ETV Bharat / state

ಮುಂಗಾರಿನ ಮೊದಲ ಮಳೆಗೆ ಚಾರ್ಮಾಡಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ - Charmadi Hill Collapse

ಕಳೆದ ವರ್ಷದಂತೆ ಈ ಬಾರಿಯೂ ಮಳೆಗಾಲದ ಆರಂಭದಲ್ಲೇ ಚಾರ್ಮಾಡಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ರಸ್ತೆ ಬಿರುಕು ಕಾಣಿಸಿಕೊಳ್ಳುತ್ತಿದೆ.

author img

By ETV Bharat Karnataka Team

Published : Jul 8, 2024, 7:25 AM IST

Heavy hill collapse on Charmadi highway for first rains monsoon: Increased anxiety among motorists
ಚಾರ್ಮಾಡಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ (ETV Bharat)

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದೆ. ಕಳೆದ ವರ್ಷದ ಭೂ ಕುಸಿತ, ಗುಡ್ಡ ಕುಸಿತ, ರಸ್ತೆ ಕುಸಿತಗಳನ್ನು ನೆನಪಿಸುವಂತಹ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಭಾರೀ ಮಳೆಗೆ ಚಾರ್ಮಾಡಿ ಹೆದ್ದಾರಿಯ ಆಲೆಖಾನ್​ ತಿರುವಿನ ಸಮೀಪ ಗುಡ್ಡ ಕುಸಿದಿದೆ. ಚಿಕ್ಕಮಗಳೂರಿಗೆ ಬರುತ್ತಿದ್ದ ವಾಹನದ ಮುಂಭಾಗಕ್ಕೆ ಬಿದ್ದ ಮಣ್ಣು ಕಂಡು ಸವಾರ ಬೆಚ್ಚಿ ಬಿದ್ದಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ರಸ್ತೆ, ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಇದೀಗ ಗುಡ್ಡ ಕುಸಿದಿದೆ. ಮೂಡಿಗೆರೆ ಸಿಪಿಐ ಹಾಗೂ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಳೆದ ವರ್ಷ ಸುರಿದ ಧಾರಾಕಾರ ಮಳೆಗೆ ಘಾಟಿಯ ರಸ್ತೆಯುದ್ದಕ್ಕೂ ಹತ್ತಾರು ಭಾಗಗಳಲ್ಲಿ ಭೂಕುಸಿತ ಹಾಗೂ ಗುಡ್ಡ ಕುಸಿತ ಉಂಟಾಗಿತ್ತು. ಪ್ರತಿ ವರ್ಷ ಈ ಭಾಗದಲ್ಲಿ ಸುರಿಯುವ ಧಾರಾಕಾರ ಮಳೆಗೆ ಭೂಕುಸಿತ ಹಾಗೂ ಗುಡ್ಡ ಕುಸಿತ ಸರ್ವೇಸಾಮಾನ್ಯವಾಗಿದೆ. ಆದರೆ ಈ ವರ್ಷ ಮೊದಲ ಮಳೆಯಲ್ಲೇ ಈ ರೀತಿಯ ಅವಘಡಗಳು ಜರುಗುತ್ತಿರುವುದರಿಂದ ಈ ದಾರಿಯಲ್ಲಿ ಪ್ರತಿನಿತ್ಯ ಸಂಚರಿಸುವ ವಾಹನ ಸವಾರರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಉಡುಪಿ ಜಿಲ್ಲೆಯಾದ್ಯಂತ ಸತತ ಮಳೆ: ಆಸ್ತಿ-ಪಾಸ್ತಿಗೆ ಹಾನಿ, ಬೀಚ್​ ಬಳಿ ಮೋಜು ಮಾಡುತ್ತಿದ್ದವರಿಗೆ ಎಸ್​ಐ ಬುದ್ಧಿಮಾತು - Udupi Rain

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದೆ. ಕಳೆದ ವರ್ಷದ ಭೂ ಕುಸಿತ, ಗುಡ್ಡ ಕುಸಿತ, ರಸ್ತೆ ಕುಸಿತಗಳನ್ನು ನೆನಪಿಸುವಂತಹ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಭಾರೀ ಮಳೆಗೆ ಚಾರ್ಮಾಡಿ ಹೆದ್ದಾರಿಯ ಆಲೆಖಾನ್​ ತಿರುವಿನ ಸಮೀಪ ಗುಡ್ಡ ಕುಸಿದಿದೆ. ಚಿಕ್ಕಮಗಳೂರಿಗೆ ಬರುತ್ತಿದ್ದ ವಾಹನದ ಮುಂಭಾಗಕ್ಕೆ ಬಿದ್ದ ಮಣ್ಣು ಕಂಡು ಸವಾರ ಬೆಚ್ಚಿ ಬಿದ್ದಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ರಸ್ತೆ, ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಇದೀಗ ಗುಡ್ಡ ಕುಸಿದಿದೆ. ಮೂಡಿಗೆರೆ ಸಿಪಿಐ ಹಾಗೂ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಳೆದ ವರ್ಷ ಸುರಿದ ಧಾರಾಕಾರ ಮಳೆಗೆ ಘಾಟಿಯ ರಸ್ತೆಯುದ್ದಕ್ಕೂ ಹತ್ತಾರು ಭಾಗಗಳಲ್ಲಿ ಭೂಕುಸಿತ ಹಾಗೂ ಗುಡ್ಡ ಕುಸಿತ ಉಂಟಾಗಿತ್ತು. ಪ್ರತಿ ವರ್ಷ ಈ ಭಾಗದಲ್ಲಿ ಸುರಿಯುವ ಧಾರಾಕಾರ ಮಳೆಗೆ ಭೂಕುಸಿತ ಹಾಗೂ ಗುಡ್ಡ ಕುಸಿತ ಸರ್ವೇಸಾಮಾನ್ಯವಾಗಿದೆ. ಆದರೆ ಈ ವರ್ಷ ಮೊದಲ ಮಳೆಯಲ್ಲೇ ಈ ರೀತಿಯ ಅವಘಡಗಳು ಜರುಗುತ್ತಿರುವುದರಿಂದ ಈ ದಾರಿಯಲ್ಲಿ ಪ್ರತಿನಿತ್ಯ ಸಂಚರಿಸುವ ವಾಹನ ಸವಾರರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಉಡುಪಿ ಜಿಲ್ಲೆಯಾದ್ಯಂತ ಸತತ ಮಳೆ: ಆಸ್ತಿ-ಪಾಸ್ತಿಗೆ ಹಾನಿ, ಬೀಚ್​ ಬಳಿ ಮೋಜು ಮಾಡುತ್ತಿದ್ದವರಿಗೆ ಎಸ್​ಐ ಬುದ್ಧಿಮಾತು - Udupi Rain

ETV Bharat Logo

Copyright © 2024 Ushodaya Enterprises Pvt. Ltd., All Rights Reserved.