ETV Bharat / state

ಚಾಮರಾಜೇಶ್ವರ ರಥೋತ್ಸವ ಸಂಪನ್ನ: ಇಲ್ಲಿ ನವಜೋಡಿಗಳದ್ದೇ ಕಲರವ - Sri Chamarajeshwar Rathothsava

author img

By ETV Bharat Karnataka Team

Published : Jul 20, 2024, 8:39 PM IST

Updated : Jul 20, 2024, 10:33 PM IST

ಆಷಾಢ ಮಾಸದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವ ಇದಾಗಿದ್ದು, ನೂತನ ದಂಪತಿಗಳ ಜಾತ್ರೆ ಎಂದೇ ಇದು ಹೆಸರುವಾಸಿಯಾಗಿದೆ‌‌.

SRI CHAMARAJESHWAR RATHOTHSAVA
ಚಾಮರಾಜೇಶ್ವರ ರಥೋತ್ಸವ ಸಂಪನ್ನ (ETV Bharat)

ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಶನಿವಾರ ಮಧ್ಯಾಹ್ನ 12.30ರ ಶುಭ ಲಗ್ನದಲ್ಲಿ ಉತ್ಸವ ಮೂರ್ತಿಯನ್ನು ತೇರಿನಲ್ಲಿ ಕುಳ್ಳಿರಿಸಿ ಜೈಕಾರ, ಮಂತ್ರಘೋಷದಿಂದ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಚಾಮರಾಜೇಶ್ವರ ರಥೋತ್ಸವ ಸಂಪನ್ನ (ETV Bharat)

ಆಷಾಢ ಮಾಸದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವ ಇದಾಗಿದ್ದು, ನೂತನ ದಂಪತಿಗಳ ಜಾತ್ರೆ ಎಂದೇ ಇದು ಹೆಸರುವಾಸಿಯಾಗಿದೆ‌‌. ಹೊಸದಾಗಿ ಮದುವೆಯಾದ ಗಂಡ - ಹೆಂಡತಿ ಅಷಾಢ ಮಾಸದ ಜಾತ್ರೆಯಲ್ಲಿ ಒಂದಾಗಿ ಹಣ್ಣು ದವನ ಎಸೆಯುತ್ತಾರೆ. ಹೊಸದಾಗಿ ಮದುವೆಯಾದ ಯುವತಿ ಆಷಾಢ ಮಾಸದಲ್ಲಿ ತವರಿಗೆ ಹೋಗುವುದರಿಂದ ಈ ಜಾತ್ರೆ ನೆಪದಲ್ಲಿ ಸತಿಪತಿಗಳು ಒಂದಾಗಿ ಹಣ್ಣು ದವನ ಎಸೆಯುವುದು ಈ ಜಾತ್ರೆಯ ವಿಶೇಷತೆ.

ಮುಮ್ಮಡಿ ಕೃಷ್ಣರಾಜ ಒಡೆಯರ್ ಆಷಾಢ ಮಾಸದಲ್ಲಿ ಜನಿಸಿದ್ದರಿಂದ ಈ ರಥೋತ್ಸವವೂ ಆಷಾಢ ಮಾಸದಲ್ಲೇ ನಡೆಯಲಿದ್ದು, ರಾಜತ್ವ ಮತ್ತು ದೈವತ್ವ ಇರುವ ವಿಶೇಷ ದೇಗುಲ ಇದಾಗಿದೆ. ರಥೋತ್ಸವ ದಿನದಂದು ಹಣ್ಣು- ದವನ ಎಸೆದರೆ ಸಂತಾನ ಭಾಗ್ಯ, ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ.

ರಥೋತ್ಸವ ದೇವಸ್ಥಾನದ ಮುಂಭಾಗದಿಂದ ದಕ್ಷಿಣಾಭಿಮುಖವಾಗಿ ಚಲಿಸಿ ಎಸ್.ಬಿ.ಎಂ. ರಸ್ತೆಯಲ್ಲಿ ಸಾಗಿ ವೀರಭದ್ರೇಶ್ವರಸ್ವಾಮಿ ದೇವಾಲಯದ ವೃತ್ತದಿಂದ ಮಾರಮ್ಮ ದೇವಸ್ಥಾನದ ರಸ್ತೆಯ ಮೂಲಕ ಹಳೆ ತರಕಾರಿ ಮಾರುಕಟ್ಟೆ ರಸ್ತೆಯಲ್ಲಿ ಹಾದು ದೇವಸ್ಥಾನದ ಮೂಲಸ್ಥಾನ ತಲುಪಿತು.

ತಲೆ, ಕಿವಿಯಲ್ಲಿ ಅರಳಿದ ರಥ: ಚಾಮರಾಜನಗರದ ಗುರುರಾಜ್ ಮತ್ತು ಇವರ ಮಗ ತಲೆಯಲ್ಲಿ ಶ್ರೀ ಚಾಮರಾಜೇಶ್ವರನ ರಥದ ಪ್ರತಿಕೃತಿಯ ಕಿರೀಟ ಧರಿಸಿದ್ದರು. ಜೊತೆಗೆ, ಕಿವಿ ಓಲೆಯಲ್ಲೂ ರಥ ಇದ್ದದ್ದು ಜಾತ್ರೆಗೆ ಬಂದಿದ್ದವರ ಗಮನ ಸೆಳೆಯಿತು. ನವಜೋಡಿಗಳು, ಯುವಕರು ತಂದೆ - ಮಗನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಜಾತ್ರೆ ಸಡಗರವನ್ನು ಮತ್ತಷ್ಟು ಹೆಚ್ಚಿಸಿದರು.

ಮಳೆ ಭೀತಿ ನಡುವೆ ಸಹಸ್ರಾರು ಮಂದಿ ನವಜೋಡಿಗಳು ಚಾಮರಾಜೇಶ್ವರನಿಗೆ ನಮಿಸಿ, ಪ್ರಾರ್ಥನೆ ಸಲ್ಲಿಸಿದರು. ನಿತ್ಯ ಸುರಿಯುತ್ತಿದ್ದ ಮಳೆರಾಯ ರಥೋತ್ಸವ ಸಮಯದಂದು ಬಿಡುವು ಕೊಟ್ಟಿದ್ದು ಭಕ್ತರ ಉತ್ಸಾಹ ಮತ್ತಷ್ಟು ಹೆಚ್ಚಿಸಿತು.

ಇದನ್ನೂ ಓದಿ: ಕರ್ನಾಟಕದಲ್ಲೂ ಸಂಭ್ರಮದ ಶ್ರೀ ಜಗನ್ನಾಥ ಸ್ವಾಮಿ ರಥೋತ್ಸವ: ಎಲ್ಲಿ ಗೊತ್ತೇ? - Jagannatha Swamy Rathotsava

ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಶನಿವಾರ ಮಧ್ಯಾಹ್ನ 12.30ರ ಶುಭ ಲಗ್ನದಲ್ಲಿ ಉತ್ಸವ ಮೂರ್ತಿಯನ್ನು ತೇರಿನಲ್ಲಿ ಕುಳ್ಳಿರಿಸಿ ಜೈಕಾರ, ಮಂತ್ರಘೋಷದಿಂದ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಚಾಮರಾಜೇಶ್ವರ ರಥೋತ್ಸವ ಸಂಪನ್ನ (ETV Bharat)

ಆಷಾಢ ಮಾಸದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವ ಇದಾಗಿದ್ದು, ನೂತನ ದಂಪತಿಗಳ ಜಾತ್ರೆ ಎಂದೇ ಇದು ಹೆಸರುವಾಸಿಯಾಗಿದೆ‌‌. ಹೊಸದಾಗಿ ಮದುವೆಯಾದ ಗಂಡ - ಹೆಂಡತಿ ಅಷಾಢ ಮಾಸದ ಜಾತ್ರೆಯಲ್ಲಿ ಒಂದಾಗಿ ಹಣ್ಣು ದವನ ಎಸೆಯುತ್ತಾರೆ. ಹೊಸದಾಗಿ ಮದುವೆಯಾದ ಯುವತಿ ಆಷಾಢ ಮಾಸದಲ್ಲಿ ತವರಿಗೆ ಹೋಗುವುದರಿಂದ ಈ ಜಾತ್ರೆ ನೆಪದಲ್ಲಿ ಸತಿಪತಿಗಳು ಒಂದಾಗಿ ಹಣ್ಣು ದವನ ಎಸೆಯುವುದು ಈ ಜಾತ್ರೆಯ ವಿಶೇಷತೆ.

ಮುಮ್ಮಡಿ ಕೃಷ್ಣರಾಜ ಒಡೆಯರ್ ಆಷಾಢ ಮಾಸದಲ್ಲಿ ಜನಿಸಿದ್ದರಿಂದ ಈ ರಥೋತ್ಸವವೂ ಆಷಾಢ ಮಾಸದಲ್ಲೇ ನಡೆಯಲಿದ್ದು, ರಾಜತ್ವ ಮತ್ತು ದೈವತ್ವ ಇರುವ ವಿಶೇಷ ದೇಗುಲ ಇದಾಗಿದೆ. ರಥೋತ್ಸವ ದಿನದಂದು ಹಣ್ಣು- ದವನ ಎಸೆದರೆ ಸಂತಾನ ಭಾಗ್ಯ, ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ.

ರಥೋತ್ಸವ ದೇವಸ್ಥಾನದ ಮುಂಭಾಗದಿಂದ ದಕ್ಷಿಣಾಭಿಮುಖವಾಗಿ ಚಲಿಸಿ ಎಸ್.ಬಿ.ಎಂ. ರಸ್ತೆಯಲ್ಲಿ ಸಾಗಿ ವೀರಭದ್ರೇಶ್ವರಸ್ವಾಮಿ ದೇವಾಲಯದ ವೃತ್ತದಿಂದ ಮಾರಮ್ಮ ದೇವಸ್ಥಾನದ ರಸ್ತೆಯ ಮೂಲಕ ಹಳೆ ತರಕಾರಿ ಮಾರುಕಟ್ಟೆ ರಸ್ತೆಯಲ್ಲಿ ಹಾದು ದೇವಸ್ಥಾನದ ಮೂಲಸ್ಥಾನ ತಲುಪಿತು.

ತಲೆ, ಕಿವಿಯಲ್ಲಿ ಅರಳಿದ ರಥ: ಚಾಮರಾಜನಗರದ ಗುರುರಾಜ್ ಮತ್ತು ಇವರ ಮಗ ತಲೆಯಲ್ಲಿ ಶ್ರೀ ಚಾಮರಾಜೇಶ್ವರನ ರಥದ ಪ್ರತಿಕೃತಿಯ ಕಿರೀಟ ಧರಿಸಿದ್ದರು. ಜೊತೆಗೆ, ಕಿವಿ ಓಲೆಯಲ್ಲೂ ರಥ ಇದ್ದದ್ದು ಜಾತ್ರೆಗೆ ಬಂದಿದ್ದವರ ಗಮನ ಸೆಳೆಯಿತು. ನವಜೋಡಿಗಳು, ಯುವಕರು ತಂದೆ - ಮಗನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಜಾತ್ರೆ ಸಡಗರವನ್ನು ಮತ್ತಷ್ಟು ಹೆಚ್ಚಿಸಿದರು.

ಮಳೆ ಭೀತಿ ನಡುವೆ ಸಹಸ್ರಾರು ಮಂದಿ ನವಜೋಡಿಗಳು ಚಾಮರಾಜೇಶ್ವರನಿಗೆ ನಮಿಸಿ, ಪ್ರಾರ್ಥನೆ ಸಲ್ಲಿಸಿದರು. ನಿತ್ಯ ಸುರಿಯುತ್ತಿದ್ದ ಮಳೆರಾಯ ರಥೋತ್ಸವ ಸಮಯದಂದು ಬಿಡುವು ಕೊಟ್ಟಿದ್ದು ಭಕ್ತರ ಉತ್ಸಾಹ ಮತ್ತಷ್ಟು ಹೆಚ್ಚಿಸಿತು.

ಇದನ್ನೂ ಓದಿ: ಕರ್ನಾಟಕದಲ್ಲೂ ಸಂಭ್ರಮದ ಶ್ರೀ ಜಗನ್ನಾಥ ಸ್ವಾಮಿ ರಥೋತ್ಸವ: ಎಲ್ಲಿ ಗೊತ್ತೇ? - Jagannatha Swamy Rathotsava

Last Updated : Jul 20, 2024, 10:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.