ETV Bharat / state

ಸಚಿವ ಬೈರತಿ ಸುರೇಶ್​ ಪುತ್ರನ ನಿಶ್ಚಿತಾರ್ಥ; ಒಟ್ಟಿಗೆ ಕುಳಿತು ಊಟ ಮಾಡಿದ ರಾಜ್ಯಪಾಲ ಗೆಹ್ಲೋಟ್​- ಡಿ ಕೆ ಶಿವಕುಮಾರ್ - Governor and DCM ate lunch

author img

By ETV Bharat Karnataka Team

Published : Aug 28, 2024, 6:49 PM IST

ಸಚಿವ ಬೈರತಿ ಸುರೇಶ್​ ಅವರ ಪುತ್ರ ಸಂಜಯ್ ಹಾಗೂ ಬಿಜೆಪಿ ಶಾಸಕ ಎಸ್. ಆರ್ ವಿಶ್ವನಾಥ್​ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಹಾಗೂ ಡಿಸಿಎಂ ಡಿ. ಕೆ ಶಿವಕುಮಾರ್ ಒಟ್ಟಿಗೆ ಕುಳಿತು ಊಟ ಸವಿದಿದ್ದಾರೆ.

governor-thawar-chand-gehlot-dcm-dk-shivakumar-eat-lunch-in-engagement-event
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​, ಡಿಸಿಎಂ ಡಿ ಕೆ ಶಿವಕುಮಾರ್ ಊಟ ಸವಿದರು (ETV Bharat)

ಬೆಂಗಳೂರು : ಮುಡಾ ಹಗರಣ ಸಂಬಂಧ ರಾಜಭವನ ಹಾಗೂ ರಾಜ್ಯ ಸರ್ಕಾರದ ನಡುವೆ ಕೆಲ ದಿನಗಳಿಂದ ತಿಕ್ಕಾಟ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದರ ನಡುವೆ ಇಂದು ಖಾಸಗಿ ಹೋಟೆಲ್​​ನಲ್ಲಿ ರಾಜ್ಯಪಾಲರು ಹಾಗೂ ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಮುಖಾಮುಖಿಯಾಗಿದ್ದು, ಒಂದೇ ಕಡೆ ಕುಳಿತು ಊಟ ಮಾಡಿದ್ದಾರೆ.

DCM D K Shivakumar and Governor Thawar Chand Gehlot
ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ (ETV Bharat)

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಇಂದು ನಡೆದ ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಬಿಜೆಪಿ ಶಾಸಕ ಎಸ್​. ಆರ್ ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಡಿಸಿಎಂ ಡಿ. ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಭಾಗವಹಿಸಿದ್ದರು. ಈ ವೇಳೆ ಸಚಿವ ಡಾ. ಎಂ. ಸಿ ಸುಧಾಕರ್, ಶಾಸಕ ಶರತ್ ಬಚ್ಚೇಗೌಡ ಸಹ ಉಪಸ್ಥಿತರಿದ್ದರು.

DCM D K Shivakumar
ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)

ಇದೇ ಸಂದರ್ಭದಲ್ಲಿ ಡಿಸಿಎಂ ಡಿ. ಕೆ ಶಿವಕುಮಾರ್ ಮತ್ತು ರಾಜ್ಯಪಾಲರು ಒಟ್ಟಿಗೆ ಕುಳಿತು ಊಟ ಮಾಡಿದರು. ಸ್ವಲ್ವ ಹೊತ್ತು ಕುಳಿತು ಲೋಕಾಭಿರಾಮವಾಗಿ ಮಾತನಾಡಿದರು.

ಇದನ್ನೂ ಓದಿ : ಬಿಜೆಪಿಯವರ ಮಾತು ಕೇಳಿ ರಾಜ್ಯಪಾಲರು ಬಿಲ್​ಗಳನ್ನು ವಾಪಾಸ್ ಕಳುಹಿಸಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್ - DCM DK Shivakumar Statement

ಬೆಂಗಳೂರು : ಮುಡಾ ಹಗರಣ ಸಂಬಂಧ ರಾಜಭವನ ಹಾಗೂ ರಾಜ್ಯ ಸರ್ಕಾರದ ನಡುವೆ ಕೆಲ ದಿನಗಳಿಂದ ತಿಕ್ಕಾಟ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದರ ನಡುವೆ ಇಂದು ಖಾಸಗಿ ಹೋಟೆಲ್​​ನಲ್ಲಿ ರಾಜ್ಯಪಾಲರು ಹಾಗೂ ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಮುಖಾಮುಖಿಯಾಗಿದ್ದು, ಒಂದೇ ಕಡೆ ಕುಳಿತು ಊಟ ಮಾಡಿದ್ದಾರೆ.

DCM D K Shivakumar and Governor Thawar Chand Gehlot
ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ (ETV Bharat)

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಇಂದು ನಡೆದ ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಬಿಜೆಪಿ ಶಾಸಕ ಎಸ್​. ಆರ್ ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಡಿಸಿಎಂ ಡಿ. ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಭಾಗವಹಿಸಿದ್ದರು. ಈ ವೇಳೆ ಸಚಿವ ಡಾ. ಎಂ. ಸಿ ಸುಧಾಕರ್, ಶಾಸಕ ಶರತ್ ಬಚ್ಚೇಗೌಡ ಸಹ ಉಪಸ್ಥಿತರಿದ್ದರು.

DCM D K Shivakumar
ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)

ಇದೇ ಸಂದರ್ಭದಲ್ಲಿ ಡಿಸಿಎಂ ಡಿ. ಕೆ ಶಿವಕುಮಾರ್ ಮತ್ತು ರಾಜ್ಯಪಾಲರು ಒಟ್ಟಿಗೆ ಕುಳಿತು ಊಟ ಮಾಡಿದರು. ಸ್ವಲ್ವ ಹೊತ್ತು ಕುಳಿತು ಲೋಕಾಭಿರಾಮವಾಗಿ ಮಾತನಾಡಿದರು.

ಇದನ್ನೂ ಓದಿ : ಬಿಜೆಪಿಯವರ ಮಾತು ಕೇಳಿ ರಾಜ್ಯಪಾಲರು ಬಿಲ್​ಗಳನ್ನು ವಾಪಾಸ್ ಕಳುಹಿಸಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್ - DCM DK Shivakumar Statement

ETV Bharat Logo

Copyright © 2024 Ushodaya Enterprises Pvt. Ltd., All Rights Reserved.