ETV Bharat / state

ಬೆಂಗಳೂರಲ್ಲಿ ಮಳೆ ಅವಾಂತರಕ್ಕೆ 100ಕ್ಕೂ ಹೆಚ್ಚು ಮರಗಳು ಧರಾಶಾಹಿ; ಇನ್ನೂ ಐದು ದಿನ ವರುಣನ ಆರ್ಭಟ - Bengaluru Rain

ಈಗಾಗಲೇ ರಾಜ್ಯಕ್ಕೆ ಮಾನ್ಸೂನ್ ಪ್ರವೇಶಿಸಿದ್ದು, ಭಾರೀ ಮಳೆಯಾಗುತ್ತಿದೆ. ಹಲವೆಡೆ ಈಗಾಗಲೇ ಯೆಲ್ಲೋ ಅಲರ್ಟ್​ ಘೋಷಣೆಯಾಗಿದೆ.

author img

By ETV Bharat Karnataka Team

Published : Jun 3, 2024, 1:38 PM IST

Updated : Jun 3, 2024, 2:56 PM IST

Trees fallen on houses and Vehicles
ಮನೆ ವಾಹನಗಳ ಮೇಲೆ ಬಿದ್ದಿರುವ ಮರಗಳು (ETV Bharat)
ಬೆಂಗಳೂರಲ್ಲಿ ಮಳೆ ಅವಾಂತರಕ್ಕೆ 100ಕ್ಕೂ ಹೆಚ್ಚು ಮರಗಳು ಧರಾಶಾಹಿ; ಇನ್ನೂ ಐದು ದಿನ ವರುಣನ ಆರ್ಭಟ (ETV Bharat)

ಬೆಂಗಳೂರು: ರಾಜಧಾನಿಯಲ್ಲಿ ಸತತ ವರುಣಾರ್ಭಟ ಮುಂದುವರಿದಿದಿದ್ದು, ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿ ನಾಗರಿಕರು ಪರದಾಡುವಂತಾಗಿದೆ. ಶನಿವಾರ ಕೂಡ ಧಾರಾಕಾರ ಮಳೆಯಿಂದ ಜನರು ತೊಂದರೆ ಅನುಭವಿಸಿದ್ದರು. ಭಾನುವಾರ ಸಂಜೆ 5.30ಕ್ಕೆ ಶುರುವಾದ ಬಿರುಗಾಳಿ, ಗುಡುಗು ಮಿಂಚುಸಹಿತ ಮಳೆಯು ತಡರಾತ್ರಿವರೆಗೂ ಸುರಿದಿರುವುದು ಸಾಕಷ್ಟು ಅವಘಡಗಳಿಗೆ ಕಾರಣವಾಗಿದೆ.

ನಿನ್ನೆ ರಾತ್ರಿ ಬಿದ್ದ ಭಾರೀ ಮಳೆಯಿಂದಾಗಿ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಸುಮಾರು 100ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಕ್ಷೇತ್ರದಲ್ಲಿ ಶಾಸಕ ಕೆ.ಗೋಪಾಲಯ್ಯ ಅಧಿಕಾರಿಗಳ ಜೊತೆ ಸಂಚರಿಸಿ, ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿದರು.

Tree fallen on Car
ಕಾರು ಮೇಲೆ ಬಿದ್ದ ಮರ (ETV Bharat)

ಸುಮಾರು 10ಕ್ಕೂ ಹೆಚ್ಚು ಕಡೆ ಮನೆಗಳ ಮೇಲೆ ಮರಗಳು ಬಿದ್ದಿದ್ದು, ಮನೆಯಲ್ಲಿದ್ದವರನ್ನು ಹೊರಗೆ ಕರೆತಂದಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ನ, ಕರ್ನಾಟಕ ಲೇಔಟ್, ಬೆಮೆಲ್ ಲೇಔಟ್, ಕಿರ್ಲೋಸ್ಕರ್ ಕಾಲೊನಿ ಹಾಗೂ ಕುರುಬರಹಳ್ಳಿ ಮೇನ್​ ರೋಡ್, ಕಮಲ ನಗರದ ವಾಟರ್ ಟ್ಯಾಂಕ್ ಮುಖ್ಯರಸ್ತೆ ಮೊದಲಾದ ಕಡೆ ಹಲವು ಮರಗಳು ಉರುಳಿ ಬಿದ್ದಿವೆ. ಬೆಳಗ್ಗೆಯಿಂದ ತೆರವು ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಶಾಸಕರು ಖುದ್ದು ತೆರವು ನಡೆಯುತ್ತಿರುವ ಸ್ಥಳಗಳಲ್ಲಿ ಹಾಜರಿದ್ದು, ತೆರವು ಕಾರ್ಯವನ್ನು ಚುರುಕುಗೊಳಿಸಿದರು.

ಈ ಸಂಬಂಧ ಶಾಸಕರು ಮಾತನಾಡಿ, "ಮರಗಳ ತೆರವು ಕಾರ್ಯ ಮಾಡುವ ಸಿಬ್ಬಂದಿಯ ಕೊರತೆ ಇದ್ದು, ಇನ್ನಷ್ಟು ಸಿಬ್ಬಂದಿಯನ್ನು ಬಿಬಿಎಂಪಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು. ಆದಷ್ಟು ಬೇಗ‌ ಸಿಎಂ ಸಿದ್ದರಾಮಯ್ಯ ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ನೀಡಬೇಕು" ಎಂದು ಒತ್ತಾಯಿಸಿದರು.

ಇನ್ನೂ ಐದು ದಿನ ಮಳೆ: ನಗರದಲ್ಲಿ ಸುರಿಯುತ್ತಿರುವ ಮಳೆ ಮುಂದಿನ 5 ದಿನ ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ. ಜೂ.3 ಮತ್ತು 5ರಿಂದ ಎರಡು ದಿನಗಳು ಭಾರೀ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕಳೆದ ಎರಡು ದಿನಗಳಲ್ಲಿ ಉದ್ಯಾನನಗರಿಯಲ್ಲಿ ವಾಡಿಕೆಗಿಂತ ಹೆಚ್ಚು ಪ್ರಮಾಣದ ವರ್ಷಧಾರೆಯಾಗಿದೆ.

Tree fallen on Car
ಕಾರು ಮೇಲೆ ಬಿದ್ದ ಮರ (ETV Bharat)

110 ಎಂ.ಎಂ ಮಳೆ, 130 ಮರಗಳು ಧರೆಗೆ: ನಿನ್ನೆ ರಾತ್ರಿಯಿಂದ ಇಲ್ಲಿಯವರೆಗೆ 110 ಎಂ.ಎಂ ಮಳೆ ಸುರಿದಿದ್ದು, ನಗರದಲ್ಲಿ ಒಟ್ಟು 130 ಮರಗಳು ಧರೆಗುರುಳಿವೆ. ಸುಮಾರು 150 ರೆಂಬೆ, ಕೊಂಬೆಗಳು ಸಹ ಮುರಿದು ಬಿದ್ದಿವೆ. ಮುಖ್ಯವಾಗಿ ದಕ್ಷಿಣ ವಲಯದಲ್ಲಿ 50, ಪಶ್ಚಿಮ ವಲಯದಲ್ಲಿ 20, ಆರ್.ಆರ್ ನಗರ ವಲಯದಲ್ಲಿ 18 ಮರಗಳು ಉರುಳಿದ್ದು, ತೆರವು ಕಾರ್ಯ ಚುರುಕುಗೊಳಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತಷ್ಟು ಮಳೆ ಬರಲಿ, ಮಳೆಹಾನಿ ಸಮಸ್ಯೆ ನಿವಾರಿಸಲು ಕ್ರಮ- ಡಿಕೆಶಿ: "ಬೆಂಗಳೂರು ನಗರದಲ್ಲಿ ಮತ್ತಷ್ಟು ಪ್ರಮಾಣದಲ್ಲಿ ಮಳೆ ಬರಲಿ. ಮಳೆಯಿಂದ ಆಗಿರುವ ಹಾನಿ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳುತ್ತೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು‌.

ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, "ಮಳೆಯಿಂದ ಎಲ್ಲೆಲ್ಲಿ ಸಮಸ್ಯೆ ಆಗಿದೆಯೋ ಅವೆಲ್ಲವನ್ನೂ ಬಗೆಹರಿಸುವ ಕೆಲಸ ಮಾಡುತ್ತೇವೆ‌. ಬೆಂಗಳೂರಿನಲ್ಲಿ ಮಳೆ ಬರಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಇನ್ನೂ ಹೆಚ್ಚಿನ ಮಳೆ ಬರಲಿ" ಎಂದರು.

"ಮಳೆ ಹಾನಿ ಹಿನ್ನೆಲೆಯಲ್ಲಿ ಸೋಮವಾರ ನಾಮಪತ್ರ ಸಲ್ಲಿಕೆ ಹಾಗೂ ವಿಧಾನಪರಿಷತ್ ಚುನಾವಣೆ ಮುಗಿದ ಬಳಿಕ ಸಭೆ ಮಾಡುತ್ತೇವೆ. ಮಳೆಯಿಂದಾಗಿ ಏನೆಲ್ಲಾ ಸಮಸ್ಯೆ ಆಗಿದೆ ಅದರ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದು, ನಂತರ ಮಳೆ ಹೆಚ್ಚು ಮರಗಳು ಬಿದ್ದ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ" ಎಂದರು.

ಇದನ್ನೂ ಓದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ: ಹಳ್ಳದಂತಾದ ತೋಟಗಳು.. ಇಲ್ಲಿದೆ ಜಿಲ್ಲಾವಾರು ಮಾಹಿತಿ! - Rains in various Districts

ಬೆಂಗಳೂರಲ್ಲಿ ಮಳೆ ಅವಾಂತರಕ್ಕೆ 100ಕ್ಕೂ ಹೆಚ್ಚು ಮರಗಳು ಧರಾಶಾಹಿ; ಇನ್ನೂ ಐದು ದಿನ ವರುಣನ ಆರ್ಭಟ (ETV Bharat)

ಬೆಂಗಳೂರು: ರಾಜಧಾನಿಯಲ್ಲಿ ಸತತ ವರುಣಾರ್ಭಟ ಮುಂದುವರಿದಿದಿದ್ದು, ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿ ನಾಗರಿಕರು ಪರದಾಡುವಂತಾಗಿದೆ. ಶನಿವಾರ ಕೂಡ ಧಾರಾಕಾರ ಮಳೆಯಿಂದ ಜನರು ತೊಂದರೆ ಅನುಭವಿಸಿದ್ದರು. ಭಾನುವಾರ ಸಂಜೆ 5.30ಕ್ಕೆ ಶುರುವಾದ ಬಿರುಗಾಳಿ, ಗುಡುಗು ಮಿಂಚುಸಹಿತ ಮಳೆಯು ತಡರಾತ್ರಿವರೆಗೂ ಸುರಿದಿರುವುದು ಸಾಕಷ್ಟು ಅವಘಡಗಳಿಗೆ ಕಾರಣವಾಗಿದೆ.

ನಿನ್ನೆ ರಾತ್ರಿ ಬಿದ್ದ ಭಾರೀ ಮಳೆಯಿಂದಾಗಿ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಸುಮಾರು 100ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಕ್ಷೇತ್ರದಲ್ಲಿ ಶಾಸಕ ಕೆ.ಗೋಪಾಲಯ್ಯ ಅಧಿಕಾರಿಗಳ ಜೊತೆ ಸಂಚರಿಸಿ, ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿದರು.

Tree fallen on Car
ಕಾರು ಮೇಲೆ ಬಿದ್ದ ಮರ (ETV Bharat)

ಸುಮಾರು 10ಕ್ಕೂ ಹೆಚ್ಚು ಕಡೆ ಮನೆಗಳ ಮೇಲೆ ಮರಗಳು ಬಿದ್ದಿದ್ದು, ಮನೆಯಲ್ಲಿದ್ದವರನ್ನು ಹೊರಗೆ ಕರೆತಂದಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ನ, ಕರ್ನಾಟಕ ಲೇಔಟ್, ಬೆಮೆಲ್ ಲೇಔಟ್, ಕಿರ್ಲೋಸ್ಕರ್ ಕಾಲೊನಿ ಹಾಗೂ ಕುರುಬರಹಳ್ಳಿ ಮೇನ್​ ರೋಡ್, ಕಮಲ ನಗರದ ವಾಟರ್ ಟ್ಯಾಂಕ್ ಮುಖ್ಯರಸ್ತೆ ಮೊದಲಾದ ಕಡೆ ಹಲವು ಮರಗಳು ಉರುಳಿ ಬಿದ್ದಿವೆ. ಬೆಳಗ್ಗೆಯಿಂದ ತೆರವು ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಶಾಸಕರು ಖುದ್ದು ತೆರವು ನಡೆಯುತ್ತಿರುವ ಸ್ಥಳಗಳಲ್ಲಿ ಹಾಜರಿದ್ದು, ತೆರವು ಕಾರ್ಯವನ್ನು ಚುರುಕುಗೊಳಿಸಿದರು.

ಈ ಸಂಬಂಧ ಶಾಸಕರು ಮಾತನಾಡಿ, "ಮರಗಳ ತೆರವು ಕಾರ್ಯ ಮಾಡುವ ಸಿಬ್ಬಂದಿಯ ಕೊರತೆ ಇದ್ದು, ಇನ್ನಷ್ಟು ಸಿಬ್ಬಂದಿಯನ್ನು ಬಿಬಿಎಂಪಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು. ಆದಷ್ಟು ಬೇಗ‌ ಸಿಎಂ ಸಿದ್ದರಾಮಯ್ಯ ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ನೀಡಬೇಕು" ಎಂದು ಒತ್ತಾಯಿಸಿದರು.

ಇನ್ನೂ ಐದು ದಿನ ಮಳೆ: ನಗರದಲ್ಲಿ ಸುರಿಯುತ್ತಿರುವ ಮಳೆ ಮುಂದಿನ 5 ದಿನ ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ. ಜೂ.3 ಮತ್ತು 5ರಿಂದ ಎರಡು ದಿನಗಳು ಭಾರೀ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕಳೆದ ಎರಡು ದಿನಗಳಲ್ಲಿ ಉದ್ಯಾನನಗರಿಯಲ್ಲಿ ವಾಡಿಕೆಗಿಂತ ಹೆಚ್ಚು ಪ್ರಮಾಣದ ವರ್ಷಧಾರೆಯಾಗಿದೆ.

Tree fallen on Car
ಕಾರು ಮೇಲೆ ಬಿದ್ದ ಮರ (ETV Bharat)

110 ಎಂ.ಎಂ ಮಳೆ, 130 ಮರಗಳು ಧರೆಗೆ: ನಿನ್ನೆ ರಾತ್ರಿಯಿಂದ ಇಲ್ಲಿಯವರೆಗೆ 110 ಎಂ.ಎಂ ಮಳೆ ಸುರಿದಿದ್ದು, ನಗರದಲ್ಲಿ ಒಟ್ಟು 130 ಮರಗಳು ಧರೆಗುರುಳಿವೆ. ಸುಮಾರು 150 ರೆಂಬೆ, ಕೊಂಬೆಗಳು ಸಹ ಮುರಿದು ಬಿದ್ದಿವೆ. ಮುಖ್ಯವಾಗಿ ದಕ್ಷಿಣ ವಲಯದಲ್ಲಿ 50, ಪಶ್ಚಿಮ ವಲಯದಲ್ಲಿ 20, ಆರ್.ಆರ್ ನಗರ ವಲಯದಲ್ಲಿ 18 ಮರಗಳು ಉರುಳಿದ್ದು, ತೆರವು ಕಾರ್ಯ ಚುರುಕುಗೊಳಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತಷ್ಟು ಮಳೆ ಬರಲಿ, ಮಳೆಹಾನಿ ಸಮಸ್ಯೆ ನಿವಾರಿಸಲು ಕ್ರಮ- ಡಿಕೆಶಿ: "ಬೆಂಗಳೂರು ನಗರದಲ್ಲಿ ಮತ್ತಷ್ಟು ಪ್ರಮಾಣದಲ್ಲಿ ಮಳೆ ಬರಲಿ. ಮಳೆಯಿಂದ ಆಗಿರುವ ಹಾನಿ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳುತ್ತೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು‌.

ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, "ಮಳೆಯಿಂದ ಎಲ್ಲೆಲ್ಲಿ ಸಮಸ್ಯೆ ಆಗಿದೆಯೋ ಅವೆಲ್ಲವನ್ನೂ ಬಗೆಹರಿಸುವ ಕೆಲಸ ಮಾಡುತ್ತೇವೆ‌. ಬೆಂಗಳೂರಿನಲ್ಲಿ ಮಳೆ ಬರಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಇನ್ನೂ ಹೆಚ್ಚಿನ ಮಳೆ ಬರಲಿ" ಎಂದರು.

"ಮಳೆ ಹಾನಿ ಹಿನ್ನೆಲೆಯಲ್ಲಿ ಸೋಮವಾರ ನಾಮಪತ್ರ ಸಲ್ಲಿಕೆ ಹಾಗೂ ವಿಧಾನಪರಿಷತ್ ಚುನಾವಣೆ ಮುಗಿದ ಬಳಿಕ ಸಭೆ ಮಾಡುತ್ತೇವೆ. ಮಳೆಯಿಂದಾಗಿ ಏನೆಲ್ಲಾ ಸಮಸ್ಯೆ ಆಗಿದೆ ಅದರ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದು, ನಂತರ ಮಳೆ ಹೆಚ್ಚು ಮರಗಳು ಬಿದ್ದ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ" ಎಂದರು.

ಇದನ್ನೂ ಓದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ: ಹಳ್ಳದಂತಾದ ತೋಟಗಳು.. ಇಲ್ಲಿದೆ ಜಿಲ್ಲಾವಾರು ಮಾಹಿತಿ! - Rains in various Districts

Last Updated : Jun 3, 2024, 2:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.