ETV Bharat / state

ಎಸ್​ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್​ನಲ್ಲಿನ ಸರ್ಕಾರದ ಖಾತೆಗಳ ರದ್ದು: ಸುತ್ತೋಲೆ ತಡೆಹಿಡಿದ ಸರ್ಕಾರ - Bank Circular

author img

By ETV Bharat Karnataka Team

Published : Aug 17, 2024, 7:06 AM IST

ಎಸ್​ಬಿಐ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್​ನಲ್ಲಿ ಹೊಂದಿರುವ ಸರ್ಕಾರದ ಖಾತೆಗಳ ರದ್ದುಪಡಿಸುವ ಕುರಿತು ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ 15 ದಿನಗಳವರೆಗೆ ತಡೆಹಿಡಿದೆ.

GOVERNMENT
ವಿಧಾನಸೌಧ (ETV Bharat)

ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು. ಹಾಗೂ ಇನ್ನು ಮುಂದೆ ಇವೆರಡು ಬ್ಯಾಂಕ್​ಗಳಲ್ಲಿ ಯಾವುದೇ ರೀತಿಯ ಠೇವಣಿಗಳ ಹೂಡಿಕೆ ಮಾಡಬಾರದೆಂಬ ಸುತ್ತೋಲೆಯನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ.

ಮೇಲೆ ಉಲ್ಲೇಖಿತ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಮತ್ತಿತರ ಸಂಸ್ಥೆಗಳು, ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು ಮತ್ತು ಠೇವಣಿಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯುವಂತೆ ಸೂಚಿಸಲಾಗಿತ್ತು.

government accounts  SBI and Punjab National Bank  Congress Government  Bengaluru
ಬ್ಯಾಂಕ್​ ಸುತ್ತೋಲೆ ತಡೆಹಿಡಿದ ಸರ್ಕಾರ (ETV Bharat)

ಎಸ್​​ಬಿಐ ಬ್ಯಾಂಕಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ವಿನೋದ್ ಜೈಸ್ವಾಲ್ 15 ದಿನಗಳ ಕಾಲಾವಕಾಶ ಕೋರಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರು. ಮುಂದುವರೆದು, ಆಗಸ್ಟ್​ 16ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಆರ್ಥಿಕ ಇಲಾಖೆ ) ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ, ಕೆಎಸ್​​ಪಿಸಿಬಿ ಸಂಸ್ಥೆಯು ನಿಶ್ಚಿತ ಠೇವಣಿಯಲ್ಲಿ ಹೂಡಿರುವ ಹಣವನ್ನು ಮರುಪಾವತಿಸುವ ವಿಷಯವನ್ನು ಇತ್ಯರ್ಥಗೊಳಿಸಲು ಮನವಿ ಸಲ್ಲಿಸಿದ್ದರು.

ಅದೇ ರೀತಿ, ಪಂಜಾಬ್ ನ್ಯಾಷನಲ್ ಬ್ಯಾಂಕಿನ ವಿಭಾಗೀಯ ವ್ಯವಸ್ಥಾಪಕ ದೀಪಕ್ ಕುಮಾರ್ ಶ್ರೀವಾತ್ಸವ 15 ದಿನಗಳ ಕಾಲಾವಕಾಶವನ್ನು ಕೋರಿ ಮನವಿ ಪತ್ರ ನೀಡಿದ್ದರು. ಆಗಸ್ಟ್​ 16ರಂದು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಸಕಾರಾತ್ಮಕವಾಗಿ ಸ್ಪಂದಿಸಿ, ಕೆಐಎಡಿಬಿ ಸಂಸ್ಥೆಯ ನಿಶ್ಚಿತ ಠೇವಣಿ ಮರುಪಾವತಿಸಲು ಸಮಯಾವಕಾಶ ಕೋರಿದ್ದರು.

ಮುಖ್ಯಮಂತ್ರಿ ಅವರಿಂದ ಅನುಮೋದಿಸಿ, ಎಸ್​ಬಿಐ ಮತ್ತು ಪಿಎನ್​ಬಿ ಬ್ಯಾಂಕ್​ಗಳ ಕೋರಿಕೆಯ ಹಿನ್ನೆಲೆ ಆಗಸ್ಟ್​ 12ರಂದು ಹೊರಡಿಸಲಾದ ಸುತ್ತೋಲೆಯನ್ನು 15 ದಿನಗಳವರೆಗೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಸರ್ಕಾರ ಮತ್ತೊಂದು ಸುತ್ತೋಲೆ ಬಿಡುಗಡೆ ಮಾಡಿದೆ.

ಓದಿ: ರಾಜ್ಯದಲ್ಲಿ ಮುಂಗಾರು ಮಳೆ ಸಕ್ರಿಯ: 5 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Alert

ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು. ಹಾಗೂ ಇನ್ನು ಮುಂದೆ ಇವೆರಡು ಬ್ಯಾಂಕ್​ಗಳಲ್ಲಿ ಯಾವುದೇ ರೀತಿಯ ಠೇವಣಿಗಳ ಹೂಡಿಕೆ ಮಾಡಬಾರದೆಂಬ ಸುತ್ತೋಲೆಯನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ.

ಮೇಲೆ ಉಲ್ಲೇಖಿತ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಮತ್ತಿತರ ಸಂಸ್ಥೆಗಳು, ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು ಮತ್ತು ಠೇವಣಿಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯುವಂತೆ ಸೂಚಿಸಲಾಗಿತ್ತು.

government accounts  SBI and Punjab National Bank  Congress Government  Bengaluru
ಬ್ಯಾಂಕ್​ ಸುತ್ತೋಲೆ ತಡೆಹಿಡಿದ ಸರ್ಕಾರ (ETV Bharat)

ಎಸ್​​ಬಿಐ ಬ್ಯಾಂಕಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ವಿನೋದ್ ಜೈಸ್ವಾಲ್ 15 ದಿನಗಳ ಕಾಲಾವಕಾಶ ಕೋರಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರು. ಮುಂದುವರೆದು, ಆಗಸ್ಟ್​ 16ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಆರ್ಥಿಕ ಇಲಾಖೆ ) ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ, ಕೆಎಸ್​​ಪಿಸಿಬಿ ಸಂಸ್ಥೆಯು ನಿಶ್ಚಿತ ಠೇವಣಿಯಲ್ಲಿ ಹೂಡಿರುವ ಹಣವನ್ನು ಮರುಪಾವತಿಸುವ ವಿಷಯವನ್ನು ಇತ್ಯರ್ಥಗೊಳಿಸಲು ಮನವಿ ಸಲ್ಲಿಸಿದ್ದರು.

ಅದೇ ರೀತಿ, ಪಂಜಾಬ್ ನ್ಯಾಷನಲ್ ಬ್ಯಾಂಕಿನ ವಿಭಾಗೀಯ ವ್ಯವಸ್ಥಾಪಕ ದೀಪಕ್ ಕುಮಾರ್ ಶ್ರೀವಾತ್ಸವ 15 ದಿನಗಳ ಕಾಲಾವಕಾಶವನ್ನು ಕೋರಿ ಮನವಿ ಪತ್ರ ನೀಡಿದ್ದರು. ಆಗಸ್ಟ್​ 16ರಂದು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಸಕಾರಾತ್ಮಕವಾಗಿ ಸ್ಪಂದಿಸಿ, ಕೆಐಎಡಿಬಿ ಸಂಸ್ಥೆಯ ನಿಶ್ಚಿತ ಠೇವಣಿ ಮರುಪಾವತಿಸಲು ಸಮಯಾವಕಾಶ ಕೋರಿದ್ದರು.

ಮುಖ್ಯಮಂತ್ರಿ ಅವರಿಂದ ಅನುಮೋದಿಸಿ, ಎಸ್​ಬಿಐ ಮತ್ತು ಪಿಎನ್​ಬಿ ಬ್ಯಾಂಕ್​ಗಳ ಕೋರಿಕೆಯ ಹಿನ್ನೆಲೆ ಆಗಸ್ಟ್​ 12ರಂದು ಹೊರಡಿಸಲಾದ ಸುತ್ತೋಲೆಯನ್ನು 15 ದಿನಗಳವರೆಗೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಸರ್ಕಾರ ಮತ್ತೊಂದು ಸುತ್ತೋಲೆ ಬಿಡುಗಡೆ ಮಾಡಿದೆ.

ಓದಿ: ರಾಜ್ಯದಲ್ಲಿ ಮುಂಗಾರು ಮಳೆ ಸಕ್ರಿಯ: 5 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Alert

ETV Bharat Logo

Copyright © 2024 Ushodaya Enterprises Pvt. Ltd., All Rights Reserved.