ETV Bharat / state

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಜ್ಯಮಟ್ಟದ ಫುಟ್‌ಬಾಲ್‌ ಆಟಗಾರ ಸಾವು

author img

By ETV Bharat Karnataka Team

Published : Jan 21, 2024, 7:16 PM IST

Updated : Jan 21, 2024, 11:05 PM IST

ರಸ್ತೆ ಅಪಘಾತದಲ್ಲಿ ರಾಜ್ಯಮಟ್ಟದ ಫುಟ್​ಬಾಲ್ ಆಟಗಾರ ಮೊನೀಶ್ ಕೆ ಅವರು ಮೃತಪಟ್ಟಿದ್ದಾರೆ.

football player dies
ರಾಜ್ಯಮಟ್ಟದ ಫುಟ್‌ಬಾಲ್‌ ಆಟಗಾರ ಸಾವು

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಜ್ಯಮಟ್ಟದ ಯುವ ಫುಟ್‌ಬಾಲ್‌ ಆಟಗಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರಂ ಅಂಚಾರಿ ಠಾಣಾ ವ್ಯಾಪ್ತಿಯ ರಾಮಮೂರ್ತಿ ನಗರ ಮೇಲ್ಸೇತುವೆ ಬಳಿ ತಡರಾತ್ರಿ ನಡೆದಿದೆ. ಬಾಬುಸಪಾಳ್ಯ ನಿವಾಸಿ ಮೊನೀಶ್.ಕೆ (27) ಮೃತ ಯುವಕ. ತಡರಾತ್ರಿ 2 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿತ್ತು. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಮೊನೀಶ್​​ನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಪರಿಕ್ರಮ ಎಫ್.ಸಿ, ಡೆಕ್ಕನ್ ಎಫ್.ಸಿ, ಯಂಗ್ ಚಾಲೆಂಜರ್ಸ್ ಎಫ್.ಸಿ ಸೇರಿದಂತೆ ವಿವಿಧ ಕ್ಲಬ್‌ಗಳ ಪರ‌ ಕಣಕ್ಕಿಳಿದಿದ್ದ ಮೊನೀಶ್, ಆಲ್ ಇಂಡಿಯಾ ಫುಟ್‌ಬಾಲ್‌ ‌ಫೆಡರೇಶನ್ (ಎಐಎಫ್ಎಫ್) - ಡಿ ನಿಂದ 2019ರಲ್ಲಿ ಕೋಚಿಂಗ್ ಲೈಸೆನ್ಸ್ ಪಡೆದಿದ್ದರು. ಪ್ರಸ್ತುತ ಬೆಂಗಳೂರು ಡಿಸ್ಟ್ರಿಕ್ಟ್ ಫುಟ್‌ಬಾಲ್‌ ಅಸೋಸಿಯೇಷನ್ (ಬಿಡಿಎಫ್ಎ) - ಎ ಡಿವಿಷನ್ ಲೀಗ್ ಚಾಂಪಿಯನ್​ಶಿಪ್​​ನಲ್ಲಿ ಬೆಂಗಳೂರು ಈಗಲ್ಸ್ ಎಫ್.ಸಿ ಪರ ಆಡುತ್ತಿದ್ದರು.

  • ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ.
    ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ… pic.twitter.com/TgL33npzEH

    — CM of Karnataka (@CMofKarnataka) January 21, 2024 " class="align-text-top noRightClick twitterSection" data=" ">

ಮೊನೀಶ್ ಅಕಾಲಿಕ ನಿಧನದ ಕುರಿತು ಸಂತಾಪ ವ್ಯಕ್ತಪಡಿಸಿರುವ ಬೆಂಗಳೂರು ಜಿಲ್ಲಾ ಫುಟ್‌ಬಾಲ್ ಅಸೋಸಿಯೇಷನ್, ಮಂಗಳವಾರ ನಡೆಯಲಿರುವ ಬೆಂಗಳೂರು ಈಗಲ್ಸ್ ಎಫ್.ಸಿ ಹಾಗೂ ಬ್ಲಿಟ್ಸ್ ಎಫ್.ಸಿ ನಡುವಿನ ಪಂದ್ಯವನ್ನ ಮುಂದೂಡಿದೆ.

ಇದನ್ನೂ ಓದಿ: ಅಜ್ಜಿಯ ಶವ ಕೊಂಡೊಯ್ಯುವಾಗ ಕಾರಿನ ಟೈರ್ ಬ್ಲಾಸ್ಟ್; ಸ್ಥಳದಲ್ಲೇ ಮೂವರು ಸಾವು

ಸಿಎಂ ಸಿದ್ದರಾಮಯ್ಯ ಸಂತಾಪ: 'ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಜ್ಯಮಟ್ಟದ ಯುವ ಫುಟ್‌ಬಾಲ್‌ ಆಟಗಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರಂ ಅಂಚಾರಿ ಠಾಣಾ ವ್ಯಾಪ್ತಿಯ ರಾಮಮೂರ್ತಿ ನಗರ ಮೇಲ್ಸೇತುವೆ ಬಳಿ ತಡರಾತ್ರಿ ನಡೆದಿದೆ. ಬಾಬುಸಪಾಳ್ಯ ನಿವಾಸಿ ಮೊನೀಶ್.ಕೆ (27) ಮೃತ ಯುವಕ. ತಡರಾತ್ರಿ 2 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿತ್ತು. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಮೊನೀಶ್​​ನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಪರಿಕ್ರಮ ಎಫ್.ಸಿ, ಡೆಕ್ಕನ್ ಎಫ್.ಸಿ, ಯಂಗ್ ಚಾಲೆಂಜರ್ಸ್ ಎಫ್.ಸಿ ಸೇರಿದಂತೆ ವಿವಿಧ ಕ್ಲಬ್‌ಗಳ ಪರ‌ ಕಣಕ್ಕಿಳಿದಿದ್ದ ಮೊನೀಶ್, ಆಲ್ ಇಂಡಿಯಾ ಫುಟ್‌ಬಾಲ್‌ ‌ಫೆಡರೇಶನ್ (ಎಐಎಫ್ಎಫ್) - ಡಿ ನಿಂದ 2019ರಲ್ಲಿ ಕೋಚಿಂಗ್ ಲೈಸೆನ್ಸ್ ಪಡೆದಿದ್ದರು. ಪ್ರಸ್ತುತ ಬೆಂಗಳೂರು ಡಿಸ್ಟ್ರಿಕ್ಟ್ ಫುಟ್‌ಬಾಲ್‌ ಅಸೋಸಿಯೇಷನ್ (ಬಿಡಿಎಫ್ಎ) - ಎ ಡಿವಿಷನ್ ಲೀಗ್ ಚಾಂಪಿಯನ್​ಶಿಪ್​​ನಲ್ಲಿ ಬೆಂಗಳೂರು ಈಗಲ್ಸ್ ಎಫ್.ಸಿ ಪರ ಆಡುತ್ತಿದ್ದರು.

  • ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ.
    ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ… pic.twitter.com/TgL33npzEH

    — CM of Karnataka (@CMofKarnataka) January 21, 2024 " class="align-text-top noRightClick twitterSection" data=" ">

ಮೊನೀಶ್ ಅಕಾಲಿಕ ನಿಧನದ ಕುರಿತು ಸಂತಾಪ ವ್ಯಕ್ತಪಡಿಸಿರುವ ಬೆಂಗಳೂರು ಜಿಲ್ಲಾ ಫುಟ್‌ಬಾಲ್ ಅಸೋಸಿಯೇಷನ್, ಮಂಗಳವಾರ ನಡೆಯಲಿರುವ ಬೆಂಗಳೂರು ಈಗಲ್ಸ್ ಎಫ್.ಸಿ ಹಾಗೂ ಬ್ಲಿಟ್ಸ್ ಎಫ್.ಸಿ ನಡುವಿನ ಪಂದ್ಯವನ್ನ ಮುಂದೂಡಿದೆ.

ಇದನ್ನೂ ಓದಿ: ಅಜ್ಜಿಯ ಶವ ಕೊಂಡೊಯ್ಯುವಾಗ ಕಾರಿನ ಟೈರ್ ಬ್ಲಾಸ್ಟ್; ಸ್ಥಳದಲ್ಲೇ ಮೂವರು ಸಾವು

ಸಿಎಂ ಸಿದ್ದರಾಮಯ್ಯ ಸಂತಾಪ: 'ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

Last Updated : Jan 21, 2024, 11:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.