ETV Bharat / state

ಕರ್ನಾಟಕದ ಅಭಿವೃದ್ಧಿಯೇ ಕ್ವಿನ್ ಸಿಟಿ ಯೋಜನೆಯ ಮೂಲ ಆಶಯ : ಡಿಸಿಎಂ ಡಿ ಕೆ ಶಿವಕುಮಾರ್ - DCM D K Shivakumar

author img

By ETV Bharat Karnataka Team

Published : 14 hours ago

ಕ್ವಿನ್ ಸಿಟಿ ಯೋಜನೆಯ ಕುರಿತು ಮಾತನಾಡಿದರು. ಶಿಕ್ಷಣ, ತಂತ್ರಜ್ಞಾನ, ಉದ್ಯೋಗ, ಸುಸ್ಥಿರ ಅಭಿವೃದ್ಧಿ ಸೇರಿದಂತೆ ಕರ್ನಾಟಕದ ಭವಿಷ್ಯವನ್ನು ಗುರಿಯಾಗಿಟ್ಟುಕೊಂಡು ಜನರ ಜೀವನದಲ್ಲಿ ಬದಲಾವಣೆ ತರುವುದು ಯೋಜನೆಯ ಗುರಿ ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಹೇಳಿದ್ದಾರೆ.

DCM d. K Shivakumar
ಡಿಸಿಎಂ ಡಿ. ಕೆ ಶಿವಕುಮಾರ್ (ETV Bharat)

ಬೆಂಗಳೂರು : "ಕ್ವಿನ್ ಸಿಟಿ ಮೂಲಕ ಕೇವಲ ಕಟ್ಟಡಗಳನ್ನು ನಿರ್ಮಾಣ ಮಾಡುವುದು ನಮ್ಮ ಗುರಿಯಲ್ಲ. ಶಿಕ್ಷಣ, ತಂತ್ರಜ್ಞಾನ, ಉದ್ಯೋಗ, ಸುಸ್ಥಿರ ಅಭಿವೃದ್ಧಿ ಸೇರಿದಂತೆ ಕರ್ನಾಟಕದ ಭವಿಷ್ಯವನ್ನು ಗುರಿಯಾಗಿಟ್ಟುಕೊಂಡು ಜನರ ಜೀವನದಲ್ಲಿ ಬದಲಾವಣೆ ತರುವುದು ಯೋಜನೆಯ ಗುರಿ" ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ನಡೆದ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, "ಸ್ವಾತಂತ್ರ್ಯ ಬಂದ ದಿನದಿಂದಲೂ ಬೆಂಗಳೂರು ಬೌದ್ಧಿಕ ನಗರ ಎಂದು ಹೆಸರು ಮಾಡಿದೆ. ಈ ನಗರದ ಅಭಿವೃದ್ಧಿಗೆ ನೆಹರು ಸಾಕಷ್ಟು ಶಕ್ತಿ ಕೊಟ್ಟಿದ್ದಾರೆ. ನಾವೆಲ್ಲರೂ ಸೇರಿ ಇನ್ನಷ್ಟು ಬಲಿಷ್ಠಗೊಳಿಸಬೇಕಿದೆ" ಎಂದರು.

DCM d. K Shivakumar
ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಎಂ ಬಿ ಪಾಟೀಲ್ (ETV Bharat)

"ಕರ್ನಾಟಕದ ಸಾಮರ್ಥ್ಯದ ಬಗ್ಗೆ ಕಿಂಚಿತ್ತೂ ಅನುಮಾನ ಬೇಡ. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ, ಈ ನಗರದ ಅಭಿವೃದ್ಧಿಗೆ ನಾನು ಕಟಿಬದ್ಧನಾಗಿದ್ದೇನೆ. ನೀರು, ವಿದ್ಯುತ್, ರಸ್ತೆ ಸೇರಿದಂತೆ ಎಲ್ಲ ಮೂಲ ಸೌಕರ್ಯವನ್ನು ಜನರಿಗೆ ಹಾಗೂ ಕೈಗಾರಿಕೆಗಳಿಗೆ ಒದಗಿಸುವುದು ನಮ್ಮ ಆದ್ಯತೆ" ಎಂದು ಹೇಳಿದರು.

ಕಡಿಮೆ ದರದಲ್ಲಿ ಆರೋಗ್ಯ ಸೇವೆ : "ಅಗಾಧ ಮಾನವ ಸಂಪನ್ಮೂಲವನ್ನು ಕರ್ನಾಟಕ ಹೊಂದಿದೆ. ಆರೋಗ್ಯ ಕ್ಷೇತ್ರದಲ್ಲಿ ಬೆಂಗಳೂರು ಹಾಗೂ ಕರ್ನಾಟಕ ಮುಂಚೂಣಿಯಲ್ಲಿದೆ. ಆರೋಗ್ಯ ತಪಾಸಣೆ ವೆಚ್ಚ ಕಡಿಮೆ ದರದಲ್ಲಿ ದೊರಕುತ್ತದೆ" ಎಂದು ಹೇಳಿದರು.

CM SIDDARAMAIH
ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ (ETV Bharat)

ಭವಿಷ್ಯ ಗಮನದಲ್ಲಿಟ್ಟುಕೊಂಡು ಯೋಜನೆ ರೂಪಣೆ : "ಎರಡು ದಿನಗಳ ಹಿಂದೆ ಕರ್ನಾಟಕದ ಮೊಟ್ಟ ಮೊದಲ ನೈಸರ್ಗಿಕ ಅನಿಲ ವಿದ್ಯುತ್ ಉತ್ಪಾದನಾ ಸ್ಥಾವರವನ್ನು ಯಲಹಂಕದಲ್ಲಿ ಉದ್ಘಾಟನೆ ಮಾಡಲಾಯಿತು. ಈ ರೀತಿಯ ಭವಿಷ್ಯ ಮುಂದಿಟ್ಟುಕೊಂಡ ಅನೇಕ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ರಾಜ್ಯಕ್ಕೆ ನೀಡಿದೆ" ಎಂದರು.

"ಇನ್ನೇನು ಕೆಲವೇ ದಿನಗಳಲ್ಲಿ ಕಾವೇರಿ ಕುಡಿಯುವ ನೀರಿನ ಐದನೇ ಹಂತದ ಕಾಮಗಾರಿ ಮುಗಿಯಲಿದೆ. ಈ ಹಿಂದಿನ ನಾಲ್ಕು ಹಂತಗಳಿಂದ 1,450 ಎಂಎಲ್​ಡಿ ನೀರನ್ನು ಬೆಂಗಳೂರಿಗೆ ಸರಬರಾಜು ಮಾಡಲಾಗುತ್ತಿದೆ. ಈ ಐದನೇ ಹಂತದ ಯೋಜನೆಯಲ್ಲಿ 775 ಎಂಎಲ್‌ಡಿ ನೀರನ್ನು ಬೆಂಗಳೂರಿಗೆ ನಾವು ನೀಡುತ್ತಿದ್ದೇವೆ. ಮುಂದಿನ 10 ವರ್ಷ ಬೆಂಗಳೂರು ಹಾಗೂ ನಗರದ ಸುತ್ತಮುತ್ತ ನೀರಿನ ತೊಂದರೆ ಇರುವುದಿಲ್ಲ" ಎಂದು ತಿಳಿಸಿದರು.

ದೇಶಕ್ಕೆ ಒಂದೇ ಗಿಫ್ಟ್ ಸಿಟಿಯೆಂದ ಪಿಎಂ ಮೋದಿ : "ನಾನು ಮತ್ತು ಸಿದ್ದರಾಮಯ್ಯ ಅವರು ದೆಹಲಿ ಭೇಟಿ ವೇಳೆ ಪ್ರಧಾನಿ ಮೋದಿ ಅವರ ಬಳಿ ಗುಜರಾತಿಗೆ ಗಿಫ್ಟ್ ಸಿಟಿ ಯೋಜನೆ ನೀಡಿದಂತೆ ನಮಗೂ ನೀಡಬೇಕೆಂದು ಮನವಿ ಮಾಡಿದೆವು. ಈ ದೇಶಕ್ಕೆ ಒಂದೇ ಗಿಫ್ಟ್ ಸಿಟಿ ಇರಬೇಕು ಎಂದು ಅವರು ಮನವಿಯನ್ನು ತಿರಸ್ಕರಿಸಿದ್ದರು. ನಾವು ಈ ಯೋಜನೆಯನ್ನು ಆ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಸಾಧಿಸಿ ತೋರಿಸಬೇಕು" ಎಂದು ಹೇಳಿದರು.

ಭಾರತದ ಅಭಿವೃದ್ಧಿಗೆ ಕರ್ನಾಟಕದ ಅಡಿಪಾಯ : "ಕರ್ನಾಟಕದ ಹೆಸರನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗೋಣ. ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಉತ್ತಮ ತಂತ್ರಜ್ಞರಿದ್ದಾರೆ, ಸ್ಟಾರ್ಟ್ ಅಪ್​ಗಳಿವೆ. ಎಲ್ಲವನ್ನು ಬಳಸಿಕೊಂಡು ಭವಿಷ್ಯವನ್ನು ಗಟ್ಟಿಗೊಳಿಸೋಣ. ಭಾರತವನ್ನು ಗಟ್ಟಿಗೊಳಿಸಲು ಕರ್ನಾಟಕದಲ್ಲಿ ಅಡಿಪಾಯ ನಿರ್ಮಾಣ ಮಾಡೋಣ" ಎಂದರು.

"ಕರ್ನಾಟಕ ಅನೇಕ ಉತ್ಪನ್ನಗಳನ್ನು ರಫ್ತು ಮಾಡುವುದರಲ್ಲಿ ಮೊದಲ ಸ್ಥಾನದಲ್ಲಿದೆ. ಶೇಕಡ 40ರಷ್ಟು ರಫ್ತು ಇಲ್ಲಿಂದಲೇ ಆಗುತ್ತದೆ. ಕ್ವಿನ್ ಸಿಟಿ ಯೋಜನೆಯ ಮೂಲಕ ಸರ್ಕಾರ ಮತ್ತು ಸಂಪುಟ ಸಹೋದ್ಯೋಗಿಗಳು ಉದ್ಯಮಿಗಳ ಜೊತೆ ನಿಲ್ಲುತ್ತದೆ. ಎಲ್ಲರೂ ಒಟ್ಟಿಗೆ ಸೇರಿ ಉತ್ತಮ ಯೋಜನೆಯನ್ನು ಸಾಕಾರಗೊಳಿಸೋಣ" ಎಂದು ತಿಳಿಸಿದರು.

ಇದನ್ನೂ ಓದಿ : ಅಮೆರಿಕ ಪ್ರವಾಸ ಖಾಸಗಿಯದ್ದು, ಯಾವ ನಾಯಕರನ್ನೂ ಭೇಟಿ ಮಾಡುತ್ತಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ - D K Shivakumar US Tour

ಬೆಂಗಳೂರು : "ಕ್ವಿನ್ ಸಿಟಿ ಮೂಲಕ ಕೇವಲ ಕಟ್ಟಡಗಳನ್ನು ನಿರ್ಮಾಣ ಮಾಡುವುದು ನಮ್ಮ ಗುರಿಯಲ್ಲ. ಶಿಕ್ಷಣ, ತಂತ್ರಜ್ಞಾನ, ಉದ್ಯೋಗ, ಸುಸ್ಥಿರ ಅಭಿವೃದ್ಧಿ ಸೇರಿದಂತೆ ಕರ್ನಾಟಕದ ಭವಿಷ್ಯವನ್ನು ಗುರಿಯಾಗಿಟ್ಟುಕೊಂಡು ಜನರ ಜೀವನದಲ್ಲಿ ಬದಲಾವಣೆ ತರುವುದು ಯೋಜನೆಯ ಗುರಿ" ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ನಡೆದ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, "ಸ್ವಾತಂತ್ರ್ಯ ಬಂದ ದಿನದಿಂದಲೂ ಬೆಂಗಳೂರು ಬೌದ್ಧಿಕ ನಗರ ಎಂದು ಹೆಸರು ಮಾಡಿದೆ. ಈ ನಗರದ ಅಭಿವೃದ್ಧಿಗೆ ನೆಹರು ಸಾಕಷ್ಟು ಶಕ್ತಿ ಕೊಟ್ಟಿದ್ದಾರೆ. ನಾವೆಲ್ಲರೂ ಸೇರಿ ಇನ್ನಷ್ಟು ಬಲಿಷ್ಠಗೊಳಿಸಬೇಕಿದೆ" ಎಂದರು.

DCM d. K Shivakumar
ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಎಂ ಬಿ ಪಾಟೀಲ್ (ETV Bharat)

"ಕರ್ನಾಟಕದ ಸಾಮರ್ಥ್ಯದ ಬಗ್ಗೆ ಕಿಂಚಿತ್ತೂ ಅನುಮಾನ ಬೇಡ. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ, ಈ ನಗರದ ಅಭಿವೃದ್ಧಿಗೆ ನಾನು ಕಟಿಬದ್ಧನಾಗಿದ್ದೇನೆ. ನೀರು, ವಿದ್ಯುತ್, ರಸ್ತೆ ಸೇರಿದಂತೆ ಎಲ್ಲ ಮೂಲ ಸೌಕರ್ಯವನ್ನು ಜನರಿಗೆ ಹಾಗೂ ಕೈಗಾರಿಕೆಗಳಿಗೆ ಒದಗಿಸುವುದು ನಮ್ಮ ಆದ್ಯತೆ" ಎಂದು ಹೇಳಿದರು.

ಕಡಿಮೆ ದರದಲ್ಲಿ ಆರೋಗ್ಯ ಸೇವೆ : "ಅಗಾಧ ಮಾನವ ಸಂಪನ್ಮೂಲವನ್ನು ಕರ್ನಾಟಕ ಹೊಂದಿದೆ. ಆರೋಗ್ಯ ಕ್ಷೇತ್ರದಲ್ಲಿ ಬೆಂಗಳೂರು ಹಾಗೂ ಕರ್ನಾಟಕ ಮುಂಚೂಣಿಯಲ್ಲಿದೆ. ಆರೋಗ್ಯ ತಪಾಸಣೆ ವೆಚ್ಚ ಕಡಿಮೆ ದರದಲ್ಲಿ ದೊರಕುತ್ತದೆ" ಎಂದು ಹೇಳಿದರು.

CM SIDDARAMAIH
ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ (ETV Bharat)

ಭವಿಷ್ಯ ಗಮನದಲ್ಲಿಟ್ಟುಕೊಂಡು ಯೋಜನೆ ರೂಪಣೆ : "ಎರಡು ದಿನಗಳ ಹಿಂದೆ ಕರ್ನಾಟಕದ ಮೊಟ್ಟ ಮೊದಲ ನೈಸರ್ಗಿಕ ಅನಿಲ ವಿದ್ಯುತ್ ಉತ್ಪಾದನಾ ಸ್ಥಾವರವನ್ನು ಯಲಹಂಕದಲ್ಲಿ ಉದ್ಘಾಟನೆ ಮಾಡಲಾಯಿತು. ಈ ರೀತಿಯ ಭವಿಷ್ಯ ಮುಂದಿಟ್ಟುಕೊಂಡ ಅನೇಕ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ರಾಜ್ಯಕ್ಕೆ ನೀಡಿದೆ" ಎಂದರು.

"ಇನ್ನೇನು ಕೆಲವೇ ದಿನಗಳಲ್ಲಿ ಕಾವೇರಿ ಕುಡಿಯುವ ನೀರಿನ ಐದನೇ ಹಂತದ ಕಾಮಗಾರಿ ಮುಗಿಯಲಿದೆ. ಈ ಹಿಂದಿನ ನಾಲ್ಕು ಹಂತಗಳಿಂದ 1,450 ಎಂಎಲ್​ಡಿ ನೀರನ್ನು ಬೆಂಗಳೂರಿಗೆ ಸರಬರಾಜು ಮಾಡಲಾಗುತ್ತಿದೆ. ಈ ಐದನೇ ಹಂತದ ಯೋಜನೆಯಲ್ಲಿ 775 ಎಂಎಲ್‌ಡಿ ನೀರನ್ನು ಬೆಂಗಳೂರಿಗೆ ನಾವು ನೀಡುತ್ತಿದ್ದೇವೆ. ಮುಂದಿನ 10 ವರ್ಷ ಬೆಂಗಳೂರು ಹಾಗೂ ನಗರದ ಸುತ್ತಮುತ್ತ ನೀರಿನ ತೊಂದರೆ ಇರುವುದಿಲ್ಲ" ಎಂದು ತಿಳಿಸಿದರು.

ದೇಶಕ್ಕೆ ಒಂದೇ ಗಿಫ್ಟ್ ಸಿಟಿಯೆಂದ ಪಿಎಂ ಮೋದಿ : "ನಾನು ಮತ್ತು ಸಿದ್ದರಾಮಯ್ಯ ಅವರು ದೆಹಲಿ ಭೇಟಿ ವೇಳೆ ಪ್ರಧಾನಿ ಮೋದಿ ಅವರ ಬಳಿ ಗುಜರಾತಿಗೆ ಗಿಫ್ಟ್ ಸಿಟಿ ಯೋಜನೆ ನೀಡಿದಂತೆ ನಮಗೂ ನೀಡಬೇಕೆಂದು ಮನವಿ ಮಾಡಿದೆವು. ಈ ದೇಶಕ್ಕೆ ಒಂದೇ ಗಿಫ್ಟ್ ಸಿಟಿ ಇರಬೇಕು ಎಂದು ಅವರು ಮನವಿಯನ್ನು ತಿರಸ್ಕರಿಸಿದ್ದರು. ನಾವು ಈ ಯೋಜನೆಯನ್ನು ಆ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಸಾಧಿಸಿ ತೋರಿಸಬೇಕು" ಎಂದು ಹೇಳಿದರು.

ಭಾರತದ ಅಭಿವೃದ್ಧಿಗೆ ಕರ್ನಾಟಕದ ಅಡಿಪಾಯ : "ಕರ್ನಾಟಕದ ಹೆಸರನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗೋಣ. ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಉತ್ತಮ ತಂತ್ರಜ್ಞರಿದ್ದಾರೆ, ಸ್ಟಾರ್ಟ್ ಅಪ್​ಗಳಿವೆ. ಎಲ್ಲವನ್ನು ಬಳಸಿಕೊಂಡು ಭವಿಷ್ಯವನ್ನು ಗಟ್ಟಿಗೊಳಿಸೋಣ. ಭಾರತವನ್ನು ಗಟ್ಟಿಗೊಳಿಸಲು ಕರ್ನಾಟಕದಲ್ಲಿ ಅಡಿಪಾಯ ನಿರ್ಮಾಣ ಮಾಡೋಣ" ಎಂದರು.

"ಕರ್ನಾಟಕ ಅನೇಕ ಉತ್ಪನ್ನಗಳನ್ನು ರಫ್ತು ಮಾಡುವುದರಲ್ಲಿ ಮೊದಲ ಸ್ಥಾನದಲ್ಲಿದೆ. ಶೇಕಡ 40ರಷ್ಟು ರಫ್ತು ಇಲ್ಲಿಂದಲೇ ಆಗುತ್ತದೆ. ಕ್ವಿನ್ ಸಿಟಿ ಯೋಜನೆಯ ಮೂಲಕ ಸರ್ಕಾರ ಮತ್ತು ಸಂಪುಟ ಸಹೋದ್ಯೋಗಿಗಳು ಉದ್ಯಮಿಗಳ ಜೊತೆ ನಿಲ್ಲುತ್ತದೆ. ಎಲ್ಲರೂ ಒಟ್ಟಿಗೆ ಸೇರಿ ಉತ್ತಮ ಯೋಜನೆಯನ್ನು ಸಾಕಾರಗೊಳಿಸೋಣ" ಎಂದು ತಿಳಿಸಿದರು.

ಇದನ್ನೂ ಓದಿ : ಅಮೆರಿಕ ಪ್ರವಾಸ ಖಾಸಗಿಯದ್ದು, ಯಾವ ನಾಯಕರನ್ನೂ ಭೇಟಿ ಮಾಡುತ್ತಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ - D K Shivakumar US Tour

ETV Bharat Logo

Copyright © 2024 Ushodaya Enterprises Pvt. Ltd., All Rights Reserved.