ETV Bharat / state

ಬೆಂಗಳೂರಲ್ಲಿ ನಿಲ್ಲದ ಮಳೆ ಆರ್ಭಟ: ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತ, ಜನರ ಪರದಾಟ

ಬೆಂಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಆರ್​ಜಿಎ ಟೆಕ್ ಪಾರ್ಕ್ ರಸ್ತೆ ಕೆರೆಯಂತಾಗಿದೆ. ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದ್ದು, ಜನ ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿದ್ದಾರೆ.

ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತ
ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತ (ETV Bharat)
author img

By ETV Bharat Karnataka Team

Published : 2 hours ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆಯಿಂದ ಆರ್​ಜಿಎ ಟೆಕ್ ಪಾರ್ಕ್ ರಸ್ತೆ ಕೆರೆಯಂತಾಗಿದೆ. ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದ್ದು, ಜನ ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿದ್ದಾರೆ. ಇನ್ನುಳಿದಂತೆ, ಎಂ ಜಿ ರೋಡ್, ರೇಸ್ ಕೋರ್ಸ್ ಮಲ್ಲೇಶ್ವರಂ ಯಶವಂತಪುರ ಬಾಣಸ್ವಾಡಿ ಕುಮಾರಸ್ವಾಮಿ ಲೇಔಟ್ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಹವಾಮಾನ ಇಲಾಖೆಯು ಇಂದೂ ಕೂಡ ಯೆಲ್ಲೋ ಅಲರ್ಟ್​ ನೀಡಿದೆ. ನಾಳೆಯೂ ಸಹ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೆಬ್ಬಾಳ ಕ್ಷೇತ್ರದ ಡಾಲರ್ಸ್ ಕಾಲೋನಿಯ ರೈಲ್ವೆ ಅಂಡರ್​ಪಾಸ್, ಪ್ರೆಸ್ಟೀಜ್ ಅಪಾರ್ಟ್​ಮೆಂಟ್​, ಸಿ. ಐ. ಎಲ್ ಲೇಔಟ್, ಆರ್.ಟಿ ನಗರ ಮುಖ್ಯರಸ್ತೆ ವೈಟ್ ಟಾಪಿಂಗ್ ಕಾಮಗಾರಿಯ ಪ್ರಗತಿ ವೀಕ್ಷಣೆ, ಕಾವೇರಿ ಪೈಪ್ ಲೈನ್ ಅಳವಡಿಕೆ, ಕ್ಷೇತ್ರದ ರಾಜಕಾಲುವೆಗಳು ನೆರೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ಪೂರ್ವ ವಲಯ ಆಯುಕ್ತೆ ಸ್ನೇಹಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಲ್ಲಿ ನಿಲ್ಲದ ಮಳೆ ಆರ್ಭಟ (ETV Bharat)

ಬುಧವಾರ ಕ್ಷೇತ್ರದ ಎಲ್ಲಾ ವಾರ್ಡ್ ಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸ್ನೇಹಲ್ ಪರಿಶೀಲಿಸಿದರು. ಅಲ್ಲದೆ ಜನವಸತಿ ಪ್ರದೇಶಗಳಲ್ಲಿ ಕೆಲವೆಡೆ ನೀರು ಮನೆಗಳಿಗೆ ನುಗ್ಗಿದ್ದು ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

HEAVY RAIN LASHED BENGALURU
ಭಾರಿ ಮಳೆ, ರಸ್ತೆಗಳಾದವು ಕೆರೆ (ETV Bharat)

ಈ ಸಂದರ್ಭದಲ್ಲಿ ಬಿಬಿಎಂಪಿ, ಬಿಡಬ್ಲ್ಯೂಎಸ್​ಎಸ್​ಬಿ, ರಾಜಕಾಲುವೆ, ವಿವಿಧ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರು, ಅಪಾರ್ಟ್​ಮೆಂಟ್​ನ ನಿವಾಸಿಗಳು, ಸ್ಥಳೀಯ ನಿವಾಸಿಗಳು ಇದ್ದರು.

HEAVY RAIN LASHED BENGALURU
ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತ, ಜನರ ಪರದಾಟ (ETV Bharat)

ಇನ್ನು, ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ರಾಧಾಕೃಷ್ಣ ವಾರ್ಡ್ ಸಂಖ್ಯೆ 18ರ ಪೆಬಲ್ ಅಪಾರ್ಟ್​ಮೆಂಟ್​ ಬಳಿಯ ರೈಲ್ವೆ ಅಂಡರ್​ಪಾಸ್ ಕೆಳಗಡೆ ನೀರು ನಿಂತು ಡಾಲರ್ಸ್ ಕಾಲೋನಿ ಸೇರಿದಂತೆ ಸುತ್ತಮುತ್ತ ಪ್ರದೇಶಗಳು ಜಲಾವೃತಗೂಂಡು ಅಲ್ಲಿನ ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸಿದ್ದನ್ನು ತಿಳಿದ ಹೆಬ್ಬಾಳ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ನಿಂತಿರುವ ನೀರನ್ನು ತೆರವು ಮಾಡಲು ಸೂಚಿಸಿದರು.

HEAVY RAIN LASHED BENGALURU
ಬೆಂಗಳೂರಲ್ಲಿ ಮಳೆಯಿಂದ ಕೆರೆಯಂತಾದ ರಸ್ತೆಗಳು (ETV Bharat)

ಬಿಬಿಎಂಪಿ, ಬೆಂಗಳೂರು ಜಲ ಮಂಡಳಿ, ‌ಬೆಸ್ಕಾಂ ಅಧಿಕಾರಿಗಳು,‌ ಸ್ಥಳೀಯರು ಇದೇ ವೇಳೆ ಉಪಸ್ಥಿತರಿದ್ದರು.

HEAVY RAIN LASHED BENGALURU
ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತ, ಜನರ ಪರದಾಟ (ETV Bharat)

ಇದನ್ನೂ ಓದಿ: ಚಂಡಮಾರುತ ಎಫೆಕ್ಟ್​: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆಯಿಂದ ಆರ್​ಜಿಎ ಟೆಕ್ ಪಾರ್ಕ್ ರಸ್ತೆ ಕೆರೆಯಂತಾಗಿದೆ. ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದ್ದು, ಜನ ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿದ್ದಾರೆ. ಇನ್ನುಳಿದಂತೆ, ಎಂ ಜಿ ರೋಡ್, ರೇಸ್ ಕೋರ್ಸ್ ಮಲ್ಲೇಶ್ವರಂ ಯಶವಂತಪುರ ಬಾಣಸ್ವಾಡಿ ಕುಮಾರಸ್ವಾಮಿ ಲೇಔಟ್ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಹವಾಮಾನ ಇಲಾಖೆಯು ಇಂದೂ ಕೂಡ ಯೆಲ್ಲೋ ಅಲರ್ಟ್​ ನೀಡಿದೆ. ನಾಳೆಯೂ ಸಹ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೆಬ್ಬಾಳ ಕ್ಷೇತ್ರದ ಡಾಲರ್ಸ್ ಕಾಲೋನಿಯ ರೈಲ್ವೆ ಅಂಡರ್​ಪಾಸ್, ಪ್ರೆಸ್ಟೀಜ್ ಅಪಾರ್ಟ್​ಮೆಂಟ್​, ಸಿ. ಐ. ಎಲ್ ಲೇಔಟ್, ಆರ್.ಟಿ ನಗರ ಮುಖ್ಯರಸ್ತೆ ವೈಟ್ ಟಾಪಿಂಗ್ ಕಾಮಗಾರಿಯ ಪ್ರಗತಿ ವೀಕ್ಷಣೆ, ಕಾವೇರಿ ಪೈಪ್ ಲೈನ್ ಅಳವಡಿಕೆ, ಕ್ಷೇತ್ರದ ರಾಜಕಾಲುವೆಗಳು ನೆರೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ಪೂರ್ವ ವಲಯ ಆಯುಕ್ತೆ ಸ್ನೇಹಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಲ್ಲಿ ನಿಲ್ಲದ ಮಳೆ ಆರ್ಭಟ (ETV Bharat)

ಬುಧವಾರ ಕ್ಷೇತ್ರದ ಎಲ್ಲಾ ವಾರ್ಡ್ ಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸ್ನೇಹಲ್ ಪರಿಶೀಲಿಸಿದರು. ಅಲ್ಲದೆ ಜನವಸತಿ ಪ್ರದೇಶಗಳಲ್ಲಿ ಕೆಲವೆಡೆ ನೀರು ಮನೆಗಳಿಗೆ ನುಗ್ಗಿದ್ದು ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

HEAVY RAIN LASHED BENGALURU
ಭಾರಿ ಮಳೆ, ರಸ್ತೆಗಳಾದವು ಕೆರೆ (ETV Bharat)

ಈ ಸಂದರ್ಭದಲ್ಲಿ ಬಿಬಿಎಂಪಿ, ಬಿಡಬ್ಲ್ಯೂಎಸ್​ಎಸ್​ಬಿ, ರಾಜಕಾಲುವೆ, ವಿವಿಧ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರು, ಅಪಾರ್ಟ್​ಮೆಂಟ್​ನ ನಿವಾಸಿಗಳು, ಸ್ಥಳೀಯ ನಿವಾಸಿಗಳು ಇದ್ದರು.

HEAVY RAIN LASHED BENGALURU
ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತ, ಜನರ ಪರದಾಟ (ETV Bharat)

ಇನ್ನು, ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ರಾಧಾಕೃಷ್ಣ ವಾರ್ಡ್ ಸಂಖ್ಯೆ 18ರ ಪೆಬಲ್ ಅಪಾರ್ಟ್​ಮೆಂಟ್​ ಬಳಿಯ ರೈಲ್ವೆ ಅಂಡರ್​ಪಾಸ್ ಕೆಳಗಡೆ ನೀರು ನಿಂತು ಡಾಲರ್ಸ್ ಕಾಲೋನಿ ಸೇರಿದಂತೆ ಸುತ್ತಮುತ್ತ ಪ್ರದೇಶಗಳು ಜಲಾವೃತಗೂಂಡು ಅಲ್ಲಿನ ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸಿದ್ದನ್ನು ತಿಳಿದ ಹೆಬ್ಬಾಳ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ನಿಂತಿರುವ ನೀರನ್ನು ತೆರವು ಮಾಡಲು ಸೂಚಿಸಿದರು.

HEAVY RAIN LASHED BENGALURU
ಬೆಂಗಳೂರಲ್ಲಿ ಮಳೆಯಿಂದ ಕೆರೆಯಂತಾದ ರಸ್ತೆಗಳು (ETV Bharat)

ಬಿಬಿಎಂಪಿ, ಬೆಂಗಳೂರು ಜಲ ಮಂಡಳಿ, ‌ಬೆಸ್ಕಾಂ ಅಧಿಕಾರಿಗಳು,‌ ಸ್ಥಳೀಯರು ಇದೇ ವೇಳೆ ಉಪಸ್ಥಿತರಿದ್ದರು.

HEAVY RAIN LASHED BENGALURU
ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತ, ಜನರ ಪರದಾಟ (ETV Bharat)

ಇದನ್ನೂ ಓದಿ: ಚಂಡಮಾರುತ ಎಫೆಕ್ಟ್​: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.