ETV Bharat / state

ಶಿವಮೊಗ್ಗ: ಕೌಟುಂಬಿಕ ಕಲಹ, ತಂದೆಯನ್ನೇ ಭೀಕರವಾಗಿ ಕೊಂದ ಅಪ್ರಾಪ್ತ ಮಗ - SON KILLS FATHER

author img

By ETV Bharat Karnataka Team

Published : Jun 22, 2024, 3:39 PM IST

ಅಪ್ಪ-ಅಮ್ಮನ ಜಗಳದಲ್ಲಿ ಮಗ ಕೊಲೆಗಾರನಾಗಿದ್ದಾನೆ. ತಾಯಿಯೊಂದಿಗೆ ಜಗಳವಾಡುತ್ತಿದ್ದ ಅಪ್ಪನನ್ನು ಸ್ವಂತ ಮಗನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಹೊಳೆಹೊನ್ನೂರು ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಂದೆಯನ್ನೇ ಭೀಕರವಾಗಿ ಹತ್ಯೆಗೈದ ಅಪ್ರಾಪ್ತ ಮಗ
ತಂದೆಯನ್ನೇ ಭೀಕರವಾಗಿ ಹತ್ಯೆಗೈದ ಅಪ್ರಾಪ್ತ ಮಗ (ETV Bharat)

ಶಿವಮೊಗ್ಗ: ಕೌಟುಂಬಿಕ ಕಲಹದಿಂದ ತಂದೆಯನ್ನೇ ಮಗ ಚಾಕುವಿನಿಂದ ಇರಿದು ಕೊಂದ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಗ್ರಾಮದಲ್ಲಿ ನಿನ್ನೆ( ಶುಕ್ರವಾರ) ತಡರಾತ್ರಿ ನಡೆದಿದೆ. ಅರಬಿಳಚಿ ಗ್ರಾಮದ ಶುಕ್ರರಾಜ್ (50) ಮಗನಿಂದ ಹತ್ಯೆಯಾದ ತಂದೆ. ಅರಬಿಳಚಿ ಗ್ರಾಮದ ನಿವಾಸಿಯಾಗಿದ ಶುಕ್ರರಾಜ್ ತನ್ನ ಪಕ್ಕದ ಗ್ರಾಮದ ಶಿಲ್ಪ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರಿಗೆ ಓರ್ವ ಮಗ ಇದ್ದಾನೆ. ಶುಕ್ರರಾಜ್ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಕಳೆದ ಎರಡು ವರ್ಷಗಳ ಹಿಂದೆ ಶಿಲ್ಪ ಗ್ರಾಮ ಪಂಚಾಯತಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಇದಕ್ಕೆ ಶುಕ್ರರಾಜ್ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಶಿಲ್ಪ ತನ್ನ ಮಗನ ಜೊತೆ ತವರು ಮನೆ ಸೇರಿಕೊಂಡಿದ್ದರು. ಇದರಿಂದ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ನಿನ್ನೆ ರಾತ್ರಿ ಸಹ ಇದೇ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದೆ. ಈ ವೇಳೆ ಶಿಲ್ಪ ತನ್ನ ಮಗನಿಗೆ ವಿಷಯ ತಿಳಿಸಿದ್ದಾರೆ.

ಇದರಿಂದ ಕೋಪಗೊಂಡ ಅಪ್ರಾಪ್ತ ಮಗ, ತಂದೆ ಶುಕ್ರರಾಜ್ ಮನೆಗೆ ಬಂದು ಜಗಳ ಮಾಡಿದ್ದಾನೆ. ನಂತರ ತಾನು ತಂದಿದ್ದ ಚಾಕುವಿನಿಂದ ನಾಲ್ಕೈದು ಬಾರಿ ಇರಿದಿದ್ದಾನೆ. ಇದರಿಂದ ಶುಕ್ರರಾಜ್ ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ವಿಷಯ ತಿಳಿದ ಹೊಳೆಹೊನ್ನೂರು ಪೊಲೀಸರು ಅಪ್ರಾಪ್ತ ಮಗನನ್ನು ತಮ್ಮ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: 3 ವರ್ಷದ ಮಗುವಿನ ಕತ್ತು ಕೊಯ್ದು ಕೊಂದ ಚಿಕ್ಕಪ್ಪ - Three Year Old Child Killed

ಶಿವಮೊಗ್ಗ: ಕೌಟುಂಬಿಕ ಕಲಹದಿಂದ ತಂದೆಯನ್ನೇ ಮಗ ಚಾಕುವಿನಿಂದ ಇರಿದು ಕೊಂದ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಗ್ರಾಮದಲ್ಲಿ ನಿನ್ನೆ( ಶುಕ್ರವಾರ) ತಡರಾತ್ರಿ ನಡೆದಿದೆ. ಅರಬಿಳಚಿ ಗ್ರಾಮದ ಶುಕ್ರರಾಜ್ (50) ಮಗನಿಂದ ಹತ್ಯೆಯಾದ ತಂದೆ. ಅರಬಿಳಚಿ ಗ್ರಾಮದ ನಿವಾಸಿಯಾಗಿದ ಶುಕ್ರರಾಜ್ ತನ್ನ ಪಕ್ಕದ ಗ್ರಾಮದ ಶಿಲ್ಪ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರಿಗೆ ಓರ್ವ ಮಗ ಇದ್ದಾನೆ. ಶುಕ್ರರಾಜ್ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಕಳೆದ ಎರಡು ವರ್ಷಗಳ ಹಿಂದೆ ಶಿಲ್ಪ ಗ್ರಾಮ ಪಂಚಾಯತಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಇದಕ್ಕೆ ಶುಕ್ರರಾಜ್ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಶಿಲ್ಪ ತನ್ನ ಮಗನ ಜೊತೆ ತವರು ಮನೆ ಸೇರಿಕೊಂಡಿದ್ದರು. ಇದರಿಂದ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ನಿನ್ನೆ ರಾತ್ರಿ ಸಹ ಇದೇ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದೆ. ಈ ವೇಳೆ ಶಿಲ್ಪ ತನ್ನ ಮಗನಿಗೆ ವಿಷಯ ತಿಳಿಸಿದ್ದಾರೆ.

ಇದರಿಂದ ಕೋಪಗೊಂಡ ಅಪ್ರಾಪ್ತ ಮಗ, ತಂದೆ ಶುಕ್ರರಾಜ್ ಮನೆಗೆ ಬಂದು ಜಗಳ ಮಾಡಿದ್ದಾನೆ. ನಂತರ ತಾನು ತಂದಿದ್ದ ಚಾಕುವಿನಿಂದ ನಾಲ್ಕೈದು ಬಾರಿ ಇರಿದಿದ್ದಾನೆ. ಇದರಿಂದ ಶುಕ್ರರಾಜ್ ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ವಿಷಯ ತಿಳಿದ ಹೊಳೆಹೊನ್ನೂರು ಪೊಲೀಸರು ಅಪ್ರಾಪ್ತ ಮಗನನ್ನು ತಮ್ಮ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: 3 ವರ್ಷದ ಮಗುವಿನ ಕತ್ತು ಕೊಯ್ದು ಕೊಂದ ಚಿಕ್ಕಪ್ಪ - Three Year Old Child Killed

ETV Bharat Logo

Copyright © 2024 Ushodaya Enterprises Pvt. Ltd., All Rights Reserved.