ETV Bharat / state

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಗ್ಯಾರಂಟಿ ಸಮೀಕ್ಷೆ: ಸರ್ಕಾರದ ವಿರುದ್ಧ ಹೆಚ್​ಡಿಕೆ ಕಿಡಿ - bengaluru

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ರಾಜ್ಯ ಸರ್ಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

former-c-m-hd-kumaraswamy-reaction-on-guarantee-survey
ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಗ್ಯಾರಂಟಿ ಸಮೀಕ್ಷೆ: ಮಾಜಿ ಸಿಎಂ ಹೆಚ್​ಡಿಕೆ ಕಿಡಿ
author img

By ETV Bharat Karnataka Team

Published : Mar 5, 2024, 6:37 PM IST

ಬೆಂಗಳೂರು: ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಖರಿಯನ್ನು ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, "ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ರಾಜ್ಯ ಸರ್ಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ 'ಗ್ಯಾರಂಟಿ ಸ್ವಯಂ ಸೇವಕರು' ಅಂತ ಹೆಸರು. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕು ಬೇಕಾದ ಸಂಸ್ಥೆಗಳಿಗೆ ಕೋಟಿ ಕೋಟಿ ಲೆಕ್ಕದಲ್ಲಿ ಸುರಿದ ಜನರ ತೆರಿಗೆ ಹಣ ಎಲ್ಲಿಗೆ ಹೋಯಿತು?" ಎಂದು ಪ್ರಶ್ನಿಸಿದ್ದಾರೆ.

"ಹೆಚ್ ಎಂ ರೇವಣ್ಣ ಅವರಿಗೆ ಸಂಪುಟದರ್ಜೆ ಕೊಟ್ಟು ರಚಿಸಲಾಗಿರುವ 'ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಏನು ಕಿಸಿಯುತ್ತಿದೆ?. ಜಿಲ್ಲೆ, ತಾಲೂಕು, ವಿಧಾನಸಭೆ ಕ್ಷೇತ್ರಗಳ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ಸಮೀಕ್ಷೆ ಮಾಡುತ್ತಿಲ್ಲವೇ? ಗ್ಯಾರಂಟಿ ಅನುಷ್ಠಾನ ನಿರ್ವಹಣೆಗೆ ವಾರ್ಷಿಕ ₹16 ಕೋಟಿ ವೆಚ್ಚಿಸುತ್ತೇವೆ ಎಂದಿದ್ದಾರೆ ಸಿಎಂ. ಹಾಗಾದರೆ, ಇದಕ್ಕೆ ಹೋಗುತ್ತಿರುವ
ವೇತನ, ಭತ್ಯೆಗಳೆಲ್ಲ ವ್ಯರ್ಥವೇ?. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪೋಲಿಯೊ ಲಸಿಕೆ ಹಾಕುವುದರ ಜತೆಗೆ ಈ ಸುಡುಬಿಸಿಲಿನಲ್ಲಿ ಹಳ್ಳಿಗಳಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ಮಾಡುತ್ತಿದ್ದಾರೆ. ಅದೂ ಒತ್ತಾಯಪೂರ್ವಕವಾಗಿ. ಹಾಗಾದರೆ, ಅವರೂ ಈ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತಾರೆಯೆ?" ಎಂದು ಪ್ರಶ್ನೆ ಮಾಡಿದ್ದಾರೆ.

"ಒಬ್ಬ ಕಾರ್ಯಕರ್ತೆಗೆ 120 ರಿಂದ 150 ಮನೆ ಹಂಚಿಕೆ ಮಾಡಿದ್ದು, 10 ರಿಂದ 15 ದಿನದಲ್ಲಿ ಸಮೀಕ್ಷೆ ಮುಗಿಸಬೇಕಿದೆ. ಬೆಳಗ್ಗೆ 9 ರಿಂದ ಸಂಜೆ 4 ರವರೆಗೂ ಉರಿಬಿಸಿಲಿನಲ್ಲಿ ಮಾಡುವ ಈ ಕೆಲಸಕ್ಕೆ ಅವರಿಗೆ ಸಿಗುವ ಗೌರವಧನ ಕೇವಲ 1 ಸಾವಿರ ಅದೇ 'ಎಸಿ ರೂಂ ಸಮೀಕ್ಷೆ ಗಿರಾಕಿ'ಗಳಿಗೆ ಕೋಟಿ ಕೋಟಿ ಹಣ ಹೋಗುತ್ತಿದೆ" ಎಂದು ಅವರು ಕಿಡಿಕಾರಿದ್ದಾರೆ.

'ಪಟ್ಟು-ಮಟ್ಟು-ಒಳಗುಟ್ಟು' ಕಂಪನಿ ಸೇರಿ ನಿಗೂಢ ಕಂಪನಿಗಳಿಗೆ ಹಣ: "ಜನರ ತೆರಿಗೆ ಹಣದಿಂದಲೇ ಗ್ಯಾರಂಟಿ ಸಮಾವೇಶಗಳನ್ನು (ಇವು ಚುನಾವಣಾ ಪ್ರಚಾರ ಸಭೆಗಳು) ಸಾಲು ಸಾಲಾಗಿ ನಡೆಸುತ್ತಿರುವ ಸರ್ಕಾರಕ್ಕೆ ಸಮೀಕ್ಷೆಗಳ ಮೂಲಕವೂ ದುಡ್ಡು ಹೊಡೆಯುವ ಹಪಾಹಪಿ! 'ಪಟ್ಟು-ಮಟ್ಟು-ಒಳಗುಟ್ಟು' ಕಂಪನಿ ಸೇರಿ ಅಂತಹ ಹಲವಾರು ನಿಗೂಢ ಕಂಪನಿಗಳಿಗೆ ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿಯೇ ಕೋಟಿ ಕೋಟಿಯಷ್ಟು ಜನರ ತೆರಿಗೆ ಹಣ ಸುರಿಯುತ್ತಿದೆ ಸರ್ಕಾರ" ಎಂದು ವಾಗ್ದಾಳಿ ನಡೆಸಿದ್ದಾರೆ.

ಬವಣೆ ಒಬ್ಬರದು, ಭರ್ಜರಿ ಲಾಭ ಇನ್ನೊಬ್ಬರದು: "ಗ್ಯಾರಂಟಿ ಸಮಾವೇಶಗಳಿಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರೇ ಬರಬೇಕು, ಪಲ್ಸ್ ಪೋಲಿಯೊ ಲಸಿಕೆಯನ್ನೂ ಇವರೇ ಹಾಕಬೇಕು, ಗ್ಯಾರಂಟಿ ಸಮೀಕ್ಷೆಯನ್ನೂ ನಡೆಸಬೇಕು ಹಾಗೂ ತಮ್ಮ ನಿತ್ಯದ ನಿಗದಿತ ಕರ್ತವ್ಯವನ್ನೂ ನಿಭಾಯಿಸಬೇಕು. ಹಾಗಾದರೆ, ಸರ್ಕಾರ ತೆರಿಗೆ ಹಣ ಸುರಿದು ಮಾಡಿಸುತ್ತಿರುವ 'ಎಸಿ ರೂಂ ಸಮೀಕ್ಷೆ'ಗಳ ಕಥೆ ಏನು? ಸಮೀಕ್ಷೆ ಕಷ್ಟ ಈ ಹೆಣ್ಣುಮಕ್ಕಳದು, ಜನರ ತೆರಿಗೆ ಹಣ 'ಎಸಿ ರೂಂ ಗಿರಾಕಿ'ಗಳದು! ಬವಣೆ ಒಬ್ಬರದು, ಭರ್ಜರಿ ಲಾಭ ಇನ್ನೊಬ್ಬರದು" ಎಂದು ಅವರು ಆರೋಪ ಮಾಡಿದ್ದಾರೆ.

"ಅಂಗನವಾಡಿಗೆ ಬರುವ ಮಕ್ಕಳ ಲಾಲನೆ– ಪಾಲನೆ, ಗರ್ಭಿಣಿಯರು- ಬಾಣಂತಿಯರಿಗೆ ಊಟ, ಪ್ರತಿ ತಿಂಗಳ ಮೊದಲ ಮತ್ತು 3ನೇ ಶುಕ್ರವಾರ ಪೋಷಣ್‌ ಅಭಿಯಾನ, 3ನೇ ಶನಿವಾರ ಬಾಲವಿಕಾಸ ಸಮಿತಿ ಸಭೆಗೆ ಹಾಜರಾಗಿ, ಜತೆಗೆ ಇಲಾಖೆ ನಿಯೋಜಿಸುವ ಕೆಲಸಗಳನ್ನೂ ನಿರ್ವಹಿಸಬೇಕು. ಮಾರ್ಚ್ 3ರಿಂದ ಗ್ಯಾರಂಟಿ ಸಮೀಕ್ಷೆ ಬೇರೆ ಮಾಡಿಸುತ್ತಿದ್ದಾರೆ. ಹಾಗಾದರೆ, ಸಿದ್ದರಾಮಯ್ಯ ಅವರ ಸರ್ಕಾರ ಮಾಡಿಕೊಂಡಿರುವ ಇಡೀ ಗ್ಯಾರಂಟಿ ಸೆಟಪ್ ಏನು ಮಾಡುತ್ತಿದೆ?. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಣ್ಣಬಣ್ಣದ ಜಾಹೀರಾತು ನೀಡುವುದಕ್ಕೆ ಮಾತ್ರ ಸೀಮಿತವಾಗಿದೆಯೇ?. ಜನರ ತೆರಿಗೆ ದುಡ್ಡು, ಯಲ್ಲಮನ ಜಾತ್ರೆ ಎನ್ನುವಂತಾಗಿದೆ. ಬರ, ಕುಡಿಯುವ ನೀರಿನ ಹಾಹಾಕಾರದ ನಡುವೆಯೂ ಇವರ ಗ್ಯಾರಂಟಿ ರಾಜಕೀಯಕ್ಕೆ ಬರವಿಲ್ಲ, ಪ್ರಚಾರಕ್ಕೂ ಬರವಿಲ್ಲ" ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಸಮರ್ಥ ನಾಯಕ ಅಲ್ಲ ಎಂದು ಹೇಳಲು ಸಿದ್ದರಾಮಯ್ಯ ಯಾರು?: ಹೆಚ್.​ಡಿ ದೇವೇಗೌಡ

ಬೆಂಗಳೂರು: ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಖರಿಯನ್ನು ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, "ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ರಾಜ್ಯ ಸರ್ಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ 'ಗ್ಯಾರಂಟಿ ಸ್ವಯಂ ಸೇವಕರು' ಅಂತ ಹೆಸರು. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕು ಬೇಕಾದ ಸಂಸ್ಥೆಗಳಿಗೆ ಕೋಟಿ ಕೋಟಿ ಲೆಕ್ಕದಲ್ಲಿ ಸುರಿದ ಜನರ ತೆರಿಗೆ ಹಣ ಎಲ್ಲಿಗೆ ಹೋಯಿತು?" ಎಂದು ಪ್ರಶ್ನಿಸಿದ್ದಾರೆ.

"ಹೆಚ್ ಎಂ ರೇವಣ್ಣ ಅವರಿಗೆ ಸಂಪುಟದರ್ಜೆ ಕೊಟ್ಟು ರಚಿಸಲಾಗಿರುವ 'ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಏನು ಕಿಸಿಯುತ್ತಿದೆ?. ಜಿಲ್ಲೆ, ತಾಲೂಕು, ವಿಧಾನಸಭೆ ಕ್ಷೇತ್ರಗಳ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ಸಮೀಕ್ಷೆ ಮಾಡುತ್ತಿಲ್ಲವೇ? ಗ್ಯಾರಂಟಿ ಅನುಷ್ಠಾನ ನಿರ್ವಹಣೆಗೆ ವಾರ್ಷಿಕ ₹16 ಕೋಟಿ ವೆಚ್ಚಿಸುತ್ತೇವೆ ಎಂದಿದ್ದಾರೆ ಸಿಎಂ. ಹಾಗಾದರೆ, ಇದಕ್ಕೆ ಹೋಗುತ್ತಿರುವ
ವೇತನ, ಭತ್ಯೆಗಳೆಲ್ಲ ವ್ಯರ್ಥವೇ?. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪೋಲಿಯೊ ಲಸಿಕೆ ಹಾಕುವುದರ ಜತೆಗೆ ಈ ಸುಡುಬಿಸಿಲಿನಲ್ಲಿ ಹಳ್ಳಿಗಳಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ಮಾಡುತ್ತಿದ್ದಾರೆ. ಅದೂ ಒತ್ತಾಯಪೂರ್ವಕವಾಗಿ. ಹಾಗಾದರೆ, ಅವರೂ ಈ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತಾರೆಯೆ?" ಎಂದು ಪ್ರಶ್ನೆ ಮಾಡಿದ್ದಾರೆ.

"ಒಬ್ಬ ಕಾರ್ಯಕರ್ತೆಗೆ 120 ರಿಂದ 150 ಮನೆ ಹಂಚಿಕೆ ಮಾಡಿದ್ದು, 10 ರಿಂದ 15 ದಿನದಲ್ಲಿ ಸಮೀಕ್ಷೆ ಮುಗಿಸಬೇಕಿದೆ. ಬೆಳಗ್ಗೆ 9 ರಿಂದ ಸಂಜೆ 4 ರವರೆಗೂ ಉರಿಬಿಸಿಲಿನಲ್ಲಿ ಮಾಡುವ ಈ ಕೆಲಸಕ್ಕೆ ಅವರಿಗೆ ಸಿಗುವ ಗೌರವಧನ ಕೇವಲ 1 ಸಾವಿರ ಅದೇ 'ಎಸಿ ರೂಂ ಸಮೀಕ್ಷೆ ಗಿರಾಕಿ'ಗಳಿಗೆ ಕೋಟಿ ಕೋಟಿ ಹಣ ಹೋಗುತ್ತಿದೆ" ಎಂದು ಅವರು ಕಿಡಿಕಾರಿದ್ದಾರೆ.

'ಪಟ್ಟು-ಮಟ್ಟು-ಒಳಗುಟ್ಟು' ಕಂಪನಿ ಸೇರಿ ನಿಗೂಢ ಕಂಪನಿಗಳಿಗೆ ಹಣ: "ಜನರ ತೆರಿಗೆ ಹಣದಿಂದಲೇ ಗ್ಯಾರಂಟಿ ಸಮಾವೇಶಗಳನ್ನು (ಇವು ಚುನಾವಣಾ ಪ್ರಚಾರ ಸಭೆಗಳು) ಸಾಲು ಸಾಲಾಗಿ ನಡೆಸುತ್ತಿರುವ ಸರ್ಕಾರಕ್ಕೆ ಸಮೀಕ್ಷೆಗಳ ಮೂಲಕವೂ ದುಡ್ಡು ಹೊಡೆಯುವ ಹಪಾಹಪಿ! 'ಪಟ್ಟು-ಮಟ್ಟು-ಒಳಗುಟ್ಟು' ಕಂಪನಿ ಸೇರಿ ಅಂತಹ ಹಲವಾರು ನಿಗೂಢ ಕಂಪನಿಗಳಿಗೆ ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿಯೇ ಕೋಟಿ ಕೋಟಿಯಷ್ಟು ಜನರ ತೆರಿಗೆ ಹಣ ಸುರಿಯುತ್ತಿದೆ ಸರ್ಕಾರ" ಎಂದು ವಾಗ್ದಾಳಿ ನಡೆಸಿದ್ದಾರೆ.

ಬವಣೆ ಒಬ್ಬರದು, ಭರ್ಜರಿ ಲಾಭ ಇನ್ನೊಬ್ಬರದು: "ಗ್ಯಾರಂಟಿ ಸಮಾವೇಶಗಳಿಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರೇ ಬರಬೇಕು, ಪಲ್ಸ್ ಪೋಲಿಯೊ ಲಸಿಕೆಯನ್ನೂ ಇವರೇ ಹಾಕಬೇಕು, ಗ್ಯಾರಂಟಿ ಸಮೀಕ್ಷೆಯನ್ನೂ ನಡೆಸಬೇಕು ಹಾಗೂ ತಮ್ಮ ನಿತ್ಯದ ನಿಗದಿತ ಕರ್ತವ್ಯವನ್ನೂ ನಿಭಾಯಿಸಬೇಕು. ಹಾಗಾದರೆ, ಸರ್ಕಾರ ತೆರಿಗೆ ಹಣ ಸುರಿದು ಮಾಡಿಸುತ್ತಿರುವ 'ಎಸಿ ರೂಂ ಸಮೀಕ್ಷೆ'ಗಳ ಕಥೆ ಏನು? ಸಮೀಕ್ಷೆ ಕಷ್ಟ ಈ ಹೆಣ್ಣುಮಕ್ಕಳದು, ಜನರ ತೆರಿಗೆ ಹಣ 'ಎಸಿ ರೂಂ ಗಿರಾಕಿ'ಗಳದು! ಬವಣೆ ಒಬ್ಬರದು, ಭರ್ಜರಿ ಲಾಭ ಇನ್ನೊಬ್ಬರದು" ಎಂದು ಅವರು ಆರೋಪ ಮಾಡಿದ್ದಾರೆ.

"ಅಂಗನವಾಡಿಗೆ ಬರುವ ಮಕ್ಕಳ ಲಾಲನೆ– ಪಾಲನೆ, ಗರ್ಭಿಣಿಯರು- ಬಾಣಂತಿಯರಿಗೆ ಊಟ, ಪ್ರತಿ ತಿಂಗಳ ಮೊದಲ ಮತ್ತು 3ನೇ ಶುಕ್ರವಾರ ಪೋಷಣ್‌ ಅಭಿಯಾನ, 3ನೇ ಶನಿವಾರ ಬಾಲವಿಕಾಸ ಸಮಿತಿ ಸಭೆಗೆ ಹಾಜರಾಗಿ, ಜತೆಗೆ ಇಲಾಖೆ ನಿಯೋಜಿಸುವ ಕೆಲಸಗಳನ್ನೂ ನಿರ್ವಹಿಸಬೇಕು. ಮಾರ್ಚ್ 3ರಿಂದ ಗ್ಯಾರಂಟಿ ಸಮೀಕ್ಷೆ ಬೇರೆ ಮಾಡಿಸುತ್ತಿದ್ದಾರೆ. ಹಾಗಾದರೆ, ಸಿದ್ದರಾಮಯ್ಯ ಅವರ ಸರ್ಕಾರ ಮಾಡಿಕೊಂಡಿರುವ ಇಡೀ ಗ್ಯಾರಂಟಿ ಸೆಟಪ್ ಏನು ಮಾಡುತ್ತಿದೆ?. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಣ್ಣಬಣ್ಣದ ಜಾಹೀರಾತು ನೀಡುವುದಕ್ಕೆ ಮಾತ್ರ ಸೀಮಿತವಾಗಿದೆಯೇ?. ಜನರ ತೆರಿಗೆ ದುಡ್ಡು, ಯಲ್ಲಮನ ಜಾತ್ರೆ ಎನ್ನುವಂತಾಗಿದೆ. ಬರ, ಕುಡಿಯುವ ನೀರಿನ ಹಾಹಾಕಾರದ ನಡುವೆಯೂ ಇವರ ಗ್ಯಾರಂಟಿ ರಾಜಕೀಯಕ್ಕೆ ಬರವಿಲ್ಲ, ಪ್ರಚಾರಕ್ಕೂ ಬರವಿಲ್ಲ" ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಸಮರ್ಥ ನಾಯಕ ಅಲ್ಲ ಎಂದು ಹೇಳಲು ಸಿದ್ದರಾಮಯ್ಯ ಯಾರು?: ಹೆಚ್.​ಡಿ ದೇವೇಗೌಡ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.