ETV Bharat / state

ಗುರುವಾಯನಕೆರೆಯಲ್ಲಿ ಅಕ್ರಮವಾಗಿ ಕಾಲೇಜು ಕಟ್ಟಡ ನಿರ್ಮಾಣ ಆರೋಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - Illegal College Building

author img

By ETV Bharat Karnataka Team

Published : Sep 4, 2024, 8:10 AM IST

Updated : Sep 4, 2024, 8:21 AM IST

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಪ್ರದೇಶದಲ್ಲಿನ ಅಕ್ರಮ ಕಾಲೇಜು ಕಟ್ಟಡದ ವಿರುದ್ಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.

HIGH COURT
ಹೈಕೋರ್ಟ್ (ETV Bharat)

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಪ್ರದೇಶದಲ್ಲಿ ಖಾಸಗಿ ವ್ಯಕ್ತಿ ಅಕ್ರಮವಾಗಿ ಕಾಲೇಜು ಕಟ್ಟಡ ನಿರ್ಮಿಸಿರುವುದನ್ನು ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ತೆಂಕಕಾರಂದೂರು ಗ್ರಾಮದ ನಿವಾಸಿ ಅಶೋಕ್ ಆಚಾರ್ಯ ಎಂಬವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್​ ಅವರಿದ್ದ ವಿಭಾಗೀಯ ನ್ಯಾಯಪೀಠ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ, ಪಂಚಾಯತ್‌ರಾಜ್​ ಎಂಜಿನಿಯರಿಂಗ್​​ ಇಲಾಖೆಯ ಬೆಳ್ತಂಗಡಿ ಉಪ ವಿಭಾಗದ ಸಹಾಯಕ ಕಾರ್ಯಕಾರಿ ಇಂಜಿನಿಯರ್​, ಸಣ್ಣ ನೀರಾವರಿ ಹಾಗೂ ಎಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ ಉಪ ವಿಭಾಗದ ಕಾರ್ಯಕಾರಿ ಎಂಜಿನಿಯರ್, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕುವೆಟ್ಟು ಗ್ರಾ.ಪಂ.ಪಿಡಿಒ, ಕಟ್ಟಡದ ಮಾಲೀಕ ಬಿ.ಸುಮಂತ್ ಕುಮಾರ್ ಜೈನ್‌ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆ.18ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಕೆರೆ ಪ್ರದೇಶದ 30 ಮೀಟರ್​​​ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡಗಳ ನಿರ್ಮಾಣಕ್ಕೆ ನಿರ್ಬಂಧವಿದೆ. ಆದರೆ, ಗುರುವಾಯನ ಕೆರೆ ಪ್ರದೇಶಕ್ಕೆ ಹೊಂದಿಕೊಂಡಂತೆ ಸರ್ವೇ ನಂ. 13/2, 13/10, 13/16, 13/17ಗಳಲ್ಲಿ ಕೆರೆಯ ಸ್ವಲ್ಪ ಭಾಗವನ್ನು ಒತ್ತುವರಿ ಮಾಡಿ ಇನ್‌ಫಿನಿಟಿ ಲರ್ನಿಂಗ್ ಫೌಂಡೇಷನ್ ಎಂಬ ನಾಲ್ಕು ಮಹಡಿಯ ಕಟ್ಟಡ ನಿರ್ಮಿಸಿದ್ದಾರೆ. ಅಲ್ಲಿ ಎಕ್ಸಲ್​ ಪಿಯು ಕಾಲೇಜು ನಡೆಸುತ್ತಿದ್ದಾರೆ. ಇದಕ್ಕೂ ಮೇಲಾಗಿ ಈಗ ಕೆರೆಗೆ ಹೊಂದಿಕೊಂಡ ಸರ್ವೇ ನಂ. 168/2 ಮತ್ತು 168/3ಗಳಲ್ಲಿ ಬಹುಮಹಡಿ ಕಟ್ಟಡ ನಿರ್ಮಿಸಲಾಗುತ್ತಿದೆ. ಆದ್ದರಿಂದ ಈ ಅಕ್ರಮ ಕಟ್ಟಡ ತೆರವುಗೊಳಿಸಬೇಕು ಹಾಗೂ ಪ್ರಗತಿಯಲ್ಲಿರುವ ಕಟ್ಟಡ ನಿರ್ಮಾಣ ಕಾರ್ಯಕ್ಕೆ ತಡೆ ನೀಡಬೇಕೆಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ: ಪೂಜೆ ನೆಪದಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ: ಜ್ಯೋತಿಷಿ, ಪತಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಣೆ - High court

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಪ್ರದೇಶದಲ್ಲಿ ಖಾಸಗಿ ವ್ಯಕ್ತಿ ಅಕ್ರಮವಾಗಿ ಕಾಲೇಜು ಕಟ್ಟಡ ನಿರ್ಮಿಸಿರುವುದನ್ನು ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ತೆಂಕಕಾರಂದೂರು ಗ್ರಾಮದ ನಿವಾಸಿ ಅಶೋಕ್ ಆಚಾರ್ಯ ಎಂಬವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್​ ಅವರಿದ್ದ ವಿಭಾಗೀಯ ನ್ಯಾಯಪೀಠ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ, ಪಂಚಾಯತ್‌ರಾಜ್​ ಎಂಜಿನಿಯರಿಂಗ್​​ ಇಲಾಖೆಯ ಬೆಳ್ತಂಗಡಿ ಉಪ ವಿಭಾಗದ ಸಹಾಯಕ ಕಾರ್ಯಕಾರಿ ಇಂಜಿನಿಯರ್​, ಸಣ್ಣ ನೀರಾವರಿ ಹಾಗೂ ಎಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ ಉಪ ವಿಭಾಗದ ಕಾರ್ಯಕಾರಿ ಎಂಜಿನಿಯರ್, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕುವೆಟ್ಟು ಗ್ರಾ.ಪಂ.ಪಿಡಿಒ, ಕಟ್ಟಡದ ಮಾಲೀಕ ಬಿ.ಸುಮಂತ್ ಕುಮಾರ್ ಜೈನ್‌ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆ.18ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಕೆರೆ ಪ್ರದೇಶದ 30 ಮೀಟರ್​​​ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡಗಳ ನಿರ್ಮಾಣಕ್ಕೆ ನಿರ್ಬಂಧವಿದೆ. ಆದರೆ, ಗುರುವಾಯನ ಕೆರೆ ಪ್ರದೇಶಕ್ಕೆ ಹೊಂದಿಕೊಂಡಂತೆ ಸರ್ವೇ ನಂ. 13/2, 13/10, 13/16, 13/17ಗಳಲ್ಲಿ ಕೆರೆಯ ಸ್ವಲ್ಪ ಭಾಗವನ್ನು ಒತ್ತುವರಿ ಮಾಡಿ ಇನ್‌ಫಿನಿಟಿ ಲರ್ನಿಂಗ್ ಫೌಂಡೇಷನ್ ಎಂಬ ನಾಲ್ಕು ಮಹಡಿಯ ಕಟ್ಟಡ ನಿರ್ಮಿಸಿದ್ದಾರೆ. ಅಲ್ಲಿ ಎಕ್ಸಲ್​ ಪಿಯು ಕಾಲೇಜು ನಡೆಸುತ್ತಿದ್ದಾರೆ. ಇದಕ್ಕೂ ಮೇಲಾಗಿ ಈಗ ಕೆರೆಗೆ ಹೊಂದಿಕೊಂಡ ಸರ್ವೇ ನಂ. 168/2 ಮತ್ತು 168/3ಗಳಲ್ಲಿ ಬಹುಮಹಡಿ ಕಟ್ಟಡ ನಿರ್ಮಿಸಲಾಗುತ್ತಿದೆ. ಆದ್ದರಿಂದ ಈ ಅಕ್ರಮ ಕಟ್ಟಡ ತೆರವುಗೊಳಿಸಬೇಕು ಹಾಗೂ ಪ್ರಗತಿಯಲ್ಲಿರುವ ಕಟ್ಟಡ ನಿರ್ಮಾಣ ಕಾರ್ಯಕ್ಕೆ ತಡೆ ನೀಡಬೇಕೆಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ: ಪೂಜೆ ನೆಪದಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ: ಜ್ಯೋತಿಷಿ, ಪತಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಣೆ - High court

Last Updated : Sep 4, 2024, 8:21 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.