ETV Bharat / state

ನಾಲ್ಕು ಎಕರೆಯಲ್ಲಿ 40 ಕ್ವಿಂಟಾಲ್ ಬೆಳ್ಳುಳ್ಳಿ; ಬರದಲ್ಲೂ ಬಂಗಾರದ ಬೆಳೆ ಪಡೆದ ಹಾವೇರಿಯ ಸಾವಯವ ಕೃಷಿಕರು

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಲಿಂಗದಳ್ಳಿ ಗ್ರಾಮದ ಲಕ್ಷೆಟ್ಟಿ ಸಹೋದರರು ಬೆಳ್ಳುಳ್ಳಿ ಬೆಳೆದು ಅಧಿಕ ಇಳುವರಿ ಪಡೆದಿದ್ದಾರೆ.

author img

By ETV Bharat Karnataka Team

Published : Feb 29, 2024, 7:39 AM IST

ಹಾವೇರಿ
ಹಾವೇರಿ
ಬೆಳ್ಳುಳ್ಳಿ ಬೆಳೆ ಬಗ್ಗೆ ರೈತರಿಂದ ಮಾಹಿತಿ

ಹಾವೇರಿ : ಪ್ರಸ್ತುತ ವರ್ಷ ರಾಜ್ಯದ ಅನ್ನದಾತರು ಸಾಕಷ್ಟು ಸಂಕಷ್ಟ ಎದುರಿಸಿದ್ದಾರೆ. ಮಳೆರಾಯನ ಮುನಿಸಿನಿಂದ ಎರಡೆರಡು ಬಾರಿ ಬಿತ್ತನೆ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ. ಬಿತ್ತಿದ ಬೀಜ, ಹಾಕಿದ ಗೊಬ್ಬರ ಹಾಳಾಯಿತೇ ವಿನಃ ರೈತರಿಗೆ ಎಳ್ಳಷ್ಟು ಲಾಭವಾಗಲಿಲ್ಲ.

ಇನ್ನು ಮುಂಗಾರು ನೆಚ್ಚಿಕೊಂಡು ಹಾಕಿದ ಬೀಜಗಳು ಮಣ್ಣಿನಲ್ಲಿಯೇ ಕಮರಿಹೋದವು. ಒಂದು ಕಡೆ ಮಳೆ ಕೈಕೊಟ್ಟರೆ ಇನ್ನೊಂದು ಕಡೆ ಅಂತರ್ಜಲಮಟ್ಟ ಸಹ ಕೆಳಗೆ ಕುಸಿದಿದೆ. ಇದ್ದ ಅಂತರ್ಜಲಮಟ್ಟ ಬಳಸಿಕೊಳ್ಳಬೇಕು ಎಂದರೆ ವಿದ್ಯುತ್ ಕಣ್ಣಾಮುಚ್ಚಾಲೆ ರೈತರನ್ನ ಹೈರಾಣಾಗಿಸಿತು. ಮತ್ತೊಂದು ಕಡೆ ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದ ಕಾರಣ ರೈತರು ಸಾಕಷ್ಟು ತೊಂದರೆಗೆ ಸಿಲುಕಿದ್ದಾರೆ.

ಬರಗಾಲಕ್ಕೆ ಸಡ್ಡು ಹೊಡೆದ ಸಾವಯವ ಕೃಷಿಕರು : ಈ ಮಧ್ಯ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಲಿಂಗದಳ್ಳಿ ಗ್ರಾಮದ ಲಕ್ಷೆಟ್ಟಿ ಸಹೋದರರು ಈ ಎಲ್ಲ ಸಮಸ್ಯೆಗಳಿಗೆ ಸೆಡ್ಡು ಹೊಡೆದು ಬೆಳ್ಳುಳ್ಳಿ ಬೆಳೆ ಬೆಳೆದಿದ್ದಾರೆ. ನಾಲ್ಕು ಎಕರೆ ಜಮೀನಿನಲ್ಲಿ ಬೆಳ್ಳುಳ್ಳಿ ಬೆಳೆದು ಸುಮಾರು 40 ಕ್ವಿಂಟಾಲ್​ ಫಸಲು ಪಡೆದಿದ್ದಾರೆ. ಇವರ ಈ ಯಶೋಗಾಥೆಗೆ ಜೈವಿಕ ಗೊಬ್ಬರ ಹಾಗೂ ಅಂತರ್ಜಲಮಟ್ಟ ಕಾಪಾಡಿಕೊಂಡಿರುವುದು ಹಾಗೂ ಇಷ್ಟೆಲ್ಲ ಕಷ್ಟಪಟ್ಟು ಬೆಳೆದ ಬೆಳೆಗೆ ಈ ಬಾರಿ ಬಂಪರ್ ಬೆಲೆ ಬಂದಿರುವುದು ಕಾರಣವಾಗಿದೆ.

ಶ್ರಮಕ್ಕೆ ತಕ್ಕ ಪ್ರತಿಫಲ : ಬೆಳ್ಳುಳ್ಳಿ ಬೆಳೆಗೆ ಈ ವರ್ಷ ಕ್ವಿಂಟಾಲ್‌ಗೆ 25 ಸಾವಿರ ರೂಪಾಯಿವರೆಗೆ ಬೆಲೆ ಸಿಕ್ಕಿರುವುದು ಈ ರೈತರು ಪಟ್ಟ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಂತಾಗಿದೆ. ಗ್ರಾಮದ ಸಹೋದರರಾದ ಶರಣಪ್ಪ ಮತ್ತು ಕರೇಗೌಡ ಕಳೆದ ಹಲವು ವರ್ಷಗಳಿಂದ ಬೆಳ್ಳುಳ್ಳಿ ಬೆಳೆಯುತ್ತಿದ್ದಾರೆ. ಆದರೆ ಈ ವರ್ಷ ವಿಭಿನ್ನವಾದ ಸಮಸ್ಯೆ ಅವರಿಗೆ ಕಾಡಲಾರಂಭಿಸಿತ್ತು.

ಬೆಳ್ಳುಳ್ಳಿ ಬೆಲೆ ಒಂದು ಹಂತಕ್ಕೆ ಬಂದಾಗ ತೇವಾಂಶದ ಕೊರತೆ ಕಾಣಲಾರಂಭಿಸಿತು. ಮತ್ತೊಂದು ಕಡೆ ಕೊಳವೆಬಾವಿ ನೀರು ಸಹ ಕಡಿಮೆಯಾಗಲಾರಂಭಿಸಿತು. ಇದರಿಂದ ತೀವ್ರ ಆತಂಕಕ್ಕೀಡಾದ ಲಕ್ಷೆಟ್ಟಿ ಸಹೋದರರ ಕೈಹಿಡಿದಿದ್ದು ಸಾವಯವ ಕೃಷಿ. ಅವರು ಕಳೆದ ಹಲವು ವರ್ಷಗಳಿಂದ ಜಮೀನಿಗೆ ತಿಪ್ಪೆಗೊಬ್ಬರ, ಕೋಳಿಗೊಬ್ಬರ, ಜಮೀನಿನಲ್ಲಿ ಕುರಿ ನಿಲ್ಲಿಸುವುದು ಸೇರಿದಂತೆ ವಿವಿಧ ಸಾವಯವ ಗೊಬ್ಬರ ಬಳಕೆ ಮಾಡುತ್ತಿದ್ದಾರೆ.

ರಾಸಾಯನಿಕ ಗೊಬ್ಬರ ಬಳಸಿದ್ದರೆ ಜಮೀನಿನಲ್ಲಿರುವ ಪೈರು ಒಣಗಿಹೋಗುತ್ತಿತ್ತು. ಬಿಸಿಲು ತೇವಾಂಶಕ್ಕೆ
ಸಿಲುಕಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತಿತ್ತು. ಈ ಸಹೋದರರು ಸಾವಯವ ಪದ್ಧತಿಯಲ್ಲಿ ಬೆಳೆದ ಬೆಳ್ಳುಳ್ಳಿಯೇ ಬರುತ್ತೋ ಇಲ್ಲವೋ ಎಂದು ಆತಂಕಗೊಂಡಿದ್ದರು.

ಬಂಪರ್​ ಬೆಳೆ; ಈ ಮಧ್ಯೆ ಜಮೀನಿನ ತೇವಾಂಶ ಉಳಿಸಿಕೊಂಡಿದ್ದರಿಂದ ಸಾವಯವ ಗೊಬ್ಬರ ಉತ್ಪನ್ನಗಳು ಇವರ ಕೈಹಿಡಿದವು. ಪರಿಣಾಮ ಪ್ರತಿವರ್ಷ ಎಕರೆಗೆ 6 ಕ್ವಿಂಟಾಲ್ ಇಲ್ಲವೇ 7 ಕ್ವಿಂಟಾಲ್ ಇಳುವರಿ ಪಡೆಯುತ್ತಿದ್ದ ಈ ಸಹೋದರರು, ಪ್ರಸ್ತುತ ವರ್ಷ ಎಕರೆಗೆ 10 ಕ್ವಿಂಟಾಲ್ ಬೆಳ್ಳುಳ್ಳಿ ಬೆಳೆದಿದ್ದಾರೆ. ಒಂದು ಕಡೆ ಬಂಪರ್ ಫಸಲು ಬಂದರೆ, ಇನ್ನೊಂದು ಕಡೆ ಬಂಪರ್ ಬೆಲೆ ಸಹ ಇದೆ. ಅವರು ಬೆಳ್ಳುಳ್ಳಿ ಬೆಳೆಯಲು ಆರಂಭಿಸಿದಾಗಿನಿಂದ ಇಷ್ಟು ದರವನ್ನು ಅವರು ನೋಡಿರಲಿಲ್ಲ. ಅಷ್ಟು ಅಧಿಕ ದರ ಬೆಳ್ಳುಳ್ಳಿಗೆ ಸಿಕ್ಕಿದೆ.

''ಎಕರೆಗೆ ತಲಾ 30 ಸಾವಿರ ರೂಪಾಯಿ ಖರ್ಚು ಮಾಡಿದ್ದೇವೆ. ಎಕರೆಗೆ 10 ಕ್ವಿಂಟಾಲ್ ಬೆಳೆ ಬಂದಿದ್ದು, ಇದರಿಂದ ಕನಿಷ್ಠ ಒಂದೂವರೆ ಲಕ್ಷ ರೂಪಾಯಿ ಆದಾಯ ಸಿಕ್ಕಂತಾಗುತ್ತದೆ'' ಎನ್ನುತ್ತಾರೆ ರೈತ ಕರೇಗೌಡ.

''ಇದೀಗ ಬೆಳ್ಳುಳ್ಳಿ ಫಸಲು ಬಂದಿದ್ದು, ಅದನ್ನು ಕಿತ್ತು ಜಮೀನಿನಲ್ಲಿ 20 ದಿನ ಒಣಗಿಸಲಾಗುತ್ತದೆ. ನಂತರ ಸಂಸ್ಕರಿಸಿ ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗುತ್ತದೆ. ಅದರಲ್ಲಿ ಈ ರೈತರು ಬೆಳೆದ ಬೆಳ್ಳುಳ್ಳಿ ಜವಾರಿ ತಳಿಯಾಗಿದ್ದು, ಸಾಕಷ್ಟು ಬೇಡಿಕೆ ಹೊಂದಿದೆ'' ಎನ್ನುತ್ತಾರೆ ಸಾವಯವ ತಜ್ಞ ಗಂಗಯ್ಯ ಕುಲಕರ್ಣಿ.

ಈ ರೈತರ ಯಶೋಗಾಥೆ ಉಳಿದ ರೈತರ ಗಮನ ಸೆಳೆದಿದೆ. ಅಕ್ಕಪಕ್ಕದ ರೈತರು ಸಹ ತಾವು ಸಹ ಸಾವಯವ ಗೊಬ್ಬರ ಬಳಸಿ ಕೃಷಿ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೆಳ್ಳುಳ್ಳಿಗೆ ಬಂಗಾರದ ಬೆಲೆ: ಸಾಲ ಮಾಡಿ ಬೆಳೆ ಬೆಳೆದ ರೈತ ಮೂರೇ ತಿಂಗಳಲ್ಲಿ ಕೋಟ್ಯಧಿಪತಿ

ಬೆಳ್ಳುಳ್ಳಿ ಬೆಳೆ ಬಗ್ಗೆ ರೈತರಿಂದ ಮಾಹಿತಿ

ಹಾವೇರಿ : ಪ್ರಸ್ತುತ ವರ್ಷ ರಾಜ್ಯದ ಅನ್ನದಾತರು ಸಾಕಷ್ಟು ಸಂಕಷ್ಟ ಎದುರಿಸಿದ್ದಾರೆ. ಮಳೆರಾಯನ ಮುನಿಸಿನಿಂದ ಎರಡೆರಡು ಬಾರಿ ಬಿತ್ತನೆ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ. ಬಿತ್ತಿದ ಬೀಜ, ಹಾಕಿದ ಗೊಬ್ಬರ ಹಾಳಾಯಿತೇ ವಿನಃ ರೈತರಿಗೆ ಎಳ್ಳಷ್ಟು ಲಾಭವಾಗಲಿಲ್ಲ.

ಇನ್ನು ಮುಂಗಾರು ನೆಚ್ಚಿಕೊಂಡು ಹಾಕಿದ ಬೀಜಗಳು ಮಣ್ಣಿನಲ್ಲಿಯೇ ಕಮರಿಹೋದವು. ಒಂದು ಕಡೆ ಮಳೆ ಕೈಕೊಟ್ಟರೆ ಇನ್ನೊಂದು ಕಡೆ ಅಂತರ್ಜಲಮಟ್ಟ ಸಹ ಕೆಳಗೆ ಕುಸಿದಿದೆ. ಇದ್ದ ಅಂತರ್ಜಲಮಟ್ಟ ಬಳಸಿಕೊಳ್ಳಬೇಕು ಎಂದರೆ ವಿದ್ಯುತ್ ಕಣ್ಣಾಮುಚ್ಚಾಲೆ ರೈತರನ್ನ ಹೈರಾಣಾಗಿಸಿತು. ಮತ್ತೊಂದು ಕಡೆ ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದ ಕಾರಣ ರೈತರು ಸಾಕಷ್ಟು ತೊಂದರೆಗೆ ಸಿಲುಕಿದ್ದಾರೆ.

ಬರಗಾಲಕ್ಕೆ ಸಡ್ಡು ಹೊಡೆದ ಸಾವಯವ ಕೃಷಿಕರು : ಈ ಮಧ್ಯ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಲಿಂಗದಳ್ಳಿ ಗ್ರಾಮದ ಲಕ್ಷೆಟ್ಟಿ ಸಹೋದರರು ಈ ಎಲ್ಲ ಸಮಸ್ಯೆಗಳಿಗೆ ಸೆಡ್ಡು ಹೊಡೆದು ಬೆಳ್ಳುಳ್ಳಿ ಬೆಳೆ ಬೆಳೆದಿದ್ದಾರೆ. ನಾಲ್ಕು ಎಕರೆ ಜಮೀನಿನಲ್ಲಿ ಬೆಳ್ಳುಳ್ಳಿ ಬೆಳೆದು ಸುಮಾರು 40 ಕ್ವಿಂಟಾಲ್​ ಫಸಲು ಪಡೆದಿದ್ದಾರೆ. ಇವರ ಈ ಯಶೋಗಾಥೆಗೆ ಜೈವಿಕ ಗೊಬ್ಬರ ಹಾಗೂ ಅಂತರ್ಜಲಮಟ್ಟ ಕಾಪಾಡಿಕೊಂಡಿರುವುದು ಹಾಗೂ ಇಷ್ಟೆಲ್ಲ ಕಷ್ಟಪಟ್ಟು ಬೆಳೆದ ಬೆಳೆಗೆ ಈ ಬಾರಿ ಬಂಪರ್ ಬೆಲೆ ಬಂದಿರುವುದು ಕಾರಣವಾಗಿದೆ.

ಶ್ರಮಕ್ಕೆ ತಕ್ಕ ಪ್ರತಿಫಲ : ಬೆಳ್ಳುಳ್ಳಿ ಬೆಳೆಗೆ ಈ ವರ್ಷ ಕ್ವಿಂಟಾಲ್‌ಗೆ 25 ಸಾವಿರ ರೂಪಾಯಿವರೆಗೆ ಬೆಲೆ ಸಿಕ್ಕಿರುವುದು ಈ ರೈತರು ಪಟ್ಟ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಂತಾಗಿದೆ. ಗ್ರಾಮದ ಸಹೋದರರಾದ ಶರಣಪ್ಪ ಮತ್ತು ಕರೇಗೌಡ ಕಳೆದ ಹಲವು ವರ್ಷಗಳಿಂದ ಬೆಳ್ಳುಳ್ಳಿ ಬೆಳೆಯುತ್ತಿದ್ದಾರೆ. ಆದರೆ ಈ ವರ್ಷ ವಿಭಿನ್ನವಾದ ಸಮಸ್ಯೆ ಅವರಿಗೆ ಕಾಡಲಾರಂಭಿಸಿತ್ತು.

ಬೆಳ್ಳುಳ್ಳಿ ಬೆಲೆ ಒಂದು ಹಂತಕ್ಕೆ ಬಂದಾಗ ತೇವಾಂಶದ ಕೊರತೆ ಕಾಣಲಾರಂಭಿಸಿತು. ಮತ್ತೊಂದು ಕಡೆ ಕೊಳವೆಬಾವಿ ನೀರು ಸಹ ಕಡಿಮೆಯಾಗಲಾರಂಭಿಸಿತು. ಇದರಿಂದ ತೀವ್ರ ಆತಂಕಕ್ಕೀಡಾದ ಲಕ್ಷೆಟ್ಟಿ ಸಹೋದರರ ಕೈಹಿಡಿದಿದ್ದು ಸಾವಯವ ಕೃಷಿ. ಅವರು ಕಳೆದ ಹಲವು ವರ್ಷಗಳಿಂದ ಜಮೀನಿಗೆ ತಿಪ್ಪೆಗೊಬ್ಬರ, ಕೋಳಿಗೊಬ್ಬರ, ಜಮೀನಿನಲ್ಲಿ ಕುರಿ ನಿಲ್ಲಿಸುವುದು ಸೇರಿದಂತೆ ವಿವಿಧ ಸಾವಯವ ಗೊಬ್ಬರ ಬಳಕೆ ಮಾಡುತ್ತಿದ್ದಾರೆ.

ರಾಸಾಯನಿಕ ಗೊಬ್ಬರ ಬಳಸಿದ್ದರೆ ಜಮೀನಿನಲ್ಲಿರುವ ಪೈರು ಒಣಗಿಹೋಗುತ್ತಿತ್ತು. ಬಿಸಿಲು ತೇವಾಂಶಕ್ಕೆ
ಸಿಲುಕಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತಿತ್ತು. ಈ ಸಹೋದರರು ಸಾವಯವ ಪದ್ಧತಿಯಲ್ಲಿ ಬೆಳೆದ ಬೆಳ್ಳುಳ್ಳಿಯೇ ಬರುತ್ತೋ ಇಲ್ಲವೋ ಎಂದು ಆತಂಕಗೊಂಡಿದ್ದರು.

ಬಂಪರ್​ ಬೆಳೆ; ಈ ಮಧ್ಯೆ ಜಮೀನಿನ ತೇವಾಂಶ ಉಳಿಸಿಕೊಂಡಿದ್ದರಿಂದ ಸಾವಯವ ಗೊಬ್ಬರ ಉತ್ಪನ್ನಗಳು ಇವರ ಕೈಹಿಡಿದವು. ಪರಿಣಾಮ ಪ್ರತಿವರ್ಷ ಎಕರೆಗೆ 6 ಕ್ವಿಂಟಾಲ್ ಇಲ್ಲವೇ 7 ಕ್ವಿಂಟಾಲ್ ಇಳುವರಿ ಪಡೆಯುತ್ತಿದ್ದ ಈ ಸಹೋದರರು, ಪ್ರಸ್ತುತ ವರ್ಷ ಎಕರೆಗೆ 10 ಕ್ವಿಂಟಾಲ್ ಬೆಳ್ಳುಳ್ಳಿ ಬೆಳೆದಿದ್ದಾರೆ. ಒಂದು ಕಡೆ ಬಂಪರ್ ಫಸಲು ಬಂದರೆ, ಇನ್ನೊಂದು ಕಡೆ ಬಂಪರ್ ಬೆಲೆ ಸಹ ಇದೆ. ಅವರು ಬೆಳ್ಳುಳ್ಳಿ ಬೆಳೆಯಲು ಆರಂಭಿಸಿದಾಗಿನಿಂದ ಇಷ್ಟು ದರವನ್ನು ಅವರು ನೋಡಿರಲಿಲ್ಲ. ಅಷ್ಟು ಅಧಿಕ ದರ ಬೆಳ್ಳುಳ್ಳಿಗೆ ಸಿಕ್ಕಿದೆ.

''ಎಕರೆಗೆ ತಲಾ 30 ಸಾವಿರ ರೂಪಾಯಿ ಖರ್ಚು ಮಾಡಿದ್ದೇವೆ. ಎಕರೆಗೆ 10 ಕ್ವಿಂಟಾಲ್ ಬೆಳೆ ಬಂದಿದ್ದು, ಇದರಿಂದ ಕನಿಷ್ಠ ಒಂದೂವರೆ ಲಕ್ಷ ರೂಪಾಯಿ ಆದಾಯ ಸಿಕ್ಕಂತಾಗುತ್ತದೆ'' ಎನ್ನುತ್ತಾರೆ ರೈತ ಕರೇಗೌಡ.

''ಇದೀಗ ಬೆಳ್ಳುಳ್ಳಿ ಫಸಲು ಬಂದಿದ್ದು, ಅದನ್ನು ಕಿತ್ತು ಜಮೀನಿನಲ್ಲಿ 20 ದಿನ ಒಣಗಿಸಲಾಗುತ್ತದೆ. ನಂತರ ಸಂಸ್ಕರಿಸಿ ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗುತ್ತದೆ. ಅದರಲ್ಲಿ ಈ ರೈತರು ಬೆಳೆದ ಬೆಳ್ಳುಳ್ಳಿ ಜವಾರಿ ತಳಿಯಾಗಿದ್ದು, ಸಾಕಷ್ಟು ಬೇಡಿಕೆ ಹೊಂದಿದೆ'' ಎನ್ನುತ್ತಾರೆ ಸಾವಯವ ತಜ್ಞ ಗಂಗಯ್ಯ ಕುಲಕರ್ಣಿ.

ಈ ರೈತರ ಯಶೋಗಾಥೆ ಉಳಿದ ರೈತರ ಗಮನ ಸೆಳೆದಿದೆ. ಅಕ್ಕಪಕ್ಕದ ರೈತರು ಸಹ ತಾವು ಸಹ ಸಾವಯವ ಗೊಬ್ಬರ ಬಳಸಿ ಕೃಷಿ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೆಳ್ಳುಳ್ಳಿಗೆ ಬಂಗಾರದ ಬೆಲೆ: ಸಾಲ ಮಾಡಿ ಬೆಳೆ ಬೆಳೆದ ರೈತ ಮೂರೇ ತಿಂಗಳಲ್ಲಿ ಕೋಟ್ಯಧಿಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.