ETV Bharat / state

ಬೆಂಗಳೂರಲ್ಲಿ ನಿಲ್ಲದ ಮಳೆ ಆರ್ಭಟ: ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತ, ಜನರ ಪರದಾಟ - HEAVY RAIN LASHED BENGALURU

ಬೆಂಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಆರ್​ಜಿಎ ಟೆಕ್ ಪಾರ್ಕ್ ರಸ್ತೆ ಕೆರೆಯಂತಾಗಿದೆ. ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದ್ದು, ಜನ ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿದ್ದಾರೆ.

ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತ
ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತ (ETV Bharat)
author img

By ETV Bharat Karnataka Team

Published : Oct 23, 2024, 6:46 PM IST

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆಯಿಂದ ಆರ್​ಜಿಎ ಟೆಕ್ ಪಾರ್ಕ್ ರಸ್ತೆ ಕೆರೆಯಂತಾಗಿದೆ. ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದ್ದು, ಜನ ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿದ್ದಾರೆ. ಇನ್ನುಳಿದಂತೆ, ಎಂ ಜಿ ರೋಡ್, ರೇಸ್ ಕೋರ್ಸ್ ಮಲ್ಲೇಶ್ವರಂ ಯಶವಂತಪುರ ಬಾಣಸ್ವಾಡಿ ಕುಮಾರಸ್ವಾಮಿ ಲೇಔಟ್ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಹವಾಮಾನ ಇಲಾಖೆಯು ಇಂದೂ ಕೂಡ ಯೆಲ್ಲೋ ಅಲರ್ಟ್​ ನೀಡಿದೆ. ನಾಳೆಯೂ ಸಹ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಬುಧವಾರ ಸಂಜೆ ಸುರಿದ ಮಳೆಯಿಂದಾಗಿ ಬೆಂಗಳೂರು ದಕ್ಷಿಣ ಸಮೀಪದ ಯಲಚೇನಹಳ್ಳಿಯ ರಾಮಕೃಷ್ಣನಗರ ಮತ್ತು ಫಯಾಜಾಬಾದ್‌ನಲ್ಲಿ ಸುಮಾರು 100 ಮನೆಗಳು ಜಲಾವೃತವಾಗಿವೆ. ಬಸವನಗುಡಿಯ ನೆಟ್ಟಕಲ್ಲಪ್ಪ ವೃತ್ತದಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಮರದ ಕೆಳಗೆ ನಿಲ್ಲಿಸಿದ್ದ ಮೂರು ಕಾರುಗಳು ಜಖಂಗೊಂಡಿವೆ.

ಬೆಂಗಳೂರಲ್ಲಿ ನಿಲ್ಲದ ಮಳೆ ಆರ್ಭಟ (ETV Bharat)

ಒಟ್ಟು 1,079 ಮನೆಗಳಿಗೆ ಈಗಾಗಲೆ ನುಗ್ಗಿದ ನೀರನ್ನು ತೆರವುಗೊಳಿಸು ಕಾರ್ಯ ನಡೆಸಲಾಗುತ್ತಿದೆ. ಇಂದೂ ಕೂಡ ನಗರದಲ್ಲೆಡೆ ಧಾರಾಶಾಹಿಯಾದ ಒಟ್ಟು 89 ಮರ ಮತ್ತ ಮರದ ಕೊಂಬೆಗಳು ಪೈಕಿ 52 ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಳ್ಳಲಾಗಿದೆ. ಬುಧವಾರ ಮಳೆ ಕೊಂಚ ತಗ್ಗಿದ್ದರೂ ಸಂಗ್ರಹವಾಗಿರುವ ನೀರನ್ನು ಹೊರಹಾಕಲು ನಿವಾಸಿಗಳು ಪರದಾಡುತ್ತಿದ್ದಾರೆ. ಬಿಬಿಎಂಪಿ ಸಿಬ್ಬಂದಿ, ಪಂಪ್​ಸೆಟ್​ ಮೂಲಕ ನಿಂತಿರುವ ನೀರನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

HEAVY RAIN LASHED BENGALURU
ಫ್ಲೈಓವರ್ ಕೆಳಭಾಗ ಜಲಾವೃತ (ETV Bharat)

ಎಲ್ಲೆಲ್ಲಿ ಸಮಸ್ಯೆ: ಯಲಹಂಕದ ವಲಯದ ಕೇಂದ್ರಿಯ ವಿಹಾರ್​ ಅಪಾರ್ಟ್​ಮೆಂಟ್​, ಜಕ್ಕೂರು ಬಳಿಯ ಡೈನಷ್ಟಿ ಲೇಔಟ್, ಮಹದೇವಪುರ ವಲಯದ ಬೆಸ್ಲಿಂಗ್​ ಗಾರ್ಡನ್​, ಚಿನ್ನಪ್ಪನಹಳ್ಳಿ, ಸಮಪ್ತಗಿರಿ ಲೇಔಟ್​, ಮಧುರಾನಗರ, ಜಿನ್ನಸಂದ್ರ ಮುಖ್ಯರಸ್ತೆ, ಗ್ರೀನ್​ ಲೇಔಟ್​, ಸಾಯಿ ಲೇವಟ್​, ವಡ್ಡರಪಾಳ್ಯ, ದಾಸರಹಳ್ಳಿ ವಲಯದ ನಿಸರ್ಗ ಲೇಔಟ್​, ಪಾರ್ವತಿ ಲೇಔಟ್​, ಮಿತ್ರಾ ಲೇಔಟ್​, ಪೀಣ್ಯ ಕೈಗಾರಿಕಾ ಪ್ರದೇಶ, ಬೆಲ್ಮಾರ್ಗ್​ ಲೇಔಟ್​ ನಲ್ಲಿ ಇನ್ನೂ ನೀರು ನಿಂತ ದೃಶ್ಯಾವಳಿಗಳು ಕಂಡು ಬರುತ್ತಿದೆ.

ಬೆಂಗಳೂರಿನಲ್ಲಿ ಮಳೆ ಅವಾಮತರ
ಬೆಂಗಳೂರಿನಲ್ಲಿ ಮಳೆ ಅವಾಮತರ (ETV Bharat)

ಎಲ್ಲೆಲ್ಲಿ ಎಷ್ಟು ಮಳೆ: ಕಳೆದ 24 ಗಂಟೆಗಳಲ್ಲಿ ಬಿಟಿಎಂ ಲೇಔಟ್​ನಲ್ಲಿ 38 ಮಿಲಿ ಮೀಟರ್​, ದೊರೆಸಾನಿಪಾಳ್ಯ 37, ಪುಲಿಕೇಶಿನಗರ 35, ಬೊಮ್ಮನಹಳ್ಳಿ 33, ಮಾರತ್ತಹಳ್ಳಿ 30, ಸಂಪಂಗಿರಾಮನಗರ 28, ಹಂಪೆನಗರ 28, ಕಾಡುಗೋಡಿ 27, ಅರಕೆರೆ 26, ಹೆಚ್​ಎಸ್​ಆರ್​ಲೇಔಟ್​ 24, ಮಾರುತಮಂದಿರ 23, ಎಚ್​ಎಎಲ್​ ಲೇಔಟ್​ 20, ಹಗದೂರು 20, ವಿ.ನಾಗೇನಹಳ್ಳಿ 14 ಮಿಮೀ ಮಳೆ ಸುರಿದಿದೆ.

HEAVY RAIN LASHED BENGALURU
ಬೆಂಗಳೂರಲ್ಲಿ ಮಳೆಯಿಂದ ಕೆರೆಯಂತಾದ ರಸ್ತೆಗಳು (ETV Bharat)

ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೆಬ್ಬಾಳ ಕ್ಷೇತ್ರದ ಡಾಲರ್ಸ್ ಕಾಲೋನಿಯ ರೈಲ್ವೆ ಅಂಡರ್​ಪಾಸ್, ಪ್ರೆಸ್ಟೀಜ್ ಅಪಾರ್ಟ್​ಮೆಂಟ್​, ಸಿ. ಐ. ಎಲ್ ಲೇಔಟ್, ಆರ್.ಟಿ ನಗರ ಮುಖ್ಯರಸ್ತೆ ವೈಟ್ ಟಾಪಿಂಗ್ ಕಾಮಗಾರಿಯ ಪ್ರಗತಿ ವೀಕ್ಷಣೆ, ಕಾವೇರಿ ಪೈಪ್ ಲೈನ್ ಅಳವಡಿಕೆ, ಕ್ಷೇತ್ರದ ರಾಜಕಾಲುವೆಗಳು ನೆರೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ಪೂರ್ವ ವಲಯ ಆಯುಕ್ತೆ ಸ್ನೇಹಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆ ಹಾನಿ ವೀಕ್ಷಿಸಿದ ಸಚಿವ ಬೈರತಿ ಸುರೇಶ್
ಮಳೆ ಹಾನಿ ವೀಕ್ಷಿಸಿದ ಸಚಿವ ಬೈರತಿ ಸುರೇಶ್ (ETV Bharat)

ಬುಧವಾರ ಕ್ಷೇತ್ರದ ಎಲ್ಲಾ ವಾರ್ಡ್ ಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸ್ನೇಹಲ್ ಪರಿಶೀಲಿಸಿದರು. ಅಲ್ಲದೆ ಜನವಸತಿ ಪ್ರದೇಶಗಳಲ್ಲಿ ಕೆಲವೆಡೆ ನೀರು ಮನೆಗಳಿಗೆ ನುಗ್ಗಿದ್ದು ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ, ಬಿಡಬ್ಲ್ಯೂಎಸ್​ಎಸ್​ಬಿ, ರಾಜಕಾಲುವೆ, ವಿವಿಧ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರು, ಅಪಾರ್ಟ್​ಮೆಂಟ್​ನ ನಿವಾಸಿಗಳು, ಸ್ಥಳೀಯ ನಿವಾಸಿಗಳು ಇದ್ದರು.

ಸ್ಥಳೀಯರ ಸಮಸ್ಯೆ ಆಲಿಸಿದ ಸಚಿವ ಬೈರತಿ ಸುರೇಶ್
ಸ್ಥಳೀಯರ ಸಮಸ್ಯೆ ಆಲಿಸಿದ ಸಚಿವ ಬೈರತಿ ಸುರೇಶ್ (ETV Bharat)

ಸಚಿವ ಬೈರತಿ ಸುರೇಶ್ ಭೇಟಿ: ಇನ್ನು, ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ರಾಧಾಕೃಷ್ಣ ವಾರ್ಡ್ ಸಂಖ್ಯೆ 18ರ ಪೆಬಲ್ ಅಪಾರ್ಟ್​ಮೆಂಟ್​ ಬಳಿಯ ರೈಲ್ವೆ ಅಂಡರ್​ಪಾಸ್ ಕೆಳಗಡೆ ನೀರು ನಿಂತು ಡಾಲರ್ಸ್ ಕಾಲೋನಿ ಸೇರಿದಂತೆ ಸುತ್ತಮುತ್ತ ಪ್ರದೇಶಗಳು ಜಲಾವೃತಗೂಂಡು ಅಲ್ಲಿನ ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸಿದ್ದನ್ನು ತಿಳಿದ ಹೆಬ್ಬಾಳ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ನಿಂತಿರುವ ನೀರನ್ನು ತೆರವು ಮಾಡಲು ಸೂಚಿಸಿದರು.

ಬಿಬಿಎಂಪಿ, ಬೆಂಗಳೂರು ಜಲ ಮಂಡಳಿ, ‌ಬೆಸ್ಕಾಂ ಅಧಿಕಾರಿಗಳು,‌ ಸ್ಥಳೀಯರು ಇದೇ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ: ಚಂಡಮಾರುತ ಎಫೆಕ್ಟ್​: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆಯಿಂದ ಆರ್​ಜಿಎ ಟೆಕ್ ಪಾರ್ಕ್ ರಸ್ತೆ ಕೆರೆಯಂತಾಗಿದೆ. ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದ್ದು, ಜನ ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿದ್ದಾರೆ. ಇನ್ನುಳಿದಂತೆ, ಎಂ ಜಿ ರೋಡ್, ರೇಸ್ ಕೋರ್ಸ್ ಮಲ್ಲೇಶ್ವರಂ ಯಶವಂತಪುರ ಬಾಣಸ್ವಾಡಿ ಕುಮಾರಸ್ವಾಮಿ ಲೇಔಟ್ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಹವಾಮಾನ ಇಲಾಖೆಯು ಇಂದೂ ಕೂಡ ಯೆಲ್ಲೋ ಅಲರ್ಟ್​ ನೀಡಿದೆ. ನಾಳೆಯೂ ಸಹ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಬುಧವಾರ ಸಂಜೆ ಸುರಿದ ಮಳೆಯಿಂದಾಗಿ ಬೆಂಗಳೂರು ದಕ್ಷಿಣ ಸಮೀಪದ ಯಲಚೇನಹಳ್ಳಿಯ ರಾಮಕೃಷ್ಣನಗರ ಮತ್ತು ಫಯಾಜಾಬಾದ್‌ನಲ್ಲಿ ಸುಮಾರು 100 ಮನೆಗಳು ಜಲಾವೃತವಾಗಿವೆ. ಬಸವನಗುಡಿಯ ನೆಟ್ಟಕಲ್ಲಪ್ಪ ವೃತ್ತದಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಮರದ ಕೆಳಗೆ ನಿಲ್ಲಿಸಿದ್ದ ಮೂರು ಕಾರುಗಳು ಜಖಂಗೊಂಡಿವೆ.

ಬೆಂಗಳೂರಲ್ಲಿ ನಿಲ್ಲದ ಮಳೆ ಆರ್ಭಟ (ETV Bharat)

ಒಟ್ಟು 1,079 ಮನೆಗಳಿಗೆ ಈಗಾಗಲೆ ನುಗ್ಗಿದ ನೀರನ್ನು ತೆರವುಗೊಳಿಸು ಕಾರ್ಯ ನಡೆಸಲಾಗುತ್ತಿದೆ. ಇಂದೂ ಕೂಡ ನಗರದಲ್ಲೆಡೆ ಧಾರಾಶಾಹಿಯಾದ ಒಟ್ಟು 89 ಮರ ಮತ್ತ ಮರದ ಕೊಂಬೆಗಳು ಪೈಕಿ 52 ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಳ್ಳಲಾಗಿದೆ. ಬುಧವಾರ ಮಳೆ ಕೊಂಚ ತಗ್ಗಿದ್ದರೂ ಸಂಗ್ರಹವಾಗಿರುವ ನೀರನ್ನು ಹೊರಹಾಕಲು ನಿವಾಸಿಗಳು ಪರದಾಡುತ್ತಿದ್ದಾರೆ. ಬಿಬಿಎಂಪಿ ಸಿಬ್ಬಂದಿ, ಪಂಪ್​ಸೆಟ್​ ಮೂಲಕ ನಿಂತಿರುವ ನೀರನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

HEAVY RAIN LASHED BENGALURU
ಫ್ಲೈಓವರ್ ಕೆಳಭಾಗ ಜಲಾವೃತ (ETV Bharat)

ಎಲ್ಲೆಲ್ಲಿ ಸಮಸ್ಯೆ: ಯಲಹಂಕದ ವಲಯದ ಕೇಂದ್ರಿಯ ವಿಹಾರ್​ ಅಪಾರ್ಟ್​ಮೆಂಟ್​, ಜಕ್ಕೂರು ಬಳಿಯ ಡೈನಷ್ಟಿ ಲೇಔಟ್, ಮಹದೇವಪುರ ವಲಯದ ಬೆಸ್ಲಿಂಗ್​ ಗಾರ್ಡನ್​, ಚಿನ್ನಪ್ಪನಹಳ್ಳಿ, ಸಮಪ್ತಗಿರಿ ಲೇಔಟ್​, ಮಧುರಾನಗರ, ಜಿನ್ನಸಂದ್ರ ಮುಖ್ಯರಸ್ತೆ, ಗ್ರೀನ್​ ಲೇಔಟ್​, ಸಾಯಿ ಲೇವಟ್​, ವಡ್ಡರಪಾಳ್ಯ, ದಾಸರಹಳ್ಳಿ ವಲಯದ ನಿಸರ್ಗ ಲೇಔಟ್​, ಪಾರ್ವತಿ ಲೇಔಟ್​, ಮಿತ್ರಾ ಲೇಔಟ್​, ಪೀಣ್ಯ ಕೈಗಾರಿಕಾ ಪ್ರದೇಶ, ಬೆಲ್ಮಾರ್ಗ್​ ಲೇಔಟ್​ ನಲ್ಲಿ ಇನ್ನೂ ನೀರು ನಿಂತ ದೃಶ್ಯಾವಳಿಗಳು ಕಂಡು ಬರುತ್ತಿದೆ.

ಬೆಂಗಳೂರಿನಲ್ಲಿ ಮಳೆ ಅವಾಮತರ
ಬೆಂಗಳೂರಿನಲ್ಲಿ ಮಳೆ ಅವಾಮತರ (ETV Bharat)

ಎಲ್ಲೆಲ್ಲಿ ಎಷ್ಟು ಮಳೆ: ಕಳೆದ 24 ಗಂಟೆಗಳಲ್ಲಿ ಬಿಟಿಎಂ ಲೇಔಟ್​ನಲ್ಲಿ 38 ಮಿಲಿ ಮೀಟರ್​, ದೊರೆಸಾನಿಪಾಳ್ಯ 37, ಪುಲಿಕೇಶಿನಗರ 35, ಬೊಮ್ಮನಹಳ್ಳಿ 33, ಮಾರತ್ತಹಳ್ಳಿ 30, ಸಂಪಂಗಿರಾಮನಗರ 28, ಹಂಪೆನಗರ 28, ಕಾಡುಗೋಡಿ 27, ಅರಕೆರೆ 26, ಹೆಚ್​ಎಸ್​ಆರ್​ಲೇಔಟ್​ 24, ಮಾರುತಮಂದಿರ 23, ಎಚ್​ಎಎಲ್​ ಲೇಔಟ್​ 20, ಹಗದೂರು 20, ವಿ.ನಾಗೇನಹಳ್ಳಿ 14 ಮಿಮೀ ಮಳೆ ಸುರಿದಿದೆ.

HEAVY RAIN LASHED BENGALURU
ಬೆಂಗಳೂರಲ್ಲಿ ಮಳೆಯಿಂದ ಕೆರೆಯಂತಾದ ರಸ್ತೆಗಳು (ETV Bharat)

ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೆಬ್ಬಾಳ ಕ್ಷೇತ್ರದ ಡಾಲರ್ಸ್ ಕಾಲೋನಿಯ ರೈಲ್ವೆ ಅಂಡರ್​ಪಾಸ್, ಪ್ರೆಸ್ಟೀಜ್ ಅಪಾರ್ಟ್​ಮೆಂಟ್​, ಸಿ. ಐ. ಎಲ್ ಲೇಔಟ್, ಆರ್.ಟಿ ನಗರ ಮುಖ್ಯರಸ್ತೆ ವೈಟ್ ಟಾಪಿಂಗ್ ಕಾಮಗಾರಿಯ ಪ್ರಗತಿ ವೀಕ್ಷಣೆ, ಕಾವೇರಿ ಪೈಪ್ ಲೈನ್ ಅಳವಡಿಕೆ, ಕ್ಷೇತ್ರದ ರಾಜಕಾಲುವೆಗಳು ನೆರೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ಪೂರ್ವ ವಲಯ ಆಯುಕ್ತೆ ಸ್ನೇಹಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆ ಹಾನಿ ವೀಕ್ಷಿಸಿದ ಸಚಿವ ಬೈರತಿ ಸುರೇಶ್
ಮಳೆ ಹಾನಿ ವೀಕ್ಷಿಸಿದ ಸಚಿವ ಬೈರತಿ ಸುರೇಶ್ (ETV Bharat)

ಬುಧವಾರ ಕ್ಷೇತ್ರದ ಎಲ್ಲಾ ವಾರ್ಡ್ ಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸ್ನೇಹಲ್ ಪರಿಶೀಲಿಸಿದರು. ಅಲ್ಲದೆ ಜನವಸತಿ ಪ್ರದೇಶಗಳಲ್ಲಿ ಕೆಲವೆಡೆ ನೀರು ಮನೆಗಳಿಗೆ ನುಗ್ಗಿದ್ದು ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ, ಬಿಡಬ್ಲ್ಯೂಎಸ್​ಎಸ್​ಬಿ, ರಾಜಕಾಲುವೆ, ವಿವಿಧ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರು, ಅಪಾರ್ಟ್​ಮೆಂಟ್​ನ ನಿವಾಸಿಗಳು, ಸ್ಥಳೀಯ ನಿವಾಸಿಗಳು ಇದ್ದರು.

ಸ್ಥಳೀಯರ ಸಮಸ್ಯೆ ಆಲಿಸಿದ ಸಚಿವ ಬೈರತಿ ಸುರೇಶ್
ಸ್ಥಳೀಯರ ಸಮಸ್ಯೆ ಆಲಿಸಿದ ಸಚಿವ ಬೈರತಿ ಸುರೇಶ್ (ETV Bharat)

ಸಚಿವ ಬೈರತಿ ಸುರೇಶ್ ಭೇಟಿ: ಇನ್ನು, ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ರಾಧಾಕೃಷ್ಣ ವಾರ್ಡ್ ಸಂಖ್ಯೆ 18ರ ಪೆಬಲ್ ಅಪಾರ್ಟ್​ಮೆಂಟ್​ ಬಳಿಯ ರೈಲ್ವೆ ಅಂಡರ್​ಪಾಸ್ ಕೆಳಗಡೆ ನೀರು ನಿಂತು ಡಾಲರ್ಸ್ ಕಾಲೋನಿ ಸೇರಿದಂತೆ ಸುತ್ತಮುತ್ತ ಪ್ರದೇಶಗಳು ಜಲಾವೃತಗೂಂಡು ಅಲ್ಲಿನ ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸಿದ್ದನ್ನು ತಿಳಿದ ಹೆಬ್ಬಾಳ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ನಿಂತಿರುವ ನೀರನ್ನು ತೆರವು ಮಾಡಲು ಸೂಚಿಸಿದರು.

ಬಿಬಿಎಂಪಿ, ಬೆಂಗಳೂರು ಜಲ ಮಂಡಳಿ, ‌ಬೆಸ್ಕಾಂ ಅಧಿಕಾರಿಗಳು,‌ ಸ್ಥಳೀಯರು ಇದೇ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ: ಚಂಡಮಾರುತ ಎಫೆಕ್ಟ್​: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.