ETV Bharat / state

ತುಮಕೂರು: ಪಟಾಕಿ ಅಂಗಡಿಯಲ್ಲಿ ಬೆಂಕಿ ಅನಾಹುತ - Firecracker Shop Gutted

author img

By ETV Bharat Karnataka Team

Published : Sep 2, 2024, 12:53 PM IST

ಪಟಾಕಿ ತುಂಬಿದ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ಮೌಲ್ಯದ ಮಾಲು ಸುಟ್ಟು ಕರಕಲಾಗಿದೆ.

FIRE ACCIDENT
ಪಟಾಕಿ ಅಂಗಡಿಯಲ್ಲಿ ಬೆಂಕಿ ಅನಾಹುತ (ETV Bharat)
ಪಟಾಕಿ ಅಂಗಡಿಯಲ್ಲಿ ಬೆಂಕಿ ಅನಾಹುತ (ETV Bharat)

ತುಮಕೂರು: ಪಟಾಕಿ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಸಾಮಗ್ರಿ ಸುಟ್ಟು ಭಸ್ಮವಾಗಿರುವ ಘಟನೆ ನಗರದ ಹೃದಯ ಭಾಗ ಮಂಡಿ ಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಪಕ್ಕದ ಪ್ಲಾಸ್ಟಿಕ್ ಅಂಗಡಿ, ಗ್ರಂಥಿಗೆ ಅಂಗಡಿಯ ಗೋದಾಮಿಗೂ ಬೆಂಕಿ ವ್ಯಾಪಿಸಿತು.

ಮೆಟ್ರೋ ಮುಂಭಾಗದಲ್ಲಿರುವ ನೇತಾಜಿ ಸ್ಟೋರ್ ಗೋದಾಮಿನಲ್ಲಿ ಪಟಾಕಿ, ಗ್ರಂಥಿಗೆ, ಸ್ಟೇಷನರಿ ಪ್ಲಾಸ್ಟಿಕ್ ವಸ್ತುಗಳ ಮಳಿಗೆಗಳಿವೆ. ರಾಮಕೃಷ್ಣ ಎಂಬವರಿಗೆ ಸೇರಿದ ಮಳಿಗೆಗಳು ಇವಾಗಿವೆ.

ಅಕ್ರಮವಾಗಿ ಪಟಾಕಿ ಶೇಖರಿಸಿಟ್ಟಿದ್ದರಿಂದ ಅನಾಹುತ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ನಿರಂತರವಾಗಿ ಪಟಾಕಿಗಳು ಸ್ಫೋಟಗೊಂಡಿದ್ದು ಜನರಲ್ಲಿ ಕೆಲಕಾಲ ಆತಂಕ ಉಂಟುಮಾಡಿತ್ತು. ಗೋದಾಮಿಗೆ ಹೊಂದಿಕೊಂಡಂತೆ ಮನೆಗಳಿವೆ. ಸ್ಫೋಟದ ಸದ್ದಿಗೆ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದರು. ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು.

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಮಂಡಿಪೇಟೆ ರಸ್ತೆಯಲ್ಲಿ ಎರಡು ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದನದ ಕೊಟ್ಟಿಗೆಗೆ ಕಿಡಿಗೇಡಿಗಳಿಂದ ಬೆಂಕಿ: ಸುಟ್ಟು ಕರಕಲಾದ ಜೋಡೆತ್ತು - Mysuru Fire Accident

ಪಟಾಕಿ ಅಂಗಡಿಯಲ್ಲಿ ಬೆಂಕಿ ಅನಾಹುತ (ETV Bharat)

ತುಮಕೂರು: ಪಟಾಕಿ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಸಾಮಗ್ರಿ ಸುಟ್ಟು ಭಸ್ಮವಾಗಿರುವ ಘಟನೆ ನಗರದ ಹೃದಯ ಭಾಗ ಮಂಡಿ ಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಪಕ್ಕದ ಪ್ಲಾಸ್ಟಿಕ್ ಅಂಗಡಿ, ಗ್ರಂಥಿಗೆ ಅಂಗಡಿಯ ಗೋದಾಮಿಗೂ ಬೆಂಕಿ ವ್ಯಾಪಿಸಿತು.

ಮೆಟ್ರೋ ಮುಂಭಾಗದಲ್ಲಿರುವ ನೇತಾಜಿ ಸ್ಟೋರ್ ಗೋದಾಮಿನಲ್ಲಿ ಪಟಾಕಿ, ಗ್ರಂಥಿಗೆ, ಸ್ಟೇಷನರಿ ಪ್ಲಾಸ್ಟಿಕ್ ವಸ್ತುಗಳ ಮಳಿಗೆಗಳಿವೆ. ರಾಮಕೃಷ್ಣ ಎಂಬವರಿಗೆ ಸೇರಿದ ಮಳಿಗೆಗಳು ಇವಾಗಿವೆ.

ಅಕ್ರಮವಾಗಿ ಪಟಾಕಿ ಶೇಖರಿಸಿಟ್ಟಿದ್ದರಿಂದ ಅನಾಹುತ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ನಿರಂತರವಾಗಿ ಪಟಾಕಿಗಳು ಸ್ಫೋಟಗೊಂಡಿದ್ದು ಜನರಲ್ಲಿ ಕೆಲಕಾಲ ಆತಂಕ ಉಂಟುಮಾಡಿತ್ತು. ಗೋದಾಮಿಗೆ ಹೊಂದಿಕೊಂಡಂತೆ ಮನೆಗಳಿವೆ. ಸ್ಫೋಟದ ಸದ್ದಿಗೆ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದರು. ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು.

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಮಂಡಿಪೇಟೆ ರಸ್ತೆಯಲ್ಲಿ ಎರಡು ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದನದ ಕೊಟ್ಟಿಗೆಗೆ ಕಿಡಿಗೇಡಿಗಳಿಂದ ಬೆಂಕಿ: ಸುಟ್ಟು ಕರಕಲಾದ ಜೋಡೆತ್ತು - Mysuru Fire Accident

ETV Bharat Logo

Copyright © 2024 Ushodaya Enterprises Pvt. Ltd., All Rights Reserved.