ETV Bharat / state

ತುಮಕೂರು-ಶಿರಾ ಹೆದ್ದಾರಿಯಲ್ಲಿ ಟ್ರಾಫಿಕ್​​​ ಜಾಮ್; ವಾಹನ ಸವಾರರು ಹೈರಾಣು

ತುಮಕೂರು-ಶಿರಾ ಮಾರ್ಗದಲ್ಲಿ ಭಾರೀ ಪ್ರಮಾಣದ ಟ್ರಾಫಿಕ್ ಜಾಮ್​ ಆಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ.

author img

By ETV Bharat Karnataka Team

Published : 3 hours ago

HEAVY TRAFFIC JAM IN TUMAKURU
ವಾಹನ ಸವಾರರ ಪರಡಾಟ (ETV Bharat)

ತುಮಕೂರು: ಬೆಂಗಳೂರು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿ ತುಮಕೂರು-ಶಿರಾ ಮಾರ್ಗದಲ್ಲಿ ಇಂದು ಬೆಳಗ್ಗೆಯಿಂದಲೂ ಟ್ರಾಫಿಕ್ ಸಮಸ್ಯೆ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿನ ಟ್ರಾಫಿಕ್ ಸಮಸ್ಯೆಗೆ ವಾಹನ ಸವಾರರು ಹೈರಾಣಾಗಿದ್ದಾರೆ.

ಇಂದು ಮುಂಜಾನೆ ಐದು ಗಂಟೆಯಿಂದಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್​ಗಟ್ಟಲೆ ಟ್ರಾಫಿಕ್​ನಲ್ಲಿ ವಾಹನ ಸವಾರರು ಸಿಲುಕಿ ಪರದಾಡುತ್ತಿದ್ದಾರೆ. ಆಂಬ್ಯುಲೆನ್ಸ್​ಗಳು ಸಹ ಟ್ರಾಫಿಕ್​ನಲ್ಲಿ ಸಿಲುಕಿವೆ. ತುರ್ತು ತೆರಳಲು ಸಾಧ್ಯವಾಗದೆ ಟ್ರಾಫಿಕ್​ನಲ್ಲಿ ಗಂಟೆಗಟ್ಟಲೆ ಸೈರನ್ ಹೊಡೆಯುತ್ತ ನಿಂತಿದ್ದ ದೃಶ್ಯ ಕಂಡುಬಂತು.

ವಾಹನ ಸವಾರರ ಪರದಾಟ (ETV Bharat)

ಹಬ್ಬಕ್ಕೆ ಹೋದವರೆಲ್ಲರೂ ವಾಪಸ್​ ಬೆಂಗಳೂರಿಗೆ ತೆರಳುತ್ತಿರುವುದು ಒಂದೆಡೆ ಆದರೆ, ಇನ್ನೊಂದೆಡೆ ಹೆದ್ದಾರಿಯ ಐದು ಕಡೆಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಪರಿಣಾಮ ಬೆಳಗ್ಗೆ ಐದು ಗಂಟೆಗೆ ಹೆದ್ದಾರಿಯಲ್ಲಿ ಸಿಲುಕಿದವರು ಬೆ. 10 ಗಂಟೆಯಾದರೂ ತುಮಕೂರು ಬಿಟ್ಟು ಹೋಗೋಕು ಪರದಾಡಿದರು.

ತುಮಕೂರಿನ ಹೊರವಲಯದ ಊರುಕೆರೆ ಬಳಿ, ಬೆಳ್ಳಾವಿ ಕ್ರಾಸ್ ಬಳಿ, ನೆಲಹಾಲ್ ಸಮೀಪ, ಕಳ್ಳಂಬೆಳ್ಳ ಸಮೀಪದಲ್ಲಿ ಎರಡು ಸೇತುವೆ ಕಾಮಗಾರಿ ನಡೆಯುತ್ತಿದ್ದು, ಏಕಾಏಕಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಬಂದ ಹಿನ್ನೆಲೆ ಟ್ರಾಫಿಕ್ ಜಾಮ್​​ ಉಂಟಾಗಿತ್ತು.

ಇದನ್ನೂ ಓದಿ: ಸುದೀರ್ಘ ರಜೆ ಹಿನ್ನೆಲೆ ಸಂಚಾರ ದಟ್ಟಣೆ ಸಾಧ್ಯತೆ; ಉದ್ಯೋಗಿಗಳಿಗೆ WFH ನೀಡುವಂತೆ ಟ್ರಾಫಿಕ್ ಜಂಟಿ ಆಯುಕ್ತರ ಪತ್ರ - Traffic Joint Commissioner Letter

ತುಮಕೂರು: ಬೆಂಗಳೂರು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿ ತುಮಕೂರು-ಶಿರಾ ಮಾರ್ಗದಲ್ಲಿ ಇಂದು ಬೆಳಗ್ಗೆಯಿಂದಲೂ ಟ್ರಾಫಿಕ್ ಸಮಸ್ಯೆ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿನ ಟ್ರಾಫಿಕ್ ಸಮಸ್ಯೆಗೆ ವಾಹನ ಸವಾರರು ಹೈರಾಣಾಗಿದ್ದಾರೆ.

ಇಂದು ಮುಂಜಾನೆ ಐದು ಗಂಟೆಯಿಂದಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್​ಗಟ್ಟಲೆ ಟ್ರಾಫಿಕ್​ನಲ್ಲಿ ವಾಹನ ಸವಾರರು ಸಿಲುಕಿ ಪರದಾಡುತ್ತಿದ್ದಾರೆ. ಆಂಬ್ಯುಲೆನ್ಸ್​ಗಳು ಸಹ ಟ್ರಾಫಿಕ್​ನಲ್ಲಿ ಸಿಲುಕಿವೆ. ತುರ್ತು ತೆರಳಲು ಸಾಧ್ಯವಾಗದೆ ಟ್ರಾಫಿಕ್​ನಲ್ಲಿ ಗಂಟೆಗಟ್ಟಲೆ ಸೈರನ್ ಹೊಡೆಯುತ್ತ ನಿಂತಿದ್ದ ದೃಶ್ಯ ಕಂಡುಬಂತು.

ವಾಹನ ಸವಾರರ ಪರದಾಟ (ETV Bharat)

ಹಬ್ಬಕ್ಕೆ ಹೋದವರೆಲ್ಲರೂ ವಾಪಸ್​ ಬೆಂಗಳೂರಿಗೆ ತೆರಳುತ್ತಿರುವುದು ಒಂದೆಡೆ ಆದರೆ, ಇನ್ನೊಂದೆಡೆ ಹೆದ್ದಾರಿಯ ಐದು ಕಡೆಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಪರಿಣಾಮ ಬೆಳಗ್ಗೆ ಐದು ಗಂಟೆಗೆ ಹೆದ್ದಾರಿಯಲ್ಲಿ ಸಿಲುಕಿದವರು ಬೆ. 10 ಗಂಟೆಯಾದರೂ ತುಮಕೂರು ಬಿಟ್ಟು ಹೋಗೋಕು ಪರದಾಡಿದರು.

ತುಮಕೂರಿನ ಹೊರವಲಯದ ಊರುಕೆರೆ ಬಳಿ, ಬೆಳ್ಳಾವಿ ಕ್ರಾಸ್ ಬಳಿ, ನೆಲಹಾಲ್ ಸಮೀಪ, ಕಳ್ಳಂಬೆಳ್ಳ ಸಮೀಪದಲ್ಲಿ ಎರಡು ಸೇತುವೆ ಕಾಮಗಾರಿ ನಡೆಯುತ್ತಿದ್ದು, ಏಕಾಏಕಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಬಂದ ಹಿನ್ನೆಲೆ ಟ್ರಾಫಿಕ್ ಜಾಮ್​​ ಉಂಟಾಗಿತ್ತು.

ಇದನ್ನೂ ಓದಿ: ಸುದೀರ್ಘ ರಜೆ ಹಿನ್ನೆಲೆ ಸಂಚಾರ ದಟ್ಟಣೆ ಸಾಧ್ಯತೆ; ಉದ್ಯೋಗಿಗಳಿಗೆ WFH ನೀಡುವಂತೆ ಟ್ರಾಫಿಕ್ ಜಂಟಿ ಆಯುಕ್ತರ ಪತ್ರ - Traffic Joint Commissioner Letter

ETV Bharat Logo

Copyright © 2024 Ushodaya Enterprises Pvt. Ltd., All Rights Reserved.