ರಂದು ಸಂಜೆ 4 ಗಂಟೆಗೆ ಮುಜಾಫರ್‌ಪುರ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07316 ನವೆಂಬರ್ 9 ರಂದು ಮುಜಾಫರ್‌ಪುರ ನಿಲ್ದಾಣದಿಂದ ಮಧ್ಯಾಹ್ನ 1:15ಕ್ಕೆ ಹೊರಟು, ನವೆಂಬರ್ 11 ರಂದು ಬೆಳಗ್ಗೆ 10:30ಕ್ಕೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಧಾರವಾಡ, ಬೆಳಗಾವಿ, ಘಟಪ್ರಭಾ, ಮೀರಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ, ದೌಂಡ್ ಕಾರ್ಡ್ ಲೈನ್, ಅಹ್ಮದ್‌ನಗರ, ಕೋಪರ್‌ಗಾಂವ್, ಮನ್ಮಾಡ್, ಭೂಸಾವಲ್, ಖಾಂಡ್ವಾ, ಇಟಾರ್ಸಿ, ನರಸಿಂಗ್‌ಪುರ, ಜಬಲ್‌ಪುರ, ಕಟ್ನಿ, ಸತ್ನಾ, ಮಾಣಿಕ್‌ಪುರ, ಪ್ರಯಾಗ್‌ರಾಜ್, ಪಂಡಿತ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್, ಬಕ್ಸಾರ್, ಅರಾ, ದಾನಾಪುರ, ಪಾಟ್ಲಿಪುತ್ರ, ಸೋನ್‌ಪುರ್ ಮತ್ತು ಹಾಜಿಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಉಗ್ರವಾದದ ಬಗ್ಗೆ ದ್ವಿಮುಖ ನೀತಿ ಬೇಡ: ಬ್ರಿಕ್ಸ್ ಶೃಂಗದಲ್ಲಿ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಚಾಟಿ​​

ಹುಬ್ಬಳ್ಳಿ: ದೀಪಾವಳಿ/ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಹುಬ್ಬಳ್ಳಿ-ಕೊಲ್ಲಂ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಸಂತ್ರಗಾಚಿ, ಯಶವಂತಪುರ-ಕೊಟ್ಟಾಯಂ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಲಬುರಗಿ ಮತ್ತು ಹುಬ್ಬಳ್ಳಿ-ಮುಜಾಫರ್‌ಪುರ ಮಾರ್ಗದ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.

ಹುಬ್ಬಳ್ಳಿ-ಕೊಲ್ಲಂ ಮಾರ್ಗ: ಹುಬ್ಬಳ್ಳಿ- ಕೊಲ್ಲಂ ಮಾರ್ಗದಲ್ಲಿ 07313 ಸಂಖ್ಯೆಯ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 26 ರಂದು ಹುಬ್ಬಳ್ಳಿಯ ಎಸ್‌ಎಸ್‌ಎಸ್ ರೈಲು ನಿಲ್ದಾಣದಿಂದ ಮಧ್ಯಾಹ್ನ 3:15ಕ್ಕೆ ಹೊರಟು ಮರುದಿನ ಸಂಜೆ 5:10 ಕ್ಕೆ ಕೊಲ್ಲಂ ನಿಲ್ದಾಣ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 07314 ಅಕ್ಟೋಬರ್ 27 ರಂದು ಕೊಲ್ಲಂನಿಂದ ರಾತ್ರಿ 8:30 ಕ್ಕೆ ಹೊರಟು, ಮರುದಿನ ರಾತ್ರಿ 8:45 ಕ್ಕೆ ಹುಬ್ಬಳ್ಳಿಗೆ ತಲುಪಲಿದೆ.

ಈ ರೈಲು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್‌ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಕರೂರ್, ದಿಂಡಿಗಲ್, ಮಧುರೈ, ವಿರುಡುನಗರ, ಶಿವಕಾಶಿ, ರಾಜಪಾಳ್ಯಮ್, ಶ್ರೀವಿಲ್ಲಿಪುತ್ತೂರು, ಕಡಯನಲ್ಲೂರು, ತೆಂಕಾಶಿ, ಸೆಂಗೋಟ್ಟೈ, ತೆನಮಲೈ, ಪುನಲೂರು, ಆವನೀಶ್ವರಂ, ಕೊಟ್ಟಾರಕರ ಮತ್ತು ಕುಂದರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಬೆಂಗಳೂರು-ಸಂತ್ರಗಾಚಿ ಮಾರ್ಗ: ಬೆಂಗಳೂರು-ಸಂತ್ರಗಾಚಿ ಮಾರ್ಗದಲ್ಲಿ 06211 ಸಂಖ್ಯೆಯ ವಿಶೇಷ ಎಕ್ಸ್​ಪ್ರೆಸ್ ರೈಲು ಅಕ್ಟೋಬರ್ 26 ರಂದು ಬೆಳಗ್ಗೆ 10:15 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಸಂಜೆ 7:45 ಗಂಟೆಗೆ ಸಂತ್ರಗಾಚಿ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 06212 ಅಕ್ಟೋಬರ್ 27 ರಂದು ಸಂತ್ರಗಾಚಿಯಿಂದ ರಾತ್ರಿ 11:30ಕ್ಕೆ ಹೊರಟು, ಮರುದಿನ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಮಧ್ಯಾಹ್ನ 12:30 ಗಂಟೆಗೆ ಆಗಮಿಸಲಿದೆ.

ಈ ರೈಲು ಕೃಷ್ಣರಾಜಪುರಂ, ಕಟ್ಪಾಡಿ, ರೇಣಿಗುಂಟಾ, ಗುಡೂರು, ನೆಲ್ಲೂರು, ಓಂಗೋಲ್, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಭದ್ರಕ್, ಬಾಲೇಶ್ವರ ಮತ್ತು ಖರಗ್​ಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಯಶವಂತಪುರ-ಕೊಟ್ಟಾಯಂ ಮಾರ್ಗ: ಯಶವಂತಪುರ-ಕೊಟ್ಟಾಯಂ ಮಾರ್ಗದಲ್ಲಿ 06215 ಸಂಖ್ಯೆಯ ವಿಶೇಷ ಎಕ್ಸ್​​ಪ್ರೆಸ್ ರೈಲು ಅಕ್ಟೋಬರ್ 29 ರಂದು ಸಂಜೆ 6:30ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 8:10 ಕ್ಕೆ ಕೊಟ್ಟಾಯಂ ನಿಲ್ದಾಣ ತಲುಪಲಿದೆ. ವಾಪಸ್​ ಪ್ರಯಾಣದಲ್ಲಿ, ರೈಲು ಸಂಖ್ಯೆ 06216 ಅಕ್ಟೋಬರ್ 30 ರಂದು ಬೆಳಗ್ಗೆ 11:10 ಕ್ಕೆ ಕೊಟ್ಟಾಯಂನಿಂದ ಹೊರಟು, ಮರುದಿನ ಅಂದರೆ ಅಕ್ಟೋಬರ್ 31 ರಂದು ಬೆಳಗ್ಗೆ 1:15 ಗಂಟೆಗೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಕೃಷ್ಣರಾಜಪುರಂ, ವೈಟ್‌ಫೀಲ್ಡ್, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ ಮತ್ತು ಎರ್ನಾಕುಲಂ ಟೌನ್ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಬೆಂಗಳೂರು-ಕಲಬುರಗಿ ಮಾರ್ಗ: ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ 06217 ಸಂಖ್ಯೆಯುಳ್ಳ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 31 ರಂದು ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ರಾತ್ರಿ 9:15 ಕ್ಕೆ ಹೊರಟು ಮರುದಿನ ಬೆಳಗ್ಗೆ 7:40 ಕ್ಕೆ ಕಲಬುರಗಿಗೆ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, 06218 ಸಂಖ್ಯೆಯ ರೈಲು ನವೆಂಬರ್ 1 ರಂದು ಕಲಬುರಗಿಯಿಂದ ಬೆಳಗ್ಗೆ 9:35ಕ್ಕೆ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಹುಬ್ಬಳ್ಳಿ-ಮುಜಾಫರ್‌ಪುರ ಮಾರ್ಗ: ಹುಬ್ಬಳ್ಳಿ-ಮುಜಾಫರ್‌ಪುರ ಮಾರ್ಗದಲ್ಲಿ 07315 ಸಂಖ್ಯೆಯ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 4 ರಂದು ಹುಬ್ಬಳ್ಳಿಯ ಎಸ್‌ಎಸ್‌ಎಸ್ ನಿಲ್ದಾಣದಿಂದ ಸಂಜೆ 5:20ಕ್ಕೆ ಹೊರಟು, ನವೆಂಬರ್ 6 ರಂದು ಸಂಜೆ 4 ಗಂಟೆಗೆ ಮುಜಾಫರ್‌ಪುರ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07316 ನವೆಂಬರ್ 9 ರಂದು ಮುಜಾಫರ್‌ಪುರ ನಿಲ್ದಾಣದಿಂದ ಮಧ್ಯಾಹ್ನ 1:15ಕ್ಕೆ ಹೊರಟು, ನವೆಂಬರ್ 11 ರಂದು ಬೆಳಗ್ಗೆ 10:30ಕ್ಕೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಧಾರವಾಡ, ಬೆಳಗಾವಿ, ಘಟಪ್ರಭಾ, ಮೀರಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ, ದೌಂಡ್ ಕಾರ್ಡ್ ಲೈನ್, ಅಹ್ಮದ್‌ನಗರ, ಕೋಪರ್‌ಗಾಂವ್, ಮನ್ಮಾಡ್, ಭೂಸಾವಲ್, ಖಾಂಡ್ವಾ, ಇಟಾರ್ಸಿ, ನರಸಿಂಗ್‌ಪುರ, ಜಬಲ್‌ಪುರ, ಕಟ್ನಿ, ಸತ್ನಾ, ಮಾಣಿಕ್‌ಪುರ, ಪ್ರಯಾಗ್‌ರಾಜ್, ಪಂಡಿತ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್, ಬಕ್ಸಾರ್, ಅರಾ, ದಾನಾಪುರ, ಪಾಟ್ಲಿಪುತ್ರ, ಸೋನ್‌ಪುರ್ ಮತ್ತು ಹಾಜಿಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಉಗ್ರವಾದದ ಬಗ್ಗೆ ದ್ವಿಮುಖ ನೀತಿ ಬೇಡ: ಬ್ರಿಕ್ಸ್ ಶೃಂಗದಲ್ಲಿ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಚಾಟಿ​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.