ETV Bharat / state

ಶಾಲಿನಿ ರಜನೀಶ್ ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿ: ಕರ್ನಾಟಕ ಸರ್ಕಾರದಿಂದ ನೇಮಕ ಆದೇಶ - SHALINI NEXT CS OF KARNATAKA

author img

By ETV Bharat Karnataka Team

Published : Jul 26, 2024, 9:00 PM IST

ಶಾಲಿನಿ ರಜನೀಶ್ ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

shalini-rajaneesh
ಶಾಲಿನಿ ರಜನೀಶ್ (ETV Bharat)

ಬೆಂಗಳೂರು : ಶಾಲಿನಿ ರಜನೀಶ್ ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ರಾಜ್ಯದ ಕಾರ್ಯಾಂಗದ ಅತ್ಯುನ್ನತ ಹುದ್ದೆಯನ್ನು ಪತಿಯ ನಂತರ ಪತ್ನಿ ವಹಿಸಿಕೊಂಡವರಲ್ಲಿ ಶಾಲಿನಿ ರಜನೀಶ್ ಎರಡನೇಯವರಾಗಿದ್ದಾರೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಾಲಿನಿ ರಜನೀಶ್ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ತೀರ್ಮಾನಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಇದೀಗ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಪತ್ನಿ ಶಾಲಿನಿ ರಜನೀಶ್ ಕಾರ್ಯಾಂಗದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಶಾಲಿನಿ ರಜನೀಶ್ ಸದ್ಯ ಅಭಿವೃದ್ಧಿ ಆಯುಕ್ತೆ ಆಗಿದ್ದಾರೆ. ಜೊತೆಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ರಾಜ್ಯದ ಕಾರ್ಯಾಂಗದ ಅತ್ಯುನ್ನತ ಹುದ್ದೆಯನ್ನು ಪತಿಯ ನಂತರ ಪತ್ನಿ ವಹಿಸಿಕೊಳ್ಳುವುದು ಎರಡನೇ ಬಾರಿ ಆಗಲಿದೆ. 2000ರ ಡಿಸೆಂಬರ್‌ನಲ್ಲಿ ಬಿ. ಕೆ ಭಟ್ಟಾಚಾರ್ಯ ಅವರ ನಂತರ ಅವರ ಪತ್ನಿ ಥೆರೇಸಾ ಭಟ್ಟಾಚಾರ್ಯ ಅವರು ಸಿಎಸ್‌ ಆಗಿದ್ದರು.

ಶಾಲಿನಿ ರಜನೀಶ್ 1989ರ ಬ್ಯಾಚ್​​​ನ ಐಎಎಸ್ ಅಧಿಕಾರಿಯಾಗಿದ್ದಾರೆ. ಶಾಲಿನಿ ರಜನೀಶ್ ಇನ್ನೂ 3 ವರ್ಷದ ಸೇವಾವಧಿ ಹೊಂದಿದ್ದಾರೆ. ಜೇಷ್ಠತೆ ಪ್ರಕಾರ ಶಾಲಿನಿ ರಜನೀಶ್ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. ಜೇಷ್ಠತೆ ಪ್ರಕಾರ ಹೋದರೆ ಅಜಯ್ ಸೇಠ್ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. ಅಜಯ್ ಸೇಠ್ ಬಳಿಕ ಶಾಲಿನಿ ರಜನೀಶ್ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.

ಆದರೆ ಅಜಯ್ ಸೇಠ್ ಕೇಂದ್ರ ಸರ್ಕಾರದ ಸೇವೆಗೆ ನಿಯೋಜನೆಯಾಗಿದ್ದಾರೆ. ಅಜಯ್ ಸೇಠ್ ಕೇಂದ್ರದಲ್ಲಿ ಹಣಕಾಸು ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರದಲ್ಲಿ ಆರ್ಥಿಕ ವ್ಯವಹಾರದ ಕಾರ್ಯದರ್ಶಿಯ ಮಹತ್ವದ ಹುದ್ದೆಯಲ್ಲಿರುವ ಅವರು ರಾಜ್ಯಕ್ಕೆ ಮರಳಲು ಒಲವು ತೋರಿಲ್ಲ.

ಇದನ್ನೂ ಓದಿ : ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿ ಯಾರು?: ಮೂವರ ಪೈಕಿ ಇವರ ಹೆಸರು ಮುಂಚೂಣಿಯಲ್ಲಿ! - Chief Secretary Of Karnataka

ಬೆಂಗಳೂರು : ಶಾಲಿನಿ ರಜನೀಶ್ ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ರಾಜ್ಯದ ಕಾರ್ಯಾಂಗದ ಅತ್ಯುನ್ನತ ಹುದ್ದೆಯನ್ನು ಪತಿಯ ನಂತರ ಪತ್ನಿ ವಹಿಸಿಕೊಂಡವರಲ್ಲಿ ಶಾಲಿನಿ ರಜನೀಶ್ ಎರಡನೇಯವರಾಗಿದ್ದಾರೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಾಲಿನಿ ರಜನೀಶ್ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ತೀರ್ಮಾನಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಇದೀಗ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಪತ್ನಿ ಶಾಲಿನಿ ರಜನೀಶ್ ಕಾರ್ಯಾಂಗದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಶಾಲಿನಿ ರಜನೀಶ್ ಸದ್ಯ ಅಭಿವೃದ್ಧಿ ಆಯುಕ್ತೆ ಆಗಿದ್ದಾರೆ. ಜೊತೆಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ರಾಜ್ಯದ ಕಾರ್ಯಾಂಗದ ಅತ್ಯುನ್ನತ ಹುದ್ದೆಯನ್ನು ಪತಿಯ ನಂತರ ಪತ್ನಿ ವಹಿಸಿಕೊಳ್ಳುವುದು ಎರಡನೇ ಬಾರಿ ಆಗಲಿದೆ. 2000ರ ಡಿಸೆಂಬರ್‌ನಲ್ಲಿ ಬಿ. ಕೆ ಭಟ್ಟಾಚಾರ್ಯ ಅವರ ನಂತರ ಅವರ ಪತ್ನಿ ಥೆರೇಸಾ ಭಟ್ಟಾಚಾರ್ಯ ಅವರು ಸಿಎಸ್‌ ಆಗಿದ್ದರು.

ಶಾಲಿನಿ ರಜನೀಶ್ 1989ರ ಬ್ಯಾಚ್​​​ನ ಐಎಎಸ್ ಅಧಿಕಾರಿಯಾಗಿದ್ದಾರೆ. ಶಾಲಿನಿ ರಜನೀಶ್ ಇನ್ನೂ 3 ವರ್ಷದ ಸೇವಾವಧಿ ಹೊಂದಿದ್ದಾರೆ. ಜೇಷ್ಠತೆ ಪ್ರಕಾರ ಶಾಲಿನಿ ರಜನೀಶ್ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. ಜೇಷ್ಠತೆ ಪ್ರಕಾರ ಹೋದರೆ ಅಜಯ್ ಸೇಠ್ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. ಅಜಯ್ ಸೇಠ್ ಬಳಿಕ ಶಾಲಿನಿ ರಜನೀಶ್ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.

ಆದರೆ ಅಜಯ್ ಸೇಠ್ ಕೇಂದ್ರ ಸರ್ಕಾರದ ಸೇವೆಗೆ ನಿಯೋಜನೆಯಾಗಿದ್ದಾರೆ. ಅಜಯ್ ಸೇಠ್ ಕೇಂದ್ರದಲ್ಲಿ ಹಣಕಾಸು ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರದಲ್ಲಿ ಆರ್ಥಿಕ ವ್ಯವಹಾರದ ಕಾರ್ಯದರ್ಶಿಯ ಮಹತ್ವದ ಹುದ್ದೆಯಲ್ಲಿರುವ ಅವರು ರಾಜ್ಯಕ್ಕೆ ಮರಳಲು ಒಲವು ತೋರಿಲ್ಲ.

ಇದನ್ನೂ ಓದಿ : ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿ ಯಾರು?: ಮೂವರ ಪೈಕಿ ಇವರ ಹೆಸರು ಮುಂಚೂಣಿಯಲ್ಲಿ! - Chief Secretary Of Karnataka

ETV Bharat Logo

Copyright © 2024 Ushodaya Enterprises Pvt. Ltd., All Rights Reserved.