ETV Bharat / state

ಲೈಂಗಿಕ ಹಗರಣದ ಪೆನ್​ಡ್ರೈವ್​ ಹಂಚಿಕೆ ಅತ್ಯಂತ ಅಪಾಯಕಾರಿ, ಪಾಪದ ಕೆಲಸ: ಹೈಕೋರ್ಟ್ - High Court

author img

By ETV Bharat Karnataka Team

Published : Jun 11, 2024, 8:30 PM IST

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಒಳಗೊಂಡ ದೃಶ್ಯಗಳನ್ನು ಇತರರಿಗೆ ಹಂಚಿಕೆ ಮಾಡಿರುವುದು ಅತ್ಯಂತ ಅಪಾಯಕಾರಿ ಮತ್ತು ಪಾಪದ ಕೆಲಸ ಎಂದು ಹೈಕೋರ್ಟ್ ಹೇಳಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಒಳಗೊಂಡ ದೃಶ್ಯಗಳನ್ನು ಪೆನ್​ಡ್ರೈವ್‌ನಲ್ಲಿ ನಕಲಿಸಿ ಅವುಗಳನ್ನು ಇತರರಿಗೆ ಹಂಚಿಕೆ ಮಾಡಿರುವುದು ಅತ್ಯಂತ ಅಪಾಯಕಾರಿ ಮತ್ತು ಪಾಪದ ಕೆಲಸ ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿತು.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಪೆನ್​ಡ್ರೈವ್ ವಿತರಣೆ ಸಂಬಂಧ ಪ್ರಮುಖ ಆರೋಪಿ ಎನ್ನಲಾದ ಶರತ್ ಎಂಬವರು ತಮ್ಮ ವಿರುದ್ಧದ ಪ್ರಕರಣ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ನಡೆಸಿತು.

ಇಂತಹ ವಿಚಾರಗಳಲ್ಲಿ ಪುರುಷ ಏನೂ ಕಳೆದುಕೊಳ್ಳುವುದಿಲ್ಲ. ಆದರೆ ಮಹಿಳೆಯನ್ನು ಮಂದ ಬೆಳಕಿನಲ್ಲಿ ಕೆಟ್ಟದಾಗಿ ಚಿತ್ರಿಸುವುದರಿಂದ ಆಕೆ ಅಪಮಾನಕ್ಕೆ ಒಳಗಾಗುತ್ತಾಳೆ. ಪ್ರಕರಣದಲ್ಲಿ ಸದ್ಯಕ್ಕೆ ನ್ಯಾಯಾಲಯ ಹಸ್ತಕ್ಷೇಪ ಮಾಡುವುದಿಲ್ಲ. ಆರೋಪಿ ತನಿಖಾಧಿಕಾರಿಗಳ ಮುಂದೆ ಹಾಜರಾಗಲಿ ಎಂದು ಪೀಠ ಹೇಳಿತು.

ಇದಕ್ಕೆ ಆರೋಪಿ ಪರ ವಕೀಲರು, ಹಾಗಿದ್ದರೆ ಬಂಧಿಸದಂತೆ ಆದೇಶ ನೀಡುವಂತೆ ಮನವಿ ಮಾಡಿದರು. ಇದಕ್ಕೆ ನ್ಯಾಯಪೀಠ, ಈ ನ್ಯಾಯಾಲಯವನ್ನು ಜಾಮೀನು ಕೋರ್ಟನ್ನಾಗಿ ಪರಿವರ್ತಿಸಬೇಡಿ. ಮೊದಲು ನಿರೀಕ್ಷಣಾ ಅಥವಾ ರೆಗ್ಯುಲರ್ ಜಾಮೀನು ಪಡೆದುಕೊಳ್ಳಿ, ಇಲ್ಲವೇ ತನಿಖಾಧಿಕಾರಿ ಮುಂದೆ ಹಾಜರಾಗಿ. ಅಲ್ಲಿಯವರೆಗೆ ನಾವು ಈ ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ತನಿಖಾ ವರದಿಯ ವಿವರಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿ, ಶರತ್ ಪಾತ್ರವನ್ನು ವಿವರಿಸಿದರು. ಅಲ್ಲದೆ ಅವರು ಶರತ್‌ಗೆ ಸೇರಿದ ಜಾಗದಲ್ಲಿ ಎಸ್‌ಐಟಿ ತಂಡ ವಶಪಡಿಸಿಕೊಂಡಿರುವ ಡಿವಿಆರ್ ಜತೆ ಟ್ಯಾಬ್ಲೆಟ್ ಮತ್ತು ಹಲವು ಸಿಡಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿದೆ ಎಂದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಶರತ್ ಕುರಿತು ಕೇವಲ ಮಾಹಿತಿ ಇದೆ ಎಂದು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗದು. ಆರೋಪಿ ವಿರುದ್ಧ ಕಳೆದ 30 ದಿನಗಳಿಂದ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅವರು ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ಮೊರೆ ಹೋದ ನಂತರ ತನಿಖೆ ತೀವ್ರಗೊಳಿಸಿದ್ದಾರೆ ಎಂದು ತಿಳಿಸಿದರು.

ಆದರೆ ಆ ವಾದವನ್ನು ತಳ್ಳಿಹಾಕಿದ ಜಗದೀಶ್, ಪೆನ್​ಡ್ರೈವ್‌ಗಳ ಕಾಪಿ ಮತ್ತು ವಿತರಣೆ ಪ್ರಕರಣದಲ್ಲಿ ಆರೋಪಿಯೇ ಪ್ರಮುಖ ವ್ಯಕ್ತಿಯಾಗಿದ್ದಾರೆ. ಹಾಗಾಗಿ ನ್ಯಾಯಾಲಯ ಯಾವುದೇ ಪರಿಹಾರ ನೀಡಬಾರದು ಎಂದು ಕೋರಿದರು. ಅದಕ್ಕೆ ಆರೋಪಿ ವಕೀಲರು, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಅರ್ಜಿದಾರರನ್ನು ಗುರಿ ಮಾಡಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಮತ್ತು ಆರೋಪಿ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದರು.

ಅದಕ್ಕೆ ನ್ಯಾಯಾಲಯ, ಏನಿದು ರಾಜಕೀಯ ದ್ವೇಷನಾ? ಇರಲಿ ಬಿಡಿ. ಯಾವುದೇ ವ್ಯಕ್ತಿ ಇಂತಹ ಕೆಲಸ ಮಾಡಿರಲಿ ಅದು ಮಹಾಪಾಪ. ಯಾರೊಬ್ಬರೂ ಮಹಿಳೆಯನ್ನು ಕೆಟ್ಟದಾಗಿ ಬಿಂಬಿಸಬಾರದು, ಅಂತಹ ಕೆಲಸ ಅಪಾಯಕಾರಿ. ನೀವು ಮಹಿಳೆಯನ್ನು ಕೆಟ್ಟದಾಗಿ ಚಿತ್ರಿಸಿದರೆ, ಅದು ಯಾವ ಸನ್ನಿವೇಶನದಲ್ಲಿ, ಹೇಗೆ ಆಯಿತು ಎಂಬುದು ನಿಮಗೆ ತಿಳಿದಿರುವುದಿಲ್ಲ. ನೀವು ಎಲ್ಲರನ್ನೂ ಅದೇ ರೀತಿ ಬಿಂಬಿಸಲು ಹೊರಟರೆ ಪುರುಷರು ಕಳೆದುಕೊಳ್ಳುವುದು ಏನೂ ಇಲ್ಲ. ಆದರೆ ಮಹಿಳೆ ಅಪಮಾನಕ್ಕೆ ಗುರಿಯಾಗಬೇಕಾಗುತ್ತಾಳೆ ಎಂದು ನ್ಯಾಯಮೂರ್ತಿಗಳು ಮೌಖಿಕವಾಗಿ ಹೇಳಿದರು.

ಪೆನ್​ಡ್ರೈವ್ ಹಂಚಿಕೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಶರತ್ ಪ್ರಮುಖ ಆರೋಪಿಯಾಗಿದ್ದು, ತನ್ನ ವಿರುದ್ಧದ ಪ್ರಕರಣ ರದ್ದು ಕೋರಿದ್ದಾರೆ. ಆ ಅರ್ಜಿಯಲ್ಲಿ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿದ್ದರು.

ಇದನ್ನೂ ಓದಿ: ಮದುವೆ ಭರವಸೆ ನೀಡಿ ಮಾತು ಉಲ್ಲಂಘಿಸಿದರೆ ಅತ್ಯಾಚಾರ ಕೇಸ್​ನಲ್ಲಿ ಅಪರಾಧವಾಗದು: ಹೈಕೋರ್ಟ್ - high court

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಒಳಗೊಂಡ ದೃಶ್ಯಗಳನ್ನು ಪೆನ್​ಡ್ರೈವ್‌ನಲ್ಲಿ ನಕಲಿಸಿ ಅವುಗಳನ್ನು ಇತರರಿಗೆ ಹಂಚಿಕೆ ಮಾಡಿರುವುದು ಅತ್ಯಂತ ಅಪಾಯಕಾರಿ ಮತ್ತು ಪಾಪದ ಕೆಲಸ ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿತು.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಪೆನ್​ಡ್ರೈವ್ ವಿತರಣೆ ಸಂಬಂಧ ಪ್ರಮುಖ ಆರೋಪಿ ಎನ್ನಲಾದ ಶರತ್ ಎಂಬವರು ತಮ್ಮ ವಿರುದ್ಧದ ಪ್ರಕರಣ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ನಡೆಸಿತು.

ಇಂತಹ ವಿಚಾರಗಳಲ್ಲಿ ಪುರುಷ ಏನೂ ಕಳೆದುಕೊಳ್ಳುವುದಿಲ್ಲ. ಆದರೆ ಮಹಿಳೆಯನ್ನು ಮಂದ ಬೆಳಕಿನಲ್ಲಿ ಕೆಟ್ಟದಾಗಿ ಚಿತ್ರಿಸುವುದರಿಂದ ಆಕೆ ಅಪಮಾನಕ್ಕೆ ಒಳಗಾಗುತ್ತಾಳೆ. ಪ್ರಕರಣದಲ್ಲಿ ಸದ್ಯಕ್ಕೆ ನ್ಯಾಯಾಲಯ ಹಸ್ತಕ್ಷೇಪ ಮಾಡುವುದಿಲ್ಲ. ಆರೋಪಿ ತನಿಖಾಧಿಕಾರಿಗಳ ಮುಂದೆ ಹಾಜರಾಗಲಿ ಎಂದು ಪೀಠ ಹೇಳಿತು.

ಇದಕ್ಕೆ ಆರೋಪಿ ಪರ ವಕೀಲರು, ಹಾಗಿದ್ದರೆ ಬಂಧಿಸದಂತೆ ಆದೇಶ ನೀಡುವಂತೆ ಮನವಿ ಮಾಡಿದರು. ಇದಕ್ಕೆ ನ್ಯಾಯಪೀಠ, ಈ ನ್ಯಾಯಾಲಯವನ್ನು ಜಾಮೀನು ಕೋರ್ಟನ್ನಾಗಿ ಪರಿವರ್ತಿಸಬೇಡಿ. ಮೊದಲು ನಿರೀಕ್ಷಣಾ ಅಥವಾ ರೆಗ್ಯುಲರ್ ಜಾಮೀನು ಪಡೆದುಕೊಳ್ಳಿ, ಇಲ್ಲವೇ ತನಿಖಾಧಿಕಾರಿ ಮುಂದೆ ಹಾಜರಾಗಿ. ಅಲ್ಲಿಯವರೆಗೆ ನಾವು ಈ ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ತನಿಖಾ ವರದಿಯ ವಿವರಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿ, ಶರತ್ ಪಾತ್ರವನ್ನು ವಿವರಿಸಿದರು. ಅಲ್ಲದೆ ಅವರು ಶರತ್‌ಗೆ ಸೇರಿದ ಜಾಗದಲ್ಲಿ ಎಸ್‌ಐಟಿ ತಂಡ ವಶಪಡಿಸಿಕೊಂಡಿರುವ ಡಿವಿಆರ್ ಜತೆ ಟ್ಯಾಬ್ಲೆಟ್ ಮತ್ತು ಹಲವು ಸಿಡಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿದೆ ಎಂದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಶರತ್ ಕುರಿತು ಕೇವಲ ಮಾಹಿತಿ ಇದೆ ಎಂದು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗದು. ಆರೋಪಿ ವಿರುದ್ಧ ಕಳೆದ 30 ದಿನಗಳಿಂದ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅವರು ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ಮೊರೆ ಹೋದ ನಂತರ ತನಿಖೆ ತೀವ್ರಗೊಳಿಸಿದ್ದಾರೆ ಎಂದು ತಿಳಿಸಿದರು.

ಆದರೆ ಆ ವಾದವನ್ನು ತಳ್ಳಿಹಾಕಿದ ಜಗದೀಶ್, ಪೆನ್​ಡ್ರೈವ್‌ಗಳ ಕಾಪಿ ಮತ್ತು ವಿತರಣೆ ಪ್ರಕರಣದಲ್ಲಿ ಆರೋಪಿಯೇ ಪ್ರಮುಖ ವ್ಯಕ್ತಿಯಾಗಿದ್ದಾರೆ. ಹಾಗಾಗಿ ನ್ಯಾಯಾಲಯ ಯಾವುದೇ ಪರಿಹಾರ ನೀಡಬಾರದು ಎಂದು ಕೋರಿದರು. ಅದಕ್ಕೆ ಆರೋಪಿ ವಕೀಲರು, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಅರ್ಜಿದಾರರನ್ನು ಗುರಿ ಮಾಡಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಮತ್ತು ಆರೋಪಿ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದರು.

ಅದಕ್ಕೆ ನ್ಯಾಯಾಲಯ, ಏನಿದು ರಾಜಕೀಯ ದ್ವೇಷನಾ? ಇರಲಿ ಬಿಡಿ. ಯಾವುದೇ ವ್ಯಕ್ತಿ ಇಂತಹ ಕೆಲಸ ಮಾಡಿರಲಿ ಅದು ಮಹಾಪಾಪ. ಯಾರೊಬ್ಬರೂ ಮಹಿಳೆಯನ್ನು ಕೆಟ್ಟದಾಗಿ ಬಿಂಬಿಸಬಾರದು, ಅಂತಹ ಕೆಲಸ ಅಪಾಯಕಾರಿ. ನೀವು ಮಹಿಳೆಯನ್ನು ಕೆಟ್ಟದಾಗಿ ಚಿತ್ರಿಸಿದರೆ, ಅದು ಯಾವ ಸನ್ನಿವೇಶನದಲ್ಲಿ, ಹೇಗೆ ಆಯಿತು ಎಂಬುದು ನಿಮಗೆ ತಿಳಿದಿರುವುದಿಲ್ಲ. ನೀವು ಎಲ್ಲರನ್ನೂ ಅದೇ ರೀತಿ ಬಿಂಬಿಸಲು ಹೊರಟರೆ ಪುರುಷರು ಕಳೆದುಕೊಳ್ಳುವುದು ಏನೂ ಇಲ್ಲ. ಆದರೆ ಮಹಿಳೆ ಅಪಮಾನಕ್ಕೆ ಗುರಿಯಾಗಬೇಕಾಗುತ್ತಾಳೆ ಎಂದು ನ್ಯಾಯಮೂರ್ತಿಗಳು ಮೌಖಿಕವಾಗಿ ಹೇಳಿದರು.

ಪೆನ್​ಡ್ರೈವ್ ಹಂಚಿಕೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಶರತ್ ಪ್ರಮುಖ ಆರೋಪಿಯಾಗಿದ್ದು, ತನ್ನ ವಿರುದ್ಧದ ಪ್ರಕರಣ ರದ್ದು ಕೋರಿದ್ದಾರೆ. ಆ ಅರ್ಜಿಯಲ್ಲಿ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿದ್ದರು.

ಇದನ್ನೂ ಓದಿ: ಮದುವೆ ಭರವಸೆ ನೀಡಿ ಮಾತು ಉಲ್ಲಂಘಿಸಿದರೆ ಅತ್ಯಾಚಾರ ಕೇಸ್​ನಲ್ಲಿ ಅಪರಾಧವಾಗದು: ಹೈಕೋರ್ಟ್ - high court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.