ETV Bharat / state

ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತ ಧ್ರುವ ಸರ್ಜಾ ಅಭಿಮಾನಿಗಳು - Dhruva Sarja Fans

author img

By ETV Bharat Karnataka Team

Published : Jun 26, 2024, 7:20 PM IST

ಧ್ರುವ ಸರ್ಜಾ ಅಭಿಮಾನಿ ಸಂಘದವರಿಂದು ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ ಅವರಿಗೆ ಸಾಂತ್ವನ ಹೇಳಿದ್ದಾರೆ.

Dhruva Sarja fans support Renukaswamy family
ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತ ಧ್ರುವ ಸರ್ಜಾ ಅಭಿಮಾನಿಗಳು (ETV Bharat)

ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತ ಧ್ರುವ ಸರ್ಜಾ ಅಭಿಮಾನಿಗಳು (ETV Bharat)

ಇತ್ತೀಚೆಗೆ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಸ್ಥರು ದಿನನಿತ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜನಸಾಮಾನ್ಯರು, ಗಣ್ಯರು ಸೇರಿದಂತೆ ಹೆಚ್ಚಿನವರು ಈ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಕನ್ನಡ ಫಿಲ್ಮ್ ಚೇಂಬರ್ ನಿಯೋಗ ಸಹ ಕೆಲ ದಿನಗಳ ಹಿಂದೆ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ ಅವರ ಅಪ್ಪ-ಅಮ್ಮ ಹಾಗೂ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಇದೇ ವೇಳೆ 5 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದರು. ಇದೀಗ ನಟ ಧ್ರುವ ಸರ್ಜಾ ಅಭಿಮಾನಿಗಳು ಸಹ ರೇಣುಕಾಸ್ವಾಮಿ ಕುಟುಂಬಕ್ಕೆ ನೆರವಾಗಿದ್ದಾರೆ.

ಧ್ರುವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಮತ್ತು ತಂಡ ಬುಧವಾರ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ ಅವರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ, ಒಂದಿಷ್ಟು ಹಣವನ್ನು ನೀಡುವ ಮೂಲಕ ಕಷ್ಟದಲ್ಲಿರುವ ಕುಟುಂಬದ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನೂ ಓದಿ: ದರ್ಶನ್ ತಂಡದಿಂದ 70 ಲಕ್ಷ ರೂ. ಜಪ್ತಿ: ಐಟಿ, ಇನ್​​ಸ್ಟಾಗ್ರಾಮ್​ಗೆ ಪತ್ರ ಬರೆದ ಪೊಲೀಸರು - 70 lakhs detained from Darshan Team

ಇದೇ ಸಂದರ್ಭ, ನಟ ಧ್ರುವ ಸರ್ಜಾ ಕೂಡ ಫೋನ್ ಮಾಡುವ ಮೂಲಕ ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನದ ಮಾತುಗಳನ್ನು ಹೇಳಿದ್ದಾರೆ ಎನ್ನಲಾಗಿದೆ. ನಿಮ್ಮೊಂದಿಗೆ ಸದಾ ನಾವಿದ್ದೇವೆ. ಏನೇ ಇದ್ದರೂ ತಿಳಿಸಿ ಎಂದು ಧ್ರುವ ಸರ್ಜಾ ತಿಳಿಸಿದ್ದಾರಂತೆ.

ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತ ಧ್ರುವ ಸರ್ಜಾ ಅಭಿಮಾನಿಗಳು (ETV Bharat)

ಇತ್ತೀಚೆಗೆ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಸ್ಥರು ದಿನನಿತ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜನಸಾಮಾನ್ಯರು, ಗಣ್ಯರು ಸೇರಿದಂತೆ ಹೆಚ್ಚಿನವರು ಈ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಕನ್ನಡ ಫಿಲ್ಮ್ ಚೇಂಬರ್ ನಿಯೋಗ ಸಹ ಕೆಲ ದಿನಗಳ ಹಿಂದೆ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ ಅವರ ಅಪ್ಪ-ಅಮ್ಮ ಹಾಗೂ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಇದೇ ವೇಳೆ 5 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದರು. ಇದೀಗ ನಟ ಧ್ರುವ ಸರ್ಜಾ ಅಭಿಮಾನಿಗಳು ಸಹ ರೇಣುಕಾಸ್ವಾಮಿ ಕುಟುಂಬಕ್ಕೆ ನೆರವಾಗಿದ್ದಾರೆ.

ಧ್ರುವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಮತ್ತು ತಂಡ ಬುಧವಾರ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ ಅವರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ, ಒಂದಿಷ್ಟು ಹಣವನ್ನು ನೀಡುವ ಮೂಲಕ ಕಷ್ಟದಲ್ಲಿರುವ ಕುಟುಂಬದ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನೂ ಓದಿ: ದರ್ಶನ್ ತಂಡದಿಂದ 70 ಲಕ್ಷ ರೂ. ಜಪ್ತಿ: ಐಟಿ, ಇನ್​​ಸ್ಟಾಗ್ರಾಮ್​ಗೆ ಪತ್ರ ಬರೆದ ಪೊಲೀಸರು - 70 lakhs detained from Darshan Team

ಇದೇ ಸಂದರ್ಭ, ನಟ ಧ್ರುವ ಸರ್ಜಾ ಕೂಡ ಫೋನ್ ಮಾಡುವ ಮೂಲಕ ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನದ ಮಾತುಗಳನ್ನು ಹೇಳಿದ್ದಾರೆ ಎನ್ನಲಾಗಿದೆ. ನಿಮ್ಮೊಂದಿಗೆ ಸದಾ ನಾವಿದ್ದೇವೆ. ಏನೇ ಇದ್ದರೂ ತಿಳಿಸಿ ಎಂದು ಧ್ರುವ ಸರ್ಜಾ ತಿಳಿಸಿದ್ದಾರಂತೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.