ETV Bharat / state

ಸಾಲ ವಸೂಲಾತಿಗೆ ಬೆಳಗ್ಗೆ 9 ಗಂಟೆ ಮುಂಚೆ, ಸಂಜೆ 6 ಗಂಟೆ ನಂತರ ಕರೆ ಮಾಡುವಂತಿಲ್ಲ: ಡಿಸಿ ಖಡಕ್ ಸೂಚನೆ - BALLARI DC MEETING

ಮೈಕ್ರೋ ಫೈನಾನ್ಸ್ ಕಂಪನಿಗಳು ಕಡ್ಡಾಯವಾಗಿ ಆರ್‌ಬಿಐ ಮಾರ್ಗಸೂಚಿ ಪಾಲನೆ ಮಾಡಬೇಕು. ಸಾಲ ವಸೂಲಿ ನೆಪದಲ್ಲಿ ಕಿರುಕುಳ ನೀಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

BALLARI DC MEETING
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ. (ETV Bharat)
author img

By ETV Bharat Karnataka Team

Published : Feb 11, 2025, 10:31 AM IST

ಬಳ್ಳಾರಿ: ಜಿಲ್ಲೆಯಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್‌ಬಿಐ ಮಾರ್ಗಸೂಚಿಯ ಅನ್ವಯ ಕಾರ್ಯನಿರ್ವಹಿಸಬೇಕು. ಸಾಲ ವಸೂಲಾತಿ ನೆಪದಲ್ಲಿ ಮಾನಸಿಕವಾಗಿ ನಿಂದಿಸುವುದು, ಅವಾಚ್ಯ ಶಬ್ದ ಬಳಸುವುದು, ಅವಮಾನಿಸುವ ಪ್ರಕರಣಗಳು ಕಂಡುಬದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಖಡಕ್ ಸೂಚನೆ ನೀಡಿದರು.

ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ಹಿನ್ನೆಲೆ ಹಾಗೂ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ. (ETV Bharat)

ಜಿಲ್ಲೆಯಲ್ಲಿ ಸಾಲ ವಸೂಲಾತಿ ನೆಪದಲ್ಲಿ ಯಾವುದೇ ಕಿರುಕುಳ ಪ್ರಕರಣಗಳು ವರದಿಯಾಗಿಲ್ಲ. ಕಂಪನಿಗಳ ಪದಾಧಿಕಾರಿಗಳು ಸಾರ್ವಜನಿಕ ವಲಯದಲ್ಲಿ ಉತ್ತಮ ಭಾಂದವ್ಯ ಇಟ್ಟುಕೊಳ್ಳಬೇಕು. ಕಿರುಕುಳ ಪ್ರಕರಣಗಳಿಗೆ ಆಸ್ಪದ ನೀಡಬಾರದು ಎಂದು ಸೂಚಿಸಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಆತ್ಮಹತ್ಯೆ ಪ್ರಕರಣಗಳ ಕುರಿತಾಗಿ ಈಗಾಗಲೇ ಸಿಎಂ ಹಾಗೂ ಕಂದಾಯ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ, ಸುಗ್ರಿವಾಜ್ಞೆ ತರುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಯ್ದೆಯು ಜಾರಿಗೆ ಬರಲಿದೆ ಎಂದು ತಿಳಿಸಿದರು.

ಆರ್‌ಬಿಐ ಮಾರ್ಗಸೂಚಿ ಪಾಲನೆ ಕಡ್ಡಾಯ: ಮೈಕ್ರೋ ಫೈನಾನ್ಸ್ ಕಂಪನಿಗಳು ಕಡ್ಡಾಯವಾಗಿ ಆರ್‌ಬಿಐ ಮಾರ್ಗಸೂಚಿ ಪಾಲನೆ ಮಾಡಬೇಕು. ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮ ಬದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ನಿಯಮಬಾಹಿರ ಮಾರ್ಗ ಅನುಸರಿಸಬಾರದು. ಸಾಲ ಮಂಜೂರಾತಿ ಸಂದರ್ಭದಲ್ಲಿ ನೇರವಾಗಿ ಸಾಲ ಪಡೆದವರೊಂದಿಗೇ ವ್ಯವಹರಿಸಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂದರು.

ಕಿರುಕುಳ ನೀಡುವಂತಿಲ್ಲ: ಸಾಲ ಮಂಜೂರಾತಿ ನಿಯಮಗಳು, ಸಾಲದ ಮೊತ್ತ, ಅವಧಿ, ಬಡ್ಡಿ ದರ, ಹಿಂಪಾವತಿ ಅವಧಿ ಸೇರಿದಂತೆ ಅಗತ್ಯ ಮಾಹಿತಿಗಳನ್ನೊಳಗೊಂಡ ಮಾರ್ಗಸೂಚಿ ಸಾಲ ಪಡೆಯುವವರಿಗೆ ಕಡ್ಡಾಯವಾಗಿ ನೀಡಬೇಕು. ಪಡೆದ ಸಾಲ ವಸೂಲಾತಿ ನೆಪದಲ್ಲಿ ಯಾವುದೇ ಕಾರಣಕ್ಕೂ ಕಿರುಕುಳ ನೀಡುವಂತಿಲ್ಲ ಎಂದು ಇದೇ ವೇಳೆ ಅವರು ತಾಕೀತು ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾತಾನಾಡಿ, ಜಿಲ್ಲೆಯಲ್ಲಿ ಒಟ್ಟು 118 ಮೈಕ್ರೋ ಫೈನಾನ್ಸ್ ಕಂಪನಿಗಳಿದ್ದು, ಅದರಲ್ಲಿ 27 ಕಂಪನಿಗಳು ಮಾತ್ರ ಆರ್‌ಬಿಐ ನಡಿ ಅಧೀಕೃತವಾಗಿ ನೋಂದಾಯಿಸಿಕೊಂಡಿವೆ. ಇನ್ನುಳಿದ 97 ಕಂಪನಿಗಳು ನೋಂದಾಯಿಸಿಕೊಂಡಿಲ್ಲ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿ ಅಥವಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ನೀಡಬೇಕು. ಅಧಿಕಾರಿ ಮತ್ತು ಸಿಬ್ಬಂದಿ ಎಸ್‌ಪಿ ಕಚೇರಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ತಾವು ನೇಮಕಗೊಂಡಿರುವ ಕುರಿತು ದಾಖಲೆಗಳ ಪರಿಶೀಲನೆ ಮಾಡಿಸಬೇಕು. ಇದರಿಂದ ವಸೂಲಾತಿಗೆ ತೆರಳುವ ಏಜೆಂಟರುಗಳ ಮಾಹಿತಿ ಇರುತ್ತದೆ. ಮುಖ್ಯವಾಗಿ ಸಾಲ ವಸೂಲಾತಿಗೆ ಬೆಳಗ್ಗೆ 09 ಗಂಟೆಯ ಮುಂಚೆ ಮತ್ತು ಸಂಜೆ 06 ಗಂಟೆಯ ನಂತರ ಕರೆ ಮಾಡುವುದಾಗಲೀ, ಮನೆಯ ಬಳಿ ಹೋಗುವುದಾಗಲೀ ಮಾಡುವಂತಿಲ್ಲ. ಅನಗತ್ಯವಾಗಿ ಮಾನಹಾನಿ, ಕಿರುಕುಳ ನೀಡುವುದು ಕಂಡುಬಂದಲ್ಲಿ ಮುಲಾಜಿಲ್ಲದೇ ಕೇಸ್ ದಾಖಲು ಮಾಡಿಕೊಳ್ಳಲಾಗುವುದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಒತ್ತಡ ಹೇರುವಂತಿಲ್ಲ: ಸಾಲ ಮಂಜೂರಾತಿ ಸಂದರ್ಭದಲ್ಲಿಯೇ ಸಂಸ್ಥೆಯ ಎಲ್ಲಾ ಷರತ್ತು ಹಾಗೂ ನಿಬಂಧನೆಗಳನ್ನು ಸಾಲ ಪಡೆಯುವವರಿಗೆ ಮನವರಿಕೆ ಮಾಡಿಕೊಡಬೇಕು. ನಿಯಮಬದ್ಧವಾಗಿಯೇ ಸಾಲ ವಸೂಲಾತಿ ಮಾಡಬೇಕು. ಯಾವುದೇ ತರಹದ ಒತ್ತಡವನ್ನು ಸಾಲಗಾರರ ಮೇಲೆ ಹೇರಬಾರದು. ಅಪರಾಧ ಹಿನ್ನಲೆ ಹೊಂದಿರುವರನ್ನು ಸಾಲ ವಸೂಲಾತಿಗೆ ನೇಮಿಸಿಕೊಳ್ಳಬಾರದು ಎಂದು ಇದೇ ವೇಳೆ ಅವರು ಹೇಳಿದರು.

ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಹಣ ವಸೂಲಾತಿ ನೆಪದಲ್ಲಿ ಮಾನಹಾನಿ ಇಲ್ಲವೇ ಕಿರುಕುಳ ನೀಡುವುದು ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 9480803000ಗೆ ಕರೆ ಮಾಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದರು.

ಇಂತಹ ಪ್ರಕರಣಗಳಲ್ಲಿ ಶಿಕ್ಷೆಯ ವಿಧಾನಗಳು, ದಂಡದ ಪ್ರಮಾಣಗಳನ್ನು ಸಭೆಯಲ್ಲಿ ತಿಳಿಸಲಾಯಿತು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಉಪವಿಭಾಗಾಧಿಕಾರಿ ಪಿ.ಪ್ರಮೋದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಿರೀಶ್ ವಿ. ಕುಲಕರ್ಣಿ ಸೇರಿದಂತೆ ವಿವಿಧ ಮೈಕ್ರೋಫೈನಾನ್ಸ್ ಕಂಪನಿಗಳ ವ್ಯವಸ್ಥಾಪಕರು, ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ನಿಯಮ ಪಾಲನೆಗೆ ಸಿಎಸ್ ಸೂಚನೆ: ಇಲ್ಲಿದೆ ಸಹಾಯವಾಣಿ - MICROFINANCE HARASSMENT

ಬಳ್ಳಾರಿ: ಜಿಲ್ಲೆಯಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್‌ಬಿಐ ಮಾರ್ಗಸೂಚಿಯ ಅನ್ವಯ ಕಾರ್ಯನಿರ್ವಹಿಸಬೇಕು. ಸಾಲ ವಸೂಲಾತಿ ನೆಪದಲ್ಲಿ ಮಾನಸಿಕವಾಗಿ ನಿಂದಿಸುವುದು, ಅವಾಚ್ಯ ಶಬ್ದ ಬಳಸುವುದು, ಅವಮಾನಿಸುವ ಪ್ರಕರಣಗಳು ಕಂಡುಬದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಖಡಕ್ ಸೂಚನೆ ನೀಡಿದರು.

ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ಹಿನ್ನೆಲೆ ಹಾಗೂ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ. (ETV Bharat)

ಜಿಲ್ಲೆಯಲ್ಲಿ ಸಾಲ ವಸೂಲಾತಿ ನೆಪದಲ್ಲಿ ಯಾವುದೇ ಕಿರುಕುಳ ಪ್ರಕರಣಗಳು ವರದಿಯಾಗಿಲ್ಲ. ಕಂಪನಿಗಳ ಪದಾಧಿಕಾರಿಗಳು ಸಾರ್ವಜನಿಕ ವಲಯದಲ್ಲಿ ಉತ್ತಮ ಭಾಂದವ್ಯ ಇಟ್ಟುಕೊಳ್ಳಬೇಕು. ಕಿರುಕುಳ ಪ್ರಕರಣಗಳಿಗೆ ಆಸ್ಪದ ನೀಡಬಾರದು ಎಂದು ಸೂಚಿಸಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಆತ್ಮಹತ್ಯೆ ಪ್ರಕರಣಗಳ ಕುರಿತಾಗಿ ಈಗಾಗಲೇ ಸಿಎಂ ಹಾಗೂ ಕಂದಾಯ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ, ಸುಗ್ರಿವಾಜ್ಞೆ ತರುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಯ್ದೆಯು ಜಾರಿಗೆ ಬರಲಿದೆ ಎಂದು ತಿಳಿಸಿದರು.

ಆರ್‌ಬಿಐ ಮಾರ್ಗಸೂಚಿ ಪಾಲನೆ ಕಡ್ಡಾಯ: ಮೈಕ್ರೋ ಫೈನಾನ್ಸ್ ಕಂಪನಿಗಳು ಕಡ್ಡಾಯವಾಗಿ ಆರ್‌ಬಿಐ ಮಾರ್ಗಸೂಚಿ ಪಾಲನೆ ಮಾಡಬೇಕು. ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮ ಬದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ನಿಯಮಬಾಹಿರ ಮಾರ್ಗ ಅನುಸರಿಸಬಾರದು. ಸಾಲ ಮಂಜೂರಾತಿ ಸಂದರ್ಭದಲ್ಲಿ ನೇರವಾಗಿ ಸಾಲ ಪಡೆದವರೊಂದಿಗೇ ವ್ಯವಹರಿಸಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂದರು.

ಕಿರುಕುಳ ನೀಡುವಂತಿಲ್ಲ: ಸಾಲ ಮಂಜೂರಾತಿ ನಿಯಮಗಳು, ಸಾಲದ ಮೊತ್ತ, ಅವಧಿ, ಬಡ್ಡಿ ದರ, ಹಿಂಪಾವತಿ ಅವಧಿ ಸೇರಿದಂತೆ ಅಗತ್ಯ ಮಾಹಿತಿಗಳನ್ನೊಳಗೊಂಡ ಮಾರ್ಗಸೂಚಿ ಸಾಲ ಪಡೆಯುವವರಿಗೆ ಕಡ್ಡಾಯವಾಗಿ ನೀಡಬೇಕು. ಪಡೆದ ಸಾಲ ವಸೂಲಾತಿ ನೆಪದಲ್ಲಿ ಯಾವುದೇ ಕಾರಣಕ್ಕೂ ಕಿರುಕುಳ ನೀಡುವಂತಿಲ್ಲ ಎಂದು ಇದೇ ವೇಳೆ ಅವರು ತಾಕೀತು ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾತಾನಾಡಿ, ಜಿಲ್ಲೆಯಲ್ಲಿ ಒಟ್ಟು 118 ಮೈಕ್ರೋ ಫೈನಾನ್ಸ್ ಕಂಪನಿಗಳಿದ್ದು, ಅದರಲ್ಲಿ 27 ಕಂಪನಿಗಳು ಮಾತ್ರ ಆರ್‌ಬಿಐ ನಡಿ ಅಧೀಕೃತವಾಗಿ ನೋಂದಾಯಿಸಿಕೊಂಡಿವೆ. ಇನ್ನುಳಿದ 97 ಕಂಪನಿಗಳು ನೋಂದಾಯಿಸಿಕೊಂಡಿಲ್ಲ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿ ಅಥವಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ನೀಡಬೇಕು. ಅಧಿಕಾರಿ ಮತ್ತು ಸಿಬ್ಬಂದಿ ಎಸ್‌ಪಿ ಕಚೇರಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ತಾವು ನೇಮಕಗೊಂಡಿರುವ ಕುರಿತು ದಾಖಲೆಗಳ ಪರಿಶೀಲನೆ ಮಾಡಿಸಬೇಕು. ಇದರಿಂದ ವಸೂಲಾತಿಗೆ ತೆರಳುವ ಏಜೆಂಟರುಗಳ ಮಾಹಿತಿ ಇರುತ್ತದೆ. ಮುಖ್ಯವಾಗಿ ಸಾಲ ವಸೂಲಾತಿಗೆ ಬೆಳಗ್ಗೆ 09 ಗಂಟೆಯ ಮುಂಚೆ ಮತ್ತು ಸಂಜೆ 06 ಗಂಟೆಯ ನಂತರ ಕರೆ ಮಾಡುವುದಾಗಲೀ, ಮನೆಯ ಬಳಿ ಹೋಗುವುದಾಗಲೀ ಮಾಡುವಂತಿಲ್ಲ. ಅನಗತ್ಯವಾಗಿ ಮಾನಹಾನಿ, ಕಿರುಕುಳ ನೀಡುವುದು ಕಂಡುಬಂದಲ್ಲಿ ಮುಲಾಜಿಲ್ಲದೇ ಕೇಸ್ ದಾಖಲು ಮಾಡಿಕೊಳ್ಳಲಾಗುವುದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಒತ್ತಡ ಹೇರುವಂತಿಲ್ಲ: ಸಾಲ ಮಂಜೂರಾತಿ ಸಂದರ್ಭದಲ್ಲಿಯೇ ಸಂಸ್ಥೆಯ ಎಲ್ಲಾ ಷರತ್ತು ಹಾಗೂ ನಿಬಂಧನೆಗಳನ್ನು ಸಾಲ ಪಡೆಯುವವರಿಗೆ ಮನವರಿಕೆ ಮಾಡಿಕೊಡಬೇಕು. ನಿಯಮಬದ್ಧವಾಗಿಯೇ ಸಾಲ ವಸೂಲಾತಿ ಮಾಡಬೇಕು. ಯಾವುದೇ ತರಹದ ಒತ್ತಡವನ್ನು ಸಾಲಗಾರರ ಮೇಲೆ ಹೇರಬಾರದು. ಅಪರಾಧ ಹಿನ್ನಲೆ ಹೊಂದಿರುವರನ್ನು ಸಾಲ ವಸೂಲಾತಿಗೆ ನೇಮಿಸಿಕೊಳ್ಳಬಾರದು ಎಂದು ಇದೇ ವೇಳೆ ಅವರು ಹೇಳಿದರು.

ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಹಣ ವಸೂಲಾತಿ ನೆಪದಲ್ಲಿ ಮಾನಹಾನಿ ಇಲ್ಲವೇ ಕಿರುಕುಳ ನೀಡುವುದು ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 9480803000ಗೆ ಕರೆ ಮಾಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದರು.

ಇಂತಹ ಪ್ರಕರಣಗಳಲ್ಲಿ ಶಿಕ್ಷೆಯ ವಿಧಾನಗಳು, ದಂಡದ ಪ್ರಮಾಣಗಳನ್ನು ಸಭೆಯಲ್ಲಿ ತಿಳಿಸಲಾಯಿತು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಉಪವಿಭಾಗಾಧಿಕಾರಿ ಪಿ.ಪ್ರಮೋದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಿರೀಶ್ ವಿ. ಕುಲಕರ್ಣಿ ಸೇರಿದಂತೆ ವಿವಿಧ ಮೈಕ್ರೋಫೈನಾನ್ಸ್ ಕಂಪನಿಗಳ ವ್ಯವಸ್ಥಾಪಕರು, ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ನಿಯಮ ಪಾಲನೆಗೆ ಸಿಎಸ್ ಸೂಚನೆ: ಇಲ್ಲಿದೆ ಸಹಾಯವಾಣಿ - MICROFINANCE HARASSMENT

ETV Bharat Logo

Copyright © 2025 Ushodaya Enterprises Pvt. Ltd., All Rights Reserved.