ಉಡುಪಿ: ಕ್ಯಾಂಟರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮವಾರ ಕಾರ್ಕಳ - ಧರ್ಮಸ್ಳಳ - ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಈ ದುರ್ಘಟನೆ ನಡೆದಿದೆ.
ಮೃತರನ್ನು ಸುರೇಶ ಆಚಾರ್ಯ (36), ಸಮೀಕ್ಷಾ (7), ಸುಶ್ಮಿತಾ (5) ಹಾಗೂ ಸುಶಾಂತ್ (2) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಪತ್ನಿ ಮೀನಾಕ್ಷಿ ಆಚಾರ್ಯ (32) ಎಂಬವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.
![accident](https://etvbharatimages.akamaized.net/etvbharat/prod-images/30-09-2024/kn-udp-03-karkalaaxidentspotdeath-photos-ka10073_30092024180051_3009f_1727699451_366.jpg)
ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ತೆರಳುತ್ತಿದ್ದರು. ಇವರಲ್ಲಿ ನಾಲ್ಕು ಮಂದಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಮಂಡ್ಯ: ಕಂಟೈನರ್ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - Mandya Road Accident