ETV Bharat / state

ಪರಿಷತ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಿಎಂ-ಡಿಸಿಎಂ ಮಾತ್ರ ತೀರ್ಮಾನಿಸಿದರೆ ಸರಿಯಲ್ಲ: ಪರಮೇಶ್ವರ್ - G Parameshwar

author img

By ETV Bharat Karnataka Team

Published : May 28, 2024, 12:22 PM IST

Updated : May 28, 2024, 2:35 PM IST

ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಿಎಂ ಮತ್ತು ಡಿಸಿಎಂ ಮಾತ್ರ ತೀರ್ಮಾನಿಸಿದರೆ ಸರಿಯಲ್ಲ. ಪಕ್ಷದ ಹಿರಿಯರನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಗೃಹ ಸಚಿವ ಜಿ.ಪರಮೇಶ್ವರ್
ಗೃಹ ಸಚಿವ ಜಿ.ಪರಮೇಶ್ವರ್ (ETV Bharat)
ಜಿ. ಪರಮೇಶ್ವರ್ (ETV Bharat)

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್​ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದಾಶಿವನಗರ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಿಎಂ, ಡಿಸಿಎಂ ಅವರಿಬ್ಬರೇ ತೀರ್ಮಾನ ಮಾಡಿದ್ರೆ ಸರಿಯಲ್ಲ.‌ ಪಕ್ಷದ ಹಿರಿಯ ನಾಯಕರ ಸಲಹೆ, ಅಭಿಪ್ರಾಯಗಳನ್ನೂ ಕೇಳಬೇಕು. ಹಿರಿಯರು, ಅನುಭವಿ ನಾಯಕರ ಜೊತೆ ಚರ್ಚೆ ಒಳ್ಳೆಯದು. ಪಕ್ಷದಲ್ಲಿ ಅನೇಕ ವರ್ಷ ದುಡಿದ ನಾಯಕರ ಸಲಹೆ ಪಡೆಯಬೇಕು. ಜಾತಿವಾರು, ಪ್ರಾದೇಶಿಕವಾರು, ಪಕ್ಷಕ್ಕೆ ದುಡಿದವರಿಗೆ ಸ್ಥಾನ ಕೊಡಬೇಕು ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರಜ್ವಲ್ ರೇವಣ್ಣ ವಿಡಿಯೋ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲಾ ಪ್ರಯತ್ನ ಮಾಡ್ತಿದ್ದೇವೆ. ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ವಾರೆಂಟ್ ತೆಗೆದುಕೊಂಡು ಮಿನಿಸ್ಟ್ರಿ ಆಫ್ ಹೋಂ ಅಫೇರ್ಸ್​ಗೆ ತಿಳಿಸಲಾಗಿದೆ. ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಲೊಕೇಶನ್ ತಿಳಿದುಕೊಂಡು ಇಂಟರ್ ಪೋಲ್‌ನವರು ಟ್ರೇಸ್ ಮಾಡ್ತಾರೆ. ಈ ಸಂದರ್ಭದಲ್ಲಿ ಅವರು ನಾನು ವಾಪಸ್ ಬರ್ತೀನಿ ಅಂತಾ ತಿಳಿಸಿದ್ದಾರೆ. ಅದು ಬಹಳ ಸೂಕ್ತವಾಗಿದೆ. ಯಾಕೆಂದರೆ ಕಾನೂನಿಂದ‌ ಯಾರೂ ತಪ್ಪಿಸಿಕೊಳ್ಳುವುದಕ್ಕೆ ಆಗಲ್ಲ. 31ನೇ ತಾರೀಖಿಗೆ ಅವರ ಪಾಸ್‌ಪೋರ್ಟ್ ಅವಧಿ ಮುಗಿಯುತ್ತೆ. ಇದೆಲ್ಲವನ್ನೂ ಯೋಚಿಸಿ ಈ ನಿರ್ಧಾರಕ್ಕೆ ಪ್ರಜ್ವಲ್ ಬಂದಿರಬಹುದು ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ವಿಚಾರಕ್ಕೆ, ಅದು ಪಕ್ಷದ ತೀರ್ಮಾನ. ಹೈಕಮಾಂಡ್ ಎಲ್ಲವನ್ನೂ ನೋಡಿಕೊಳ್ಳುತ್ತದೆ. ಅದನ್ನು ಡಿ.ಕೆ.ಶಿವಕುಮಾರ್ ಮಾಡೋದಿಲ್ಲ, ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೆ. ಅವರೇ ಮುಂದುವರಿಯಲಿ ಅಂದ್ರೆ ಅವರೇ ಇರ್ತಾರೆ. ಬೇರೆಯವರು ಬರಲಿ ಅಂದ್ರೆ ಬೇರೆಯವರು ಬರ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಪರಿಷತ್​​ ಚುನಾವಣೆಗೆ ಕೈ ಆಕಾಂಕ್ಷಿಗಳ ತೀವ್ರ ಪೈಪೋಟಿ: ಸಿಎಂ, ಡಿಸಿಎಂ ಇಂದು ದೆಹಲಿಗೆ - Council Election

ಜಿ. ಪರಮೇಶ್ವರ್ (ETV Bharat)

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್​ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದಾಶಿವನಗರ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಿಎಂ, ಡಿಸಿಎಂ ಅವರಿಬ್ಬರೇ ತೀರ್ಮಾನ ಮಾಡಿದ್ರೆ ಸರಿಯಲ್ಲ.‌ ಪಕ್ಷದ ಹಿರಿಯ ನಾಯಕರ ಸಲಹೆ, ಅಭಿಪ್ರಾಯಗಳನ್ನೂ ಕೇಳಬೇಕು. ಹಿರಿಯರು, ಅನುಭವಿ ನಾಯಕರ ಜೊತೆ ಚರ್ಚೆ ಒಳ್ಳೆಯದು. ಪಕ್ಷದಲ್ಲಿ ಅನೇಕ ವರ್ಷ ದುಡಿದ ನಾಯಕರ ಸಲಹೆ ಪಡೆಯಬೇಕು. ಜಾತಿವಾರು, ಪ್ರಾದೇಶಿಕವಾರು, ಪಕ್ಷಕ್ಕೆ ದುಡಿದವರಿಗೆ ಸ್ಥಾನ ಕೊಡಬೇಕು ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರಜ್ವಲ್ ರೇವಣ್ಣ ವಿಡಿಯೋ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲಾ ಪ್ರಯತ್ನ ಮಾಡ್ತಿದ್ದೇವೆ. ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ವಾರೆಂಟ್ ತೆಗೆದುಕೊಂಡು ಮಿನಿಸ್ಟ್ರಿ ಆಫ್ ಹೋಂ ಅಫೇರ್ಸ್​ಗೆ ತಿಳಿಸಲಾಗಿದೆ. ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಲೊಕೇಶನ್ ತಿಳಿದುಕೊಂಡು ಇಂಟರ್ ಪೋಲ್‌ನವರು ಟ್ರೇಸ್ ಮಾಡ್ತಾರೆ. ಈ ಸಂದರ್ಭದಲ್ಲಿ ಅವರು ನಾನು ವಾಪಸ್ ಬರ್ತೀನಿ ಅಂತಾ ತಿಳಿಸಿದ್ದಾರೆ. ಅದು ಬಹಳ ಸೂಕ್ತವಾಗಿದೆ. ಯಾಕೆಂದರೆ ಕಾನೂನಿಂದ‌ ಯಾರೂ ತಪ್ಪಿಸಿಕೊಳ್ಳುವುದಕ್ಕೆ ಆಗಲ್ಲ. 31ನೇ ತಾರೀಖಿಗೆ ಅವರ ಪಾಸ್‌ಪೋರ್ಟ್ ಅವಧಿ ಮುಗಿಯುತ್ತೆ. ಇದೆಲ್ಲವನ್ನೂ ಯೋಚಿಸಿ ಈ ನಿರ್ಧಾರಕ್ಕೆ ಪ್ರಜ್ವಲ್ ಬಂದಿರಬಹುದು ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ವಿಚಾರಕ್ಕೆ, ಅದು ಪಕ್ಷದ ತೀರ್ಮಾನ. ಹೈಕಮಾಂಡ್ ಎಲ್ಲವನ್ನೂ ನೋಡಿಕೊಳ್ಳುತ್ತದೆ. ಅದನ್ನು ಡಿ.ಕೆ.ಶಿವಕುಮಾರ್ ಮಾಡೋದಿಲ್ಲ, ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೆ. ಅವರೇ ಮುಂದುವರಿಯಲಿ ಅಂದ್ರೆ ಅವರೇ ಇರ್ತಾರೆ. ಬೇರೆಯವರು ಬರಲಿ ಅಂದ್ರೆ ಬೇರೆಯವರು ಬರ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಪರಿಷತ್​​ ಚುನಾವಣೆಗೆ ಕೈ ಆಕಾಂಕ್ಷಿಗಳ ತೀವ್ರ ಪೈಪೋಟಿ: ಸಿಎಂ, ಡಿಸಿಎಂ ಇಂದು ದೆಹಲಿಗೆ - Council Election

Last Updated : May 28, 2024, 2:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.