ETV Bharat / state

ಮುಡಾ ಪ್ರಕರಣ: ರಾಜ್ಯಪಾಲರ ನಿರ್ಧಾರದ ವಿರುದ್ಧ ಒಗ್ಗಟ್ಟಾಗಿ ಹೋರಾಟ ಮಾಡಲು ಕಾಂಗ್ರೆಸ್​ ನಿರ್ಧಾರ - CM Prosecution Live Updates

author img

By ETV Bharat Karnataka Team

Published : Aug 17, 2024, 12:32 PM IST

Updated : Aug 17, 2024, 9:46 PM IST

MUDA SCAM  PROSECUTION AGAINST CM SIDDARAMAIAH  THAWAR CHAND GEHLOT  BENGALURU
ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ (ETV Bharat)

ಬೆಂಗಳೂರು: ಮುಡಾ ನಿವೇಶನ ಅಕ್ರಮ ಆರೋಪ ಸಂಬಂಧ ಸಿಎಂ‌ ಸಿದ್ದರಾಮಯ್ಯ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಈ ನಿರ್ಧಾರದ ವಿರುದ್ಧ ಕಾಂಗ್ರೆಸ್ ಒಗ್ಗಟ್ಟಾಗಿ ಹೋರಾಟಕ್ಕೆ ಮುಂದಾಗಿದೆ. ರಾಜ್ಯಪಾಲರ ನಡೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎ ಡಿಕೆ ಶಿವಕುಮಾತರ್​ ಸೇರಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 'ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದರೆ, 'ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಲಾಗಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆನೇ ಇಲ್ಲ' ಎಂದು ಪ್ರತಿಪಕ್ಷ ನಾಯಕರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿ ಕಾರಿದ್ದಾರೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿದ್ದು, ಒಟ್ಟಾಗಿ ನಿಂತು ಕಾನೂನು ಹೋರಾಟ ಮಾಡಲು ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ, ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಸ್ವಾಗತಿಸಿದ ಪ್ರತಿಪಕ್ಷ ನಾಯಕರು 'ಇದು ತಮ್ಮ ಪಾದಯಾತ್ರೆಯ ಪ್ರತಿಫಲ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು' ಎಂದು ಒತ್ತಾಯಿಸಿದ್ದಾರೆ.

ಓದಿ: ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ - Prosecution Against CM Siddaramaiah

LIVE FEED

8:41 PM, 17 Aug 2024 (IST)

ನಾವೆಲ್ಲರೂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ: ಸಂತೋಷ್ ಲಾಡ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ರಾಜೀನಾಮೆ ಕೇಳುತ್ತಿದ್ದಾರೆ. ಆದರೆ, ರಷ್ಯಾದಲ್ಲಿ 67 ನಮ್ಮ ದೇಶದ ಯುವಕರನ್ನು ಯುದ್ಧಕ್ಕೆ ಬಳಸಿಕೊಂಡಿದ್ದಾರೆ. ಅದರಲ್ಲಿ 8 ಮಂದಿ ಯುವಕರು ತೀರಿ ಹೋಗಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ಕೊಡ್ತಾರಾ? ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನೆ ಮಾಡಿದ್ದಾರೆ.

ವಿಶೇಷ ಸಚಿವ ಸಂಪುಟ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳ ಮೇಲೆ ಯಾವುದೇ ಎಫ್​ಐಆರ್​ ಇಲ್ಲ, ಚಾರ್ಜ್​​ಶೀಟ್ ಇಲ್ಲ. ಕೇವಲ ಸರ್ಕಾರ ಬೀಳಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡ್ಯಾಮೇಜ್ ಮಾಡಬೇಕು ಅಷ್ಟೇ. ನಾವೆಲ್ಲರೂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ಕೆಲವು ಬಿಜೆಪಿ ನಾಯಕರು ಸಿಎಂ ಪರವಾಗಿದ್ದಾರೆ. ಪ್ರಾಸಿಕ್ಯೂಶನ್ ಕೊಟ್ಟಿದ್ದಾರಲ್ಲಾ ಕೊಡಲಿ. ನಾವು ಕಾನೂನು ಹೋರಾಟ ಮಾಡ್ತೇವೆ ಎಂದು ಕಿಡಿಕಾರಿದರು.

8:36 PM, 17 Aug 2024 (IST)

ಸಿಎಂ ರಾಜೀನಾಮೆ ‌ಕೊಡುವ ಅವಶ್ಯಕತೆ ಇಲ್ಲ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಸರ್ಕಾರ ಅಭದ್ರಗೊಳಿಸುವ ಹುನ್ನಾರ ನಡೆದಿದೇಯಾ ಎಂಬ ಆರೋಪಕ್ಕೆ ಪ್ರತಿಕ್ರಯಿಸಿರುವ ಸಚಿವ ಸತೀಶ ಜಾರಕಿಹೊಳಿ, ಆ ಬಗ್ಗೆ ರಾಜ್ಯಪಾಲರ ವಿರುದ್ಧ ಈಗಗಾಲೇ ಸಾಕಷ್ಟು ಆರೋಪ ಕೇಳಿ ಬಂದಿವೆ. ನಾವು ರಾಜಕೀಯ ಪಕ್ಷವಾಗಿ ಎದುರಿಸಬೇಕಾಗಿದ್ದು, ಎದುರಿಸುತ್ತೇವೆ. ಸಿಎಂ ರಾಜೀನಾಮೆ ‌ಕೊಡುವ ಅವಶ್ಯಕತೆ ಇಲ್ಲ. ಸಿಎಂ ಮೇಲೆ ತನಿಖೆಯಾಗಿ ಆರೋಪ ಸಾಬೀತಾದ್ರೆ ಅದು ಎರಡನೇ ಹಂತ. ಕೇಂದ್ರ ಸರ್ಕಾರದ 25 ಮಂತ್ರಿಗಳ ಮೇಲೆ ಚಾರ್ಜ್​​ಸೀಟ್, ಕೇಸ್ ದಾಖಲಾಗಿವೆ. ಆದರೂ ಮಂತ್ರಿಗಳಾಗಿ ಮುಂದುವರೆದಿದ್ದಾರೆ. ಇದು ಇವತ್ತಿಂದಲ್ಲ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ನಡೆಯುತ್ತಲೇ ಇರುತ್ತದೆ ಎಂದು ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡರು.

7:48 PM, 17 Aug 2024 (IST)

ಕುಮಾರಸ್ವಾಮಿ ಅವರು ಏನು ಜ್ಯೋತಿಷ್ಯರಾ? ಶಿವಲಿಂಗೇಗೌಡ ಪ್ರಶ್ನೆ

ಬೆಂಗಳೂರು: ಹತ್ತು ತಿಂಗಳಲ್ಲಿ ಸರ್ಕಾರ ಬೀಳುತ್ತದೆಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕ ಶಿವಲಿಂಗೇಗೌಡ ಅವರು, ಕುಮಾರಸ್ವಾಮಿ ಅವರು ಏನು ಜ್ಯೋತಿಷ್ಯರಾ? ಎಂದು ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಜ್ಯೋತಿಷ್ಯರಲ್ಲ, ಅವರು ಕೇಂದ್ರ ಸಚಿವರು. ಪ್ರಜೆಗಳು ಏನು‌ ಹೇಳ್ತಾರೆ ಕಾದು ನೊಡೋಣ ಎಂದರು.

7:46 PM, 17 Aug 2024 (IST)

ನಾವು ಕೋರ್ಟ್​ಗೆ ಹೋಗುತ್ತೇವೆ: ಚಲುವರಾಯಸ್ವಾಮಿ

ಬೆಂಗಳೂರು: ಈ ದೇಶದಲ್ಲಿ ಕರ್ನಾಟಕದ್ದೇ ಭಯ. ಸಿಎಂ ಸಿದ್ದರಾಮಯ್ಯನವರೇ ಅವರಿಗೆ ಭಯ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನರೆಡ್ಡಿ ಎಲ್ಲರ ಕೇಸ್ ಪೆಂಡಿಂಗ್ ಇವೆ. ರಾಜ್ಯಪಾಲರ ಕಚೇರಿ ಬಿಜೆಪಿ ಮತ್ತು ಜೆಡಿಎಸ್ ಹೆಡ್ ಕ್ವಾಟರ್ ಆಗಿದೆ. ಸೋಮವಾರ ನಾವು ಕೋರ್ಟ್​ಗೆ ಹೋಗುತ್ತೇವೆ. ನೂರಕ್ಕೆ ನೂರು ನಮಗೆ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

4:38 PM, 17 Aug 2024 (IST)

ಪ್ರಾಸಿಕ್ಯೂಷನ್​ಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಅಹಿಂದ ಸಂಘಟನೆಗಳ ಪ್ರತಿಭಟನೆ

ಮುಡಾ ಹಗರಣ ಆರೋಪ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಅಹಿಂದ ಸಂಘಟನೆಗಳು ಬೀದಿಗಿಳಿದಿದ್ದಾರೆ. ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ದಿಢೀರ್ ಪ್ರತಿಭಟನೆಗೆ ಮುಂದಾಗಿವೆ. ದೇಶದ ರಾಜಕೀಯ ಇತಿಹಾಸದಲ್ಲೇ ರಾಜ್ಯಪಾಲರು ಪ್ರಾಮಾಣಿಕ ಮುಖ್ಯಮಂತ್ರಿ ಹಾಗೂ ನಿರಪರಾಧಿಯನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಕುತಂತ್ರಕ್ಕೆ ತಲೆಬಾಗಿ ಅನುಮತಿ ನೀಡಿರುವುದು ಅತ್ಯಂತ ದುರದೃಷ್ಟಕರ. ಅವರ ಹೆಸರಿಗೆ ಕಳಂಕ ತರಲು ಮತ್ತು ಸಿದ್ದರಾಮಯ್ಯನವರನ್ನು ಈ ಪ್ರಕರಣದಲ್ಲಿ ಸಿಲುಕಿಸಲು ರಾಜಭವನ ದುರ್ಬಳಕೆ ಮಾಡಿಕೊಂಡಿದೆ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

MUDA SCAM  PROSECUTION AGAINST CM SIDDARAMAIAH  THAWAR CHAND GEHLOT  BENGALURU
ಪ್ರಾಸಿಕ್ಯೂಷನ್​ಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ (undefined)

2:53 PM, 17 Aug 2024 (IST)

ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಕಾನೂನು ಹೋರಾಟ: ಡಿಕೆಶಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಅವರು 10 ಸಚಿವರೊಂದಿಗೆ ತುರ್ತು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಮಾಡಿದ್ದೇವೆ. ರಾಜ್ಯಪಾಲರು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ಮಾರಕವಾದ ಪತ್ರ ಕಳುಹಿಸಿದ್ದಾರೆ. ರಾಜ್ಯಪಾಲರ 26.7.2024ರ ನೋಟಿಸ್ ಸಂಬಂಧ ಏಪ್ರಿಲ್ 1ರಂದು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದೇವೆ. ದೂರಿನಲ್ಲಿ ತಿರುಳು ಇಲ್ಲ. ಸಂವಿಧಾನದ ಅಂಶಗಳನ್ನು ತಿಳಿ ತಿಳಿಯಾಗಿ ಹೇಳಿದ್ದೇವೆ. ಇದು ರಾಜಕೀಯ ಪಿತೂರಿ. ಮುಡಾ ಪ್ರಕರಣದಲ್ಲಿ ಯಾವುದೇ ಲೋಪದೋಷ ಆಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದು ತಿಳಿಸಿದರು.

2:49 PM, 17 Aug 2024 (IST)

ನಾನು ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರ, ನಾನು ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವವಾಗುವುದಿಲ್ಲ. ರಾಜೀನಾಮೆ ಕೊಡುವ ತಪ್ಪು ನಾನು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಇಂದು ಅರಮನೆ ಮೈದಾನದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚುನಾಯಿತ ಸರ್ಕಾರವನ್ನು ಕಿತ್ತು ಹಾಕಲು ಅನೇಕ ರಾಜ್ಯಗಳಲ್ಲಿ ಷಡ್ಯಂತರ ರೂಪಿಸಲಾಗಿದೆ. ಅದೇ ರೀತಿ ಇಲ್ಲೂ ಸಹ

ಬಿಜೆಪಿ, ಜೆಡಿಎಸ್, ಬೇರೆಯವರೆಲ್ಲಾ ಸೇರಿಕೊಂಡು ನಮ್ಮ ಸರ್ಕಾರವನ್ನು ಕೆಳಗಿಳಿಸಲು ಪ್ರಯತ್ನ ಪಡುತ್ತಿದ್ದಾರೆ. ನಾವು ಅದರ ವಿರುದ್ಧ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದರು.

ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವುದು (ETV Bharat)

12:58 PM, 17 Aug 2024 (IST)

ಸಿದ್ದರಾಮಯ್ಯ ಸ್ಥಿತಿ ನೋಡಿ ಬಹಳಷ್ಟು ಕಾಂಗ್ರೆಸ್ ನಾಯಕರು ಒಳಗೊಳಗೇ ಖುಷಿ ಪಟ್ಟಿದ್ದಾರೆ: ಸಂಸದ ಶೆಟ್ಟರ್

ಹುಬ್ಬಳ್ಳಿ: ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಪಾರಾಗಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಪಾರಾಗುವ ಪರಿಸ್ಥಿತಿ ಇಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಅವರು ಹೈಕೋರ್ಟ್, ಸುಪ್ರೀಂ ಕೋರ್ಟ್​ಗೂ ಹೋಗಬಹುದು. ಅಲ್ಲಿನ ನಿರ್ಧಾರದ ಮೇಲೆ ನಾವು ಪ್ರತಿಭಟನೆ ನಿರ್ಧಾರ ಮಾಡ್ತೇವೆ. ಈ ಪ್ರಕರಣದಲ್ಲಿ ಜಾತಿ, ಧರ್ಮ ತರಬಾರದು ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಈ ಪರಿಸ್ಥಿತಿ ಬಂದಿದ್ದನ್ನು ನೋಡಿ ಬಹಳಷ್ಟು ಜನ ಕಾಂಗ್ರೆಸ್ ನಾಯಕರು ಒಳಗೊಳಗೇ ಖುಷಿ ಪಡ್ತಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಪಾರಾಗಲು ಸಾಧ್ಯವಿಲ್ಲ. ಅಹಿಂದ ನಾಯಕನನ್ನ ಗುರಿಯಾಗಿಸಿದ್ದಾರೆ ಅನ್ನೋ ವಿಚಾರ, ನಾನು ಅಹಿಂದ ನಾಯಕ ನಾನು ಮಾಡಬಹುದು ಅನ್ನೋಕೆ ಬರುತ್ತಾ..? ಇದು ಸರಿಯಲ್ಲ ಎಂದರು.

12:55 PM, 17 Aug 2024 (IST)

ಸಚಿವರು, ಕಾನೂನು ಸಲಹೆಗಾರರ ಜೊತೆ ಸಿಎಂ ಚರ್ಚೆ

ಬೆಂಗಳೂರು: ಸಿಎಂ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಹಿನ್ನೆಲೆ ಸಿಎಂ ನಿವಾಸ ಕಾವೇರಿಗೆ ಸಚಿವರ ಭೇಟಿ ನೀಡಿದ್ದಾರೆ. ಡಿಸಿಎಂ ಡಿಕೆಶಿ, ಹೆಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ ಸೇರಿದಂತೆ ಇತರೆ ನಾಯಕರು ಸಿಎಂ ಜೊತೆ ಚರ್ಚಿಸುತ್ತಿದ್ದಾರೆ. ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಸಹ ಈ ಚರ್ಚೆಯಲ್ಲಿ ಭಾಗಿಯಾಗಿದ್ದಾರೆ.

ರಾಜಕೀಯ ಕಾರಣಕ್ಕಾಗಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ. ಒತ್ತಡದಿಂದಲೇ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಹೈಕೋರ್ಟ್​ನಲ್ಲಿ ಮೊದಲು ಅರ್ಜಿ ಸಲ್ಲಿಸೋಣ. ಸುಪ್ರೀಂಗೆ ಕಪಿಲ್ ಸಿಬಲ್ ಮನವಿ‌ ಸಲ್ಲಿಸಲಿದ್ದಾರೆ. ಇದರಲ್ಲಿ ನನ್ನ ತಪ್ಪು ಯಾವುದೂ ಇಲ್ಲ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನೆ ಮಾಡಿದೆ. ರಾಜಕೀಯ ಹಾಗೂ ಕಾನೂನಾತ್ಮಕ ಹೋರಾಟ ಸಂಬಂಧ ಖಡಕ್ ಸೂಚನೆ ನೀಡಿದೆ. ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು. ಇಡೀ ಪಕ್ಷ ಸಿಎಂ ಬೆನ್ನಿಗೆ ನಿಂತು ಹೋರಾಟ ಮಾಡುಬೇಕು. ರಾಜ್ಯಪಾಲರ ವಿರುದ್ಧವೂ ಹೋರಾಟ ಮುಂದುವರಿಸಬೇಕು ಎಂದು ಹೈಕಮಾಂಡ್​ ಹೇಳಿದೆ.

ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ನಾಯಕರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್,‌ ಉಸ್ತುವಾರಿ ಸುರ್ಜೇವಾಲಾ ಅವರು ಕರೆ ಮಾಡಿ, ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದರು. ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ. ಏನೇ ಆದರೂ ಕಾನೂನು ಹೋರಾಟ ನಡೆಸೋಣ ಎಂದು ಹೇಳಿದ್ದಾರೆ.

12:46 PM, 17 Aug 2024 (IST)

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ರಾಜಕೀಯ ಪ್ರೇರಿತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕಕರ್ ಆರೋಪ

ಬೆಳಗಾವಿ: ಈ ಹಿಂದೆ ಕುಮಾರಸ್ವಾಮಿ, ನಿರಾಣಿ, ಜೊಲ್ಲೆ ಅವರ ವಿರುದ್ಧ ಪ್ರಾಸಿಕ್ಯೂಶನ್ ನೀಡುವಂತೆ ಕೇಳಿಕೊಂಡಾಗ ರಾಜ್ಯಪಾಲರು ಅನುಮತಿ ಕೊಟ್ಟಿರಲಿಲ್ಲ. ಈಗ ತರಾತುರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಕೊಟ್ಟಿದ್ದು, ರಾಜಕೀಯ ಪ್ರೇರಿತ. ಈ ವಿಚಾರದಲ್ಲಿ ನಾವು ಗಾಬರಿ ಪಡುವ ಪ್ರಮೇಯವೇ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕಕರ್ ವಿಶ್ವಾಸ ವ್ಯಕ್ತಪಡಿಸಿದರು‌.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಲ್ಲೆಲ್ಲಿ ಬಿಜೆಪಿ ಹೊರತು ಪಡಿಸಿ ಬೇರೆ ಪಕ್ಷಗಳ ಚುನಾಯಿತ ಸರ್ಕಾರ ಆಡಳಿದಲ್ಲಿವೆ. ಅಲ್ಲೆಲ್ಲಾ ಬಿಜೆಪಿ ಇಂತ ಪ್ರಯೋಗಗಳನ್ನು ಮಾಡುತ್ತಿದೆ. ನಮ್ಮ ರಾಜ್ಯದಲ್ಲಿ ಸಾಂವಿಧಾನಿಕ ಹುದ್ದೆ ಹೊಂದಿರುವ ರಾಜ್ಯಪಾಲರು, ತಮಿಳುನಾಡು ಸೇರಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಆ ರೀತಿ ಇಲ್ಲ ಎಂಬ ಅಭಿಮಾನವಿತ್ತು. ಆದರೆ, ಇಂದು ಅವರು ಪ್ರಾಸಿಕ್ಯೂಷನ್​ಗೆ ಒಪ್ಪಿಕೊಂಡಿದ್ದು, ನಮ್ಮ ಇವತ್ತು ದುರ್ದೈವ. ಇದರ ಹಿಂದೆ ಬಿಜೆಪಿ ಹೈಕಮಾಂಡ್ ರಾಜ್ಯಪಾಲರಿಗೆ ಎಷ್ಟರ ಮಟ್ಟಿಗೆ ಒತ್ತಡ ಹಾಕಿದ್ದಾರೆ ಎಂಬುದು ಸಾಬೀತಾಗುತ್ತದೆ ಎಂದು ದೂರಿದರು.

12:40 PM, 17 Aug 2024 (IST)

ರಾಜ್ಯಪಾಲರ ವಜಾಕ್ಕೆ ಸಚಿವ ಈಶ್ವರ ಖಂಡ್ರೆ ಒತ್ತಾಯ

ಬೆಂಗಳೂರು : ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ.

12:38 PM, 17 Aug 2024 (IST)

ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ, ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಂಗಳೂರು : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು. ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

12:24 PM, 17 Aug 2024 (IST)

ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದು ಕಾನೂನು ಬದ್ದವಾದ ನಿರ್ಧಾರ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ ಬರುತ್ತಿದೆ. ಸಿಎಂ ರಾಜೀನಾಮೆ ಕೊಡಬೇಕು. ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹ ಮಾಡಿದ್ದೇವೆ. ಇದೀಗ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಗಳು ಸಹ ಕೇಸ್ ದಾಖಲಿಸಲು ಮುಂದಾಗಿದ್ದಾರೆ‌. ಇದಕ್ಕಾಗಿ ರಾಜ್ಯಪಾಲರು ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ ಅಂತಿಮವಾಗಿ ಅನುಮತಿ ಕೊಟ್ಟಿದ್ದಾರೆ. ಇದು ಕಾನೂನು ಬದ್ದವಾದ ನಿರ್ಧಾರವಾಗಿದೆ ಎಂದರು.

12:20 PM, 17 Aug 2024 (IST)

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಸಚಿವರುಗಳು ಹೇಳುವುದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೇಲೆ ಪ್ರಾಸಿಕ್ಯೂಷನ್​ಗೆ ಅನುನತಿ ನೀಡಿದ ರಾಜ್ಯಪಾಲರ ನಡೆಯನ್ನು ಸಚಿವರು, ಕಾಂಗ್ರೆಸ್ ಮುಖಂಡರು ಖಂಡಿಸಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆ ಎಂದು ಆರೋಪಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಈಗ ತಾನೇ ನನಗೂ ಸುದ್ದಿ ಬಂದಿದೆ. ಯಾವ ರೀತಿ ಅನುಮತಿ ಕೊಟ್ಟಿದ್ದಾರೋ ನೋಡಬೇಕು. ಕಾನೂನಾತ್ಮಕ ಹೋರಾಟ ಮಾಡ್ತೇವೆ ಅಂತಾ ಮೊದಲೇ ಹೇಳಿದ್ದೇವೆ. ಸಿಎಂ ಲೀಗಲ್ ಟೀಮ್ ಜೊತೆ ಚರ್ಚೆ ಮಾಡಿ ಮುಂದೆ ಹೋಗ್ತಾರೆ. ಕ್ಯಾಬಿನೆಟ್ ಅಡ್ವೈಸ್ ಮಾಡಿದ್ಮೇಲೂ ಕೊಟ್ಟಿದ್ದಾರೆ. ಕೊಡಲ್ಲ ಅಂದುಕೊಂಡಿದ್ವಿ. ಅವರಿಗೆ ಮೊದಲಿನಿಂದಲೂ ಮೇಲಿನಿಂದ ಒತ್ತಡ ಇದೆ ಅನ್ನೋದು ಸ್ಪಷ್ಟ ಇದೆ ಎಂದು ಆರೋಪಿಸಿದರು.

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌‌.ಬಿ ಪಾಟೀಲ್ ಕಿಡಿಕಾರಿದ್ದಾರೆ

ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಯತ್ನ: ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

12:17 PM, 17 Aug 2024 (IST)

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ರಾಜ್ಯಪಾಲರು ಯಾವ ಮಟ್ಟಕ್ಕೆ ಕೆಳಗಿಳಿದಿದ್ದಾರೆ ಅನ್ನುವುದು ತೋರಿಸುತ್ತದೆ : ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದು ನೋಡಿದಾಗ ಅವರು ಯಾವ ಮಟ್ಟಕ್ಕಿಳಿದಿದ್ದಾರೆ ಎಂಬುದನ್ನು ತೋರಿಸುತ್ತದೆ. ಗವರ್ನರ್ ಬಿಜೆಪಿಯ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಷಡ್ಯಂತರದ ಭಾಗ ಎಂಬುದು ಮೊದಲೇ ನಮಗೆ ಗೊತ್ತಿದೆ. ಮೋದಿ ಸರ್ಕಾರ ಎಲ್ಲಾ ಸಂವಿಧಾನಿಕ ಹುದ್ದೆಗಳನ್ನು ಸರ್ವನಾಶ ಮಾಡುತ್ತಿದೆ. ಇಡಿ, ಐಟಿ, ಸಿಬಿಐ ಎಲ್ಲವನ್ನೂ ದುರುಪಯೋಗ ಮಾಡಿದೆ. ರಾಜ್ಯಪಾಲರ ಕಚೇರಿ ಈಗ ಬಿಜೆಪಿ ಕಚೇರಿ ಆಗಿದೆ. ನಾವು ಕಾನೂನು ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಇದಕ್ಕೆಲ್ಲಾ ಜಗ್ಗೋದು ಇಲ್ಲ, ಬಗ್ಗೋದು ಇಲ್ಲ ಎಂದರು.

12:15 PM, 17 Aug 2024 (IST)

ಸಿದ್ದರಾಮಯ್ಯನವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ : ಬಿ.ವೈ.ವಿಜಯೇಂದ್ರ ಒತ್ತಾಯ

ಬೆಂಗಳೂರು : ರಾಜ್ಯಪಾಲರು ಪ್ರಾಷಿಕ್ಯೂಷನ್​ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಅವರು, ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದರು ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಒತ್ತಾಯಿಸಿದ್ದಾರೆ.

12:12 PM, 17 Aug 2024 (IST)

ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮುಡಾ ಹಗರಣರಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ದ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕೆಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಆಗ್ರಹಿಸಿದ್ದಾರೆ.

ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ದ ತನಿಖೆಗೆ ಆದೇಶ ನೀಡಿದ್ದಾರೆ. ಇದರಿಂದ ಸಿದ್ದರಾಮಯ್ಯನವರು ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಡಬೇಕು.ನನ್ನ ಮೇಲೆ ಆಪಾದನೆ ಬಂದಾಗ ನನ್ನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟೆದ್ದೆ. ಈಗ ಅವರ ಮೇಲಿಯೇ ಆರೋಪ ಬಂದಿದೆ. ಇದರಿಂದ
ಅವರು ಸಹ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಡ್ತಾರೆ ಅಂತಾ ನನಗೆ ವಿಶ್ವಾಸ ಇದೆ ಎಂದರು.

ಬೆಂಗಳೂರು: ಮುಡಾ ನಿವೇಶನ ಅಕ್ರಮ ಆರೋಪ ಸಂಬಂಧ ಸಿಎಂ‌ ಸಿದ್ದರಾಮಯ್ಯ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಈ ನಿರ್ಧಾರದ ವಿರುದ್ಧ ಕಾಂಗ್ರೆಸ್ ಒಗ್ಗಟ್ಟಾಗಿ ಹೋರಾಟಕ್ಕೆ ಮುಂದಾಗಿದೆ. ರಾಜ್ಯಪಾಲರ ನಡೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎ ಡಿಕೆ ಶಿವಕುಮಾತರ್​ ಸೇರಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 'ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದರೆ, 'ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಲಾಗಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆನೇ ಇಲ್ಲ' ಎಂದು ಪ್ರತಿಪಕ್ಷ ನಾಯಕರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿ ಕಾರಿದ್ದಾರೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿದ್ದು, ಒಟ್ಟಾಗಿ ನಿಂತು ಕಾನೂನು ಹೋರಾಟ ಮಾಡಲು ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ, ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಸ್ವಾಗತಿಸಿದ ಪ್ರತಿಪಕ್ಷ ನಾಯಕರು 'ಇದು ತಮ್ಮ ಪಾದಯಾತ್ರೆಯ ಪ್ರತಿಫಲ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು' ಎಂದು ಒತ್ತಾಯಿಸಿದ್ದಾರೆ.

ಓದಿ: ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ - Prosecution Against CM Siddaramaiah

LIVE FEED

8:41 PM, 17 Aug 2024 (IST)

ನಾವೆಲ್ಲರೂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ: ಸಂತೋಷ್ ಲಾಡ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ರಾಜೀನಾಮೆ ಕೇಳುತ್ತಿದ್ದಾರೆ. ಆದರೆ, ರಷ್ಯಾದಲ್ಲಿ 67 ನಮ್ಮ ದೇಶದ ಯುವಕರನ್ನು ಯುದ್ಧಕ್ಕೆ ಬಳಸಿಕೊಂಡಿದ್ದಾರೆ. ಅದರಲ್ಲಿ 8 ಮಂದಿ ಯುವಕರು ತೀರಿ ಹೋಗಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ಕೊಡ್ತಾರಾ? ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನೆ ಮಾಡಿದ್ದಾರೆ.

ವಿಶೇಷ ಸಚಿವ ಸಂಪುಟ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳ ಮೇಲೆ ಯಾವುದೇ ಎಫ್​ಐಆರ್​ ಇಲ್ಲ, ಚಾರ್ಜ್​​ಶೀಟ್ ಇಲ್ಲ. ಕೇವಲ ಸರ್ಕಾರ ಬೀಳಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡ್ಯಾಮೇಜ್ ಮಾಡಬೇಕು ಅಷ್ಟೇ. ನಾವೆಲ್ಲರೂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ಕೆಲವು ಬಿಜೆಪಿ ನಾಯಕರು ಸಿಎಂ ಪರವಾಗಿದ್ದಾರೆ. ಪ್ರಾಸಿಕ್ಯೂಶನ್ ಕೊಟ್ಟಿದ್ದಾರಲ್ಲಾ ಕೊಡಲಿ. ನಾವು ಕಾನೂನು ಹೋರಾಟ ಮಾಡ್ತೇವೆ ಎಂದು ಕಿಡಿಕಾರಿದರು.

8:36 PM, 17 Aug 2024 (IST)

ಸಿಎಂ ರಾಜೀನಾಮೆ ‌ಕೊಡುವ ಅವಶ್ಯಕತೆ ಇಲ್ಲ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಸರ್ಕಾರ ಅಭದ್ರಗೊಳಿಸುವ ಹುನ್ನಾರ ನಡೆದಿದೇಯಾ ಎಂಬ ಆರೋಪಕ್ಕೆ ಪ್ರತಿಕ್ರಯಿಸಿರುವ ಸಚಿವ ಸತೀಶ ಜಾರಕಿಹೊಳಿ, ಆ ಬಗ್ಗೆ ರಾಜ್ಯಪಾಲರ ವಿರುದ್ಧ ಈಗಗಾಲೇ ಸಾಕಷ್ಟು ಆರೋಪ ಕೇಳಿ ಬಂದಿವೆ. ನಾವು ರಾಜಕೀಯ ಪಕ್ಷವಾಗಿ ಎದುರಿಸಬೇಕಾಗಿದ್ದು, ಎದುರಿಸುತ್ತೇವೆ. ಸಿಎಂ ರಾಜೀನಾಮೆ ‌ಕೊಡುವ ಅವಶ್ಯಕತೆ ಇಲ್ಲ. ಸಿಎಂ ಮೇಲೆ ತನಿಖೆಯಾಗಿ ಆರೋಪ ಸಾಬೀತಾದ್ರೆ ಅದು ಎರಡನೇ ಹಂತ. ಕೇಂದ್ರ ಸರ್ಕಾರದ 25 ಮಂತ್ರಿಗಳ ಮೇಲೆ ಚಾರ್ಜ್​​ಸೀಟ್, ಕೇಸ್ ದಾಖಲಾಗಿವೆ. ಆದರೂ ಮಂತ್ರಿಗಳಾಗಿ ಮುಂದುವರೆದಿದ್ದಾರೆ. ಇದು ಇವತ್ತಿಂದಲ್ಲ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ನಡೆಯುತ್ತಲೇ ಇರುತ್ತದೆ ಎಂದು ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡರು.

7:48 PM, 17 Aug 2024 (IST)

ಕುಮಾರಸ್ವಾಮಿ ಅವರು ಏನು ಜ್ಯೋತಿಷ್ಯರಾ? ಶಿವಲಿಂಗೇಗೌಡ ಪ್ರಶ್ನೆ

ಬೆಂಗಳೂರು: ಹತ್ತು ತಿಂಗಳಲ್ಲಿ ಸರ್ಕಾರ ಬೀಳುತ್ತದೆಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕ ಶಿವಲಿಂಗೇಗೌಡ ಅವರು, ಕುಮಾರಸ್ವಾಮಿ ಅವರು ಏನು ಜ್ಯೋತಿಷ್ಯರಾ? ಎಂದು ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಜ್ಯೋತಿಷ್ಯರಲ್ಲ, ಅವರು ಕೇಂದ್ರ ಸಚಿವರು. ಪ್ರಜೆಗಳು ಏನು‌ ಹೇಳ್ತಾರೆ ಕಾದು ನೊಡೋಣ ಎಂದರು.

7:46 PM, 17 Aug 2024 (IST)

ನಾವು ಕೋರ್ಟ್​ಗೆ ಹೋಗುತ್ತೇವೆ: ಚಲುವರಾಯಸ್ವಾಮಿ

ಬೆಂಗಳೂರು: ಈ ದೇಶದಲ್ಲಿ ಕರ್ನಾಟಕದ್ದೇ ಭಯ. ಸಿಎಂ ಸಿದ್ದರಾಮಯ್ಯನವರೇ ಅವರಿಗೆ ಭಯ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನರೆಡ್ಡಿ ಎಲ್ಲರ ಕೇಸ್ ಪೆಂಡಿಂಗ್ ಇವೆ. ರಾಜ್ಯಪಾಲರ ಕಚೇರಿ ಬಿಜೆಪಿ ಮತ್ತು ಜೆಡಿಎಸ್ ಹೆಡ್ ಕ್ವಾಟರ್ ಆಗಿದೆ. ಸೋಮವಾರ ನಾವು ಕೋರ್ಟ್​ಗೆ ಹೋಗುತ್ತೇವೆ. ನೂರಕ್ಕೆ ನೂರು ನಮಗೆ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

4:38 PM, 17 Aug 2024 (IST)

ಪ್ರಾಸಿಕ್ಯೂಷನ್​ಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಅಹಿಂದ ಸಂಘಟನೆಗಳ ಪ್ರತಿಭಟನೆ

ಮುಡಾ ಹಗರಣ ಆರೋಪ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಅಹಿಂದ ಸಂಘಟನೆಗಳು ಬೀದಿಗಿಳಿದಿದ್ದಾರೆ. ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ದಿಢೀರ್ ಪ್ರತಿಭಟನೆಗೆ ಮುಂದಾಗಿವೆ. ದೇಶದ ರಾಜಕೀಯ ಇತಿಹಾಸದಲ್ಲೇ ರಾಜ್ಯಪಾಲರು ಪ್ರಾಮಾಣಿಕ ಮುಖ್ಯಮಂತ್ರಿ ಹಾಗೂ ನಿರಪರಾಧಿಯನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಕುತಂತ್ರಕ್ಕೆ ತಲೆಬಾಗಿ ಅನುಮತಿ ನೀಡಿರುವುದು ಅತ್ಯಂತ ದುರದೃಷ್ಟಕರ. ಅವರ ಹೆಸರಿಗೆ ಕಳಂಕ ತರಲು ಮತ್ತು ಸಿದ್ದರಾಮಯ್ಯನವರನ್ನು ಈ ಪ್ರಕರಣದಲ್ಲಿ ಸಿಲುಕಿಸಲು ರಾಜಭವನ ದುರ್ಬಳಕೆ ಮಾಡಿಕೊಂಡಿದೆ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

MUDA SCAM  PROSECUTION AGAINST CM SIDDARAMAIAH  THAWAR CHAND GEHLOT  BENGALURU
ಪ್ರಾಸಿಕ್ಯೂಷನ್​ಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ (undefined)

2:53 PM, 17 Aug 2024 (IST)

ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಕಾನೂನು ಹೋರಾಟ: ಡಿಕೆಶಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಅವರು 10 ಸಚಿವರೊಂದಿಗೆ ತುರ್ತು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಮಾಡಿದ್ದೇವೆ. ರಾಜ್ಯಪಾಲರು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ಮಾರಕವಾದ ಪತ್ರ ಕಳುಹಿಸಿದ್ದಾರೆ. ರಾಜ್ಯಪಾಲರ 26.7.2024ರ ನೋಟಿಸ್ ಸಂಬಂಧ ಏಪ್ರಿಲ್ 1ರಂದು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದೇವೆ. ದೂರಿನಲ್ಲಿ ತಿರುಳು ಇಲ್ಲ. ಸಂವಿಧಾನದ ಅಂಶಗಳನ್ನು ತಿಳಿ ತಿಳಿಯಾಗಿ ಹೇಳಿದ್ದೇವೆ. ಇದು ರಾಜಕೀಯ ಪಿತೂರಿ. ಮುಡಾ ಪ್ರಕರಣದಲ್ಲಿ ಯಾವುದೇ ಲೋಪದೋಷ ಆಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದು ತಿಳಿಸಿದರು.

2:49 PM, 17 Aug 2024 (IST)

ನಾನು ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರ, ನಾನು ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವವಾಗುವುದಿಲ್ಲ. ರಾಜೀನಾಮೆ ಕೊಡುವ ತಪ್ಪು ನಾನು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಇಂದು ಅರಮನೆ ಮೈದಾನದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚುನಾಯಿತ ಸರ್ಕಾರವನ್ನು ಕಿತ್ತು ಹಾಕಲು ಅನೇಕ ರಾಜ್ಯಗಳಲ್ಲಿ ಷಡ್ಯಂತರ ರೂಪಿಸಲಾಗಿದೆ. ಅದೇ ರೀತಿ ಇಲ್ಲೂ ಸಹ

ಬಿಜೆಪಿ, ಜೆಡಿಎಸ್, ಬೇರೆಯವರೆಲ್ಲಾ ಸೇರಿಕೊಂಡು ನಮ್ಮ ಸರ್ಕಾರವನ್ನು ಕೆಳಗಿಳಿಸಲು ಪ್ರಯತ್ನ ಪಡುತ್ತಿದ್ದಾರೆ. ನಾವು ಅದರ ವಿರುದ್ಧ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದರು.

ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವುದು (ETV Bharat)

12:58 PM, 17 Aug 2024 (IST)

ಸಿದ್ದರಾಮಯ್ಯ ಸ್ಥಿತಿ ನೋಡಿ ಬಹಳಷ್ಟು ಕಾಂಗ್ರೆಸ್ ನಾಯಕರು ಒಳಗೊಳಗೇ ಖುಷಿ ಪಟ್ಟಿದ್ದಾರೆ: ಸಂಸದ ಶೆಟ್ಟರ್

ಹುಬ್ಬಳ್ಳಿ: ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಪಾರಾಗಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಪಾರಾಗುವ ಪರಿಸ್ಥಿತಿ ಇಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಅವರು ಹೈಕೋರ್ಟ್, ಸುಪ್ರೀಂ ಕೋರ್ಟ್​ಗೂ ಹೋಗಬಹುದು. ಅಲ್ಲಿನ ನಿರ್ಧಾರದ ಮೇಲೆ ನಾವು ಪ್ರತಿಭಟನೆ ನಿರ್ಧಾರ ಮಾಡ್ತೇವೆ. ಈ ಪ್ರಕರಣದಲ್ಲಿ ಜಾತಿ, ಧರ್ಮ ತರಬಾರದು ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಈ ಪರಿಸ್ಥಿತಿ ಬಂದಿದ್ದನ್ನು ನೋಡಿ ಬಹಳಷ್ಟು ಜನ ಕಾಂಗ್ರೆಸ್ ನಾಯಕರು ಒಳಗೊಳಗೇ ಖುಷಿ ಪಡ್ತಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಪಾರಾಗಲು ಸಾಧ್ಯವಿಲ್ಲ. ಅಹಿಂದ ನಾಯಕನನ್ನ ಗುರಿಯಾಗಿಸಿದ್ದಾರೆ ಅನ್ನೋ ವಿಚಾರ, ನಾನು ಅಹಿಂದ ನಾಯಕ ನಾನು ಮಾಡಬಹುದು ಅನ್ನೋಕೆ ಬರುತ್ತಾ..? ಇದು ಸರಿಯಲ್ಲ ಎಂದರು.

12:55 PM, 17 Aug 2024 (IST)

ಸಚಿವರು, ಕಾನೂನು ಸಲಹೆಗಾರರ ಜೊತೆ ಸಿಎಂ ಚರ್ಚೆ

ಬೆಂಗಳೂರು: ಸಿಎಂ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಹಿನ್ನೆಲೆ ಸಿಎಂ ನಿವಾಸ ಕಾವೇರಿಗೆ ಸಚಿವರ ಭೇಟಿ ನೀಡಿದ್ದಾರೆ. ಡಿಸಿಎಂ ಡಿಕೆಶಿ, ಹೆಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ ಸೇರಿದಂತೆ ಇತರೆ ನಾಯಕರು ಸಿಎಂ ಜೊತೆ ಚರ್ಚಿಸುತ್ತಿದ್ದಾರೆ. ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಸಹ ಈ ಚರ್ಚೆಯಲ್ಲಿ ಭಾಗಿಯಾಗಿದ್ದಾರೆ.

ರಾಜಕೀಯ ಕಾರಣಕ್ಕಾಗಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ. ಒತ್ತಡದಿಂದಲೇ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಹೈಕೋರ್ಟ್​ನಲ್ಲಿ ಮೊದಲು ಅರ್ಜಿ ಸಲ್ಲಿಸೋಣ. ಸುಪ್ರೀಂಗೆ ಕಪಿಲ್ ಸಿಬಲ್ ಮನವಿ‌ ಸಲ್ಲಿಸಲಿದ್ದಾರೆ. ಇದರಲ್ಲಿ ನನ್ನ ತಪ್ಪು ಯಾವುದೂ ಇಲ್ಲ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನೆ ಮಾಡಿದೆ. ರಾಜಕೀಯ ಹಾಗೂ ಕಾನೂನಾತ್ಮಕ ಹೋರಾಟ ಸಂಬಂಧ ಖಡಕ್ ಸೂಚನೆ ನೀಡಿದೆ. ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು. ಇಡೀ ಪಕ್ಷ ಸಿಎಂ ಬೆನ್ನಿಗೆ ನಿಂತು ಹೋರಾಟ ಮಾಡುಬೇಕು. ರಾಜ್ಯಪಾಲರ ವಿರುದ್ಧವೂ ಹೋರಾಟ ಮುಂದುವರಿಸಬೇಕು ಎಂದು ಹೈಕಮಾಂಡ್​ ಹೇಳಿದೆ.

ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ನಾಯಕರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್,‌ ಉಸ್ತುವಾರಿ ಸುರ್ಜೇವಾಲಾ ಅವರು ಕರೆ ಮಾಡಿ, ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದರು. ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ. ಏನೇ ಆದರೂ ಕಾನೂನು ಹೋರಾಟ ನಡೆಸೋಣ ಎಂದು ಹೇಳಿದ್ದಾರೆ.

12:46 PM, 17 Aug 2024 (IST)

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ರಾಜಕೀಯ ಪ್ರೇರಿತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕಕರ್ ಆರೋಪ

ಬೆಳಗಾವಿ: ಈ ಹಿಂದೆ ಕುಮಾರಸ್ವಾಮಿ, ನಿರಾಣಿ, ಜೊಲ್ಲೆ ಅವರ ವಿರುದ್ಧ ಪ್ರಾಸಿಕ್ಯೂಶನ್ ನೀಡುವಂತೆ ಕೇಳಿಕೊಂಡಾಗ ರಾಜ್ಯಪಾಲರು ಅನುಮತಿ ಕೊಟ್ಟಿರಲಿಲ್ಲ. ಈಗ ತರಾತುರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಕೊಟ್ಟಿದ್ದು, ರಾಜಕೀಯ ಪ್ರೇರಿತ. ಈ ವಿಚಾರದಲ್ಲಿ ನಾವು ಗಾಬರಿ ಪಡುವ ಪ್ರಮೇಯವೇ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕಕರ್ ವಿಶ್ವಾಸ ವ್ಯಕ್ತಪಡಿಸಿದರು‌.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಲ್ಲೆಲ್ಲಿ ಬಿಜೆಪಿ ಹೊರತು ಪಡಿಸಿ ಬೇರೆ ಪಕ್ಷಗಳ ಚುನಾಯಿತ ಸರ್ಕಾರ ಆಡಳಿದಲ್ಲಿವೆ. ಅಲ್ಲೆಲ್ಲಾ ಬಿಜೆಪಿ ಇಂತ ಪ್ರಯೋಗಗಳನ್ನು ಮಾಡುತ್ತಿದೆ. ನಮ್ಮ ರಾಜ್ಯದಲ್ಲಿ ಸಾಂವಿಧಾನಿಕ ಹುದ್ದೆ ಹೊಂದಿರುವ ರಾಜ್ಯಪಾಲರು, ತಮಿಳುನಾಡು ಸೇರಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಆ ರೀತಿ ಇಲ್ಲ ಎಂಬ ಅಭಿಮಾನವಿತ್ತು. ಆದರೆ, ಇಂದು ಅವರು ಪ್ರಾಸಿಕ್ಯೂಷನ್​ಗೆ ಒಪ್ಪಿಕೊಂಡಿದ್ದು, ನಮ್ಮ ಇವತ್ತು ದುರ್ದೈವ. ಇದರ ಹಿಂದೆ ಬಿಜೆಪಿ ಹೈಕಮಾಂಡ್ ರಾಜ್ಯಪಾಲರಿಗೆ ಎಷ್ಟರ ಮಟ್ಟಿಗೆ ಒತ್ತಡ ಹಾಕಿದ್ದಾರೆ ಎಂಬುದು ಸಾಬೀತಾಗುತ್ತದೆ ಎಂದು ದೂರಿದರು.

12:40 PM, 17 Aug 2024 (IST)

ರಾಜ್ಯಪಾಲರ ವಜಾಕ್ಕೆ ಸಚಿವ ಈಶ್ವರ ಖಂಡ್ರೆ ಒತ್ತಾಯ

ಬೆಂಗಳೂರು : ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ.

12:38 PM, 17 Aug 2024 (IST)

ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ, ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಂಗಳೂರು : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು. ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

12:24 PM, 17 Aug 2024 (IST)

ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದು ಕಾನೂನು ಬದ್ದವಾದ ನಿರ್ಧಾರ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ ಬರುತ್ತಿದೆ. ಸಿಎಂ ರಾಜೀನಾಮೆ ಕೊಡಬೇಕು. ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹ ಮಾಡಿದ್ದೇವೆ. ಇದೀಗ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಗಳು ಸಹ ಕೇಸ್ ದಾಖಲಿಸಲು ಮುಂದಾಗಿದ್ದಾರೆ‌. ಇದಕ್ಕಾಗಿ ರಾಜ್ಯಪಾಲರು ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ ಅಂತಿಮವಾಗಿ ಅನುಮತಿ ಕೊಟ್ಟಿದ್ದಾರೆ. ಇದು ಕಾನೂನು ಬದ್ದವಾದ ನಿರ್ಧಾರವಾಗಿದೆ ಎಂದರು.

12:20 PM, 17 Aug 2024 (IST)

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಸಚಿವರುಗಳು ಹೇಳುವುದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೇಲೆ ಪ್ರಾಸಿಕ್ಯೂಷನ್​ಗೆ ಅನುನತಿ ನೀಡಿದ ರಾಜ್ಯಪಾಲರ ನಡೆಯನ್ನು ಸಚಿವರು, ಕಾಂಗ್ರೆಸ್ ಮುಖಂಡರು ಖಂಡಿಸಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆ ಎಂದು ಆರೋಪಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಈಗ ತಾನೇ ನನಗೂ ಸುದ್ದಿ ಬಂದಿದೆ. ಯಾವ ರೀತಿ ಅನುಮತಿ ಕೊಟ್ಟಿದ್ದಾರೋ ನೋಡಬೇಕು. ಕಾನೂನಾತ್ಮಕ ಹೋರಾಟ ಮಾಡ್ತೇವೆ ಅಂತಾ ಮೊದಲೇ ಹೇಳಿದ್ದೇವೆ. ಸಿಎಂ ಲೀಗಲ್ ಟೀಮ್ ಜೊತೆ ಚರ್ಚೆ ಮಾಡಿ ಮುಂದೆ ಹೋಗ್ತಾರೆ. ಕ್ಯಾಬಿನೆಟ್ ಅಡ್ವೈಸ್ ಮಾಡಿದ್ಮೇಲೂ ಕೊಟ್ಟಿದ್ದಾರೆ. ಕೊಡಲ್ಲ ಅಂದುಕೊಂಡಿದ್ವಿ. ಅವರಿಗೆ ಮೊದಲಿನಿಂದಲೂ ಮೇಲಿನಿಂದ ಒತ್ತಡ ಇದೆ ಅನ್ನೋದು ಸ್ಪಷ್ಟ ಇದೆ ಎಂದು ಆರೋಪಿಸಿದರು.

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌‌.ಬಿ ಪಾಟೀಲ್ ಕಿಡಿಕಾರಿದ್ದಾರೆ

ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಯತ್ನ: ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

12:17 PM, 17 Aug 2024 (IST)

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ರಾಜ್ಯಪಾಲರು ಯಾವ ಮಟ್ಟಕ್ಕೆ ಕೆಳಗಿಳಿದಿದ್ದಾರೆ ಅನ್ನುವುದು ತೋರಿಸುತ್ತದೆ : ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದು ನೋಡಿದಾಗ ಅವರು ಯಾವ ಮಟ್ಟಕ್ಕಿಳಿದಿದ್ದಾರೆ ಎಂಬುದನ್ನು ತೋರಿಸುತ್ತದೆ. ಗವರ್ನರ್ ಬಿಜೆಪಿಯ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಷಡ್ಯಂತರದ ಭಾಗ ಎಂಬುದು ಮೊದಲೇ ನಮಗೆ ಗೊತ್ತಿದೆ. ಮೋದಿ ಸರ್ಕಾರ ಎಲ್ಲಾ ಸಂವಿಧಾನಿಕ ಹುದ್ದೆಗಳನ್ನು ಸರ್ವನಾಶ ಮಾಡುತ್ತಿದೆ. ಇಡಿ, ಐಟಿ, ಸಿಬಿಐ ಎಲ್ಲವನ್ನೂ ದುರುಪಯೋಗ ಮಾಡಿದೆ. ರಾಜ್ಯಪಾಲರ ಕಚೇರಿ ಈಗ ಬಿಜೆಪಿ ಕಚೇರಿ ಆಗಿದೆ. ನಾವು ಕಾನೂನು ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಇದಕ್ಕೆಲ್ಲಾ ಜಗ್ಗೋದು ಇಲ್ಲ, ಬಗ್ಗೋದು ಇಲ್ಲ ಎಂದರು.

12:15 PM, 17 Aug 2024 (IST)

ಸಿದ್ದರಾಮಯ್ಯನವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ : ಬಿ.ವೈ.ವಿಜಯೇಂದ್ರ ಒತ್ತಾಯ

ಬೆಂಗಳೂರು : ರಾಜ್ಯಪಾಲರು ಪ್ರಾಷಿಕ್ಯೂಷನ್​ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಅವರು, ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದರು ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಒತ್ತಾಯಿಸಿದ್ದಾರೆ.

12:12 PM, 17 Aug 2024 (IST)

ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮುಡಾ ಹಗರಣರಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ದ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕೆಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಆಗ್ರಹಿಸಿದ್ದಾರೆ.

ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ದ ತನಿಖೆಗೆ ಆದೇಶ ನೀಡಿದ್ದಾರೆ. ಇದರಿಂದ ಸಿದ್ದರಾಮಯ್ಯನವರು ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಡಬೇಕು.ನನ್ನ ಮೇಲೆ ಆಪಾದನೆ ಬಂದಾಗ ನನ್ನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟೆದ್ದೆ. ಈಗ ಅವರ ಮೇಲಿಯೇ ಆರೋಪ ಬಂದಿದೆ. ಇದರಿಂದ
ಅವರು ಸಹ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಡ್ತಾರೆ ಅಂತಾ ನನಗೆ ವಿಶ್ವಾಸ ಇದೆ ಎಂದರು.

Last Updated : Aug 17, 2024, 9:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.