ETV Bharat / state

ದಾವಣಗೆರೆ: ಹಾಡಹಗಲೇ ಪತ್ನಿಯನ್ನು ಅಪಹರಿಸಿದ ಪತಿ, ಪ್ರಕರಣ ದಾಖಲು - HUSBAND KIDNAPPED HIS WIFE

ಪತ್ನಿಯನ್ನು ಪತಿಯೇ ಅಪಹರಿಸಿರುವ ಘಟನೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ನಡೆದಿದೆ.

ಅಪಹರಣದ ದೃಶ್ಯ
ಅಪಹರಣದ ದೃಶ್ಯ (ETV Bharat)
author img

By ETV Bharat Karnataka Team

Published : Jan 14, 2025, 6:36 PM IST

ದಾವಣಗೆರೆ: ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಹಾಡಹಗಲೇ ಸಂಬಂಧಿಕರ ಮನೆಯಲ್ಲಿದ್ದ ಪತ್ನಿಯನ್ನು ಪತಿಯೇ ಅಪಹರಿಸಿರುವ ಘಟನೆ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತ್ನಿ ಅನುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿದ್ದಾರೆ.‌ ಅಪಹರಣದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಾಲ್ಕು ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನರಸಿಪುರ ಗ್ರಾಮದ ಕಾರ್ತಿಕ್ ಜೊತೆ ಅನುಂಧತಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಗಂಡು ಮಗು ಇದೆ. ಆರು ತಿಂಗಳ ಹಿಂದೆ ಪತಿ ಕಾರ್ತಿಕ್​ ಮತ್ತು ಕುಟುಂಬಸ್ಥರು ಅನುಂಧತಿ ಮತ್ತು ಮಗನನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ಅನುಂಧತಿ ತನ್ನ ಮಗನೊಂದಿಗೆ ಹೊನ್ನಾಳಿಯ ದಿಡಗೂರು ಗ್ರಾಮದ ಅತ್ತೆ ಮನೆ ಸೇರಿದ್ದರು. ಜ.12 ರಂದು ಪತಿ ಕಾರ್ತಿಕ್​ ಮತ್ತು ಕುಟುಂಬಸ್ಥರು ಮನೆಗೆ ನುಗ್ಗಿ ಅನುಂಧತಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

’ನಾಲ್ಕೈದು ಜನ ಮನೆಗೆ ನುಗ್ಗಿ ಆಕೆಯನ್ನು ಕರೆದುಕೊಂಡು ಹೋಗಿದ್ದಾರೆ’: ಅನುಂಧತಿ ಅತ್ತೆ ಭಾನುಮತಿ ಪ್ರತಿಕ್ರಿಯಿಸಿ," ಪೋಷಕರಿಲ್ಲದ ಅನುಂಧತಿಯನ್ನು ವರದಕ್ಷಿಣೆ ಕೊಟ್ಟು ಕಾರ್ತಿಕ್ ಜೊತೆ ಮದುವೆ ಮಾಡಿಕೊಟ್ಟಿದ್ದೆವು. ಪತ್ನಿ ಕಾರ್ತಿಕ್ ವರದಕ್ಷಿಣೆಗೋಸ್ಕರ ಅನುಧಂತಿಗೆ ಕಿರುಕುಳ ನೀಡಿ, ಮನೆಯಿಂದ ಹೊರ ಹಾಕಿದ್ದ. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಅನುಂಧತಿ ನನಗೆ ಹೇಳಿದ್ದ‌ಳು. ಆದ್ದರಿಂದ ವಿಚ್ಛೇದನ ನೀಡಲು ನಿರ್ಧರಿಸಿ ನಮ್ಮ ಮನೆಯಲ್ಲಿದ್ದಳು. ಜ.12 ರಂದು ಏಕಾಏಕಿ ನಾಲ್ಕೈದು ಜನ ಮನೆ ನುಗ್ಗಿ ಹಲ್ಲೆ ಮಾಡಿ ಅನುಂಧತಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಾರೆ. ಈ ಸಂಬಂಧ ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ದೂರು ಕೊಟ್ಟಿದ್ದೇವೆ" ಎಂದರು.

"ಅನುಂಧತಿಯನ್ನು ಆಕೆಯ ಪತಿ ಕಾರ್ತಿಕ್​, ಅವರ ಅಕ್ಕ ಮತ್ತು ಭಾಮೈದ, ಅವರ ತಂಗಿ ಬಂದು ನಮಗೆ ಹೊಡೆದು ಕರೆದುಕೊಂಡು ಹೋಗಿದ್ದಾರೆ. ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಪೊಲೀಸ್​ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದೇವೆ" ಎಂದು ಅನುಂಧತಿಯ ಸಹೋದರ ಪ್ರಮೋದ್ ಹೇಳಿದರು.

ಪ್ರಕರಣದ ಬಗ್ಗೆ ಪೊಲೀಸರು ಹೇಳಿದ್ದು ಹೀಗೆ: ಹೊನ್ನಾಳಿ ಠಾಣೆಯ ಪಿಐ ಸುನೀಲ್ ಕುಮಾರ್ ಪ್ರತಿಕ್ರಿಯಿಸಿ, "ದಂಪತಿ ನಡುವೆ ಕೆಲ ವರ್ಷಗಳಿಂದ ಜಗಳ ನಡೆಯುತ್ತಿತ್ತು. ಸಾಕಷ್ಟು ಬಾರಿ ಮನೆಗೆ ಬರುವಂತೆ ಕರೆದರೂ ಬಾರದ ಹಿನ್ನೆಲೆಯಲ್ಲಿ ಪತ್ನಿ ಕಾರ್ತಿಕ್ ಹಾಗೂ ಕುಟುಂಬಸ್ಥರು ಅನುಂಧತಿ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ‌. ಇದು ಅಪಹರಣ ಅಲ್ಲವೇ ಅಲ್ಲ. ಈಗಾಗಲೇ ಎಫ್​ಐಆರ್​ ದಾಖಲಾಗಿದೆ. ತನಿಖೆ ನಡೆಸುತ್ತಿದ್ದೇವೆ. ದಂಪತಿಗಳಿಬ್ಬರು ಠಾಣೆಗೆ ಬರಲು ಒಪ್ಪಿದ್ದಾರೆ ಕರೆಸಿ ಸಂಧಾನ ಮಾಡುವ ಕೆಲಸ ಮಾಡಲಿದ್ದೇವೆ" ಎಂದು ತಿಳಿಸಿದರು.

ಇದನ್ನೂ ಓದಿ: ಸಂಕ್ರಾಂತಿ ಬುತ್ತಿ ಕೊಡಲು ಬಂದ ಅತ್ತೆಯನ್ನೇ ಕೊಂದ ಅಳಿಯ!

ಇದನ್ನೂ ಓದಿ: ಬೆಂಗಳೂರು: 6 ವರ್ಷದ ಬಾಲಕಿಯ ಅತ್ಯಾಚಾರಗೈದು ಹತ್ಯೆಗೈದ ಬಿಹಾರದ ಯುವಕ ಸೆರೆ

ದಾವಣಗೆರೆ: ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಹಾಡಹಗಲೇ ಸಂಬಂಧಿಕರ ಮನೆಯಲ್ಲಿದ್ದ ಪತ್ನಿಯನ್ನು ಪತಿಯೇ ಅಪಹರಿಸಿರುವ ಘಟನೆ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತ್ನಿ ಅನುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿದ್ದಾರೆ.‌ ಅಪಹರಣದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಾಲ್ಕು ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನರಸಿಪುರ ಗ್ರಾಮದ ಕಾರ್ತಿಕ್ ಜೊತೆ ಅನುಂಧತಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಗಂಡು ಮಗು ಇದೆ. ಆರು ತಿಂಗಳ ಹಿಂದೆ ಪತಿ ಕಾರ್ತಿಕ್​ ಮತ್ತು ಕುಟುಂಬಸ್ಥರು ಅನುಂಧತಿ ಮತ್ತು ಮಗನನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ಅನುಂಧತಿ ತನ್ನ ಮಗನೊಂದಿಗೆ ಹೊನ್ನಾಳಿಯ ದಿಡಗೂರು ಗ್ರಾಮದ ಅತ್ತೆ ಮನೆ ಸೇರಿದ್ದರು. ಜ.12 ರಂದು ಪತಿ ಕಾರ್ತಿಕ್​ ಮತ್ತು ಕುಟುಂಬಸ್ಥರು ಮನೆಗೆ ನುಗ್ಗಿ ಅನುಂಧತಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

’ನಾಲ್ಕೈದು ಜನ ಮನೆಗೆ ನುಗ್ಗಿ ಆಕೆಯನ್ನು ಕರೆದುಕೊಂಡು ಹೋಗಿದ್ದಾರೆ’: ಅನುಂಧತಿ ಅತ್ತೆ ಭಾನುಮತಿ ಪ್ರತಿಕ್ರಿಯಿಸಿ," ಪೋಷಕರಿಲ್ಲದ ಅನುಂಧತಿಯನ್ನು ವರದಕ್ಷಿಣೆ ಕೊಟ್ಟು ಕಾರ್ತಿಕ್ ಜೊತೆ ಮದುವೆ ಮಾಡಿಕೊಟ್ಟಿದ್ದೆವು. ಪತ್ನಿ ಕಾರ್ತಿಕ್ ವರದಕ್ಷಿಣೆಗೋಸ್ಕರ ಅನುಧಂತಿಗೆ ಕಿರುಕುಳ ನೀಡಿ, ಮನೆಯಿಂದ ಹೊರ ಹಾಕಿದ್ದ. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಅನುಂಧತಿ ನನಗೆ ಹೇಳಿದ್ದ‌ಳು. ಆದ್ದರಿಂದ ವಿಚ್ಛೇದನ ನೀಡಲು ನಿರ್ಧರಿಸಿ ನಮ್ಮ ಮನೆಯಲ್ಲಿದ್ದಳು. ಜ.12 ರಂದು ಏಕಾಏಕಿ ನಾಲ್ಕೈದು ಜನ ಮನೆ ನುಗ್ಗಿ ಹಲ್ಲೆ ಮಾಡಿ ಅನುಂಧತಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಾರೆ. ಈ ಸಂಬಂಧ ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ದೂರು ಕೊಟ್ಟಿದ್ದೇವೆ" ಎಂದರು.

"ಅನುಂಧತಿಯನ್ನು ಆಕೆಯ ಪತಿ ಕಾರ್ತಿಕ್​, ಅವರ ಅಕ್ಕ ಮತ್ತು ಭಾಮೈದ, ಅವರ ತಂಗಿ ಬಂದು ನಮಗೆ ಹೊಡೆದು ಕರೆದುಕೊಂಡು ಹೋಗಿದ್ದಾರೆ. ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಪೊಲೀಸ್​ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದೇವೆ" ಎಂದು ಅನುಂಧತಿಯ ಸಹೋದರ ಪ್ರಮೋದ್ ಹೇಳಿದರು.

ಪ್ರಕರಣದ ಬಗ್ಗೆ ಪೊಲೀಸರು ಹೇಳಿದ್ದು ಹೀಗೆ: ಹೊನ್ನಾಳಿ ಠಾಣೆಯ ಪಿಐ ಸುನೀಲ್ ಕುಮಾರ್ ಪ್ರತಿಕ್ರಿಯಿಸಿ, "ದಂಪತಿ ನಡುವೆ ಕೆಲ ವರ್ಷಗಳಿಂದ ಜಗಳ ನಡೆಯುತ್ತಿತ್ತು. ಸಾಕಷ್ಟು ಬಾರಿ ಮನೆಗೆ ಬರುವಂತೆ ಕರೆದರೂ ಬಾರದ ಹಿನ್ನೆಲೆಯಲ್ಲಿ ಪತ್ನಿ ಕಾರ್ತಿಕ್ ಹಾಗೂ ಕುಟುಂಬಸ್ಥರು ಅನುಂಧತಿ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ‌. ಇದು ಅಪಹರಣ ಅಲ್ಲವೇ ಅಲ್ಲ. ಈಗಾಗಲೇ ಎಫ್​ಐಆರ್​ ದಾಖಲಾಗಿದೆ. ತನಿಖೆ ನಡೆಸುತ್ತಿದ್ದೇವೆ. ದಂಪತಿಗಳಿಬ್ಬರು ಠಾಣೆಗೆ ಬರಲು ಒಪ್ಪಿದ್ದಾರೆ ಕರೆಸಿ ಸಂಧಾನ ಮಾಡುವ ಕೆಲಸ ಮಾಡಲಿದ್ದೇವೆ" ಎಂದು ತಿಳಿಸಿದರು.

ಇದನ್ನೂ ಓದಿ: ಸಂಕ್ರಾಂತಿ ಬುತ್ತಿ ಕೊಡಲು ಬಂದ ಅತ್ತೆಯನ್ನೇ ಕೊಂದ ಅಳಿಯ!

ಇದನ್ನೂ ಓದಿ: ಬೆಂಗಳೂರು: 6 ವರ್ಷದ ಬಾಲಕಿಯ ಅತ್ಯಾಚಾರಗೈದು ಹತ್ಯೆಗೈದ ಬಿಹಾರದ ಯುವಕ ಸೆರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.