ETV Bharat / state

ಗಲ್ಲಿ ಕ್ರಿಕೆಟ್‌ ಗಲಾಟೆಯಲ್ಲಿ 8 ಜನರಿಗೆ ಗಾಯ; ತಲ್ವಾರ್ ಪ್ರದರ್ಶಿಸಿದ ಆರೋಪ, ಬೆಳಗಾವಿಯಲ್ಲಿ ಕಟ್ಟೆಚ್ಚರ - Gully Cricket Turns Violent

author img

By ETV Bharat Karnataka Team

Published : May 24, 2024, 7:01 AM IST

Updated : May 24, 2024, 7:14 AM IST

ಕ್ರಿಕೆಟ್​ ಆಡುತ್ತಿದ್ದಾಗ ಶುರುವಾದ ಜಗಳ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಡಿಕೊಂಡು ಹಲವರು ಗಾಯಗೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಹೈ ಅಲರ್ಟ್
ಬೆಳಗಾವಿ ನಗರದಲ್ಲಿ ಹೈ ಅಲರ್ಟ್ (ETV Bharat)

ಬೆಳಗಾವಿಯಲ್ಲಿ ಕಟ್ಟೆಚ್ಚರ (ETV Bharat)

ಬೆಳಗಾವಿ: ಗಲ್ಲಿ ಕ್ರಿಕೆಟ್​ ಜಗಳ ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿ 8 ಜನರು ಗಾಯಗೊಂಡ ಘಟನೆ ಬೆಳಗಾವಿ ನಗರದ ಅಳ್ವಾನ್​ ಗಲ್ಲಿಯಲ್ಲಿ ಗುರುವಾರ ಸಂಜೆ ನಡೆದಿದೆ. ಈ ಸಂದರ್ಭದಲ್ಲಿ ಕೆಲವರು ತಲ್ವಾರ್​ ಪ್ರದರ್ಶಿಸಿರುವ ಆರೋಪವಿದ್ದು, ಸ್ಥಳದಲ್ಲಿ ಸದ್ಯ ಬಿಗುವಿನ‌ ವಾತಾವರಣ ನಿರ್ಮಾಣವಾಗಿದೆ. ಘಟನೆ ಸಂಬಂಧ 10 ಜನರನ್ನು ಶಾಹಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಪೂರ್ಣ ವಿವರ: ಶಹಾಪುರ ಪೊಲೀಸ್ ಠಾಣೆಯ ಸಮೀಪದ ಅಳ್ವಾನ್ ಗಲ್ಲಿಯಲ್ಲಿ ಸಂಜೆ 5ರ ಸುಮಾರಿಗೆ ಚಿಕ್ಕ‌ ಮಕ್ಕಳ ನಡುವೆ ಕ್ರಿಕೆಟ್ ವಿಚಾರದಲ್ಲಿ ಗಲಾಟೆ ಆರಂಭವಾಗಿದೆ. ಈ ಗಲಾಟೆಯಲ್ಲಿ ಎರಡು ಗುಂಪಿನ ಯುವಕರು ಮಧ್ಯಪ್ರವೇಶಿಸಿದ್ದಾರೆ. ಯುವಕರ‌ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹೊಡೆದಾಡಿಕೊಂಡದ್ದಾರೆ. ಪರಿಣಾಮ, 8 ಜನರು ಗಾಯಗೊಂಡಿದ್ದು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಕಾನ್ಸ್‌ಟೇಬಲ್‌ ಅಮರ್​ ಎಂಬವರೂ ಗಾಯಗೊಂಡಿದ್ದಾರೆ. ಇದೀಗ ಘಟನಾ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂರು ಕೆಎಸ್ಆರ್‌ಪಿ, ಮೂರು ಮಂದಿ ಸಿಪಿಐ ನಿಯೋಜಿಸಲಾಗಿದೆ.

ಘಟನೆಯ ಮಾಹಿತಿ ಪಡೆದು ಶಹಾಪುರ ಪೊಲೀಸ್ ಠಾಣೆಗೆ ದೌಡಾಯಿಸಿದ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಸಿಬ್ಬಂದಿಯಿಂದ ಮಾಹಿತಿ ಪಡೆದರು. ಇದೀಗ ಬೆಳಗಾವಿ ನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆಯೂ ಕಮಿಷನರ್ ಸೂಚನೆ ನೀಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ.

10 ಮಂದಿ ಬಂಧನ: ಆಳ್ವಾನ್ ಕಾಲೋನಿಯಲ್ಲಿನ ಘಟನೆಗೆ ಸಂಬಂಧಿಸಿದಂತೆ 10 ಜನರನ್ನು ಶಾಹಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿನ ಸಿಸಿಟಿವ್ಹಿ ದೃಶಾವಳಿ ಆಧರಿಸಿ ಕಿಡಿಗೇಡಿಗಳನ್ನು ಬಂಧಿಸಲಾಗಿದೆ. ಶಹಾಪೂರ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ. ಘರ್ಷಣೆಯಲ್ಲಿ ಎರಡೂ ಕಡೆಯ ಮಕ್ಕಳ ಪೋಷಕರು ಭಾಗಿಯಾಗಿರುವ ಆರೋಪದ ಮೇಲೆ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಆಯುಕ್ತರ ಪ್ರತಿಕ್ರಿಯೆ: ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, "ಬೆಳಗಾವಿ ನಗರ ಸೇರಿದಂತೆ ಹೊರ ಜಿಲ್ಲೆಯಿಂದ ಹೆಚ್ಚುವರಿ ಸಿಬ್ಬಂದಿಯನ್ನು ಕರೆಯಿಸುತ್ತಿದ್ದೇವೆ. ಗಲಾಟೆಯಲ್ಲಿ 8 ಜನರಿಗೆ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆ ಶುರುವಾಗಿ ನಂತರ ವಿಕೋಪಕ್ಕೆ ತಿರುಗಿದೆ. ಗಲಾಟೆ ಸಂದರ್ಭದಲ್ಲಿ ತಲ್ವಾರ್ ಝಳಪಿಸಿದವರ ಕುರಿತು ಮಾಹಿತಿ ಇದೆ. ಸ್ಥಳದಲ್ಲಿರುವ ಸಿಸಿಟಿವಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ಯಾರೂ ಕೂಡಾ ಸುಳ್ಳು ವದಂತಿಗಳನ್ನು ಹರಡಿಸಬಾರದು. ಅಂಥ ಕೃತ್ಯ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ" ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಬೆಂಗಳೂರು: ಮೃತ ಪೊಲೀಸ್​ ಐಡಿ ಬಳಸಿ ಸಂಚಾರಿ ಉಲ್ಲಂಘನೆಯ ದಂಡ ವಸೂಲಿ ಮಾಡುತ್ತಿದ್ದ ವಂಚಕರ ಸೆರೆ - Three arrested For using Fake ID

ಬೆಳಗಾವಿಯಲ್ಲಿ ಕಟ್ಟೆಚ್ಚರ (ETV Bharat)

ಬೆಳಗಾವಿ: ಗಲ್ಲಿ ಕ್ರಿಕೆಟ್​ ಜಗಳ ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿ 8 ಜನರು ಗಾಯಗೊಂಡ ಘಟನೆ ಬೆಳಗಾವಿ ನಗರದ ಅಳ್ವಾನ್​ ಗಲ್ಲಿಯಲ್ಲಿ ಗುರುವಾರ ಸಂಜೆ ನಡೆದಿದೆ. ಈ ಸಂದರ್ಭದಲ್ಲಿ ಕೆಲವರು ತಲ್ವಾರ್​ ಪ್ರದರ್ಶಿಸಿರುವ ಆರೋಪವಿದ್ದು, ಸ್ಥಳದಲ್ಲಿ ಸದ್ಯ ಬಿಗುವಿನ‌ ವಾತಾವರಣ ನಿರ್ಮಾಣವಾಗಿದೆ. ಘಟನೆ ಸಂಬಂಧ 10 ಜನರನ್ನು ಶಾಹಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಪೂರ್ಣ ವಿವರ: ಶಹಾಪುರ ಪೊಲೀಸ್ ಠಾಣೆಯ ಸಮೀಪದ ಅಳ್ವಾನ್ ಗಲ್ಲಿಯಲ್ಲಿ ಸಂಜೆ 5ರ ಸುಮಾರಿಗೆ ಚಿಕ್ಕ‌ ಮಕ್ಕಳ ನಡುವೆ ಕ್ರಿಕೆಟ್ ವಿಚಾರದಲ್ಲಿ ಗಲಾಟೆ ಆರಂಭವಾಗಿದೆ. ಈ ಗಲಾಟೆಯಲ್ಲಿ ಎರಡು ಗುಂಪಿನ ಯುವಕರು ಮಧ್ಯಪ್ರವೇಶಿಸಿದ್ದಾರೆ. ಯುವಕರ‌ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹೊಡೆದಾಡಿಕೊಂಡದ್ದಾರೆ. ಪರಿಣಾಮ, 8 ಜನರು ಗಾಯಗೊಂಡಿದ್ದು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಕಾನ್ಸ್‌ಟೇಬಲ್‌ ಅಮರ್​ ಎಂಬವರೂ ಗಾಯಗೊಂಡಿದ್ದಾರೆ. ಇದೀಗ ಘಟನಾ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂರು ಕೆಎಸ್ಆರ್‌ಪಿ, ಮೂರು ಮಂದಿ ಸಿಪಿಐ ನಿಯೋಜಿಸಲಾಗಿದೆ.

ಘಟನೆಯ ಮಾಹಿತಿ ಪಡೆದು ಶಹಾಪುರ ಪೊಲೀಸ್ ಠಾಣೆಗೆ ದೌಡಾಯಿಸಿದ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಸಿಬ್ಬಂದಿಯಿಂದ ಮಾಹಿತಿ ಪಡೆದರು. ಇದೀಗ ಬೆಳಗಾವಿ ನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆಯೂ ಕಮಿಷನರ್ ಸೂಚನೆ ನೀಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ.

10 ಮಂದಿ ಬಂಧನ: ಆಳ್ವಾನ್ ಕಾಲೋನಿಯಲ್ಲಿನ ಘಟನೆಗೆ ಸಂಬಂಧಿಸಿದಂತೆ 10 ಜನರನ್ನು ಶಾಹಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿನ ಸಿಸಿಟಿವ್ಹಿ ದೃಶಾವಳಿ ಆಧರಿಸಿ ಕಿಡಿಗೇಡಿಗಳನ್ನು ಬಂಧಿಸಲಾಗಿದೆ. ಶಹಾಪೂರ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ. ಘರ್ಷಣೆಯಲ್ಲಿ ಎರಡೂ ಕಡೆಯ ಮಕ್ಕಳ ಪೋಷಕರು ಭಾಗಿಯಾಗಿರುವ ಆರೋಪದ ಮೇಲೆ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಆಯುಕ್ತರ ಪ್ರತಿಕ್ರಿಯೆ: ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, "ಬೆಳಗಾವಿ ನಗರ ಸೇರಿದಂತೆ ಹೊರ ಜಿಲ್ಲೆಯಿಂದ ಹೆಚ್ಚುವರಿ ಸಿಬ್ಬಂದಿಯನ್ನು ಕರೆಯಿಸುತ್ತಿದ್ದೇವೆ. ಗಲಾಟೆಯಲ್ಲಿ 8 ಜನರಿಗೆ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆ ಶುರುವಾಗಿ ನಂತರ ವಿಕೋಪಕ್ಕೆ ತಿರುಗಿದೆ. ಗಲಾಟೆ ಸಂದರ್ಭದಲ್ಲಿ ತಲ್ವಾರ್ ಝಳಪಿಸಿದವರ ಕುರಿತು ಮಾಹಿತಿ ಇದೆ. ಸ್ಥಳದಲ್ಲಿರುವ ಸಿಸಿಟಿವಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ಯಾರೂ ಕೂಡಾ ಸುಳ್ಳು ವದಂತಿಗಳನ್ನು ಹರಡಿಸಬಾರದು. ಅಂಥ ಕೃತ್ಯ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ" ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಬೆಂಗಳೂರು: ಮೃತ ಪೊಲೀಸ್​ ಐಡಿ ಬಳಸಿ ಸಂಚಾರಿ ಉಲ್ಲಂಘನೆಯ ದಂಡ ವಸೂಲಿ ಮಾಡುತ್ತಿದ್ದ ವಂಚಕರ ಸೆರೆ - Three arrested For using Fake ID

Last Updated : May 24, 2024, 7:14 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.