ETV Bharat / state

ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ಬದ್ಧ, 8 ಆನೆ ಕಾರ್ಯಪಡೆ ರಚನೆ: ಸಿಎಂ ಸಿದ್ದರಾಮಯ್ಯ - CM Siddaramaiah

author img

By ETV Bharat Karnataka Team

Published : Aug 12, 2024, 4:22 PM IST

ವಿಶ್ವ ಆನೆ ದಿನದ ಪ್ರಯುಕ್ತ ಅರಣ್ಯ ಇಲಾಖೆ ಇಂದು ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ದೇಶದಲ್ಲಿಯೇ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ. ಮಾನವಸ್ನೇಹಿ ಆನೆಗಳ ಸಂರಕ್ಷಣೆ ಹಾಗೂ ಅವುಗಳ ಆವಾಸಸ್ಥಾನಗಳ ರಕ್ಷಣೆ ನಮ್ಮೆಲ್ಲರ ಹೊಣೆ. ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ವಿಶ್ವ ಆನೆ ದಿನ ಪ್ರಯುಕ್ತ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನವ-ಆನೆ ಸಂಘರ್ಷ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ರೈತರ ಬೆಳೆಗಳನ್ನು ಆನೆಗಳು ನಾಶ ಮಾಡುತ್ತಿವೆ, ಹೀಗಾಗಿ ನಾಡಿಗೆ ಬರುತ್ತಿರುವ ಆನೆಗಳನ್ನು ತಡೆಯುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಉತ್ತಮವಾದ ಸಲಹೆಗಳು ಬರಲಿ ಎಂದರು.

ರಾಜ್ಯದಲ್ಲಿ 8 ಆನೆ ಕಾರ್ಯಪಡೆ ರಚನೆ: ಹೆಚ್ಚಾಗಿರುವ ಮಾನವ-ಆನೆ ಸಂಘರ್ಷವನ್ನು ತಡೆಯಲು ಸರ್ಕಾರ ಹೆಚ್ಚಿನ ಗಮನಕೊಟ್ಟಿದ್ದು, ರಾಜ್ಯದಲ್ಲಿ 8 ಆನೆ ಕಾರ್ಯಪಡೆಗಳನ್ನು ರಚಿಸಲಾಗಿದೆ. ಪ್ರತಿಯೊಂದು ಕಾರ್ಯಪಡೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ರಚಿಸಲಾಗಿದ್ದು, ಈ ಕಾರ್ಯಪಡೆ ಕಳೆದ ಒಂದು ವರ್ಷದಲ್ಲಿ 1,200ಕ್ಕೂ ಹೆಚ್ಚು ಸಂಘರ್ಷದ ಘಟನೆಗಳನ್ನು ತಡೆದು ಆನೆಗಳನ್ನು ಸುರಕ್ಷಿತವಾಗಿ ಅವುಗಳ ಆವಾಸ ಸ್ಥಾನಗಳಿಗೆ ಕಳುಹಿಸಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ (ETV Bharat)

ರಾಜ್ಯ ಸರ್ಕಾರ ಸ್ಥಾಪಿಸಿರುವ ಈ ಆನೆ ಕಾರ್ಯಪಡೆಗಳು ಸಾರ್ವಜನಿಕರು ಮತ್ತು ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಪ್ರತಿಕ್ರಿಯಿಸಿ ಆನೆಗಳ ಮುಖಾಮುಖಿಯಿಂದ ಜನರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ ಮಾನವ-ಆನೆ ಸಂಘರ್ಷಗಳನ್ನು ತಡೆಯಲು ಹೆಚ್ಚಿನ ಹಣಕಾಸು, ತಾಂತ್ರಿಕ ಆವಿಷ್ಕಾರಗಳು, ಸಮುದಾಯ ತೊಡಗಿಸಿಕೊಳ್ಳುವ ಪ್ರಯತ್ನಗಳು ನಡೆಸಿದೆ. ಸೌರ ಬೇಲಿಗಳನ್ನು ನಿರ್ಮಿಸಲು ಸಂಪನ್ಮೂಲಗಳು ಮತ್ತು ಸಬ್ಸಿಡಿಗಳನ್ನು ಒದಗಿಸಲು ರೈತರ ಸಬಲೀಕರಣಕ್ಕೂ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಸಹಾಯಧನ ಪ್ರಯತ್ನಗಳು 50 ಸಾವಿರ ಹೆಕ್ಟೇರ್‌ಗಿಂತಲೂ ಹೆಚ್ಚು ಕೃಷಿ ಭೂಮಿಯನ್ನು ರಕ್ಷಿಸಿವೆ. ಜೀವನೋಪಾಯವನ್ನು ರಕ್ಷಿಸಲು ಮತ್ತು ಮಾನವರು ಮತ್ತು ವನ್ಯ ಜೀವಿಗಳ ಸಹಬಾಳ್ವೆಯನ್ನು ಉತ್ತೇಜಿಸಲು ಇದು ಸಹಾಯ ಮಾಡಿದೆ. ಕರ್ನಾಟಕ ಅರಣ್ಯ ಸಾಮರಸ್ಯ ಯೋಜನೆಯಡಿ ಉದ್ದೇಶಿತ ಅರಣ್ಯ ಪ್ರದೇಶಗಳಲ್ಲಿ ಶೂನ್ಯ ಮಾನವ ಪ್ರಾಣಿ ಸಂಘರ್ಷ ಮೌಲ್ಯಗಳನ್ನು ಸ್ಥಾಪಿಸುವ ಗುರಿ ಹೊಂದಿದೆ. ಈ ಸಮಗ್ರ ಯೋಜನೆಯು ನೀರಿನ ಭದ್ರತೆ, ಆವಾಸ ಸ್ಥಾನಗಳ ಸುಧಾರಣೆ ಮತ್ತು ಸಕ್ರಿಯ ಸಮುದಾಯ ಭಾಗವಹಿಸುವಿಕೆಯ ತಂತ್ರಗಳನ್ನು ಒಳಗೊಂಡಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಮಾನವ-ಆನೆ ಸಂಘರ್ಷದ 2,500ಕ್ಕೂ ಹೆಚ್ಚು ಘಟನೆಗಳು ನಡೆದಿವೆ. 350ಕ್ಕೂ ಹೆಚ್ಚು ಮಾನವ ಸಾವುಗಳಾಗಿವೆ. ಗಣನೀಯ ಪ್ರಮಾಣದಲ್ಲಿ ಬೆಳೆ ನಷ್ಟವೂ ಆಗಿದೆ. ಇವೆಲ್ಲವನ್ನು ತಡೆಯಲು ಆನೆ ಕಾರ್ಯಪಡೆಯನ್ನು ರಚಿಸಿದ್ದೇವೆ. ಆನೆಗಳ ಜನಸಂಖ್ಯೆ ಮತ್ತು ಆವಾಸ ಸ್ಥಾನಗಳನ್ನು ರಕ್ಷಿಸುವತ್ತಲೂ ಗಮನ ನೀಡಿದ್ದೇವೆ ಎಂದು ವಿವರಿಸಿದರು.

ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ
ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ (ETV Bharat)

ರಾಜ್ಯದಲ್ಲಿ ಸಾವಿರಾರು ವರ್ಷಗಳಿಂದ ಜನರು ಆನೆಗಳೊಂದಿಗೆ ಸಹಬಾಳ್ವೆ ನಡೆಸುತ್ತಿದ್ದಾರೆ. ಆದರೆ ಇತ್ತೀಚೆಗೆ ನಗರೀಕರಣ ಹೆದ್ದಾರಿ, ಗಣಿಗಾರಿಕೆ ಕೈಗಾರಿಕಾ ಬೆಳವಣಿಗೆಗಳು ಮಾನವನ ವ್ಯಾಪ್ತಿಯನ್ನು ವಿಸ್ತರಿಸಿವೆ. ಹೀಗಾಗಿ ತಲೆದೋರಿರುವ ಮಾನವ-ಆನೆ ಸಂಘರ್ಷಗಳನ್ನು ತಡೆಯಲು ರೈಲ್ವೆ ಹಳಿಗಳನ್ನು ಬಳಸಿ ಬೇಲಿಗಳನ್ನು ಹಾಕಲಾಗುತ್ತಿದೆ. ಕಾಡಿನಂಚಿನಲ್ಲಿರುವ ಆದಿವಾಸಿಗಳು, ಬುಡಕಟ್ಟು ಜನರು ನಿಜವಾದ ಘರ್ಷಣೆಗಳ ಹೊರತಾಗಿಯೂ ಕಾಡುಪ್ರಾಣಿಗಳು ಮತ್ತು ಅರಣ್ಯದ ಸಂರಕ್ಷಣೆಯಲ್ಲಿ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಅರಣ್ಯ ಸಹಿಷ್ಣುತೆ ಕಾಡನ್ನು ಪ್ರಾಣಿಗಳನ್ನು ರಕ್ಷಿಸಿದ ಅವರು ವನ್ಯಜೀವಿಗಳ ನಿಜವಾದ ಸಂರಕ್ಷಣಾವಾದಿಗಳು ಎಂದು ಬಣ್ಣಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ತಾವು ಆನೆ–ಮಾನವ ಸಂಘರ್ಷ ಇರುವ ಪ್ರದೇಶದಿಂದ ಬಂದಿದ್ದು, ನಿತ್ಯ ಜನರ ಅಳಲು ಕೇಳುತ್ತೇನೆ. ಆನೆ ದಾಳಿಯಿಂದ ಒಂದೇ ಒಂದು ಸಾವೂ ಸಂಭವಿಸದ ರೀತಿಯಲ್ಲಿ ಕ್ರಮ ವಹಿಸುವ ಅಗತ್ಯವಿದೆ ಎಂದರು.

ಇದೇ ಸಂದರ್ಭದಲ್ಲಿ ಅರಣ್ಯ ಸಂರಕ್ಷಣೆ, ಆನೆಗಳ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡವರು ಮತ್ತು ಆನೆಗಳ ಆರೈಕೆ ಹಾಗೂ ಪರಿಸರ ಜಾಗೃತಿ ಮೂಡಿಸುವಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಇದಕ್ಕೂ ಮುನ್ನ ಸಿಎಂ ಮಳಿಗೆಗಳಿಗೂ ಚಾಲನೆ ನೀಡಿದರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಜಾರ್ಖಂಡ್ ಅರಣ್ಯ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮಾನವ-ಆನೆ ಸಂಘರ್ಷ ರಾಜ್ಯವೊಂದರ ಸಮಸ್ಯೆಯಲ್ಲ, ಜಾಗತಿಕ ಸಮಸ್ಯೆ: ಸಚಿವ ಈಶ್ವರ್ ಖಂಡ್ರೆ - Minister Ishwar Khandre

ಬೆಂಗಳೂರು: ದೇಶದಲ್ಲಿಯೇ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ. ಮಾನವಸ್ನೇಹಿ ಆನೆಗಳ ಸಂರಕ್ಷಣೆ ಹಾಗೂ ಅವುಗಳ ಆವಾಸಸ್ಥಾನಗಳ ರಕ್ಷಣೆ ನಮ್ಮೆಲ್ಲರ ಹೊಣೆ. ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ವಿಶ್ವ ಆನೆ ದಿನ ಪ್ರಯುಕ್ತ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನವ-ಆನೆ ಸಂಘರ್ಷ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ರೈತರ ಬೆಳೆಗಳನ್ನು ಆನೆಗಳು ನಾಶ ಮಾಡುತ್ತಿವೆ, ಹೀಗಾಗಿ ನಾಡಿಗೆ ಬರುತ್ತಿರುವ ಆನೆಗಳನ್ನು ತಡೆಯುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಉತ್ತಮವಾದ ಸಲಹೆಗಳು ಬರಲಿ ಎಂದರು.

ರಾಜ್ಯದಲ್ಲಿ 8 ಆನೆ ಕಾರ್ಯಪಡೆ ರಚನೆ: ಹೆಚ್ಚಾಗಿರುವ ಮಾನವ-ಆನೆ ಸಂಘರ್ಷವನ್ನು ತಡೆಯಲು ಸರ್ಕಾರ ಹೆಚ್ಚಿನ ಗಮನಕೊಟ್ಟಿದ್ದು, ರಾಜ್ಯದಲ್ಲಿ 8 ಆನೆ ಕಾರ್ಯಪಡೆಗಳನ್ನು ರಚಿಸಲಾಗಿದೆ. ಪ್ರತಿಯೊಂದು ಕಾರ್ಯಪಡೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ರಚಿಸಲಾಗಿದ್ದು, ಈ ಕಾರ್ಯಪಡೆ ಕಳೆದ ಒಂದು ವರ್ಷದಲ್ಲಿ 1,200ಕ್ಕೂ ಹೆಚ್ಚು ಸಂಘರ್ಷದ ಘಟನೆಗಳನ್ನು ತಡೆದು ಆನೆಗಳನ್ನು ಸುರಕ್ಷಿತವಾಗಿ ಅವುಗಳ ಆವಾಸ ಸ್ಥಾನಗಳಿಗೆ ಕಳುಹಿಸಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ (ETV Bharat)

ರಾಜ್ಯ ಸರ್ಕಾರ ಸ್ಥಾಪಿಸಿರುವ ಈ ಆನೆ ಕಾರ್ಯಪಡೆಗಳು ಸಾರ್ವಜನಿಕರು ಮತ್ತು ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಪ್ರತಿಕ್ರಿಯಿಸಿ ಆನೆಗಳ ಮುಖಾಮುಖಿಯಿಂದ ಜನರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ ಮಾನವ-ಆನೆ ಸಂಘರ್ಷಗಳನ್ನು ತಡೆಯಲು ಹೆಚ್ಚಿನ ಹಣಕಾಸು, ತಾಂತ್ರಿಕ ಆವಿಷ್ಕಾರಗಳು, ಸಮುದಾಯ ತೊಡಗಿಸಿಕೊಳ್ಳುವ ಪ್ರಯತ್ನಗಳು ನಡೆಸಿದೆ. ಸೌರ ಬೇಲಿಗಳನ್ನು ನಿರ್ಮಿಸಲು ಸಂಪನ್ಮೂಲಗಳು ಮತ್ತು ಸಬ್ಸಿಡಿಗಳನ್ನು ಒದಗಿಸಲು ರೈತರ ಸಬಲೀಕರಣಕ್ಕೂ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಸಹಾಯಧನ ಪ್ರಯತ್ನಗಳು 50 ಸಾವಿರ ಹೆಕ್ಟೇರ್‌ಗಿಂತಲೂ ಹೆಚ್ಚು ಕೃಷಿ ಭೂಮಿಯನ್ನು ರಕ್ಷಿಸಿವೆ. ಜೀವನೋಪಾಯವನ್ನು ರಕ್ಷಿಸಲು ಮತ್ತು ಮಾನವರು ಮತ್ತು ವನ್ಯ ಜೀವಿಗಳ ಸಹಬಾಳ್ವೆಯನ್ನು ಉತ್ತೇಜಿಸಲು ಇದು ಸಹಾಯ ಮಾಡಿದೆ. ಕರ್ನಾಟಕ ಅರಣ್ಯ ಸಾಮರಸ್ಯ ಯೋಜನೆಯಡಿ ಉದ್ದೇಶಿತ ಅರಣ್ಯ ಪ್ರದೇಶಗಳಲ್ಲಿ ಶೂನ್ಯ ಮಾನವ ಪ್ರಾಣಿ ಸಂಘರ್ಷ ಮೌಲ್ಯಗಳನ್ನು ಸ್ಥಾಪಿಸುವ ಗುರಿ ಹೊಂದಿದೆ. ಈ ಸಮಗ್ರ ಯೋಜನೆಯು ನೀರಿನ ಭದ್ರತೆ, ಆವಾಸ ಸ್ಥಾನಗಳ ಸುಧಾರಣೆ ಮತ್ತು ಸಕ್ರಿಯ ಸಮುದಾಯ ಭಾಗವಹಿಸುವಿಕೆಯ ತಂತ್ರಗಳನ್ನು ಒಳಗೊಂಡಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಮಾನವ-ಆನೆ ಸಂಘರ್ಷದ 2,500ಕ್ಕೂ ಹೆಚ್ಚು ಘಟನೆಗಳು ನಡೆದಿವೆ. 350ಕ್ಕೂ ಹೆಚ್ಚು ಮಾನವ ಸಾವುಗಳಾಗಿವೆ. ಗಣನೀಯ ಪ್ರಮಾಣದಲ್ಲಿ ಬೆಳೆ ನಷ್ಟವೂ ಆಗಿದೆ. ಇವೆಲ್ಲವನ್ನು ತಡೆಯಲು ಆನೆ ಕಾರ್ಯಪಡೆಯನ್ನು ರಚಿಸಿದ್ದೇವೆ. ಆನೆಗಳ ಜನಸಂಖ್ಯೆ ಮತ್ತು ಆವಾಸ ಸ್ಥಾನಗಳನ್ನು ರಕ್ಷಿಸುವತ್ತಲೂ ಗಮನ ನೀಡಿದ್ದೇವೆ ಎಂದು ವಿವರಿಸಿದರು.

ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ
ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ (ETV Bharat)

ರಾಜ್ಯದಲ್ಲಿ ಸಾವಿರಾರು ವರ್ಷಗಳಿಂದ ಜನರು ಆನೆಗಳೊಂದಿಗೆ ಸಹಬಾಳ್ವೆ ನಡೆಸುತ್ತಿದ್ದಾರೆ. ಆದರೆ ಇತ್ತೀಚೆಗೆ ನಗರೀಕರಣ ಹೆದ್ದಾರಿ, ಗಣಿಗಾರಿಕೆ ಕೈಗಾರಿಕಾ ಬೆಳವಣಿಗೆಗಳು ಮಾನವನ ವ್ಯಾಪ್ತಿಯನ್ನು ವಿಸ್ತರಿಸಿವೆ. ಹೀಗಾಗಿ ತಲೆದೋರಿರುವ ಮಾನವ-ಆನೆ ಸಂಘರ್ಷಗಳನ್ನು ತಡೆಯಲು ರೈಲ್ವೆ ಹಳಿಗಳನ್ನು ಬಳಸಿ ಬೇಲಿಗಳನ್ನು ಹಾಕಲಾಗುತ್ತಿದೆ. ಕಾಡಿನಂಚಿನಲ್ಲಿರುವ ಆದಿವಾಸಿಗಳು, ಬುಡಕಟ್ಟು ಜನರು ನಿಜವಾದ ಘರ್ಷಣೆಗಳ ಹೊರತಾಗಿಯೂ ಕಾಡುಪ್ರಾಣಿಗಳು ಮತ್ತು ಅರಣ್ಯದ ಸಂರಕ್ಷಣೆಯಲ್ಲಿ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಅರಣ್ಯ ಸಹಿಷ್ಣುತೆ ಕಾಡನ್ನು ಪ್ರಾಣಿಗಳನ್ನು ರಕ್ಷಿಸಿದ ಅವರು ವನ್ಯಜೀವಿಗಳ ನಿಜವಾದ ಸಂರಕ್ಷಣಾವಾದಿಗಳು ಎಂದು ಬಣ್ಣಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ತಾವು ಆನೆ–ಮಾನವ ಸಂಘರ್ಷ ಇರುವ ಪ್ರದೇಶದಿಂದ ಬಂದಿದ್ದು, ನಿತ್ಯ ಜನರ ಅಳಲು ಕೇಳುತ್ತೇನೆ. ಆನೆ ದಾಳಿಯಿಂದ ಒಂದೇ ಒಂದು ಸಾವೂ ಸಂಭವಿಸದ ರೀತಿಯಲ್ಲಿ ಕ್ರಮ ವಹಿಸುವ ಅಗತ್ಯವಿದೆ ಎಂದರು.

ಇದೇ ಸಂದರ್ಭದಲ್ಲಿ ಅರಣ್ಯ ಸಂರಕ್ಷಣೆ, ಆನೆಗಳ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡವರು ಮತ್ತು ಆನೆಗಳ ಆರೈಕೆ ಹಾಗೂ ಪರಿಸರ ಜಾಗೃತಿ ಮೂಡಿಸುವಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಇದಕ್ಕೂ ಮುನ್ನ ಸಿಎಂ ಮಳಿಗೆಗಳಿಗೂ ಚಾಲನೆ ನೀಡಿದರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಜಾರ್ಖಂಡ್ ಅರಣ್ಯ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮಾನವ-ಆನೆ ಸಂಘರ್ಷ ರಾಜ್ಯವೊಂದರ ಸಮಸ್ಯೆಯಲ್ಲ, ಜಾಗತಿಕ ಸಮಸ್ಯೆ: ಸಚಿವ ಈಶ್ವರ್ ಖಂಡ್ರೆ - Minister Ishwar Khandre

ETV Bharat Logo

Copyright © 2024 Ushodaya Enterprises Pvt. Ltd., All Rights Reserved.