ರಾಮನಗರ: ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಆದರೂ ಈ ಕಾರ್ಯಕ್ರಮದಲ್ಲಿ ಅನಿವಾರ್ಯ ಕಾರಣಗಳಲ್ಲಿ ಅಹವಾಲು ಸಲ್ಲಿಸಲು ಆಗದಿದ್ದರೆ, ಚನ್ನಪಟ್ಟಣ ತಾಲ್ಲೂಕು ಕಚೇರಿಯಲ್ಲಿ ಇದಕ್ಕೆಂದೇ ಕೊಠಡಿಯೊಂದನ್ನು ತೆರೆಯಲಾಗಿದೆ. ಅಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇಂದು ಚನ್ನಪಟ್ಟಣ ತಾಲ್ಲೂಕಿನ ಭೈರಾಪಟ್ಟಣ ಸರ್ಕಾರಿ ಶಾಲಾ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚನ್ನಪಟ್ಟಣ ತಾಲ್ಲೂಕಿನಲ್ಲಿ ಇದೂವರೆಗೆ ಸತತವಾಗಿ ಆರು ಜನಸ್ಪಂದನ ಸಭೆಯನ್ನು ಆಯೋಜಿಸಲಾಗಿದೆ. ಚನ್ನಪಟ್ಟಣ ಟೌನಿನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರ ಬದುಕಿನ ಬದಲಾವಣೆಗೆ ಈ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು ಆರು ಸಾವಿರಕ್ಕೂ ಹೆಚ್ಚು ಅರ್ಜಿ ಸ್ವೀಕೃತಗೊಂಡಿದೆ. ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಈ ಕಾರ್ಯಕ್ರಮದ ಕುರಿತು ಹಲವಾರು ಟೀಕೆಗಳು ಬಂದಿದ್ದು, ಅವೆಲ್ಲವೂ ಸಾಯುತ್ತವೆ. ಸರ್ಕಾರದ ಅಭಿವೃದ್ಧಿಯ ಕೆಲಸಗಳು ಉಳಿಯುತ್ತವೆ ಎಂದರು.
ಸರ್ಕಾರದಿಂದ ಕೈಗೊಂಡಿರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಹೇಗೆ ಬಗೆಹರಿಸುತ್ತೇವೆ ಎಂಬುದು ಮುಖ್ಯವಾಗಿದೆ. ಪಿಂಚಣಿ, ಮನೆ, ನಿವೇಶನ, ರಸ್ತೆ, ಚರಂಡಿ ಸೇರಿತೆ ವಿವಿಧ ರೀತಿಯ ಸಮಸ್ಯೆಗಳ ಕುರಿತು ಅರ್ಜಿ ಸ್ವೀಕೃತವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಅವರು ಈ ಭಾಗದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲು ಒಪ್ಪಿಕೊಂಡಿದ್ದಾರೆ. ಯಾವ ಯಾವ ಪಂಚಾಯ್ತಿಗೆ ಅನುದಾನ ಅವಶ್ಯಕವಿದೆ ಎಂಬುದು ನಿರ್ಧರಿಸಲಾಗುವುದು ಎಂದು ಹೇಳಿದರು.
![DKM DK launched the program DK Shivakumar visits Ramanaga](https://etvbharatimages.akamaized.net/etvbharat/prod-images/02-07-2024/r-kn-rmn-01-02072024-dcm-govt-ka10051_02072024170719_0207f_1719920239_157.jpg)
4000 ಜನರು ಮನೆ ಹಾಗೂ ನಿವೇಶನಕ್ಕಾಗಿ ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ನೈಜವಾಗಿ ಯಾರಿಗೆ ವಸತಿ ಹಾಗೂ ನಿವೇಶನ ಇರುವುದಿಲ್ಲ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ, ಅರ್ಹರಿಗೆ ನಿವೇಶನ ಹಾಗೂ ವಸತಿ ನೀಡಬೇಕು. ಈಗಾಗಲೇ ನಿವೇಶನಕ್ಕಾಗಿ ಜಮೀನು ಇರುವುದನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು. ಪಡಿತರ ಚೀಟಿ ವಿತರಣೆಗಾಗಿ ಸುಮಾರು 450 ಅರ್ಜಿಗಳು ಸ್ವೀಕೃತಗೊಂಡಿದೆ. ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. 5 ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಗೆ ಈಗಾಗಲೇ ಸುಮಾರು 100 ಹೊಸ ಬಸ್ಗಳ ಕಾರ್ಯಾರಂಭಗೊಂಡಿದೆ. ಆನೆ ದಾಳಿ ಸಮಸ್ಯೆಗಳಿಗೆ ಪರಿಹಾರ, ಕಣ್ವ ಬ್ರಿಡ್ಜ್ ಕಂ ಬ್ಯಾರೇಜ್ಗೆ ಸುಮಾರು 162 ಕೋಟಿ ರೂ.ಗಳನ್ನು ನೀರಾವರಿ ಇಲಾಖೆಯಿಂದ ಚನ್ನಪಟ್ಟಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.