ETV Bharat / state

ಪೆನ್‌ಡ್ರೈವ್ ಪ್ರಕರಣ: ತಂದೆಯ ಮರಣೋತ್ತರ ಕ್ರಿಯೆಗೆ ಸಂತ್ರಸ್ತೆಯ ಅಪಹರಣ ಆರೋಪಿಗೆ ಜಾಮೀನು - Hassan Pen Drive Case

author img

By ETV Bharat Karnataka Team

Published : Jun 28, 2024, 8:32 PM IST

ಲೈಂಗಿಕ ದೌರ್ಜನ್ಯ ಸಂತ್ರಸ್ತ ಮಹಿಳೆಯನ್ನು ಅಪಹರಿಸಿರುವ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗೆ ಕೋರ್ಟ್‌, ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.

ಹೈಕೋರ್ಟ್
ಹೈಕೋರ್ಟ್ (IANS)

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯನ್ನು ಅಪಹರಿಸಲು ಸಹಕಾರ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಆರನೇ ಆರೋಪಿ ಹೆಚ್.ಟಿ.ಕೀರ್ತಿಗೆ ತನ್ನ ತಂದೆಯ ಮರಣೋತ್ತರ ವಿಧಿವಿಧಾನಗಳನ್ನು ನೆರವೇರಿಸಲು ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಪ್ರಕರಣ ಸಂಬಂಧ ಜಾಮೀನು ಕೋರಿ ಹೆಚ್.ಟಿ.ಕೀರ್ತಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಇದೇ ಅರ್ಜಿಯಲ್ಲಿ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯನ್ನು ಅಪಹರಿಸಲು ಸಹಕಾರ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಇತರ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ ಅರ್ಜಿ ಸಂಬಂಧ ಆಕ್ಷೇಪಣೆಗೆ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರು ತಂದೆಯ ಮರಣದ ನಂತರ ಅಪರಕರ್ಮ ನೇರವೇರಿಸಲು ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೃತ ಪೋಷಕರ ಅಪರಕರ್ಮದಲ್ಲಿ ಭಾಗವಹಿಸಲು ಅನುವು ಮಾಡಿಕೊಡುವುದು ಧಾರ್ಮಿಕ ಹಕ್ಕುಗಳ ಭಾಗವೂ ಆಗಿದೆ. ಈ ನಿಟ್ಟಿನಲ್ಲಿ ಅರ್ಜಿದಾರರಿಗೆ ಜು.15ರವೆಗೆ 17 ದಿನಗಳ ಕಾಲ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ.

ಅರ್ಜಿದಾರರನ್ನು ಈ ಕೂಡಲೇ ಜೈಲಿನಿಂದ ಬಿಡುಗಡೆಗೊಳಿಸಬೇಕು. ಆರೋಪಿಯು 50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ (ಶ್ಯೂರಿಟಿ ನೀಡಬೇಕು) ಮೈಸೂರು ಜಿಲ್ಲೆಯ ಕೆ.ಆರ್.ನಗರದ ಹೊರತಾಗಿ ಬೇರೆ ಕಡೆಗಳಲ್ಲಿ ಪ್ರವಾಸ ಬೆಳೆಸಬಾರದು. ಜೊತೆಗೆ ಕಾರ್ಯವಿಧಾನಗಳನ್ನು ನೇರವೇರಿಸಿದ ಬಳಿಕ ಜು.15ಕ್ಕೆ ಪೊಲೀಸ್ ಠಾಣೆಗೆ ಹೋಗಿ ಶರಣಾಗಬೇಕು ಎಂದು ಹೇಳಿ ವಿಚಾರಣೆ ಮುಂದೂಡಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಹೆಚ್.ಟಿ.ಕೀರ್ತಿ ಅವರ ತಂದೆ ಜೂ. 24ರಂದು ಮೃತಪಟ್ಟಿದ್ದಾರೆ. ಅರ್ಜಿದಾರರು ಮೃತರಿಗೆ ಏಕ ಮಾತ್ರ ಪುತ್ರರಾಗಿದ್ದು, ತಂದೆಯ ಮರಣದ ನಂತರ 11 ದಿನಗಳವರೆಗೂ ಹಾಲು ತುಪ್ಪ, ಅಸ್ಥಿ ವಿಸರ್ಜನೆ ಸೇರಿದಂತೆ ಇನ್ನಿತರ ಧಾರ್ಮಿಕ ವಿಧಿವಿಧಾನಗಳನ್ನು ನೇರವೇರಿಸಬೇಕಿದೆ. ಹಾಗಾಗಿ 15 ದಿನಗಳ ಕಾಲ ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ತಂದೆಯ ಕಾರ್ಯವಿಧಾನಗಳನ್ನು ಮಾಡಲು ಅನುವು ಮಾಡಿಕೊಡಬೇಕು ಎಂದು ನ್ಯಾಯಪೀಠವನ್ನು ಮನವಿ ಮಾಡಿದರು.

ಇದನ್ನೂ ಓದಿ: ಪೆನ್‌ಡ್ರೈವ್ ಹಂಚಿಕೆ: ಪ್ರೀತಂಗೌಡ ವಿರುದ್ಧದ ತನಿಖೆಗೆ ಹೈಕೋರ್ಟ್ ಅನುಮತಿ, ಬಂಧಿಸದಂತೆ ನಿರ್ಬಂಧ - Pen Drive Sharing Case

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯನ್ನು ಅಪಹರಿಸಲು ಸಹಕಾರ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಆರನೇ ಆರೋಪಿ ಹೆಚ್.ಟಿ.ಕೀರ್ತಿಗೆ ತನ್ನ ತಂದೆಯ ಮರಣೋತ್ತರ ವಿಧಿವಿಧಾನಗಳನ್ನು ನೆರವೇರಿಸಲು ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಪ್ರಕರಣ ಸಂಬಂಧ ಜಾಮೀನು ಕೋರಿ ಹೆಚ್.ಟಿ.ಕೀರ್ತಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಇದೇ ಅರ್ಜಿಯಲ್ಲಿ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯನ್ನು ಅಪಹರಿಸಲು ಸಹಕಾರ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಇತರ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ ಅರ್ಜಿ ಸಂಬಂಧ ಆಕ್ಷೇಪಣೆಗೆ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರು ತಂದೆಯ ಮರಣದ ನಂತರ ಅಪರಕರ್ಮ ನೇರವೇರಿಸಲು ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೃತ ಪೋಷಕರ ಅಪರಕರ್ಮದಲ್ಲಿ ಭಾಗವಹಿಸಲು ಅನುವು ಮಾಡಿಕೊಡುವುದು ಧಾರ್ಮಿಕ ಹಕ್ಕುಗಳ ಭಾಗವೂ ಆಗಿದೆ. ಈ ನಿಟ್ಟಿನಲ್ಲಿ ಅರ್ಜಿದಾರರಿಗೆ ಜು.15ರವೆಗೆ 17 ದಿನಗಳ ಕಾಲ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ.

ಅರ್ಜಿದಾರರನ್ನು ಈ ಕೂಡಲೇ ಜೈಲಿನಿಂದ ಬಿಡುಗಡೆಗೊಳಿಸಬೇಕು. ಆರೋಪಿಯು 50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ (ಶ್ಯೂರಿಟಿ ನೀಡಬೇಕು) ಮೈಸೂರು ಜಿಲ್ಲೆಯ ಕೆ.ಆರ್.ನಗರದ ಹೊರತಾಗಿ ಬೇರೆ ಕಡೆಗಳಲ್ಲಿ ಪ್ರವಾಸ ಬೆಳೆಸಬಾರದು. ಜೊತೆಗೆ ಕಾರ್ಯವಿಧಾನಗಳನ್ನು ನೇರವೇರಿಸಿದ ಬಳಿಕ ಜು.15ಕ್ಕೆ ಪೊಲೀಸ್ ಠಾಣೆಗೆ ಹೋಗಿ ಶರಣಾಗಬೇಕು ಎಂದು ಹೇಳಿ ವಿಚಾರಣೆ ಮುಂದೂಡಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಹೆಚ್.ಟಿ.ಕೀರ್ತಿ ಅವರ ತಂದೆ ಜೂ. 24ರಂದು ಮೃತಪಟ್ಟಿದ್ದಾರೆ. ಅರ್ಜಿದಾರರು ಮೃತರಿಗೆ ಏಕ ಮಾತ್ರ ಪುತ್ರರಾಗಿದ್ದು, ತಂದೆಯ ಮರಣದ ನಂತರ 11 ದಿನಗಳವರೆಗೂ ಹಾಲು ತುಪ್ಪ, ಅಸ್ಥಿ ವಿಸರ್ಜನೆ ಸೇರಿದಂತೆ ಇನ್ನಿತರ ಧಾರ್ಮಿಕ ವಿಧಿವಿಧಾನಗಳನ್ನು ನೇರವೇರಿಸಬೇಕಿದೆ. ಹಾಗಾಗಿ 15 ದಿನಗಳ ಕಾಲ ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ತಂದೆಯ ಕಾರ್ಯವಿಧಾನಗಳನ್ನು ಮಾಡಲು ಅನುವು ಮಾಡಿಕೊಡಬೇಕು ಎಂದು ನ್ಯಾಯಪೀಠವನ್ನು ಮನವಿ ಮಾಡಿದರು.

ಇದನ್ನೂ ಓದಿ: ಪೆನ್‌ಡ್ರೈವ್ ಹಂಚಿಕೆ: ಪ್ರೀತಂಗೌಡ ವಿರುದ್ಧದ ತನಿಖೆಗೆ ಹೈಕೋರ್ಟ್ ಅನುಮತಿ, ಬಂಧಿಸದಂತೆ ನಿರ್ಬಂಧ - Pen Drive Sharing Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.