ETV Bharat / state

ತತ್ಕಾಲ್ ಸೇವೆ ಸಲ್ಲಿಸಿರುವ ಭೂ ಮಾಪಕರಿಗೆ ನಿಗದಿತ ಸಂಭಾವನೆ ಪಾವತಿಸಲು ಹೈಕೋರ್ಟ್ ಸೂಚನೆ - High Court

author img

By ETV Bharat Karnataka Team

Published : Jun 5, 2024, 3:32 PM IST

ತತ್ಕಾಲ್ ಸೇವೆಗಳ ಅಡಿಯಲ್ಲಿ ಹೆಚ್ಚುವರಿ ಸೇವೆ ಸಲ್ಲಿಸಿರುವ ಭೂ ಮಾಪಕರಿಗೆ ಮುಂದಿನ ಮೂರು ತಿಂಗಳಲ್ಲಿ ಸಂಭಾವನೆ ಪಾವತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)

ಬೆಂಗಳೂರು: 2008 ರಿಂದ 2013ರ ಅವಧಿಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ತತ್ಕಾಲ್ ಸೇವೆಗಳ ಅಡಿಯಲ್ಲಿ ಹೆಚ್ಚುವರಿ ಸೇವೆ ಸಲ್ಲಿಸಿರುವ ರಾಜ್ಯ ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯಿಂದ ಅನುಮತಿ ಪಡೆದ ಭೂ ಮಾಪಕರಿಗೆ ಮುಂದಿನ ಮೂರು ತಿಂಗಳಲ್ಲಿ ಸಂಭಾವನೆ ಪಾವತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ, ಸಂಭಾವನೆ ಪಾವತಿ ಮಾಡುವ ಪ್ರಕ್ರಿಯೆ ವಿಳಂಬವಾದಲ್ಲಿ ಶೇ.1 ರಷ್ಟು ಬಡ್ಡಿಯೊಂದಿಗೆ ಪಾವತಿ ಮಾಡಬೇಕು. ಈ ಮೊತ್ತವನ್ನು ತಪ್ಪಿತಸ್ಥ ಅಧಿಕಾರಿಗಳಿಂದ ವಸೂಲಿ ಮಾಡಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ.

ಸರ್ಕಾರದಿಂದ ಪರವಾನಿಗೆ ಪಡೆದ ಭೂಮಾಪಕರಾದ ಕೆ.ಬಿ. ಲೋಕೇಶ್ ಸೇರಿ 1,130 ಮಂದಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ರಾಮಚಂದ್ರ ಹುದ್ದಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಜೊತೆಗೆ, ಸರ್ಕಾರ ಆದೇಶದ ಅವಧಿಯಲ್ಲಿ ಅರ್ಜಿ ಸಲ್ಲಿಸಿರುವ ಭೂಮಾಪಕರು ಸೇವೆ ಸಲ್ಲಿಸಿರುವ ಸಂಬಂಧ ಖಚಿತಪಡಿಸಿಕೊಂಡ ಬಳಿಕ ಸಂಭಾವನೆ ಪಾವತಿಸಬೇಕು ಎಂದು ಸೂಚಿಸಿದೆ.

ತತ್ಕಾಲ್‌ನಲ್ಲಿ ಸೇವೆ ಪಡೆದುಕೊಂಡ ಫಲಾನುಭವಿಗಳಿಂದ ಸಂಗ್ರಹಿಸಿರುವ ಮೊತ್ತವನ್ನು ಪರವಾನಿಗೆ ಪಡೆದ ಭೂ ಮಾಪಕರಿಗೆ ಪಾವತಿ ಮಾಡಿಲ್ಲ. ಆದರೆ, ಈ ಮೊತ್ತವನ್ನು ಸರ್ಕಾರದ ಖಜಾನೆಗೂ ಪಾವತಿಸಿಲ್ಲ. ಆದರೆ, ಪ್ರತ್ಯೇಕ ಖಾತೆಯಲ್ಲಿಡಲಾಗಿದೆ. ಸೇವೆ ಸಲ್ಲಿಸಿದ ಭೂ ಮಾಪಕರಿಗೆ ಸಂಭಾವನೆ ಪಾವತಿಸದಿರುವುದು ಸರ್ಕಾರದ ಅನ್ಯಾಯದ ನಡೆಯಾಗಿದೆ ಎಂದು ಪೀಠ ಹೇಳಿದೆ. ಅಲ್ಲದೆ, ಹೆಚ್ಚುವರಿ ಕೆಲಸವನ್ನು ಮಾಡಿಸಿಕೊಂಡಿರುವ ಸರ್ಕಾರ ಅದಕ್ಕೆ ಸಂಭಾವನೆ ನೀಡದಿರುವುದು ಸರಿಯಾದ ಕ್ರಮವಲ್ಲ. ಸೇವಕರ ರಕ್ತ ಮತ್ತು ಬೆವರಿಗೆ ಬೆಲೆ ನೀಡಬೇಕಾಗಿದೆ ಎಂದು ತಿಳಿಸಿದ ನ್ಯಾಯಪೀಠ, ಸಂಭಾವನೆ ಪಾವತಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?: ರಾಜ್ಯ ಸರ್ಕಾರ ರೈತರಿಗೆ ತುರ್ತು ನೆರವಿಗಾಗಿ ತತ್ಕಾಲ್ ಪೋಡಿ ಕಾಮಗಾರಿಗೆ ಶುಲ್ಕವನ್ನು 500 ರೂ. ಗಳು ಮತ್ತು ಪೂರ್ವಭಾವಿ ಸ್ಕೆಚ್‌ಗೆ ಈ ಹಿಂದೆ ಇದ್ದಂತಹ 420 ರೂ.ಗಳನ್ನು 600 ರೂ.ಗಳಿಗೆ ಹೆಚ್ಚಳ ಮಾಡಿ ಆದೇಶಿಸಿತ್ತು. ಈ ಆದೇಶ 2008 ರಿಂದ 2013ರ ವರೆಗೂ ಜಾರಿಯಲ್ಲಿತ್ತು. ಈ ಅವಧಿಯಲ್ಲಿ ಸೇವೆ ಸಲ್ಲಿಸಿದ್ದ ಭೂ ಮಾಪಕರಿಗೆ ಹೆಚ್ಚುವರಿ ಶುಲ್ಕವನ್ನು ಪಾವತಿ ಮಾಡಬೇಕಾಗಿತ್ತು. ಆದರೆ, ಸರ್ಕಾರ ಪಾವತಿ ಮಾಡಿರಲಿಲ್ಲ. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯಪೀಠ, ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಮೇಲ್ಮನವಿದಾರರ ಪರ ವಕೀಲರು, ಮೇಲ್ಮನವಿ ಸಲ್ಲಿಸಿರುವವರು 2008ರ ಆದೇಶದ ಪ್ರಯೋಜನವನ್ನು 2013ರಲ್ಲಿ ನಿಯಮಗಳ ತಿದ್ದುಪಡಿ ಮಾಡುವವರೆಗೂ ಹೆಚ್ಚುವರಿ ಶುಲ್ಕವನ್ನು ಪಡೆಯಲು ಅರ್ಹರಾಗಿರತ್ತಾರೆ. 2008ರ ಆದೇಶದ ಪ್ರಕಾರ ರಾಜ್ಯ ಸರ್ಕಾರವು ಈ ಮೇಲ್ಮನವಿದಾರರಿಂದ ಕೆಲಸ ಮಾಡಿಸಿಕೊಂಡಿದೆ. ಆದರೆ ಸಂಭಾವನೆ ಪಾವತಿ ಮಾಡಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಸಂತಾನ ಭಾಗ್ಯಕ್ಕಾಗಿ ದಂಪತಿಗೆ ಪೆರೋಲ್ ನೀಡಿದ ಹೈಕೋರ್ಟ್ - High Court Grants Parole

ಬೆಂಗಳೂರು: 2008 ರಿಂದ 2013ರ ಅವಧಿಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ತತ್ಕಾಲ್ ಸೇವೆಗಳ ಅಡಿಯಲ್ಲಿ ಹೆಚ್ಚುವರಿ ಸೇವೆ ಸಲ್ಲಿಸಿರುವ ರಾಜ್ಯ ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯಿಂದ ಅನುಮತಿ ಪಡೆದ ಭೂ ಮಾಪಕರಿಗೆ ಮುಂದಿನ ಮೂರು ತಿಂಗಳಲ್ಲಿ ಸಂಭಾವನೆ ಪಾವತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ, ಸಂಭಾವನೆ ಪಾವತಿ ಮಾಡುವ ಪ್ರಕ್ರಿಯೆ ವಿಳಂಬವಾದಲ್ಲಿ ಶೇ.1 ರಷ್ಟು ಬಡ್ಡಿಯೊಂದಿಗೆ ಪಾವತಿ ಮಾಡಬೇಕು. ಈ ಮೊತ್ತವನ್ನು ತಪ್ಪಿತಸ್ಥ ಅಧಿಕಾರಿಗಳಿಂದ ವಸೂಲಿ ಮಾಡಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ.

ಸರ್ಕಾರದಿಂದ ಪರವಾನಿಗೆ ಪಡೆದ ಭೂಮಾಪಕರಾದ ಕೆ.ಬಿ. ಲೋಕೇಶ್ ಸೇರಿ 1,130 ಮಂದಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ರಾಮಚಂದ್ರ ಹುದ್ದಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಜೊತೆಗೆ, ಸರ್ಕಾರ ಆದೇಶದ ಅವಧಿಯಲ್ಲಿ ಅರ್ಜಿ ಸಲ್ಲಿಸಿರುವ ಭೂಮಾಪಕರು ಸೇವೆ ಸಲ್ಲಿಸಿರುವ ಸಂಬಂಧ ಖಚಿತಪಡಿಸಿಕೊಂಡ ಬಳಿಕ ಸಂಭಾವನೆ ಪಾವತಿಸಬೇಕು ಎಂದು ಸೂಚಿಸಿದೆ.

ತತ್ಕಾಲ್‌ನಲ್ಲಿ ಸೇವೆ ಪಡೆದುಕೊಂಡ ಫಲಾನುಭವಿಗಳಿಂದ ಸಂಗ್ರಹಿಸಿರುವ ಮೊತ್ತವನ್ನು ಪರವಾನಿಗೆ ಪಡೆದ ಭೂ ಮಾಪಕರಿಗೆ ಪಾವತಿ ಮಾಡಿಲ್ಲ. ಆದರೆ, ಈ ಮೊತ್ತವನ್ನು ಸರ್ಕಾರದ ಖಜಾನೆಗೂ ಪಾವತಿಸಿಲ್ಲ. ಆದರೆ, ಪ್ರತ್ಯೇಕ ಖಾತೆಯಲ್ಲಿಡಲಾಗಿದೆ. ಸೇವೆ ಸಲ್ಲಿಸಿದ ಭೂ ಮಾಪಕರಿಗೆ ಸಂಭಾವನೆ ಪಾವತಿಸದಿರುವುದು ಸರ್ಕಾರದ ಅನ್ಯಾಯದ ನಡೆಯಾಗಿದೆ ಎಂದು ಪೀಠ ಹೇಳಿದೆ. ಅಲ್ಲದೆ, ಹೆಚ್ಚುವರಿ ಕೆಲಸವನ್ನು ಮಾಡಿಸಿಕೊಂಡಿರುವ ಸರ್ಕಾರ ಅದಕ್ಕೆ ಸಂಭಾವನೆ ನೀಡದಿರುವುದು ಸರಿಯಾದ ಕ್ರಮವಲ್ಲ. ಸೇವಕರ ರಕ್ತ ಮತ್ತು ಬೆವರಿಗೆ ಬೆಲೆ ನೀಡಬೇಕಾಗಿದೆ ಎಂದು ತಿಳಿಸಿದ ನ್ಯಾಯಪೀಠ, ಸಂಭಾವನೆ ಪಾವತಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?: ರಾಜ್ಯ ಸರ್ಕಾರ ರೈತರಿಗೆ ತುರ್ತು ನೆರವಿಗಾಗಿ ತತ್ಕಾಲ್ ಪೋಡಿ ಕಾಮಗಾರಿಗೆ ಶುಲ್ಕವನ್ನು 500 ರೂ. ಗಳು ಮತ್ತು ಪೂರ್ವಭಾವಿ ಸ್ಕೆಚ್‌ಗೆ ಈ ಹಿಂದೆ ಇದ್ದಂತಹ 420 ರೂ.ಗಳನ್ನು 600 ರೂ.ಗಳಿಗೆ ಹೆಚ್ಚಳ ಮಾಡಿ ಆದೇಶಿಸಿತ್ತು. ಈ ಆದೇಶ 2008 ರಿಂದ 2013ರ ವರೆಗೂ ಜಾರಿಯಲ್ಲಿತ್ತು. ಈ ಅವಧಿಯಲ್ಲಿ ಸೇವೆ ಸಲ್ಲಿಸಿದ್ದ ಭೂ ಮಾಪಕರಿಗೆ ಹೆಚ್ಚುವರಿ ಶುಲ್ಕವನ್ನು ಪಾವತಿ ಮಾಡಬೇಕಾಗಿತ್ತು. ಆದರೆ, ಸರ್ಕಾರ ಪಾವತಿ ಮಾಡಿರಲಿಲ್ಲ. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯಪೀಠ, ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಮೇಲ್ಮನವಿದಾರರ ಪರ ವಕೀಲರು, ಮೇಲ್ಮನವಿ ಸಲ್ಲಿಸಿರುವವರು 2008ರ ಆದೇಶದ ಪ್ರಯೋಜನವನ್ನು 2013ರಲ್ಲಿ ನಿಯಮಗಳ ತಿದ್ದುಪಡಿ ಮಾಡುವವರೆಗೂ ಹೆಚ್ಚುವರಿ ಶುಲ್ಕವನ್ನು ಪಡೆಯಲು ಅರ್ಹರಾಗಿರತ್ತಾರೆ. 2008ರ ಆದೇಶದ ಪ್ರಕಾರ ರಾಜ್ಯ ಸರ್ಕಾರವು ಈ ಮೇಲ್ಮನವಿದಾರರಿಂದ ಕೆಲಸ ಮಾಡಿಸಿಕೊಂಡಿದೆ. ಆದರೆ ಸಂಭಾವನೆ ಪಾವತಿ ಮಾಡಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಸಂತಾನ ಭಾಗ್ಯಕ್ಕಾಗಿ ದಂಪತಿಗೆ ಪೆರೋಲ್ ನೀಡಿದ ಹೈಕೋರ್ಟ್ - High Court Grants Parole

ETV Bharat Logo

Copyright © 2024 Ushodaya Enterprises Pvt. Ltd., All Rights Reserved.