ETV Bharat / state

ಬ್ಯಾಂಕಿನ ಹಣವನ್ನೇ ವಶಕ್ಕೆ ಪಡೆದ ಚುನಾವಣಾ ಅಧಿಕಾರಿಗಳು: ಏಕೆ ಗೊತ್ತಾ? - Money seized

author img

By ETV Bharat Karnataka Team

Published : Apr 6, 2024, 10:10 AM IST

Updated : Apr 6, 2024, 12:52 PM IST

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಎಲ್ಲ ವಾಹನಗಳನ್ನು ತಪಾಸಣೆ ಮಾಡುತ್ತಿರುವ ಚುನಾವಣಾ ಅಧಿಕಾರಿಗಳು ಪ್ರತ್ಯೇಕ ಪಕ್ರರಣಗಳಲ್ಲಿ ಚಿಕ್ಕಮಗಳೂರು ಹಾಗೂ ಗದಗದಲ್ಲಿ ಒಟ್ಟು 47 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.

SST team seized 45 lakh money
45 ಲಕ್ಷ ಹಣ ವಶಪಡಿಸಿಕೊಂಡ ಎಸ್​ಎಸ್​ಟಿ ತಂಡ

45 ಲಕ್ಷ ಹಣ ವಶಪಡಿಸಿಕೊಂಡ ಎಸ್​ಎಸ್​ಟಿ ತಂಡ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗ ಸೂಚಿಗಳನ್ನು ಪಾಲಿಸದೇ ಖಾಸಗಿ ವಾಹನದಲ್ಲಿ ಬ್ಯಾಂಕ್‌ಗೆ ಸೇರಿದ ಹಣವನ್ನು ಸಾಗಿಸುತ್ತಿದ್ದ ಆರೋಪದ ಮೇರೆಗೆ ಎಸ್​ಎಸ್​ಟಿ ಅಧಿಕಾರಿಗಳು ತಪಾಸಣೆ ನಡೆಸಿ, 45 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿರುವ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆಲ್ದೂರು ಹೋಬಳಿ ವ್ಯಾಪ್ತಿಯ ಮಾಚಗೊಂಡನಹಳ್ಳಿ ಎಂಬಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಎಸ್​ಎಸ್​ಟಿ ತಂಡ (ಸ್ಥಿರ ಕಣ್ಗಾವಲು ತಂಡ- Static Surveillance Team) ಮೂಡಿಗೆರೆಯಿಂದ ಚಿಕ್ಕಮಗಳೂರು ನಗರದತ್ತ ಬರುತ್ತಿದ್ದ ಖಾಸಗಿ ವಾಹನವೊಂದನ್ನು ತಪಾಸಣೆ ಮಾಡಿದೆ. ಈ ವೇಳೆ ವಾಹದಲ್ಲಿ 45 ಲಕ್ಷ ಹಣ ಇರುವುದು ಪತ್ತೆಯಾಗಿದೆ. ಹಣದ ಬಗ್ಗೆ ವಿಚಾರಣೆ ಮಾಡಿದ ವೇಳೆ, ಈ ಹಣ ವಿವಿಧ ಬ್ಯಾಂಕ್‌ಗಳಿಗೆ ಸೇರಿದ್ದು ಎಂದು ವಾಹನದಲ್ಲಿದ್ದವರು ತಿಳಿಸಿದ್ದಾರೆ.

seized money
ವಶಪಡಿಸಿಕೊಂಡ ಹಣ

ಬ್ಯಾಂಕ್ ಸೇರಿದ್ದ 45 ಲಕ್ಷ ಹಣ ವಶ: ಆದರೆ, ಬ್ಯಾಂಕ್‌ಗೆ ಸೇರಿದ ಹಣವನ್ನು ಸಾಗಣೆ ಮಾಡುವ ಸಂದರ್ಭದಲ್ಲಿ ವಾಹನದಲ್ಲಿ ಆರ್‌ಬಿಐ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಆದರೆ, ಸಾಗಣೆ ಮಾಡುತ್ತಿದ್ದ ವಾಹನದಲ್ಲಿ ಆರ್​ಬಿಐ ಮಾರ್ಗಸೂಚಿಗಳನ್ನು ಪಾಲನೆ ಮಾಡದಿರುವುದು ಕಂಡು ಬಂದಿದೆ. ವಾಹನದಲ್ಲಿ ಗನ್ ಮ್ಯಾನ್, ಸಿಸಿಟಿವಿ ಇಲ್ಲದೇ, ಅದರಲ್ಲೂ ಖಾಸಗಿ ವಾಹನದಲ್ಲಿ ಹಣ ಸಾಗಣೆ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಹಣವನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದೆ. ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಸಮರ್ಪಕ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ವಶ

ಗದಗ ರಸ್ತೆ ಚೆಕ್ ಪೋಸ್ಟ್​ನಲ್ಲಿ ದಾಖಲೆ ರಹಿತ 2 ಲಕ್ಷ ರೂ. ವಶ: ಹುಬ್ಬಳ್ಳಿ ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್​ಗಳಲ್ಲಿ ವಾಹನ ತಪಾಸಣೆ ತೀವ್ರಗೊಳಿಸಲಾಗಿದೆ. ಸಹಾಯಕ ಚುನಾವಣಾ ಅಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರ ನೇತೃತ್ವದಲ್ಲಿ ಗದಗ ರಸ್ತೆ ಚೆಕ್ ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ವೇಳೆ ದಾಖಲೆ ರಹಿತ ರೂ. 2 ಲಕ್ಷ ನಗದು ಪತ್ತೆಯಾಗಿದ್ದು, ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

2 lakh rupees seized at Gadag road check post
ಗದಗ ರಸ್ತೆ ಚೆಕ್ ಪೋಸ್ಟ್​ನಲ್ಲಿ ದಾಖಲೆ ರಹಿತ 2 ಲಕ್ಷ ರೂ. ವಶ

ಕೆಎ-05 ಎಇ-3422 ನಂಬರ್​ ಕಾರಿನಲ್ಲಿ ತಿಪಟೂರಿನಿಂದ ಹುಬ್ಬಳ್ಳಿಗೆ ದಾಖಲೆ ಇಲ್ಲದೇ ಹಣ ಸಾಗಿಸಲಾಗುತ್ತಿತ್ತು. ನಿಯಮಾನುಸಾರ ಮುಂದಿನ ಕ್ರಮ ಜರುಗಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ಎಂಸಿಸಿ ನೋಡೆಲ್ ಅಧಿಕಾರಿ ರವೀಂದ್ರ ಕುಮಾರ್, ಕಿರಣ್ ಮಜ್ಜಿಗೇರಿ, ಕುಶಾಲ್ ಹುಕ್ಕೇರಿ, ಅಯ್ಯಪ್ಪ ಮನ್ನಿಕೇರಿ, ಲೋಕೇಶ್ ಶಿರಹಟ್ಟಿ, ಮಂಜುನಾಥ, ದೇವಪ್ಪ ಭಾಗವಹಿಸಿದ್ದರು.

ಇದನ್ನೂ ಓದಿ: ಚಾಮರಾಜನಗರ ಡಿಸಿಗೆ ಬಂದ ಫೋನ್ ಕರೆ; 98 ಕೋಟಿ ಮೌಲ್ಯದ ಬಿಯರ್ ವಶ, ಫ್ಯಾಕ್ಟರಿ ಸೀಜ್ - FACTORY SEIZE

45 ಲಕ್ಷ ಹಣ ವಶಪಡಿಸಿಕೊಂಡ ಎಸ್​ಎಸ್​ಟಿ ತಂಡ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗ ಸೂಚಿಗಳನ್ನು ಪಾಲಿಸದೇ ಖಾಸಗಿ ವಾಹನದಲ್ಲಿ ಬ್ಯಾಂಕ್‌ಗೆ ಸೇರಿದ ಹಣವನ್ನು ಸಾಗಿಸುತ್ತಿದ್ದ ಆರೋಪದ ಮೇರೆಗೆ ಎಸ್​ಎಸ್​ಟಿ ಅಧಿಕಾರಿಗಳು ತಪಾಸಣೆ ನಡೆಸಿ, 45 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿರುವ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆಲ್ದೂರು ಹೋಬಳಿ ವ್ಯಾಪ್ತಿಯ ಮಾಚಗೊಂಡನಹಳ್ಳಿ ಎಂಬಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಎಸ್​ಎಸ್​ಟಿ ತಂಡ (ಸ್ಥಿರ ಕಣ್ಗಾವಲು ತಂಡ- Static Surveillance Team) ಮೂಡಿಗೆರೆಯಿಂದ ಚಿಕ್ಕಮಗಳೂರು ನಗರದತ್ತ ಬರುತ್ತಿದ್ದ ಖಾಸಗಿ ವಾಹನವೊಂದನ್ನು ತಪಾಸಣೆ ಮಾಡಿದೆ. ಈ ವೇಳೆ ವಾಹದಲ್ಲಿ 45 ಲಕ್ಷ ಹಣ ಇರುವುದು ಪತ್ತೆಯಾಗಿದೆ. ಹಣದ ಬಗ್ಗೆ ವಿಚಾರಣೆ ಮಾಡಿದ ವೇಳೆ, ಈ ಹಣ ವಿವಿಧ ಬ್ಯಾಂಕ್‌ಗಳಿಗೆ ಸೇರಿದ್ದು ಎಂದು ವಾಹನದಲ್ಲಿದ್ದವರು ತಿಳಿಸಿದ್ದಾರೆ.

seized money
ವಶಪಡಿಸಿಕೊಂಡ ಹಣ

ಬ್ಯಾಂಕ್ ಸೇರಿದ್ದ 45 ಲಕ್ಷ ಹಣ ವಶ: ಆದರೆ, ಬ್ಯಾಂಕ್‌ಗೆ ಸೇರಿದ ಹಣವನ್ನು ಸಾಗಣೆ ಮಾಡುವ ಸಂದರ್ಭದಲ್ಲಿ ವಾಹನದಲ್ಲಿ ಆರ್‌ಬಿಐ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಆದರೆ, ಸಾಗಣೆ ಮಾಡುತ್ತಿದ್ದ ವಾಹನದಲ್ಲಿ ಆರ್​ಬಿಐ ಮಾರ್ಗಸೂಚಿಗಳನ್ನು ಪಾಲನೆ ಮಾಡದಿರುವುದು ಕಂಡು ಬಂದಿದೆ. ವಾಹನದಲ್ಲಿ ಗನ್ ಮ್ಯಾನ್, ಸಿಸಿಟಿವಿ ಇಲ್ಲದೇ, ಅದರಲ್ಲೂ ಖಾಸಗಿ ವಾಹನದಲ್ಲಿ ಹಣ ಸಾಗಣೆ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಹಣವನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದೆ. ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಸಮರ್ಪಕ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ವಶ

ಗದಗ ರಸ್ತೆ ಚೆಕ್ ಪೋಸ್ಟ್​ನಲ್ಲಿ ದಾಖಲೆ ರಹಿತ 2 ಲಕ್ಷ ರೂ. ವಶ: ಹುಬ್ಬಳ್ಳಿ ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್​ಗಳಲ್ಲಿ ವಾಹನ ತಪಾಸಣೆ ತೀವ್ರಗೊಳಿಸಲಾಗಿದೆ. ಸಹಾಯಕ ಚುನಾವಣಾ ಅಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರ ನೇತೃತ್ವದಲ್ಲಿ ಗದಗ ರಸ್ತೆ ಚೆಕ್ ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ವೇಳೆ ದಾಖಲೆ ರಹಿತ ರೂ. 2 ಲಕ್ಷ ನಗದು ಪತ್ತೆಯಾಗಿದ್ದು, ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

2 lakh rupees seized at Gadag road check post
ಗದಗ ರಸ್ತೆ ಚೆಕ್ ಪೋಸ್ಟ್​ನಲ್ಲಿ ದಾಖಲೆ ರಹಿತ 2 ಲಕ್ಷ ರೂ. ವಶ

ಕೆಎ-05 ಎಇ-3422 ನಂಬರ್​ ಕಾರಿನಲ್ಲಿ ತಿಪಟೂರಿನಿಂದ ಹುಬ್ಬಳ್ಳಿಗೆ ದಾಖಲೆ ಇಲ್ಲದೇ ಹಣ ಸಾಗಿಸಲಾಗುತ್ತಿತ್ತು. ನಿಯಮಾನುಸಾರ ಮುಂದಿನ ಕ್ರಮ ಜರುಗಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ಎಂಸಿಸಿ ನೋಡೆಲ್ ಅಧಿಕಾರಿ ರವೀಂದ್ರ ಕುಮಾರ್, ಕಿರಣ್ ಮಜ್ಜಿಗೇರಿ, ಕುಶಾಲ್ ಹುಕ್ಕೇರಿ, ಅಯ್ಯಪ್ಪ ಮನ್ನಿಕೇರಿ, ಲೋಕೇಶ್ ಶಿರಹಟ್ಟಿ, ಮಂಜುನಾಥ, ದೇವಪ್ಪ ಭಾಗವಹಿಸಿದ್ದರು.

ಇದನ್ನೂ ಓದಿ: ಚಾಮರಾಜನಗರ ಡಿಸಿಗೆ ಬಂದ ಫೋನ್ ಕರೆ; 98 ಕೋಟಿ ಮೌಲ್ಯದ ಬಿಯರ್ ವಶ, ಫ್ಯಾಕ್ಟರಿ ಸೀಜ್ - FACTORY SEIZE

Last Updated : Apr 6, 2024, 12:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.