ETV Bharat / state

ಫೆ.2ಕ್ಕೆ ವಕೀಲರ ಸಂಘದ ಚುನಾವಣೆ ನಡೆಸಲು ಹೈಕೋರ್ಟ್ ಸೂಚನೆ - BAR ASSOCIATION ELECTIONS

ಉನ್ನತಾಧಿಕಾರ ಸಮಿತಿಯು ಬೆಂಗಳೂರು ವಕೀಲರ ಸಂಘದ ಚುನಾವಣೆಯನ್ನು ಫೆಬ್ರವರಿ 2ರಂದು ನಡೆಸುವಂತೆ ಹೈಕೋರ್ಟ್​ ಸೂಚಿಸಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Dec 21, 2024, 6:35 AM IST

ಬೆಂಗಳೂರು : ಬೆಂಗಳೂರು ವಕೀಲರ ಸಂಘದ ಚುನಾವಣೆಯನ್ನು 2025ರ ಫೆಬ್ರವರಿ 2ರಂದು ನಡೆಸಲು ಉನ್ನತಾಧಿಕಾರ ಸಮಿತಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಜನವರಿ 19 ಅಥವಾ ಫೆಬ್ರವರಿ 2ರಂದು ಬೆಂಗಳೂರು ವಕೀಲರ ಸಂಘಕ್ಕೆ ಚುನಾವಣೆ ನಡೆಸಲು ಉನ್ನತಾಧಿಕಾರ ಸಮಿತಿಗೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಮಂಜುನಾಥ್ ನಾಯ್ಕ್ ಮತ್ತು ಇವಿಎಂ ಬಳಕೆ ಹಾಗೂ ಪೊಲೀಸ್ ಭದ್ರತೆ ಕೋರಿ ಪ್ರಸ್ತುತ ಅಧ್ಯಕ್ಷರಾಗಿರುವ ವಿವೇಕ್ ಸುಬ್ಬಾರೆಡ್ಡಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ.

ಉನ್ನತಾಧಿಕಾರ ಸಮಿತಿಯು ಬೆಂಗಳೂರು ವಕೀಲರ ಸಂಘದ ಚುನಾವಣೆಯನ್ನು ಫೆಬ್ರವರಿ 2ರಂದು ನಡೆಸಬೇಕು. ಡಿಸೆಂಬರ್ 30ರ ಒಳಗೆ ಅಂತಿಮ ಮತದಾರರ ಪಟ್ಟಿಯನ್ನು ಸಮಿತಿ ಬಿಡುಗಡೆ ಮಾಡಬೇಕು. ದ್ವಿಸದಸ್ಯತ್ವ ಮತ್ತು ಎಐಬಿಇ ಪರೀಕ್ಷೆ ಪಾಸಾಗದವರಿಗೆ ಮತದಾನದ ಅವಕಾಶ ಕಲ್ಪಿಸದಂತೆ ಉನ್ನತಾಧಿಕಾರ ಸಮಿತಿ ಕ್ರಮ ಕೈಗೊಳ್ಳಬೇಕು. ಚುನಾವಣೆಗೆ ಅಗತ್ಯವಾದ ವಿದ್ಯುನ್ಮಾನ ಮತಯಂತ್ರಗಳನ್ನು ಚುನಾವಣಾ ಆಯೋಗ ಒದಗಿಸಬೇಕು. ಪೊಲೀಸರು ಭದ್ರತೆ ಒದಗಿಸಬೇಕು ಎಂದು ಸೂಚನೆ ನೀಡಿತು.

ಮಹಿಳಾ ವಕೀಲರ ಮೀಸಲಾತಿಗೆ ಆಗ್ರಹ: ಮಹಿಳಾ ವಕೀಲರೊಬ್ಬರು ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪಿಗೆ ಅನುಗುಣವಾಗಿ ಮುಂದಿನ ಎಎಬಿ ಚುನಾವಣೆಯಲ್ಲಿ ಶೇ.33ರಷ್ಟು ಮೀಸಲಾತಿಯನ್ನು ಮಹಿಳಾ ವಕೀಲರಿಗೆ ಕಲ್ಪಿಸಬೇಕು ಎಂದು ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ. ಅದನ್ನು ಪರಿಗಣಿಸಬೇಕು ಎಂದು ಪೀಠಕ್ಕೆ ಕೋರಿದರು.

ಇದನ್ನೂ ಓದಿ: ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ: 60 ದಿನಗಳ ಬಳಿಕ ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲಾಗದು - ಹೈಕೋರ್ಟ್

ಇದಕ್ಕೆ ವಿವೇಕ್ ಸುಬ್ಬಾರೆಡ್ಡಿ, ಮಹಿಳಾ ವಕೀಲರಿಗೆ ಮೀಸಲಾತಿ ಕಲ್ಪಿಸಲು ಎಎಬಿ ಬೈಲಾಗೆ ತಿದ್ದುಪಡಿ ಮಾಡಬೇಕಿದೆ. ಎಎಬಿ ಆಡಳಿತ ಮಂಡಳಿಯ ಅವಧಿ ಈಗ ಮುಗಿದಿರುವುದರಿಂದ ತಿದ್ದುಪಡಿ ಸದ್ಯ ಅಸಾಧ್ಯ ಎಂದು ವಿವರಿಸಿದರು.

ವಾದ ಆಲಿಸಿದ ಪೀಠ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಏನೆಲ್ಲಾ ಸಲಹೆಗಳನ್ನು ನೀಡಬೇಕು ಎಂದುಕೊಳ್ಳಲಾಗಿದೆಯೋ, ಅವುಗಳನ್ನು ಲಿಖಿತವಾಗಿ ನೀಡಿದರೆ ಆದೇಶದಲ್ಲಿ ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿ, ವಿಚಾರಣೆಯನ್ನು ಜನವರಿ 6ಕ್ಕೆ ಮುಂದೂಡಿತು.

ಇದನ್ನೂ ಓದಿ: ತಕ್ಷಣವೇ ಸಿ.ಟಿ.ರವಿ ಬಿಡುಗಡೆಗೆ ಆದೇಶಿಸಿ 'ಜನಪ್ರತಿನಿಧಿಗಳಾಗಿ ಆರೋಪಿ‌, ದೂರುದಾರರ ವರ್ತನೆ ದುರದೃಷ್ಟಕರ‌' ಎಂದ ಹೈಕೋರ್ಟ್‌

ಬೆಂಗಳೂರು : ಬೆಂಗಳೂರು ವಕೀಲರ ಸಂಘದ ಚುನಾವಣೆಯನ್ನು 2025ರ ಫೆಬ್ರವರಿ 2ರಂದು ನಡೆಸಲು ಉನ್ನತಾಧಿಕಾರ ಸಮಿತಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಜನವರಿ 19 ಅಥವಾ ಫೆಬ್ರವರಿ 2ರಂದು ಬೆಂಗಳೂರು ವಕೀಲರ ಸಂಘಕ್ಕೆ ಚುನಾವಣೆ ನಡೆಸಲು ಉನ್ನತಾಧಿಕಾರ ಸಮಿತಿಗೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಮಂಜುನಾಥ್ ನಾಯ್ಕ್ ಮತ್ತು ಇವಿಎಂ ಬಳಕೆ ಹಾಗೂ ಪೊಲೀಸ್ ಭದ್ರತೆ ಕೋರಿ ಪ್ರಸ್ತುತ ಅಧ್ಯಕ್ಷರಾಗಿರುವ ವಿವೇಕ್ ಸುಬ್ಬಾರೆಡ್ಡಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ.

ಉನ್ನತಾಧಿಕಾರ ಸಮಿತಿಯು ಬೆಂಗಳೂರು ವಕೀಲರ ಸಂಘದ ಚುನಾವಣೆಯನ್ನು ಫೆಬ್ರವರಿ 2ರಂದು ನಡೆಸಬೇಕು. ಡಿಸೆಂಬರ್ 30ರ ಒಳಗೆ ಅಂತಿಮ ಮತದಾರರ ಪಟ್ಟಿಯನ್ನು ಸಮಿತಿ ಬಿಡುಗಡೆ ಮಾಡಬೇಕು. ದ್ವಿಸದಸ್ಯತ್ವ ಮತ್ತು ಎಐಬಿಇ ಪರೀಕ್ಷೆ ಪಾಸಾಗದವರಿಗೆ ಮತದಾನದ ಅವಕಾಶ ಕಲ್ಪಿಸದಂತೆ ಉನ್ನತಾಧಿಕಾರ ಸಮಿತಿ ಕ್ರಮ ಕೈಗೊಳ್ಳಬೇಕು. ಚುನಾವಣೆಗೆ ಅಗತ್ಯವಾದ ವಿದ್ಯುನ್ಮಾನ ಮತಯಂತ್ರಗಳನ್ನು ಚುನಾವಣಾ ಆಯೋಗ ಒದಗಿಸಬೇಕು. ಪೊಲೀಸರು ಭದ್ರತೆ ಒದಗಿಸಬೇಕು ಎಂದು ಸೂಚನೆ ನೀಡಿತು.

ಮಹಿಳಾ ವಕೀಲರ ಮೀಸಲಾತಿಗೆ ಆಗ್ರಹ: ಮಹಿಳಾ ವಕೀಲರೊಬ್ಬರು ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪಿಗೆ ಅನುಗುಣವಾಗಿ ಮುಂದಿನ ಎಎಬಿ ಚುನಾವಣೆಯಲ್ಲಿ ಶೇ.33ರಷ್ಟು ಮೀಸಲಾತಿಯನ್ನು ಮಹಿಳಾ ವಕೀಲರಿಗೆ ಕಲ್ಪಿಸಬೇಕು ಎಂದು ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ. ಅದನ್ನು ಪರಿಗಣಿಸಬೇಕು ಎಂದು ಪೀಠಕ್ಕೆ ಕೋರಿದರು.

ಇದನ್ನೂ ಓದಿ: ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ: 60 ದಿನಗಳ ಬಳಿಕ ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲಾಗದು - ಹೈಕೋರ್ಟ್

ಇದಕ್ಕೆ ವಿವೇಕ್ ಸುಬ್ಬಾರೆಡ್ಡಿ, ಮಹಿಳಾ ವಕೀಲರಿಗೆ ಮೀಸಲಾತಿ ಕಲ್ಪಿಸಲು ಎಎಬಿ ಬೈಲಾಗೆ ತಿದ್ದುಪಡಿ ಮಾಡಬೇಕಿದೆ. ಎಎಬಿ ಆಡಳಿತ ಮಂಡಳಿಯ ಅವಧಿ ಈಗ ಮುಗಿದಿರುವುದರಿಂದ ತಿದ್ದುಪಡಿ ಸದ್ಯ ಅಸಾಧ್ಯ ಎಂದು ವಿವರಿಸಿದರು.

ವಾದ ಆಲಿಸಿದ ಪೀಠ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಏನೆಲ್ಲಾ ಸಲಹೆಗಳನ್ನು ನೀಡಬೇಕು ಎಂದುಕೊಳ್ಳಲಾಗಿದೆಯೋ, ಅವುಗಳನ್ನು ಲಿಖಿತವಾಗಿ ನೀಡಿದರೆ ಆದೇಶದಲ್ಲಿ ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿ, ವಿಚಾರಣೆಯನ್ನು ಜನವರಿ 6ಕ್ಕೆ ಮುಂದೂಡಿತು.

ಇದನ್ನೂ ಓದಿ: ತಕ್ಷಣವೇ ಸಿ.ಟಿ.ರವಿ ಬಿಡುಗಡೆಗೆ ಆದೇಶಿಸಿ 'ಜನಪ್ರತಿನಿಧಿಗಳಾಗಿ ಆರೋಪಿ‌, ದೂರುದಾರರ ವರ್ತನೆ ದುರದೃಷ್ಟಕರ‌' ಎಂದ ಹೈಕೋರ್ಟ್‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.