ETV Bharat / state

ಶಿವಮೊಗ್ಗದಲ್ಲಿ ಹೆಚ್ಚಿದ ಡೆಂಗ್ಯೂ ಭೀತಿ: ಸೋಂಕಿಗೆ ಆಸ್ಪತ್ರೆ ಸಿಬ್ಬಂದಿಯೇ ಬಲಿ - Hospital staff died due to dengue

ಡೆಂಗ್ಯೂ ಸೋಂಕಿನಿಂದ ಆಸ್ಪತ್ರೆ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

author img

By ETV Bharat Karnataka Team

Published : Jun 13, 2024, 1:17 PM IST

ಡೆಂಗ್ಯೂ ಸೋಂಕಿಗೆ ಆಸ್ಪತ್ರೆ ಸಿಬ್ಬಂದಿ ಬಲಿ
ಡೆಂಗ್ಯೂ ಸೋಂಕಿಗೆ ಆಸ್ಪತ್ರೆ ಸಿಬ್ಬಂದಿ ಬಲಿ (ETV Bharat)

ಶಿವಮೊಗ್ಗ: ಡೆಂಗ್ಯೂ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸಿಬ್ಬಂದಿ ಬಲಿಯಾಗಿರುವ ಘಟನೆ ಗುರುವಾರ (ಇಂದು) ನಡೆದಿದೆ. ಸಾಗರ ತಾಲೂಕು ಉಪವಿಭಾಗೀಯ ಆಸ್ಪತ್ರೆಯ ಡಯಾಲಿಸಿಸ್ ವಿಭಾಗದ ನಾಗರಾಜ್ (34) ಮೃತರು.

​ಕಳೆದ ನಾಲ್ಕು ದಿನಗಳಿಂದ ನಾಗರಾಜ್ ಜ್ವರದಿಂದ ಬಳಲುತ್ತಿದ್ದರು. ಭಾನುವಾರ ತೀವ್ರ ಜ್ವರ ಎಂದು ಸಾಗರದ ಉಪವಿಭಾಗಿಯ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ರಕ್ತ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಸೋಂಕು ಇರುವುದು ಧೃಡಪಟ್ಟಿತ್ತು. ಸಾಗರ ಆಸ್ಪತ್ರೆಯಲ್ಲಿ ಎರಡು ದಿನ ಚಿಕಿತ್ಸೆಯನ್ನೂ ಕೊಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.

ಈ ಕುರಿತು ಸಾಗರ ಉಪವಿಭಾಗೀಯ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಪರಪ್ಪ ದೂರವಾಣಿಯಲ್ಲಿ ಮಾಹಿತಿ ನೀಡಿದ್ದು, ನಾಗರಾಜ್ ನಮ್ಮ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ನೌಕರರಾಗಿದ್ದರು. ಇವರಿಗೆ ಜ್ವರ ಎಂದು ಬಂದಾಗ 51 ಸಾವಿರ ಪ್ಲೇಟ್​ಲೇಟ್ ಇತ್ತು. ಇಲ್ಲಿ ಚಿಕಿತ್ಸೆಗೆ ಸ್ಪಂದಿಸದ ಕಾರಣ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲೂ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಇವರಿಗೆ ಶುಗರ್ ಇದ್ದು, ಸರಿಯಾಗಿ ಮಾತ್ರೆ ತೆಗೆದುಕೊಳ್ಳುತ್ತಿರಲಿಲ್ಲ ಎಂದು ಕೂಡ ತಿಳಿದು ಬಂದಿರುವುದಾಗಿ ಡಾ.ಪರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ 4 ವರ್ಷದ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ: WHO - Bird Flu In India

ಶಿವಮೊಗ್ಗ: ಡೆಂಗ್ಯೂ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸಿಬ್ಬಂದಿ ಬಲಿಯಾಗಿರುವ ಘಟನೆ ಗುರುವಾರ (ಇಂದು) ನಡೆದಿದೆ. ಸಾಗರ ತಾಲೂಕು ಉಪವಿಭಾಗೀಯ ಆಸ್ಪತ್ರೆಯ ಡಯಾಲಿಸಿಸ್ ವಿಭಾಗದ ನಾಗರಾಜ್ (34) ಮೃತರು.

​ಕಳೆದ ನಾಲ್ಕು ದಿನಗಳಿಂದ ನಾಗರಾಜ್ ಜ್ವರದಿಂದ ಬಳಲುತ್ತಿದ್ದರು. ಭಾನುವಾರ ತೀವ್ರ ಜ್ವರ ಎಂದು ಸಾಗರದ ಉಪವಿಭಾಗಿಯ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ರಕ್ತ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಸೋಂಕು ಇರುವುದು ಧೃಡಪಟ್ಟಿತ್ತು. ಸಾಗರ ಆಸ್ಪತ್ರೆಯಲ್ಲಿ ಎರಡು ದಿನ ಚಿಕಿತ್ಸೆಯನ್ನೂ ಕೊಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.

ಈ ಕುರಿತು ಸಾಗರ ಉಪವಿಭಾಗೀಯ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಪರಪ್ಪ ದೂರವಾಣಿಯಲ್ಲಿ ಮಾಹಿತಿ ನೀಡಿದ್ದು, ನಾಗರಾಜ್ ನಮ್ಮ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ನೌಕರರಾಗಿದ್ದರು. ಇವರಿಗೆ ಜ್ವರ ಎಂದು ಬಂದಾಗ 51 ಸಾವಿರ ಪ್ಲೇಟ್​ಲೇಟ್ ಇತ್ತು. ಇಲ್ಲಿ ಚಿಕಿತ್ಸೆಗೆ ಸ್ಪಂದಿಸದ ಕಾರಣ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲೂ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಇವರಿಗೆ ಶುಗರ್ ಇದ್ದು, ಸರಿಯಾಗಿ ಮಾತ್ರೆ ತೆಗೆದುಕೊಳ್ಳುತ್ತಿರಲಿಲ್ಲ ಎಂದು ಕೂಡ ತಿಳಿದು ಬಂದಿರುವುದಾಗಿ ಡಾ.ಪರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ 4 ವರ್ಷದ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ: WHO - Bird Flu In India

ETV Bharat Logo

Copyright © 2024 Ushodaya Enterprises Pvt. Ltd., All Rights Reserved.