ಬೆಂಗಳೂರು: ರಾಜಧಾನಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರದ ಸರಮಾಲೆಯೇ ಸೃಷ್ಟಿಯಾಗಿದೆ. ಯಲಹಂಕ, ಮಲ್ಲೇಶ್ವರ, ಸಿಲ್ಕ್ ಬೋರ್ಡ್ ಸೇರಿದಂತೆ ನಾನಾ ಕಡೆಗಳಲ್ಲಿ ಮಳೆ ನೀರು ರಸ್ತೆಗಳಲ್ಲಿ ತುಂಬಿಕೊಂಡಿದ್ದರೆ ಇನ್ನೂ ಕೆಲವು ಕಡೆಗಳಲ್ಲಿ ಮನೆಯಿಂದ ಆಚೆ ಬರಲಾಗದಷ್ಟು ಜಲಾವೃತವಾಗಿದೆ. ಇದರ ಬೆನ್ನಲ್ಲೇ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಕಟ್ಟಡ ಕುಸಿತದ ಅವಘಡದಲ್ಲಿ 20 ಜನ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದರು. ಈ ಪೈಕಿ ಓರ್ವ ಮೃತಪಟ್ಟಿದ್ದು, 14 ಕಾರ್ಮಿಕರನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಇನ್ನೂ ಐವರು ಸಿಲುಕಿದ್ದಾರೆ ಎಂದು ಎಂದು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಖಚಿತಪಡಿಸಿದ್ದಾರೆ.
ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಹೊರಬಂದು ಘಟನೆಯ ಭೀಕರತೆ ಬಿಚ್ಚಿಟ್ಟಿದ್ದಾನೆ. ತಲೆಯಲ್ಲಿ ರಕ್ತಸಿಕ್ತಗಾಯದಿಂದ ಹೊರಬಂದು ಕಟ್ಟಡದಲ್ಲಿ ನಮ್ಮವರು ಒಳಗೆ ಸಿಲುಕಿದ್ದಾರೆಂದು ಕಣ್ಣೀರು ಹಾಕಿದ್ದಾನೆ. ಸ್ಥಳಕ್ಕೆ ಆಂಬ್ಯುಲೆನ್ಸ್ ದೌಡಾಯಿಸಿವೆ. ಹೆಣ್ಣೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸುತ್ತಿದ್ದಾರೆ.
" at the site of tragic collapse at babusapalya within hennur ps limits.rescue teams along with police are working tirelessly to save lives and provide aid. hoping for swift recovery and strength for all affected". 🙏 #RescueInAction@BlrCityPolice@CPblr pic.twitter.com/k6nO6PeAJH
— DCP EAST (@DCPEASTBCP) October 22, 2024
ಇದನ್ನೂ ಓದಿ: ತಗ್ಗದ ಮಳೆಯ ಅಬ್ಬರ - ಹಳ್ಳದಲ್ಲಿ ಕೊಚ್ಚಿಹೋದ ಕಾರು; ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮತ್ತೆ ಯೆಲ್ಲೋ ಅಲರ್ಟ್