ETV Bharat / state

ದಾವಣಗೆರೆ: ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ, ಬಿಗಿ ಭದ್ರತೆ - Hindu Maha Ganapati Procession

ದಾವಣಗೆರೆಯ ಹಿಂದೂ ಮಹಾಗಣಪತಿ ನಿಮಜ್ಜನಾ ಶೋಭಾಯಾತ್ರೆ ಶನಿವಾರ ನಡೆಯಲಿದೆ.

author img

By ETV Bharat Karnataka Team

Published : 2 hours ago

ಹಿಂದೂ ಮಹಾ ಗಣಪತಿ
ದಾವಣಗೆರೆ ಹಿಂದೂ ಮಹಾ ಗಣಪತಿ (ETV Bharat)

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ನಿಮಜ್ಜನೆ ನಾಳೆ(ಶನಿವಾರ) ನಡೆಯಲಿದೆ. ಬೆಳಗ್ಗೆ 10.30ಕ್ಕೆ ಶೋಭಾಯಾತ್ರೆ ಆರಂಭವಾಗಲಿದೆ. ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾಗುವ ಶೋಭಾಯಾತ್ರೆಯು ಅಕ್ಕಮಹಾದೇವಿ ರಸ್ತೆ, ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಪಿ.ಬಿ.ರಸ್ತೆ ಮಾರ್ಗವಾಗಿ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಸಾಗಲಿದೆ. ನಂತರ ಗಣೇಶಮೂರ್ತಿಯನ್ನು ಬಾತಿ ಕೆರೆಯಲ್ಲಿ ನಿಮಜ್ಜನೆ ಮಾಡಲಾಗುತ್ತದೆ ಎಂದು ಹಿಂದೂ ಮಹಾಗಣಪತಿ ಟ್ರಸ್ಟ್​ನ ಅಧ್ಯಕ್ಷ ಜೊಳ್ಳಿಗುರು ತಿಳಿಸಿದರು.

ಶೋಭಾಯಾತ್ರೆಯಲ್ಲಿ ಚೆಂಡೆಮೇಳ, ಡ್ರಮ್​ಸೆಟ್ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಪ್ರದರ್ಶನ ನೀಡಲಿವೆ. ಮಹಿಳೆಯರಿಗೆ ಪ್ರತ್ಯೇಕ ಡಿಜೆಸಹಿತ ಒಟ್ಟು ಐದು ಡಿಜೆ ಸೆಟ್ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆ ಇದೆ. ಈ ಮೆರವಣಿಗೆಯ ಪ್ರಯುಕ್ತ ಜಿಲ್ಲಾ ಕೇಂದ್ರದಾದ್ಯಂತ ಕೇಸರಿ ಬಾವುಟ, ಬಂಟಿಂಗ್ಸ್‌ ಕಟ್ಟಲಾಗಿದೆ.

ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಬಸವಣ್ಣ, ವಾಲ್ಮೀಕಿ, ಕನಕದಾಸ ಸೇರಿದಂತೆ ಅನೇಕ ದಾರ್ಶನಿಕರ ಪ್ರತಿಕೃತಿಗಳನ್ನು ಹಾಕಲಾಗಿದೆ. ಶೋಭಾಯಾತ್ರೆಯಲ್ಲಿ ಯಾವುದೇ ರಾಜಕಾರಣಿ, ಚಿತ್ರನಟರು ಅಥವಾ ವೈಯಕ್ತಿಕ ಬಾವುಟ, ಬ್ಯಾನರ್ ಪ್ರದರ್ಶನ ಮಾಡದಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಶೋಭಾಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಜಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಸೇರಿದಂತೆ ಅನೇಕ ಮುಖಂಡರು ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬಿಗಿ ಪೊಲೀಸ್​ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪೊಲೀಸರು, ಕೆಎಸ್​ಆರ್​ಪಿ ತುಕಡಿ, ಡಿಎಆರ್ ತುಕಡಿ ಮತ್ತು ಹೋಮ್ ಗಾರ್ಡ್​ಗಳನ್ನು ನಿಯೋಜಿಸಲಾಗಿದೆ. ಮೆರವಣಿಗೆಯುದ್ದಕ್ಕೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮೆರವಣಿಗೆಯ ಸಂಪೂರ್ಣ ಚಿತ್ರೀಕರಣ ಮಾಡಲು ವಿಡಿಯೋಗ್ರಾಫರ್ಸ್​ಗಳನ್ನು ನಿಯೋಜಿಸಲಾಗಿದೆ. ಅಲ್ಲದೇ ಡ್ರೋನ್ ಕಣ್ಗಾವಲಿರಲಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಅಡುಗೆ ಸಿಲಿಂಡರ್​​ ಸ್ಫೋಟಗೊಂಡು ಆರು ಜನರಿಗೆ ಗಾಯ - cylinder explosion

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ನಿಮಜ್ಜನೆ ನಾಳೆ(ಶನಿವಾರ) ನಡೆಯಲಿದೆ. ಬೆಳಗ್ಗೆ 10.30ಕ್ಕೆ ಶೋಭಾಯಾತ್ರೆ ಆರಂಭವಾಗಲಿದೆ. ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾಗುವ ಶೋಭಾಯಾತ್ರೆಯು ಅಕ್ಕಮಹಾದೇವಿ ರಸ್ತೆ, ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಪಿ.ಬಿ.ರಸ್ತೆ ಮಾರ್ಗವಾಗಿ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಸಾಗಲಿದೆ. ನಂತರ ಗಣೇಶಮೂರ್ತಿಯನ್ನು ಬಾತಿ ಕೆರೆಯಲ್ಲಿ ನಿಮಜ್ಜನೆ ಮಾಡಲಾಗುತ್ತದೆ ಎಂದು ಹಿಂದೂ ಮಹಾಗಣಪತಿ ಟ್ರಸ್ಟ್​ನ ಅಧ್ಯಕ್ಷ ಜೊಳ್ಳಿಗುರು ತಿಳಿಸಿದರು.

ಶೋಭಾಯಾತ್ರೆಯಲ್ಲಿ ಚೆಂಡೆಮೇಳ, ಡ್ರಮ್​ಸೆಟ್ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಪ್ರದರ್ಶನ ನೀಡಲಿವೆ. ಮಹಿಳೆಯರಿಗೆ ಪ್ರತ್ಯೇಕ ಡಿಜೆಸಹಿತ ಒಟ್ಟು ಐದು ಡಿಜೆ ಸೆಟ್ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆ ಇದೆ. ಈ ಮೆರವಣಿಗೆಯ ಪ್ರಯುಕ್ತ ಜಿಲ್ಲಾ ಕೇಂದ್ರದಾದ್ಯಂತ ಕೇಸರಿ ಬಾವುಟ, ಬಂಟಿಂಗ್ಸ್‌ ಕಟ್ಟಲಾಗಿದೆ.

ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಬಸವಣ್ಣ, ವಾಲ್ಮೀಕಿ, ಕನಕದಾಸ ಸೇರಿದಂತೆ ಅನೇಕ ದಾರ್ಶನಿಕರ ಪ್ರತಿಕೃತಿಗಳನ್ನು ಹಾಕಲಾಗಿದೆ. ಶೋಭಾಯಾತ್ರೆಯಲ್ಲಿ ಯಾವುದೇ ರಾಜಕಾರಣಿ, ಚಿತ್ರನಟರು ಅಥವಾ ವೈಯಕ್ತಿಕ ಬಾವುಟ, ಬ್ಯಾನರ್ ಪ್ರದರ್ಶನ ಮಾಡದಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಶೋಭಾಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಜಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಸೇರಿದಂತೆ ಅನೇಕ ಮುಖಂಡರು ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬಿಗಿ ಪೊಲೀಸ್​ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪೊಲೀಸರು, ಕೆಎಸ್​ಆರ್​ಪಿ ತುಕಡಿ, ಡಿಎಆರ್ ತುಕಡಿ ಮತ್ತು ಹೋಮ್ ಗಾರ್ಡ್​ಗಳನ್ನು ನಿಯೋಜಿಸಲಾಗಿದೆ. ಮೆರವಣಿಗೆಯುದ್ದಕ್ಕೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮೆರವಣಿಗೆಯ ಸಂಪೂರ್ಣ ಚಿತ್ರೀಕರಣ ಮಾಡಲು ವಿಡಿಯೋಗ್ರಾಫರ್ಸ್​ಗಳನ್ನು ನಿಯೋಜಿಸಲಾಗಿದೆ. ಅಲ್ಲದೇ ಡ್ರೋನ್ ಕಣ್ಗಾವಲಿರಲಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಅಡುಗೆ ಸಿಲಿಂಡರ್​​ ಸ್ಫೋಟಗೊಂಡು ಆರು ಜನರಿಗೆ ಗಾಯ - cylinder explosion

ETV Bharat Logo

Copyright © 2024 Ushodaya Enterprises Pvt. Ltd., All Rights Reserved.