ETV Bharat / state

ದರ್ಶನ್ ಜೊತೆ ಧೂಮಪಾನ ಆರೋಪ: ಕೈದಿ ಸೀನ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ - High Court

author img

By ETV Bharat Karnataka Team

Published : 5 hours ago

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಒಳಾವರಣದಲ್ಲಿ ನಟ ದರ್ಶನ್‌ ಜೊತೆ ಕುಳಿತು ಧೂಮಪಾನ ಮಾಡಿದ ಆರೋಪದ ಮೇಲೆ ಕೈದಿ ಶ್ರೀನಿವಾಸ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್​ನಿಂದ ತಡೆ ಬಿದ್ದಿದೆ.

court
ಹೈಕೋರ್ಟ್ (ETV Bharat)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ನಟ ದರ್ಶನ್‌ ಜೊತೆ ಜೈಲಿನ ಒಳಾವರಣದಲ್ಲಿ ಕುಳಿತು ಧೂಮಪಾನ ಮಾಡಿದ ಆರೋಪದಡಿ ಕೈದಿ ಶ್ರೀನಿವಾಸ್ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಶ್ರೀನಿವಾಸ್ ಅಲಿಯಾಸ್ ಕುಳ್ಳ ಸೀನ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿತು.

ಅರ್ಜಿದಾರರ ಪರ ವಕೀಲರ ವಾದವೇನು?: ವಿಚಾರಣೆ ವೇಳೆ ಅರ್ಜಿದಾರ ಶ್ರೀನಿವಾಸ್ ಪರ ವಾದ ಮಂಡಿಸಿದ ವಕೀಲರು, ''ಆರೋಪಗಳಿಗೂ ಮತ್ತು ದೂರಿನಲ್ಲಿ ದಾಖಲಿಸಿರುವ ಕಲಂಗಳಿಗೂ ತಾಳೆಯಾಗುವುದಿಲ್ಲ. ಅಂತೆಯೇ, ಜೈಲುಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ ಎಂದು ಒಂದು ಕಡೆ ಹೇಳಿದರೆ, ಮತ್ತೊಂದೆಡೆ ಧೂಮಪಾನಕ್ಕೆ ಪ್ರತ್ಯೇಕ ಜಾಗದ ಅವಕಾಶ ಕಲ್ಪಿಸಲಾಗಿದೆ ಎಂಬ ತದ್ವಿರುದ್ಧ ನಿಯಮ ಜಾರಿಯಲ್ಲಿವೆ. ಈ ಪ್ರಕರಣದಲ್ಲಿ ಅರ್ಜಿದಾರರು ಯಾವುದೇ ಧೂಮಪಾನ ಮಾಡುತ್ತಿರಲಿಲ್ಲ. ಹೀಗಾಗಿ, ಇವರ ವಿರುದ್ಧದ ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆಗೆ ತಡೆ ನೀಡಬೇಕು'' ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ವಾದ ಆಲಿಸಿದ ಪೀಠ, ಪ್ರಕರಣಕ್ಕೆ ತಡೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ?: ಪರಪ್ಪನ ಅಗ್ರಹಾರ ಜೈಲಿನ ಒಳಾವರಣದಲ್ಲಿ ಮಂಡಲಾಕಾರದಲ್ಲಿ ಕುರ್ಚಿಗಳಲ್ಲಿ ದರ್ಶನ್, ಸಹ ಕೈದಿಗಳಾದ ಶ್ರೀನಿವಾಸ್, ವಿಲ್ಸನ್ ಗಾರ್ಡನ್ ನಾಗ ಹಾಗೂ ನಾಗರಾಜ್ ಜೊತೆಗೆ ಕುಳಿತಿರುವ ಫೋಟೋಗಳು ವೈರಲ್​ ಆಗಿದ್ದವು. ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್ ಹಿಡಿದು, ಮತ್ತೊಂದು ಕೈಯಲ್ಲಿ ಸಿಗರೇಟು ಸೇದುತ್ತಿರುವ ಚಿತ್ರಗಳು ಬಹಿರಂಗಗೊಂಡಿದ್ದವು. ಈ ಕಾರಣಕ್ಕಾಗಿ ಈ ನಾಲ್ಕೂ ಜನರ ವಿರುದ್ಧ ಜೈಲಿನ ಅಧಿಕಾರಿಗಳು ದೂರು ದಾಖಲಿಸಿದ್ದರು.

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು 2024ರ ಆಗಸ್ಟ್ 26ರಂದು ಕರ್ನಾಟಕ ಕಾರಾಗೃಹಗಳ ತಿದ್ದುಪಡಿ ಕಾಯ್ದೆ 2022ರ ಅನುಸಾರ ದಾಖಲಿಸಿದ್ದ ಎಫ್‌ಐಆರ್ ಮತ್ತು ಈ ಸಂಬಂಧ 9ನೇ ಎಸಿಎಂಎಂ ನ್ಯಾಯಾಲಯದಲ್ಲಿನ ವಿಚಾರಣೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಶ್ರೀನಿವಾಸ್ ಈ ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ: ಪೆನ್​ಡ್ರೈವ್ ಹಂಚಿಕೆ ಆರೋಪ: ಪ್ರೀತಂಗೌಡ ವಿರುದ್ಧ ತನಿಖೆ ಮುಂದುವರೆಯಲಿ ಎಂದ ಹೈಕೋರ್ಟ್ - PenDrive Sharing Case

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ನಟ ದರ್ಶನ್‌ ಜೊತೆ ಜೈಲಿನ ಒಳಾವರಣದಲ್ಲಿ ಕುಳಿತು ಧೂಮಪಾನ ಮಾಡಿದ ಆರೋಪದಡಿ ಕೈದಿ ಶ್ರೀನಿವಾಸ್ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಶ್ರೀನಿವಾಸ್ ಅಲಿಯಾಸ್ ಕುಳ್ಳ ಸೀನ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿತು.

ಅರ್ಜಿದಾರರ ಪರ ವಕೀಲರ ವಾದವೇನು?: ವಿಚಾರಣೆ ವೇಳೆ ಅರ್ಜಿದಾರ ಶ್ರೀನಿವಾಸ್ ಪರ ವಾದ ಮಂಡಿಸಿದ ವಕೀಲರು, ''ಆರೋಪಗಳಿಗೂ ಮತ್ತು ದೂರಿನಲ್ಲಿ ದಾಖಲಿಸಿರುವ ಕಲಂಗಳಿಗೂ ತಾಳೆಯಾಗುವುದಿಲ್ಲ. ಅಂತೆಯೇ, ಜೈಲುಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ ಎಂದು ಒಂದು ಕಡೆ ಹೇಳಿದರೆ, ಮತ್ತೊಂದೆಡೆ ಧೂಮಪಾನಕ್ಕೆ ಪ್ರತ್ಯೇಕ ಜಾಗದ ಅವಕಾಶ ಕಲ್ಪಿಸಲಾಗಿದೆ ಎಂಬ ತದ್ವಿರುದ್ಧ ನಿಯಮ ಜಾರಿಯಲ್ಲಿವೆ. ಈ ಪ್ರಕರಣದಲ್ಲಿ ಅರ್ಜಿದಾರರು ಯಾವುದೇ ಧೂಮಪಾನ ಮಾಡುತ್ತಿರಲಿಲ್ಲ. ಹೀಗಾಗಿ, ಇವರ ವಿರುದ್ಧದ ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆಗೆ ತಡೆ ನೀಡಬೇಕು'' ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ವಾದ ಆಲಿಸಿದ ಪೀಠ, ಪ್ರಕರಣಕ್ಕೆ ತಡೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ?: ಪರಪ್ಪನ ಅಗ್ರಹಾರ ಜೈಲಿನ ಒಳಾವರಣದಲ್ಲಿ ಮಂಡಲಾಕಾರದಲ್ಲಿ ಕುರ್ಚಿಗಳಲ್ಲಿ ದರ್ಶನ್, ಸಹ ಕೈದಿಗಳಾದ ಶ್ರೀನಿವಾಸ್, ವಿಲ್ಸನ್ ಗಾರ್ಡನ್ ನಾಗ ಹಾಗೂ ನಾಗರಾಜ್ ಜೊತೆಗೆ ಕುಳಿತಿರುವ ಫೋಟೋಗಳು ವೈರಲ್​ ಆಗಿದ್ದವು. ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್ ಹಿಡಿದು, ಮತ್ತೊಂದು ಕೈಯಲ್ಲಿ ಸಿಗರೇಟು ಸೇದುತ್ತಿರುವ ಚಿತ್ರಗಳು ಬಹಿರಂಗಗೊಂಡಿದ್ದವು. ಈ ಕಾರಣಕ್ಕಾಗಿ ಈ ನಾಲ್ಕೂ ಜನರ ವಿರುದ್ಧ ಜೈಲಿನ ಅಧಿಕಾರಿಗಳು ದೂರು ದಾಖಲಿಸಿದ್ದರು.

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು 2024ರ ಆಗಸ್ಟ್ 26ರಂದು ಕರ್ನಾಟಕ ಕಾರಾಗೃಹಗಳ ತಿದ್ದುಪಡಿ ಕಾಯ್ದೆ 2022ರ ಅನುಸಾರ ದಾಖಲಿಸಿದ್ದ ಎಫ್‌ಐಆರ್ ಮತ್ತು ಈ ಸಂಬಂಧ 9ನೇ ಎಸಿಎಂಎಂ ನ್ಯಾಯಾಲಯದಲ್ಲಿನ ವಿಚಾರಣೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಶ್ರೀನಿವಾಸ್ ಈ ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ: ಪೆನ್​ಡ್ರೈವ್ ಹಂಚಿಕೆ ಆರೋಪ: ಪ್ರೀತಂಗೌಡ ವಿರುದ್ಧ ತನಿಖೆ ಮುಂದುವರೆಯಲಿ ಎಂದ ಹೈಕೋರ್ಟ್ - PenDrive Sharing Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.