ETV Bharat / state

ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ: ಸಿಎಂಗೆ ಬಿಎಸ್​ವೈ ಸವಾಲು - BS yediyurappa

author img

By ETV Bharat Karnataka Team

Published : Jul 4, 2024, 1:19 PM IST

Updated : Jul 4, 2024, 2:05 PM IST

ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (ETV Bharat)

ಬೆಂಗಳೂರು: ಮುಖ್ಯಮಂತ್ರಿಯಾಗಿ ಮುಂದುವರೆಯುವ ನೈತಿಕತೆ ಸಿದ್ದರಾಮಯ್ಯ ಅವರಿಗೆ ಇಲ್ಲ. ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ ನೋಡೋಣ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸವಾಲೆಸೆದಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮುಗಿದಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಎನ್​ಡಿಎ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿಯೂ ಮೈತ್ರಿಗೆ 19 ಸ್ಥಾನ ಬಂದಿದೆ. ಸಿಎಂ, ಡಿಸಿಎಂ, 17 ಸಚಿವರ ಕ್ಷೇತ್ರದಲ್ಲೇ ಕಾಂಗ್ರೆಸ್​​ ಹಿನ್ನಡೆಯಾಗಿದೆ. ಕಾಂಗ್ರೆಸ್​ನ​ ಸರ್ವ ಪ್ರಯತ್ನ, ಹಣ ಬಲ, ತೋಳ್ಬಲ, ಹತ್ತು ಹಲವು ಆಮಿಷಗಳ ನಡುವೆಯೂ ಬಿಜೆಪಿಗೆ ಜನಮತ ನೀಡಿದ್ದಾರೆ. ಈಗ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದಲ್ಲಿ ಬಿಜೆಪಿ 130-135 ಸ್ಥಾನ ಗೆಲ್ಲಲಿದೆ ಎಂದರು.

ನಮ್ಮ ತಪ್ಪಿನಿಂದ ಹಿನ್ನಡೆ: ಲೋಕಸಭೆಯಲ್ಲಿ ಕೆಲ ಕ್ಷೇತ್ರದಲ್ಲಿ ನಮ್ಮ ಕಡೆಯಿದ ಆದ ತಪ್ಪಿನಿಂದ ಸ್ವಲ್ಪ ಹಿನ್ನಡೆ ಅನುಭವಿಸಿದ್ದೇವೆ. ಆದರೆ ಜನರು ಸ್ಪಷ್ಟವಾಗಿ ಕಾಂಗ್ರೆಸ್​​ನ ದುರಾಡಳಿತದ ವಿರುದ್ಧ ಮತ ನೀಡಿದ್ದಾರೆ. ರಾಜ್ಯ ಸರ್ಕಾರ ತಪ್ಪು ನೀತಿಗಳಿಂದ ದಿವಾಳಿ ಅಂಚಿಗೆ ಬಂದಿದೆ, ಶಾಸಕರಿಗೆ ಅನುದಾನ ನೀಡಿಲ್ಲ, ಎಲ್ಲ ತೆರಿಗೆ ಹೆಚ್ಚಿಸಿ ಬೆಲೆ ಏರಿಕೆಗೆ ನಾಂದಿ ಹಾಡಿದ್ದಾರೆ. ಅಭಿವೃದ್ಧಿ ಕಾರ್ಯ ನಿಂತಿದೆ, ಖಜಾನೆ ಬರಿದಾಗಿದೆ. ಗ್ಯಾರಂಟಿಗಳ‌ನ್ನು ರದ್ದು ಮಾಡಿ ಅಭಿವೃದ್ಧಿಗೆ ಹಣ ನೀಡಿ ಎಂದು ಕಾಂಗ್ರೆಸ್ ಮುಖಂಡರೇ ಹೇಳುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಸಿಕ್ಕ ಸಿಕ್ಕ ಕಡೆ ತೆರಿಗೆ ಹೆಚ್ಚಿಸಿ ಜನರ ಸುಲಿಗೆ ಮಾಡಿ ಸಂಪನ್ಮೂಲ ಕ್ರೋಢೀಕರಿಸುತ್ತಿದೆ, ಸರ್ಕಾರ ಪಾಪರ್ ಆಗದೇ ಇದ್ದಿದ್ದರೆ ತೈಲ ತೆರಿಗೆ ಹೆಚ್ಚಿಸುವ ಅಗತ್ಯ ಇರಲಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಡಿದೆ, ರಾಮೇಶ್ವರಂ ಕೆಫೆ ಸ್ಫೋಟ, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ಚನ್ನಗಿರಿ ಠಾಣೆ ಗಲಾಟೆ ಸೇರಿ ಹಲವು ಘಟನಾವಳಿಗಳ ಉಲ್ಲೇಖಿಸಿ ವಾಗ್ದಾಳಿ ನಡೆಸಿದರು.

ವಾಲ್ಮೀಕಿ ನಿಗಮ ಹಗರಣದ ಬೆನ್ನಲ್ಲೇ ಮೈಸೂರು ಮುಡಾ ಹಗರಣ ಬೆಳಕಿಗೆ ಬಂದಿದೆ. ಸಿಎಂ ಕುಟುಂಬದವರು ಇದರಲ್ಲಿ ಭಾಗಿಯಾಗಿದ್ದು, ಸಿಎಂ ಕೈವಾಡ ಇದರಲ್ಲಿದೆ. ಇದನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕಿದೆ, ರಾಜ್ಯದ ದುರಾಡಳಿತ ಮತ್ತು ಕೇಂದ್ರದ ಜನಪರ ಕಾರ್ಯಗಳನ್ನು ಜನರಿಗೆ ತಿಳಿಸಬೇಕು ಎಂದು ಮಾಜಿ ಸಿಎಂ ಕರೆ ನೀಡಿದರು.

ವಿಧಾನಸಭೆ ಅಧಿವೇಶನದಲ್ಲಿ ಎಲ್ಲ ಹಗರಣ ಬಯಲು ಮಾಡಿ ಒಂದು ಕ್ಷಣ ಅಧಿಕಾರದಲ್ಲಿ ಮುಂದುವರೆಯುವ ಹಕ್ಕಿಲ್ಲ ಎಂದು ಹೋರಾಟ ಮಾಡಬೇಕು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದಾರೆ. ಸದನದಲ್ಲಿ ನಮ್ಮ‌ ಶಾಸಕರು ಹೋರಾಡಿ ರಾಜ್ಯದ ಜನರ ಗಮನ ಸೆಳೆಯಬೇಕು, ಎಲ್ಲ ಹಗರಣ ಬೆಳಕಿಗೆ ತರಬೇಕು ಎಂದರು.

ನಿಮಗೆ ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ನೇರ ಸವಾಲು ಹಾಕಿದ ಯಡಿಯೂರಪ್ಪ, ಚುನಾವಣೆಗೆ ಹೋದರೆ ಆಗ ನಿಮಗೆ ಗೊತ್ತಾಗಲಿದೆ, ನಮಗೆ 130 ಸ್ಥಾನ ನಿಶ್ಚಿತ. ಇದನ್ನು ನಾವು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಡಬೇಕಿದೆ. ಇಂದಿರಾಗಾಂಧಿಯೂ ಸತತ ಮೂರನೇ ಬಾರಿಗೆ ಪ್ರಧಾನಿ ಆಗಲು ಆಗಿಲ್ಲ, ರಾಜೀವ್ ಗಾಂಧಿಗೆ ಸತತ ಎರಡನೇ ಬಾರಿ ಪ್ರಧಾನಿಯಾಗಲು ಆಗಲಿಲ್ಲ, ರಾಹುಲ್ ಗಾಂಧಿಗೆ ಸತತ ಮೂರನೇ ಬಾರಿ ನೂರು ಸ್ಥಾನ ಗೆಲ್ಲಲಾಗಲಿಲ್ಲ. ಆದರೆ ಮೋದಿ ಸತತ ಮೂರನೇ ಬಾರಿ ಪ್ರಧಾನಿಯಾಗಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್​​ನಲ್ಲಿ ಹೆಚ್ಚಿನ‌ ಸ್ಥಾನ ಬರುವಂತೆ ಕೆಲಸ ಮಾಡಬೇಕು, ಸದನದ ಒಳಗೆ ಹೊರಗೆ ಹೋರಾಟ ನಡೆಸಬೇಕು, ಭ್ರಷ್ಟಾಚಾರ, ಅಸಮರ್ಪಕ ಸಂಪನ್ಮೂಲ ಕ್ರೋಢೀಕರಣ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿರುದ್ಧ ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸೋಣ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ರಾಜೀನಾಮೆವರೆಗೂ ಹೋರಾಟ ನಡೆಸಿ: ರಾಧಾಮೋಹನ್ ಅಗರವಾಲ್

ಭ್ರಷ್ಟಾಚಾರದ ಆರೋಪಗಳು ಮತ್ತು ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಕಾರಣಕ್ಕೆ ಸಿಎಂ ಸ್ಥಾನದಲ್ಲಿ ಮುಂದುವರೆಯುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ, ಅವರು ಅಧಿಕಾರ ಬಿಟ್ಟು ಇಳಿಯಬೇಕು. ಅಲ್ಲಿಯವರೆಗೂ ಬಿಜೆಪಿ ಹೋರಾಟ ನಡೆಸಬೇಕು ಎಂದು ರಾಜ್ಯ ಬಿಜೆಪಿ ನಾಯಕರಿಗೆ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಕರೆ ನೀಡಿದ್ದಾರೆ.

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಗರ್ವ ಪಡುವ ದಿನವಾಗಿದೆ, ಯಡಿಯೂರಪ್ಪ ನೇತೃತ್ವದಲ್ಲಿ ಈ ಜಯ ಸಿಕ್ಕಿದೆ. ಇಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ ಐತಿಹಾಸಿಕ ಗೆಲುವಿನ ಮೂಲಕ ಹೆಚ್ಚ ಜನ ಸಂಸದರನ್ನ ದೆಹಲಿಗೆ ಕಳಿಸಿದ್ದೀರಿ, ಸಮರ್ಪಿತ ಭಾವದಿಂದ ಕೆಲಸ ಮಾಡದೇ ಇದ್ದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ, ಇದು ಸಣ್ಣಪುಟ್ಟ ವಿಜಯವಲ್ಲ. 19 ಸ್ಥಾನ ಪಡೆದಿರುವುದು ದೊಡ್ಡ ಸಾಧನೆಯೇ. ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿ ಮತ್ತೆ ಚುನಾವಣೆಗೆ ಹೋದರೆ ಬಿಜೆಪಿ ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಕೊಡುಗೆ ಇದ್ದರೂ ಶೇ.51.5 ರಷ್ಟು ಮತ ಬಿಜೆಪಿಗೆ ಬಂದಿದೆ. ಕಾಂಗ್ರೆಸ್​​ಗೆ ಶೇ.45 ಮಾತ್ರ ಮತಗಳು ಬಂದಿವೆ ಎಂದರು.

ಇದನ್ನೂ ಓದಿ: ಮುಡಾದಲ್ಲಿ ಬದಲಿ ನಿವೇಶನಗಳ ಹಂಚಿಕೆ: ಏನಿದು ಪ್ರಕರಣ, ಜನಪ್ರತಿನಿಧಿಗಳು ಹೇಳಿದ್ದೇನು ? - MUDA SCAM

ಬೆಂಗಳೂರು: ಮುಖ್ಯಮಂತ್ರಿಯಾಗಿ ಮುಂದುವರೆಯುವ ನೈತಿಕತೆ ಸಿದ್ದರಾಮಯ್ಯ ಅವರಿಗೆ ಇಲ್ಲ. ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ ನೋಡೋಣ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸವಾಲೆಸೆದಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮುಗಿದಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಎನ್​ಡಿಎ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿಯೂ ಮೈತ್ರಿಗೆ 19 ಸ್ಥಾನ ಬಂದಿದೆ. ಸಿಎಂ, ಡಿಸಿಎಂ, 17 ಸಚಿವರ ಕ್ಷೇತ್ರದಲ್ಲೇ ಕಾಂಗ್ರೆಸ್​​ ಹಿನ್ನಡೆಯಾಗಿದೆ. ಕಾಂಗ್ರೆಸ್​ನ​ ಸರ್ವ ಪ್ರಯತ್ನ, ಹಣ ಬಲ, ತೋಳ್ಬಲ, ಹತ್ತು ಹಲವು ಆಮಿಷಗಳ ನಡುವೆಯೂ ಬಿಜೆಪಿಗೆ ಜನಮತ ನೀಡಿದ್ದಾರೆ. ಈಗ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದಲ್ಲಿ ಬಿಜೆಪಿ 130-135 ಸ್ಥಾನ ಗೆಲ್ಲಲಿದೆ ಎಂದರು.

ನಮ್ಮ ತಪ್ಪಿನಿಂದ ಹಿನ್ನಡೆ: ಲೋಕಸಭೆಯಲ್ಲಿ ಕೆಲ ಕ್ಷೇತ್ರದಲ್ಲಿ ನಮ್ಮ ಕಡೆಯಿದ ಆದ ತಪ್ಪಿನಿಂದ ಸ್ವಲ್ಪ ಹಿನ್ನಡೆ ಅನುಭವಿಸಿದ್ದೇವೆ. ಆದರೆ ಜನರು ಸ್ಪಷ್ಟವಾಗಿ ಕಾಂಗ್ರೆಸ್​​ನ ದುರಾಡಳಿತದ ವಿರುದ್ಧ ಮತ ನೀಡಿದ್ದಾರೆ. ರಾಜ್ಯ ಸರ್ಕಾರ ತಪ್ಪು ನೀತಿಗಳಿಂದ ದಿವಾಳಿ ಅಂಚಿಗೆ ಬಂದಿದೆ, ಶಾಸಕರಿಗೆ ಅನುದಾನ ನೀಡಿಲ್ಲ, ಎಲ್ಲ ತೆರಿಗೆ ಹೆಚ್ಚಿಸಿ ಬೆಲೆ ಏರಿಕೆಗೆ ನಾಂದಿ ಹಾಡಿದ್ದಾರೆ. ಅಭಿವೃದ್ಧಿ ಕಾರ್ಯ ನಿಂತಿದೆ, ಖಜಾನೆ ಬರಿದಾಗಿದೆ. ಗ್ಯಾರಂಟಿಗಳ‌ನ್ನು ರದ್ದು ಮಾಡಿ ಅಭಿವೃದ್ಧಿಗೆ ಹಣ ನೀಡಿ ಎಂದು ಕಾಂಗ್ರೆಸ್ ಮುಖಂಡರೇ ಹೇಳುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಸಿಕ್ಕ ಸಿಕ್ಕ ಕಡೆ ತೆರಿಗೆ ಹೆಚ್ಚಿಸಿ ಜನರ ಸುಲಿಗೆ ಮಾಡಿ ಸಂಪನ್ಮೂಲ ಕ್ರೋಢೀಕರಿಸುತ್ತಿದೆ, ಸರ್ಕಾರ ಪಾಪರ್ ಆಗದೇ ಇದ್ದಿದ್ದರೆ ತೈಲ ತೆರಿಗೆ ಹೆಚ್ಚಿಸುವ ಅಗತ್ಯ ಇರಲಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಡಿದೆ, ರಾಮೇಶ್ವರಂ ಕೆಫೆ ಸ್ಫೋಟ, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ಚನ್ನಗಿರಿ ಠಾಣೆ ಗಲಾಟೆ ಸೇರಿ ಹಲವು ಘಟನಾವಳಿಗಳ ಉಲ್ಲೇಖಿಸಿ ವಾಗ್ದಾಳಿ ನಡೆಸಿದರು.

ವಾಲ್ಮೀಕಿ ನಿಗಮ ಹಗರಣದ ಬೆನ್ನಲ್ಲೇ ಮೈಸೂರು ಮುಡಾ ಹಗರಣ ಬೆಳಕಿಗೆ ಬಂದಿದೆ. ಸಿಎಂ ಕುಟುಂಬದವರು ಇದರಲ್ಲಿ ಭಾಗಿಯಾಗಿದ್ದು, ಸಿಎಂ ಕೈವಾಡ ಇದರಲ್ಲಿದೆ. ಇದನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕಿದೆ, ರಾಜ್ಯದ ದುರಾಡಳಿತ ಮತ್ತು ಕೇಂದ್ರದ ಜನಪರ ಕಾರ್ಯಗಳನ್ನು ಜನರಿಗೆ ತಿಳಿಸಬೇಕು ಎಂದು ಮಾಜಿ ಸಿಎಂ ಕರೆ ನೀಡಿದರು.

ವಿಧಾನಸಭೆ ಅಧಿವೇಶನದಲ್ಲಿ ಎಲ್ಲ ಹಗರಣ ಬಯಲು ಮಾಡಿ ಒಂದು ಕ್ಷಣ ಅಧಿಕಾರದಲ್ಲಿ ಮುಂದುವರೆಯುವ ಹಕ್ಕಿಲ್ಲ ಎಂದು ಹೋರಾಟ ಮಾಡಬೇಕು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದಾರೆ. ಸದನದಲ್ಲಿ ನಮ್ಮ‌ ಶಾಸಕರು ಹೋರಾಡಿ ರಾಜ್ಯದ ಜನರ ಗಮನ ಸೆಳೆಯಬೇಕು, ಎಲ್ಲ ಹಗರಣ ಬೆಳಕಿಗೆ ತರಬೇಕು ಎಂದರು.

ನಿಮಗೆ ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ನೇರ ಸವಾಲು ಹಾಕಿದ ಯಡಿಯೂರಪ್ಪ, ಚುನಾವಣೆಗೆ ಹೋದರೆ ಆಗ ನಿಮಗೆ ಗೊತ್ತಾಗಲಿದೆ, ನಮಗೆ 130 ಸ್ಥಾನ ನಿಶ್ಚಿತ. ಇದನ್ನು ನಾವು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಡಬೇಕಿದೆ. ಇಂದಿರಾಗಾಂಧಿಯೂ ಸತತ ಮೂರನೇ ಬಾರಿಗೆ ಪ್ರಧಾನಿ ಆಗಲು ಆಗಿಲ್ಲ, ರಾಜೀವ್ ಗಾಂಧಿಗೆ ಸತತ ಎರಡನೇ ಬಾರಿ ಪ್ರಧಾನಿಯಾಗಲು ಆಗಲಿಲ್ಲ, ರಾಹುಲ್ ಗಾಂಧಿಗೆ ಸತತ ಮೂರನೇ ಬಾರಿ ನೂರು ಸ್ಥಾನ ಗೆಲ್ಲಲಾಗಲಿಲ್ಲ. ಆದರೆ ಮೋದಿ ಸತತ ಮೂರನೇ ಬಾರಿ ಪ್ರಧಾನಿಯಾಗಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್​​ನಲ್ಲಿ ಹೆಚ್ಚಿನ‌ ಸ್ಥಾನ ಬರುವಂತೆ ಕೆಲಸ ಮಾಡಬೇಕು, ಸದನದ ಒಳಗೆ ಹೊರಗೆ ಹೋರಾಟ ನಡೆಸಬೇಕು, ಭ್ರಷ್ಟಾಚಾರ, ಅಸಮರ್ಪಕ ಸಂಪನ್ಮೂಲ ಕ್ರೋಢೀಕರಣ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿರುದ್ಧ ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸೋಣ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ರಾಜೀನಾಮೆವರೆಗೂ ಹೋರಾಟ ನಡೆಸಿ: ರಾಧಾಮೋಹನ್ ಅಗರವಾಲ್

ಭ್ರಷ್ಟಾಚಾರದ ಆರೋಪಗಳು ಮತ್ತು ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಕಾರಣಕ್ಕೆ ಸಿಎಂ ಸ್ಥಾನದಲ್ಲಿ ಮುಂದುವರೆಯುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ, ಅವರು ಅಧಿಕಾರ ಬಿಟ್ಟು ಇಳಿಯಬೇಕು. ಅಲ್ಲಿಯವರೆಗೂ ಬಿಜೆಪಿ ಹೋರಾಟ ನಡೆಸಬೇಕು ಎಂದು ರಾಜ್ಯ ಬಿಜೆಪಿ ನಾಯಕರಿಗೆ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಕರೆ ನೀಡಿದ್ದಾರೆ.

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಗರ್ವ ಪಡುವ ದಿನವಾಗಿದೆ, ಯಡಿಯೂರಪ್ಪ ನೇತೃತ್ವದಲ್ಲಿ ಈ ಜಯ ಸಿಕ್ಕಿದೆ. ಇಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ ಐತಿಹಾಸಿಕ ಗೆಲುವಿನ ಮೂಲಕ ಹೆಚ್ಚ ಜನ ಸಂಸದರನ್ನ ದೆಹಲಿಗೆ ಕಳಿಸಿದ್ದೀರಿ, ಸಮರ್ಪಿತ ಭಾವದಿಂದ ಕೆಲಸ ಮಾಡದೇ ಇದ್ದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ, ಇದು ಸಣ್ಣಪುಟ್ಟ ವಿಜಯವಲ್ಲ. 19 ಸ್ಥಾನ ಪಡೆದಿರುವುದು ದೊಡ್ಡ ಸಾಧನೆಯೇ. ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿ ಮತ್ತೆ ಚುನಾವಣೆಗೆ ಹೋದರೆ ಬಿಜೆಪಿ ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಕೊಡುಗೆ ಇದ್ದರೂ ಶೇ.51.5 ರಷ್ಟು ಮತ ಬಿಜೆಪಿಗೆ ಬಂದಿದೆ. ಕಾಂಗ್ರೆಸ್​​ಗೆ ಶೇ.45 ಮಾತ್ರ ಮತಗಳು ಬಂದಿವೆ ಎಂದರು.

ಇದನ್ನೂ ಓದಿ: ಮುಡಾದಲ್ಲಿ ಬದಲಿ ನಿವೇಶನಗಳ ಹಂಚಿಕೆ: ಏನಿದು ಪ್ರಕರಣ, ಜನಪ್ರತಿನಿಧಿಗಳು ಹೇಳಿದ್ದೇನು ? - MUDA SCAM

Last Updated : Jul 4, 2024, 2:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.