ETV Bharat / state

ಮಳೆ ಅಬ್ಬರ; ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಹಲವೆಡೆ ಯೆಲ್ಲೋ ಅಲರ್ಟ್​ ಘೋಷಣೆ - Rain Red Alert

ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

author img

By ETV Bharat Karnataka Team

Published : Jul 8, 2024, 3:04 PM IST

rain forecast
ಮಳೆ (ETV Bharat)

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ ವಾರದಿಂದ ಭರ್ಜರಿ ಮಳೆಯಾಗುತ್ತಿದೆ. ಇನ್ನಷ್ಟು ವರ್ಷಧಾರೆ ಸುರಿಯುವ ಸಂಭವ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಇಂದು ಮಧ್ಯಾಹ್ನದಿಂದ ನಾಳೆ ಬೆಳಗ್ಗೆಯವರೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇನ್ನು ಅದೇ ಜಿಲ್ಲೆಗಳಿಗೆ ಜುಲೈ 9 ಮತ್ತು 12ರಂದು ಆರೆಂಜ್ ಅಲರ್ಟ್, ಜುಲೈ 10 ಮತ್ತು 11ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆಯಲ್ಲಿ ಇಂದು, ಬೆಳಗಾವಿ ಜಿಲ್ಲೆಗೆ ಇಂದು ಮತ್ತು ಜುಲೈ 12ರಂದು, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಇಂದು, ನಾಳೆ ಮತ್ತು ಜುಲೈ 11ರಂದು, ಯಾದಗಿರಿ ಜಿಲ್ಲೆಗೆ ಇಂದು ಮತ್ತು ಜುಲೈ 11ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರಕ್ಕೆ ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಇಂದು ಆರೆಂಜ್ ಮತ್ತು ನಾಳೆ, ಜುಲೈ 11, 12ರಂದು ಯೆಲ್ಲೋ ಅಲರ್ಟ್, ಹಾಸನ ಜಿಲ್ಲೆಗೆ ಇಂದು ಮತ್ತು ಜುಲೈ 12ರಂದು ಯೆಲ್ಲೋ ಅಲರ್ಟ್ ಇದೆ.

ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ನಿರಂತರವಾಗಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಹಾಸನ ಜಿಲ್ಲೆಯಲ್ಲಿಯೂ ಸಹ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ನಿರಂತರ ಗಾಳಿ ಮಳೆಯಾಗಲಿದೆ.

ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ 27 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

''ದಕ್ಷಿಣ ಗುಜರಾತ್​ನಿಂದ ಉತ್ತರ ಕೇರಳದ ಕರಾವಳಿಯುದ್ದಕ್ಕೂ ಸಮುದ್ರ ಮಟ್ಟದಲ್ಲಿ ಸರಾಸರಿ ಆಫ್ ದರೋ ಟ್ರಫ್ ಇದೆ. ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗುತ್ತಿದೆ. ಮುಂಗಾರು ಮಾರುತಗಳು ಸರಾಸರಿ ಸಮುದ್ರ ಮಟ್ಟದಿಂದ 4.5 ಮತ್ತು 7.6 ಕಿಮೀ ಎತ್ತರದಲ್ಲಿ ಇದೆ. ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯಲಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ: ಚಿಕ್ಕೋಡಿಯಲ್ಲಿ ಐದು ಸೇತುವೆಗಳು ಜಲಾವೃತ - Chikkodi Rain

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ ವಾರದಿಂದ ಭರ್ಜರಿ ಮಳೆಯಾಗುತ್ತಿದೆ. ಇನ್ನಷ್ಟು ವರ್ಷಧಾರೆ ಸುರಿಯುವ ಸಂಭವ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಇಂದು ಮಧ್ಯಾಹ್ನದಿಂದ ನಾಳೆ ಬೆಳಗ್ಗೆಯವರೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇನ್ನು ಅದೇ ಜಿಲ್ಲೆಗಳಿಗೆ ಜುಲೈ 9 ಮತ್ತು 12ರಂದು ಆರೆಂಜ್ ಅಲರ್ಟ್, ಜುಲೈ 10 ಮತ್ತು 11ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆಯಲ್ಲಿ ಇಂದು, ಬೆಳಗಾವಿ ಜಿಲ್ಲೆಗೆ ಇಂದು ಮತ್ತು ಜುಲೈ 12ರಂದು, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಇಂದು, ನಾಳೆ ಮತ್ತು ಜುಲೈ 11ರಂದು, ಯಾದಗಿರಿ ಜಿಲ್ಲೆಗೆ ಇಂದು ಮತ್ತು ಜುಲೈ 11ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರಕ್ಕೆ ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಇಂದು ಆರೆಂಜ್ ಮತ್ತು ನಾಳೆ, ಜುಲೈ 11, 12ರಂದು ಯೆಲ್ಲೋ ಅಲರ್ಟ್, ಹಾಸನ ಜಿಲ್ಲೆಗೆ ಇಂದು ಮತ್ತು ಜುಲೈ 12ರಂದು ಯೆಲ್ಲೋ ಅಲರ್ಟ್ ಇದೆ.

ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ನಿರಂತರವಾಗಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಹಾಸನ ಜಿಲ್ಲೆಯಲ್ಲಿಯೂ ಸಹ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ನಿರಂತರ ಗಾಳಿ ಮಳೆಯಾಗಲಿದೆ.

ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ 27 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

''ದಕ್ಷಿಣ ಗುಜರಾತ್​ನಿಂದ ಉತ್ತರ ಕೇರಳದ ಕರಾವಳಿಯುದ್ದಕ್ಕೂ ಸಮುದ್ರ ಮಟ್ಟದಲ್ಲಿ ಸರಾಸರಿ ಆಫ್ ದರೋ ಟ್ರಫ್ ಇದೆ. ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗುತ್ತಿದೆ. ಮುಂಗಾರು ಮಾರುತಗಳು ಸರಾಸರಿ ಸಮುದ್ರ ಮಟ್ಟದಿಂದ 4.5 ಮತ್ತು 7.6 ಕಿಮೀ ಎತ್ತರದಲ್ಲಿ ಇದೆ. ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯಲಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ: ಚಿಕ್ಕೋಡಿಯಲ್ಲಿ ಐದು ಸೇತುವೆಗಳು ಜಲಾವೃತ - Chikkodi Rain

ETV Bharat Logo

Copyright © 2024 Ushodaya Enterprises Pvt. Ltd., All Rights Reserved.