ETV Bharat / state

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ರದ್ದು ಕೋರಿ ಸಿದ್ದರಾಮಯ್ಯ ಅರ್ಜಿ: ಹೈಕೋರ್ಟ್​ನಲ್ಲಿ ಇಂದು ವಿಚಾರಣೆ - MUDA Scam

author img

By ETV Bharat Karnataka Team

Published : Sep 9, 2024, 1:21 PM IST

Updated : Sep 9, 2024, 1:33 PM IST

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್​ನಲ್ಲಿ ಮುಂದುವರಿಯಲಿದೆ.

ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ಸಿದ್ದರಾಮಯ್ಯ ಅರ್ಜಿ
ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ಹೈಕೋರ್ಟ್‌ಗೆ ಸಿದ್ದರಾಮಯ್ಯ ಅರ್ಜಿ (ETV Bharat)

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ತಮ್ಮ ಪತ್ನಿ ಕಾನೂನುಬಾಹಿರವಾಗಿ ನಿವೇಶನ ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಇಂದು ಮುಂದುವರಿಯಲಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮಧ್ಯಾಹ್ನ 4:30ಕ್ಕೆ ವಿಚಾರಣೆ ನಡೆಯಲಿದೆ.

ಮುಖ್ಯಮಂತ್ರಿಗಳ ಪರವಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ಪರವಾಗಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ.

ಈ ಅರ್ಜಿ ಸಂಬಂಧ ಸೆ.2ರಂದು ನಡೆದ ವಿಚಾರಣೆ ವೇಳೆ ಸಿಎಂ ವಿರುದ್ಧದ ದೂರುದಾರ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ.ಜಿ.ರಾಘವನ್ ವಾದ ಮಂಡಿಸಿದ್ದರು. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಆದೇಶವನ್ನು ವಿರೋಧಾತ್ಮಕವಾಗಿ ನೋಡದೆ ಸಾರ್ವಜನಿಕ ಆಡಳಿತದಲ್ಲಿ ಪರಿಶುದ್ಧತೆಯ ಸಲುವಾಗಿ ನೋಡಬೇಕಾಗುತ್ತದೆ ಎಂದು ಕೆ.ಜಿ.ರಾಘವನ್ ಹೈಕೋರ್ಟ್​ಗೆ ಮನವಿ ಮಾಡಿದ್ದರು.

ಕಾನೂನುಬಾಹಿರವಾಗಿ ಲಾಭ ಪಡೆಯದಿದ್ದರೂ ಪ್ರಭಾವ ಬಳಸಿ ಲಾಭ ಗಳಿಸುವುದು ಭ್ರಷ್ಟಾಚಾರಕ್ಕೆ ಸಮಾನವಾದದ್ದು. ಸಾರ್ವಜನಿಕರಿಗೆ ಶುದ್ಧ ಆಡಳಿತದಲ್ಲಿ ನಂಬಿಕೆ ಇರುವಂತಿರಬೇಕು. ಈ ಹಗರಣ ಕೇವಲ ಇಬ್ಬರ ನಡುವಿನ ಪ್ರಕರಣವಲ್ಲ. ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ್ದಾಗಿದೆ. ಇದು ಸಾರ್ವಜನಿಕ ನಂಬಿಕೆ ಹಾಳಾಗಿರುವುದಕ್ಕೆ ಉತ್ತರ. ಉನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸಿರುವ ವ್ಯಕ್ತಿಯ ವಿರುದ್ಧ ತನಿಖೆ ಕೋರಲಾಗಿದೆ. ಕೊನೆಯಲ್ಲಿ ಸಿದ್ದರಾಮಯ್ಯ ಅವರು ಆರೋಪಮುಕ್ತವಾಗಬಹುದು. ಆದರೆ, ನ್ಯಾಯಾಲಯವು ಇಂಥ ವಿಚಾರಗಳಲ್ಲಿ ತನಿಖೆಗೆ ಅವಕಾಶ ನೀಡಬೇಕಾಗುತ್ತದೆ ಎಂದು ಕೆ.ಜಿ.ರಾಘವನ್ ವಾದಿಸಿದ್ದರು.

ಈ ವಾದ ಆಲಿಸಿದ್ದ ನ್ಯಾಯಾಲಯವು ಮಧ್ಯಂತರ ಆದೇಶ ವಿಸ್ತರಿಸಿ, ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರ ಕೋರಿಕೆಯಂತೆ ವಿಚಾರಣೆಯನ್ನು ಸೆಪ್ಟೆಂಬರ್‌ 9ಕ್ಕೆ ಮುಂದೂಡಿತ್ತು.

ಇದನ್ನೂ ಓದಿ: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್,​ ಸಾರ್ವಜನಿಕ ಆಡಳಿತದ ಪರಿಶುದ್ಧತೆಗಾಗಿ ನೋಡಬೇಕು: ದೂರುದಾರರ ಪರ ವಕೀಲರ ವಾದ; ಸೆ.9 ಕ್ಕೆ ವಿಚಾರಣೆ ಮುಂದೂಡಿಕೆ - Siddaramaiah Prosecution

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ತಮ್ಮ ಪತ್ನಿ ಕಾನೂನುಬಾಹಿರವಾಗಿ ನಿವೇಶನ ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಇಂದು ಮುಂದುವರಿಯಲಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮಧ್ಯಾಹ್ನ 4:30ಕ್ಕೆ ವಿಚಾರಣೆ ನಡೆಯಲಿದೆ.

ಮುಖ್ಯಮಂತ್ರಿಗಳ ಪರವಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ಪರವಾಗಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ.

ಈ ಅರ್ಜಿ ಸಂಬಂಧ ಸೆ.2ರಂದು ನಡೆದ ವಿಚಾರಣೆ ವೇಳೆ ಸಿಎಂ ವಿರುದ್ಧದ ದೂರುದಾರ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ.ಜಿ.ರಾಘವನ್ ವಾದ ಮಂಡಿಸಿದ್ದರು. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಆದೇಶವನ್ನು ವಿರೋಧಾತ್ಮಕವಾಗಿ ನೋಡದೆ ಸಾರ್ವಜನಿಕ ಆಡಳಿತದಲ್ಲಿ ಪರಿಶುದ್ಧತೆಯ ಸಲುವಾಗಿ ನೋಡಬೇಕಾಗುತ್ತದೆ ಎಂದು ಕೆ.ಜಿ.ರಾಘವನ್ ಹೈಕೋರ್ಟ್​ಗೆ ಮನವಿ ಮಾಡಿದ್ದರು.

ಕಾನೂನುಬಾಹಿರವಾಗಿ ಲಾಭ ಪಡೆಯದಿದ್ದರೂ ಪ್ರಭಾವ ಬಳಸಿ ಲಾಭ ಗಳಿಸುವುದು ಭ್ರಷ್ಟಾಚಾರಕ್ಕೆ ಸಮಾನವಾದದ್ದು. ಸಾರ್ವಜನಿಕರಿಗೆ ಶುದ್ಧ ಆಡಳಿತದಲ್ಲಿ ನಂಬಿಕೆ ಇರುವಂತಿರಬೇಕು. ಈ ಹಗರಣ ಕೇವಲ ಇಬ್ಬರ ನಡುವಿನ ಪ್ರಕರಣವಲ್ಲ. ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ್ದಾಗಿದೆ. ಇದು ಸಾರ್ವಜನಿಕ ನಂಬಿಕೆ ಹಾಳಾಗಿರುವುದಕ್ಕೆ ಉತ್ತರ. ಉನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸಿರುವ ವ್ಯಕ್ತಿಯ ವಿರುದ್ಧ ತನಿಖೆ ಕೋರಲಾಗಿದೆ. ಕೊನೆಯಲ್ಲಿ ಸಿದ್ದರಾಮಯ್ಯ ಅವರು ಆರೋಪಮುಕ್ತವಾಗಬಹುದು. ಆದರೆ, ನ್ಯಾಯಾಲಯವು ಇಂಥ ವಿಚಾರಗಳಲ್ಲಿ ತನಿಖೆಗೆ ಅವಕಾಶ ನೀಡಬೇಕಾಗುತ್ತದೆ ಎಂದು ಕೆ.ಜಿ.ರಾಘವನ್ ವಾದಿಸಿದ್ದರು.

ಈ ವಾದ ಆಲಿಸಿದ್ದ ನ್ಯಾಯಾಲಯವು ಮಧ್ಯಂತರ ಆದೇಶ ವಿಸ್ತರಿಸಿ, ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರ ಕೋರಿಕೆಯಂತೆ ವಿಚಾರಣೆಯನ್ನು ಸೆಪ್ಟೆಂಬರ್‌ 9ಕ್ಕೆ ಮುಂದೂಡಿತ್ತು.

ಇದನ್ನೂ ಓದಿ: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್,​ ಸಾರ್ವಜನಿಕ ಆಡಳಿತದ ಪರಿಶುದ್ಧತೆಗಾಗಿ ನೋಡಬೇಕು: ದೂರುದಾರರ ಪರ ವಕೀಲರ ವಾದ; ಸೆ.9 ಕ್ಕೆ ವಿಚಾರಣೆ ಮುಂದೂಡಿಕೆ - Siddaramaiah Prosecution

Last Updated : Sep 9, 2024, 1:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.