ETV Bharat / state

ಬೆಂಗಳೂರಲ್ಲಿ ಭಾರೀ ಮಳೆ, ಮರಗಳು ಧರಾಶಾಹಿ: ನಮ್ಮ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ, ಟ್ರಾಫಿಕ್ ಜಾಮ್ - Bengaluru Rain

ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಹಲವು ರಸ್ತೆಗಳಲ್ಲಿ ನೀರು ನಿಂತಿದೆ. ಮರದ ರೆಂಬೆ, ಕೊಂಬೆಗಳು ನೆಲಕ್ಕುರುಳಿ ಟ್ರಾಫಿಕ್ ಜಾಮ್ ಉಂಟಾಗಿದೆ.

author img

By ETV Bharat Karnataka Team

Published : Jun 2, 2024, 10:13 PM IST

Updated : Jun 2, 2024, 11:04 PM IST

Trees have fallen on the metro tracks of Bengaluru.
ಮೆಟ್ರೋ ಹಳಿ ಮೇಲೆ ಮರದ ಕೊಂಬೆಗಳು ಬಿದ್ದಿರುವುದು. (ETV Bharat)
ಡಿ.ಕೆ.ಶಿವಕುಮಾರ್ (ETV Bharat)

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರುನಲ್ಲಿ ಇಂದು ಸಂಜೆ ಗುಡುಗುಸಹಿತ ಜೋರು ಮಳೆಯಾಗಿದೆ. ಹಲವೆಡೆ ಮರ, ರೆಂಬೆ, ಕೊಂಬೆಗಳು ನೆಲಕ್ಕುರುಳಿವೆ. ಬನಶಂಕರಿ, ಕುಮಾರಸ್ವಾಮಿ ಲೇಔಟ್, ಎಳಚೇನಹಳ್ಳಿ, ಉತ್ತರಹಳ್ಳಿ, ಪದ್ಮನಾಭನಗರ ಸೇರಿದಂತೆ ಅನೇಕ ಕಡೆಗಳಲ್ಲಿ ಮಳೆಯಾದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.

ಕಸ್ತೂರಿ ನಗರ ಕಡೆಯಿಂದ ಎಂಎಂಟಿ ಜಂಕ್ಷನ್‌ನಿಂದ ಕೆ.ಆರ್.ಪುರ ಕಡೆಗೆ ಹೋಗುವ ಮಾರ್ಗದಲ್ಲಿ ಎಂಎಂಟಿ ಬಸ್ ನಿಲ್ದಾಣದ ಹತ್ತಿರ ಮಳೆ ನೀರು ನಿಂತಿರುವುದರಿಂದ ವೈಟ್‌ಫೀಲ್ಡ್, ಮಹದೇವಪುರ ಕಡೆಗೆ ಹೋಗುವ ವಾಹನ ಸವಾರರಿಗೆ ತೊಂದರೆ ಉಂಟಾಯಿತು. ಇದರೊಂದಿಗೆ ಜಯಮಹಲ್ ಮುಖ್ಯರಸ್ತೆ ಬಳಿ ನೀರು ನಿಂತಿತ್ತು. ಟಿನ್‌ ಫ್ಯಾಕ್ಟರಿ ಕಡೆಯಿಂದ ಕಸ್ತೂರಿ ನಗರ ಕಡೆಗೆ ಹೋಗುವ ಮಾರ್ಗದಲ್ಲಿ ನೀರು ನಿಂತು ರಾಮಮೂರ್ತಿ ನಗರದ ಕಡೆಗೆ ಹೋಗುವ ವಾಹನ ಸವಾರರಿಗೆ ಸಮಸ್ಯೆ ಎದುರಾಯಿತು. ಒಆರ್‌ಆರ್ ರಸ್ತೆ, ಬೆನ್ನಿಗಾನಹಳ್ಳಿ ರೈಲ್ವೆ ಮೇಲ್ಸೇತುವೆ, ಕೆಂಪೇಗೌಡ ಬಸ್​ ನಿಲ್ದಾಣ, ಶಿವಾಜಿನಗರ, ಕೆಆರ್ ವೃತ್ತ, ಎಂಜಿ ರಸ್ತೆ, ಕೆಆರ್ ಮಾರುಕಟ್ಟೆ, ವೈಟ್‌ಫೀಲ್ಡ್ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ಆಯಿತು.

ಮೆಟ್ರೋ ರೈಲು ಸೇವೆ ತಾತ್ಕಾಲಿಕ ಸ್ಥಗಿತ: ಭಾರೀ ಮಳೆಯಿಂದಾಗಿ ಮರದ ಕೊಂಬೆಗಳು ಎಂಜಿ ರಸ್ತೆ ಮತ್ತು ಟ್ರಿನಿಟಿ ನಿಲ್ದಾಣಗಳ ನಡುವಿನ ವಯಡಕ್ಟ್ ಟ್ರ್ಯಾಕ್‌ನಲ್ಲಿ ಬಿದ್ದಿವೆ. ಇದರಿಂದ ಎಂಜಿ ರಸ್ತೆ ಮತ್ತು ಇಂದಿರಾನಗರ ನಡುವೆ ಮೆಟ್ರೋ ರೈಲು ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಆದಾಗ್ಯೂ, ನೇರಳೆ ಮಾರ್ಗದ ಇಂದಿರಾನಗರ ಮತ್ತು ವೈಟ್‌ಫೀಲ್ಡ್ ಹಾಗೂ ಚಲ್ಲಘಟ್ಟ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಶಾರ್ಟ್ ಲೂಪ್‌ಗಳು ಚಾಲನೆಯಲ್ಲಿದೆ ಎಂದು ನಮ್ಮ ಮೆಟ್ರೋ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀವಾಸ್ ರಾಜಗೋಪಾಲನ್ ಮಾಹಿತಿ ನೀಡಿದ್ದಾರೆ.

ಡಿಸಿಎಂ ಡಿಕೆಶಿ ಪ್ರತಿಕ್ರಿಯೆ: ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಯಾವುದೇ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಂತರ ಮಾತನಾಡಿದ ಅವರು, ಮಳೆ ನೀರಿನಿಂದ ತೊಂದರೆ ಆಗಬಾರದು. ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ. ಕಂಟ್ರೋಲ್ ರೂಮ್‌ನವರು ಜಾಗೃತರಾಗಿದ್ದಾರೆ ಎಂದರು.

ನಾಳೆ ಬೆಳಿಗ್ಗೆ 10 ಗಂಟೆಗೆ ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ನಾಮಪತ್ರ ಸಲ್ಲಿಸಲಾಗುವುದು. ಇದು ಬಿಟ್ಟು ಬೇರೆ ಯಾವುದೇ ವಿಷಯ ಚರ್ಚೆಯಾಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಧಾರಾಕಾರ ಮಳೆ; 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಡಿ.ಕೆ.ಶಿವಕುಮಾರ್ (ETV Bharat)

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರುನಲ್ಲಿ ಇಂದು ಸಂಜೆ ಗುಡುಗುಸಹಿತ ಜೋರು ಮಳೆಯಾಗಿದೆ. ಹಲವೆಡೆ ಮರ, ರೆಂಬೆ, ಕೊಂಬೆಗಳು ನೆಲಕ್ಕುರುಳಿವೆ. ಬನಶಂಕರಿ, ಕುಮಾರಸ್ವಾಮಿ ಲೇಔಟ್, ಎಳಚೇನಹಳ್ಳಿ, ಉತ್ತರಹಳ್ಳಿ, ಪದ್ಮನಾಭನಗರ ಸೇರಿದಂತೆ ಅನೇಕ ಕಡೆಗಳಲ್ಲಿ ಮಳೆಯಾದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.

ಕಸ್ತೂರಿ ನಗರ ಕಡೆಯಿಂದ ಎಂಎಂಟಿ ಜಂಕ್ಷನ್‌ನಿಂದ ಕೆ.ಆರ್.ಪುರ ಕಡೆಗೆ ಹೋಗುವ ಮಾರ್ಗದಲ್ಲಿ ಎಂಎಂಟಿ ಬಸ್ ನಿಲ್ದಾಣದ ಹತ್ತಿರ ಮಳೆ ನೀರು ನಿಂತಿರುವುದರಿಂದ ವೈಟ್‌ಫೀಲ್ಡ್, ಮಹದೇವಪುರ ಕಡೆಗೆ ಹೋಗುವ ವಾಹನ ಸವಾರರಿಗೆ ತೊಂದರೆ ಉಂಟಾಯಿತು. ಇದರೊಂದಿಗೆ ಜಯಮಹಲ್ ಮುಖ್ಯರಸ್ತೆ ಬಳಿ ನೀರು ನಿಂತಿತ್ತು. ಟಿನ್‌ ಫ್ಯಾಕ್ಟರಿ ಕಡೆಯಿಂದ ಕಸ್ತೂರಿ ನಗರ ಕಡೆಗೆ ಹೋಗುವ ಮಾರ್ಗದಲ್ಲಿ ನೀರು ನಿಂತು ರಾಮಮೂರ್ತಿ ನಗರದ ಕಡೆಗೆ ಹೋಗುವ ವಾಹನ ಸವಾರರಿಗೆ ಸಮಸ್ಯೆ ಎದುರಾಯಿತು. ಒಆರ್‌ಆರ್ ರಸ್ತೆ, ಬೆನ್ನಿಗಾನಹಳ್ಳಿ ರೈಲ್ವೆ ಮೇಲ್ಸೇತುವೆ, ಕೆಂಪೇಗೌಡ ಬಸ್​ ನಿಲ್ದಾಣ, ಶಿವಾಜಿನಗರ, ಕೆಆರ್ ವೃತ್ತ, ಎಂಜಿ ರಸ್ತೆ, ಕೆಆರ್ ಮಾರುಕಟ್ಟೆ, ವೈಟ್‌ಫೀಲ್ಡ್ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ಆಯಿತು.

ಮೆಟ್ರೋ ರೈಲು ಸೇವೆ ತಾತ್ಕಾಲಿಕ ಸ್ಥಗಿತ: ಭಾರೀ ಮಳೆಯಿಂದಾಗಿ ಮರದ ಕೊಂಬೆಗಳು ಎಂಜಿ ರಸ್ತೆ ಮತ್ತು ಟ್ರಿನಿಟಿ ನಿಲ್ದಾಣಗಳ ನಡುವಿನ ವಯಡಕ್ಟ್ ಟ್ರ್ಯಾಕ್‌ನಲ್ಲಿ ಬಿದ್ದಿವೆ. ಇದರಿಂದ ಎಂಜಿ ರಸ್ತೆ ಮತ್ತು ಇಂದಿರಾನಗರ ನಡುವೆ ಮೆಟ್ರೋ ರೈಲು ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಆದಾಗ್ಯೂ, ನೇರಳೆ ಮಾರ್ಗದ ಇಂದಿರಾನಗರ ಮತ್ತು ವೈಟ್‌ಫೀಲ್ಡ್ ಹಾಗೂ ಚಲ್ಲಘಟ್ಟ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಶಾರ್ಟ್ ಲೂಪ್‌ಗಳು ಚಾಲನೆಯಲ್ಲಿದೆ ಎಂದು ನಮ್ಮ ಮೆಟ್ರೋ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀವಾಸ್ ರಾಜಗೋಪಾಲನ್ ಮಾಹಿತಿ ನೀಡಿದ್ದಾರೆ.

ಡಿಸಿಎಂ ಡಿಕೆಶಿ ಪ್ರತಿಕ್ರಿಯೆ: ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಯಾವುದೇ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಂತರ ಮಾತನಾಡಿದ ಅವರು, ಮಳೆ ನೀರಿನಿಂದ ತೊಂದರೆ ಆಗಬಾರದು. ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ. ಕಂಟ್ರೋಲ್ ರೂಮ್‌ನವರು ಜಾಗೃತರಾಗಿದ್ದಾರೆ ಎಂದರು.

ನಾಳೆ ಬೆಳಿಗ್ಗೆ 10 ಗಂಟೆಗೆ ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ನಾಮಪತ್ರ ಸಲ್ಲಿಸಲಾಗುವುದು. ಇದು ಬಿಟ್ಟು ಬೇರೆ ಯಾವುದೇ ವಿಷಯ ಚರ್ಚೆಯಾಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಧಾರಾಕಾರ ಮಳೆ; 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Last Updated : Jun 2, 2024, 11:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.